Homeಕರ್ನಾಟಕಹುಸಿಯಾದ ತೇಜಸ್ವಿ ಸೂರ್ಯ ಭರವಸೆ: ‘ನನ್ನನ್ನು ಕೇಳಿ ಬ್ಯಾಂಕಲ್ಲಿ ಹಣ ಇಟ್ಟಿದ್ದೀರಾ?’ ಎಂದ ನಿರ್ಮಲಾ ಸೀತಾರಾಮನ್!

ಹುಸಿಯಾದ ತೇಜಸ್ವಿ ಸೂರ್ಯ ಭರವಸೆ: ‘ನನ್ನನ್ನು ಕೇಳಿ ಬ್ಯಾಂಕಲ್ಲಿ ಹಣ ಇಟ್ಟಿದ್ದೀರಾ?’ ಎಂದ ನಿರ್ಮಲಾ ಸೀತಾರಾಮನ್!

ಗುರು ರಾಘವೇಂದ್ರ ಸಹಕಾರಿ ಬ್ಯಾಂಕಿನ ಯಾವುದೇ ಠೇವಣಿದಾರರು ಭಯಭೀತರಾಗದಿರಿ. ನಿಮ್ಮ ಹಿತಾಸಕ್ತಿಗಳನ್ನು ಸರ್ಕಾರ ರಕ್ಷಿಸುತ್ತದೆ ಎಂದು ಸಂಸದ ತೇಜಸ್ವಿ ಸೂರ್ಯ ಭರವಸೆ ನೀಡಿದ್ದರು.

- Advertisement -
- Advertisement -

ಬೆಂಗಳೂರಿನ ಗುರುರಾಘವೇಂದ್ರ ಕೋ-ಆಪರೇಟಿವ್‌ ಬ್ಯಾಂಕಿನ ವಂಚನೆ ಪ್ರಕರಣದ ದೂರು ದಾಖಲಾಗಿ ಎರಡು ವರ್ಷಗಳಾದರೂ, ಗ್ರಾಹಕರಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು ದೂರಲಾಗಿದೆ. ಜುಲೈ 2 ರ ಶುಕ್ರವಾರದಂದು ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಬ್ಯಾಂಕ್‌‌ನ ಠೇವಣಿದಾರರು ಭೇಟಿ ಮಾಡಿದ್ದರು. ಈ ವೇಳೆ ನ್ಯಾಯ ಕೊಡಿಸುವಂತೆ ಅವರಲ್ಲಿ ಕೇಳಿಕೊಂಡಾಗ ‘‘ನನ್ನನ್ನು ಕೇಳಿ ಹಣ ಇಟ್ಟಿದ್ದೀರಾ” ಎಂದು ಉಡಾಫೆಯಿಂದ ಮಾತನಾಡಿದರು ಎಂದು ಠೇವಣಿದಾರ ಹರೀಶ್ ಸೋಮವಾರ ಆರೋಪಿಸಿದ್ದಾರೆ.

ಕೆಪಿಸಿಸಿ ವೈದ್ಯಕೀಯ ಘಟಕದ ಕಾರ್ಯದರ್ಶಿ ಡಾ. ಶಂಕರ್‌ ಗುಹಾ ಅವರು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಠೇವಣಿದಾರ ಹರೀಶ್‌, “ಸಚಿವೆ ಸೀತಾರಾಮ್‌ ಅವರು ಇತ್ತೀಚೆಗೆ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಗುರು ರಾಘವೇ೦ದ್ರ ಸಹಕಾರಿ ಬ್ಯಾಂಕ್‌ ಠೇವಣಿದಾರರು ತಾವು ಹೂಡಿಕೆ ಮಾಡಿದ ಹಣ ಕಳೆದುಕೊಂಡಿರುವ ಬಗ್ಗೆ ಹೇಳಲಾಯಿತು. ಅದಕ್ಕೆ ಅವರು, ನನ್ನನ್ನು ಕೇಳಿ ರಾಘವೇಂದ್ರ ಬ್ಯಾಂಕ್‌ನಲ್ಲಿ ಹಣ ಹೂಡಿಕೆ ಮಾಡಿದ್ದೀರಾ” ಎಂದು ಪ್ರಶ್ನಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಿಲಯನ್ಸ್‌ ಫೈನಾನ್ಸ್‌ಗಳಿಂದ ಬ್ಯಾಂಕಿಂಗ್ ಫ್ರಾಡ್- ಕರ್ನಾಟಕ ಬ್ಯಾಂಕ್‌ಗೆ ವಂಚನೆ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ. ಶಂಕರ್‌ ಗುಹಾ, ‘‘ಈ ಹಗರಣದ ಬಗ್ಗೆ ಪ್ರಕರಣ ದಾಖಲಾಗಿ ಎರಡು ವರ್ಷಗಳು ಕಳೆದಿವೆ. ಆದರೂ ಠೇವಣಿದಾರರಿಗೆ ನ್ಯಾಯ ಸಿಕ್ಕಿಲ್ಲ. ಹಣ ಕಳೆದುಕೊಂಡ ಕೊರಗಿನಲ್ಲೇ 70 ಜನ ವಿವಿಧ ಕಾಯಿಲೆಗಳಿಗೆ ತುತ್ತಾಗಿ ಮೃತಪಟ್ಟಿದ್ದಾರೆ. ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸಲಾಗಿದೆಯಾದರೂ, ಏನೂ ಪ್ರಯೋಜನ ಆಗಿಲ್ಲ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು’’ ಎಂದು ಆಗ್ರಹಿಸಿದ್ದಾರೆ.

“ಬ್ಯಾಂಕಿಗೆ ಸತತವಾಗಿ ‘ಎ’ ದರ್ಜೆಯ ಪ್ರಮಾಣ ಪತ್ರ ನೀಡಲಾಗಿದೆ. ಇಂತಹ ವಂಚಕ ಬ್ಯಾಂಕ್‌ಗೆ ಆರ್‌ಬಿಐ ಈ ಪ್ರಮಾಣಪತ್ರ ನೀಡಿದ್ದಾದರೂ ಹೇಗೆ? ವಿವಿಧ ಕಡೆ ಶಾಖಾ ಕಚೇರಿಗಳನ್ನು ತೆರೆಯಲು ಅನುಮತಿ ನೀಡಿರುವುದರ ಹಿಂದಿನ ಉದ್ದೇಶವೇನು? ಈ ಬಗ್ಗೆ ಸಂಸದರನ್ನು ಪ್ರಶ್ನಿಸಿದರೆ ಹಾರಿಕೆಯ ಉತ್ತರ ನೀಡುತ್ತಾರೆ. ಸಂಸದರು ಹಾಗೂ ಶಾಸಕರಿಂದ ಸಮಸ್ಯೆಗೆ ಪರಿಹಾರ ಸಿಗುವುದು ಕಷ್ಟ. ಮುಖ್ಯಮಂತ್ರಿ ಮಧ್ಯ ಪ್ರವೇಶಿಸಬೇಕು. ಇದೇ 14 ರಂದು ಆಡಿಟ್‌ ವರದಿ ನೀಡುವುದಾಗಿ ಹೇಳಿದ್ದಾರೆ. ಕೊಡದಿದ್ದರೆ ‘ಆರ್‌ಬಿಐ ಚಲೋ’ ಅಭಿಯಾನ ಹಮ್ಮಿಕೊಳ್ಳುತ್ತೇವೆ” ಎಂದು ಶಂಕರ್‌‌ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಎಸ್‌ಬಿಐ ಬ್ಯಾಂಕ್‌ನಿಂದ ಗ್ರಾಹಕರಿಗೆ ಎಟಿಎಂ ವಿತ್‌ ಡ್ರಾ ಸೇರಿ ಹಲವು ಶುಲ್ಕಗಳು!

ಪ್ರಕರಣ ಸಂಬಂಧ ಕಳೆದ ವರ್ಷದ ಜನವರಿಯಲ್ಲಿ ಟ್ವೀಟ್ ಮಾಡಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, “ಗುರು ರಾಘವೇಂದ್ರ ಸಹಕಾರಿ ಬ್ಯಾಂಕಿನ ಯಾವುದೇ ಠೇವಣಿದಾರರು ಭಯಭೀತರಾಗದಿರಿ. ಅವರಿಗೆ ನಾನು ಭರವಸೆ ನೀಡುತ್ತೇನೆ. ಗೌರವಾನ್ವಿತ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಕರಣದ ಬಗ್ಗೆ ಮೌಲ್ಯಮಾಪನ ಮಾಡುತ್ತಾರೆ, ಜೊತೆಗೆ ವೈಯಕ್ತಿಕವಾಗಿ ಸಮಸ್ಯೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಠೇವಣಿದಾರರ ಹಿತಾಸಕ್ತಿಗಳನ್ನು ಸರ್ಕಾರ ರಕ್ಷಿಸುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ. ಅವರ ಕಾಳಜಿಗೆ ಕೃತಜ್ಞತೆಗಳು” ಎಂದು ಹೇಳಿದ್ದರು.

ಇದಾಗಿ ಒಂದೂವರೆ ವರ್ಷ ಕಳೆದರೂ ಪ್ರಕರಣವು ಯಾವುದೇ ತಾರ್ಕಿಕ ಅಂತ್ಯಕ್ಕೆ ತಲುಪಿಲ್ಲ. ಜುಲೈ 2 ರ ಶುಕ್ರವಾರದಂದು ಠೇವಣಿದಾರರನ್ನು ಭೇಟಿಯಾದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ನಿರ್ಮಲಾ ಸೀತಾರಾಮನ್‌, ಆರ್‌ಬಿಐ ನೇಮಿಸಿರುವ ಆಡಳಿತಾಧಿಕಾರಿ ವರದಿ ಸಲ್ಲಿಸುವವರೆಗೆ ತಾಳ್ಮೆಯಿಂದ ಇರಿ ಎಂದು ವಿನಂತಿಸಿದ್ದರು. “ಕೆಲವು ಕಾರ್ಯವಿಧಾನಗಳನ್ನು ಅನುಸರಿಸಬೇಕಾದ ಅಗತ್ಯವಿದ್ದು, ಆಡಳಿತಾಧಿಕಾರಿ ಆರ್‌ಬಿಐಗೆ ವರದಿ ಸಲ್ಲಿಸಿದ ಕೂಡಲೇ ಸಮಸ್ಯೆಯನ್ನು ಬಗೆಹರಿಸಲು ನನ್ನಿಂದಾದ ಪ್ರಯತ್ನವನ್ನು ಖಂಡಿತಾ ಮಾಡುತ್ತೇನೆ” ಹೇಳಿದ್ದರು.

ಬ್ಯಾಂಕಿನ ಒಟ್ಟು 25 ಸಾವಿರ ಮಂದಿ ಹಣ ಕಳೆದುಕೊಂಡಿದ್ದು, 2,130 ಕೋಟಿಗೂ ಅಧಿಕ ಹಣ ವಂಚನೆ ನಡೆಸಿದೆ ಎಂದು ಹೇಳಲಾಗಿದೆ. ಈ ಹಗರಣದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಅಶ್ವಥ ನಾರಾಯಣ ಗೌಡ ಅವರ ಪಾತ್ರವು ಇದೆ ಎಂದು ಆರೋಪಿಸಲಾಗಿದ್ದು, ಅವರು ಕೂಡಾ ಬ್ಯಾಂಕಿಗೆ 12 ಕೋಟಿ ಬಾಕಿ ಕಟ್ಟಬೇಕಿದೆ ಎಂದು ಹೇಳಲಾಗಿದೆ. ಈ ಮಧ್ಯೆ, ಬ್ಯಾಂಕಿನ ಆಡಿಟ್‌ ನಡೆಲಿದ್ದು, ಅದರ ವರದಿ ಬರಬೇಕಿದೆ. ಆದ್ದರಿಂದ ವಹಿವಾಟು ಆರು ತಿಂಗಳು ಯಥಾಸ್ಥಿತಿಯಲ್ಲಿ ಇರಬೇಕು ಎಂದು ಆರ್‌ಬಿಐ ಹೇಳಿದೆ. ಇದರಿಂದಾಗಿ ಠೇವಣಿದಾರರು ತಮ್ಮ ಹಣವನ್ನು ಬ್ಯಾಂಕಿನಿಂದ ತೆಗೆಯಲು ಆಗುತ್ತಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಕನ್ನಡ ಚಿತ್ರನಿರ್ಮಾಣಕ್ಕೆ ಸ್ಥಿರತೆ ತಂದುಕೊಟ್ಟ ಪಾರ್ವತಮ್ಮ ರಾಜಕುಮಾರ್ ಸ್ಮರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...