Homeಕರ್ನಾಟಕಹುಸಿಯಾದ ತೇಜಸ್ವಿ ಸೂರ್ಯ ಭರವಸೆ: ‘ನನ್ನನ್ನು ಕೇಳಿ ಬ್ಯಾಂಕಲ್ಲಿ ಹಣ ಇಟ್ಟಿದ್ದೀರಾ?’ ಎಂದ ನಿರ್ಮಲಾ ಸೀತಾರಾಮನ್!

ಹುಸಿಯಾದ ತೇಜಸ್ವಿ ಸೂರ್ಯ ಭರವಸೆ: ‘ನನ್ನನ್ನು ಕೇಳಿ ಬ್ಯಾಂಕಲ್ಲಿ ಹಣ ಇಟ್ಟಿದ್ದೀರಾ?’ ಎಂದ ನಿರ್ಮಲಾ ಸೀತಾರಾಮನ್!

ಗುರು ರಾಘವೇಂದ್ರ ಸಹಕಾರಿ ಬ್ಯಾಂಕಿನ ಯಾವುದೇ ಠೇವಣಿದಾರರು ಭಯಭೀತರಾಗದಿರಿ. ನಿಮ್ಮ ಹಿತಾಸಕ್ತಿಗಳನ್ನು ಸರ್ಕಾರ ರಕ್ಷಿಸುತ್ತದೆ ಎಂದು ಸಂಸದ ತೇಜಸ್ವಿ ಸೂರ್ಯ ಭರವಸೆ ನೀಡಿದ್ದರು.

- Advertisement -
- Advertisement -

ಬೆಂಗಳೂರಿನ ಗುರುರಾಘವೇಂದ್ರ ಕೋ-ಆಪರೇಟಿವ್‌ ಬ್ಯಾಂಕಿನ ವಂಚನೆ ಪ್ರಕರಣದ ದೂರು ದಾಖಲಾಗಿ ಎರಡು ವರ್ಷಗಳಾದರೂ, ಗ್ರಾಹಕರಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು ದೂರಲಾಗಿದೆ. ಜುಲೈ 2 ರ ಶುಕ್ರವಾರದಂದು ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಬ್ಯಾಂಕ್‌‌ನ ಠೇವಣಿದಾರರು ಭೇಟಿ ಮಾಡಿದ್ದರು. ಈ ವೇಳೆ ನ್ಯಾಯ ಕೊಡಿಸುವಂತೆ ಅವರಲ್ಲಿ ಕೇಳಿಕೊಂಡಾಗ ‘‘ನನ್ನನ್ನು ಕೇಳಿ ಹಣ ಇಟ್ಟಿದ್ದೀರಾ” ಎಂದು ಉಡಾಫೆಯಿಂದ ಮಾತನಾಡಿದರು ಎಂದು ಠೇವಣಿದಾರ ಹರೀಶ್ ಸೋಮವಾರ ಆರೋಪಿಸಿದ್ದಾರೆ.

ಕೆಪಿಸಿಸಿ ವೈದ್ಯಕೀಯ ಘಟಕದ ಕಾರ್ಯದರ್ಶಿ ಡಾ. ಶಂಕರ್‌ ಗುಹಾ ಅವರು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಠೇವಣಿದಾರ ಹರೀಶ್‌, “ಸಚಿವೆ ಸೀತಾರಾಮ್‌ ಅವರು ಇತ್ತೀಚೆಗೆ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಗುರು ರಾಘವೇ೦ದ್ರ ಸಹಕಾರಿ ಬ್ಯಾಂಕ್‌ ಠೇವಣಿದಾರರು ತಾವು ಹೂಡಿಕೆ ಮಾಡಿದ ಹಣ ಕಳೆದುಕೊಂಡಿರುವ ಬಗ್ಗೆ ಹೇಳಲಾಯಿತು. ಅದಕ್ಕೆ ಅವರು, ನನ್ನನ್ನು ಕೇಳಿ ರಾಘವೇಂದ್ರ ಬ್ಯಾಂಕ್‌ನಲ್ಲಿ ಹಣ ಹೂಡಿಕೆ ಮಾಡಿದ್ದೀರಾ” ಎಂದು ಪ್ರಶ್ನಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಿಲಯನ್ಸ್‌ ಫೈನಾನ್ಸ್‌ಗಳಿಂದ ಬ್ಯಾಂಕಿಂಗ್ ಫ್ರಾಡ್- ಕರ್ನಾಟಕ ಬ್ಯಾಂಕ್‌ಗೆ ವಂಚನೆ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ. ಶಂಕರ್‌ ಗುಹಾ, ‘‘ಈ ಹಗರಣದ ಬಗ್ಗೆ ಪ್ರಕರಣ ದಾಖಲಾಗಿ ಎರಡು ವರ್ಷಗಳು ಕಳೆದಿವೆ. ಆದರೂ ಠೇವಣಿದಾರರಿಗೆ ನ್ಯಾಯ ಸಿಕ್ಕಿಲ್ಲ. ಹಣ ಕಳೆದುಕೊಂಡ ಕೊರಗಿನಲ್ಲೇ 70 ಜನ ವಿವಿಧ ಕಾಯಿಲೆಗಳಿಗೆ ತುತ್ತಾಗಿ ಮೃತಪಟ್ಟಿದ್ದಾರೆ. ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸಲಾಗಿದೆಯಾದರೂ, ಏನೂ ಪ್ರಯೋಜನ ಆಗಿಲ್ಲ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು’’ ಎಂದು ಆಗ್ರಹಿಸಿದ್ದಾರೆ.

“ಬ್ಯಾಂಕಿಗೆ ಸತತವಾಗಿ ‘ಎ’ ದರ್ಜೆಯ ಪ್ರಮಾಣ ಪತ್ರ ನೀಡಲಾಗಿದೆ. ಇಂತಹ ವಂಚಕ ಬ್ಯಾಂಕ್‌ಗೆ ಆರ್‌ಬಿಐ ಈ ಪ್ರಮಾಣಪತ್ರ ನೀಡಿದ್ದಾದರೂ ಹೇಗೆ? ವಿವಿಧ ಕಡೆ ಶಾಖಾ ಕಚೇರಿಗಳನ್ನು ತೆರೆಯಲು ಅನುಮತಿ ನೀಡಿರುವುದರ ಹಿಂದಿನ ಉದ್ದೇಶವೇನು? ಈ ಬಗ್ಗೆ ಸಂಸದರನ್ನು ಪ್ರಶ್ನಿಸಿದರೆ ಹಾರಿಕೆಯ ಉತ್ತರ ನೀಡುತ್ತಾರೆ. ಸಂಸದರು ಹಾಗೂ ಶಾಸಕರಿಂದ ಸಮಸ್ಯೆಗೆ ಪರಿಹಾರ ಸಿಗುವುದು ಕಷ್ಟ. ಮುಖ್ಯಮಂತ್ರಿ ಮಧ್ಯ ಪ್ರವೇಶಿಸಬೇಕು. ಇದೇ 14 ರಂದು ಆಡಿಟ್‌ ವರದಿ ನೀಡುವುದಾಗಿ ಹೇಳಿದ್ದಾರೆ. ಕೊಡದಿದ್ದರೆ ‘ಆರ್‌ಬಿಐ ಚಲೋ’ ಅಭಿಯಾನ ಹಮ್ಮಿಕೊಳ್ಳುತ್ತೇವೆ” ಎಂದು ಶಂಕರ್‌‌ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಎಸ್‌ಬಿಐ ಬ್ಯಾಂಕ್‌ನಿಂದ ಗ್ರಾಹಕರಿಗೆ ಎಟಿಎಂ ವಿತ್‌ ಡ್ರಾ ಸೇರಿ ಹಲವು ಶುಲ್ಕಗಳು!

ಪ್ರಕರಣ ಸಂಬಂಧ ಕಳೆದ ವರ್ಷದ ಜನವರಿಯಲ್ಲಿ ಟ್ವೀಟ್ ಮಾಡಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, “ಗುರು ರಾಘವೇಂದ್ರ ಸಹಕಾರಿ ಬ್ಯಾಂಕಿನ ಯಾವುದೇ ಠೇವಣಿದಾರರು ಭಯಭೀತರಾಗದಿರಿ. ಅವರಿಗೆ ನಾನು ಭರವಸೆ ನೀಡುತ್ತೇನೆ. ಗೌರವಾನ್ವಿತ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಕರಣದ ಬಗ್ಗೆ ಮೌಲ್ಯಮಾಪನ ಮಾಡುತ್ತಾರೆ, ಜೊತೆಗೆ ವೈಯಕ್ತಿಕವಾಗಿ ಸಮಸ್ಯೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಠೇವಣಿದಾರರ ಹಿತಾಸಕ್ತಿಗಳನ್ನು ಸರ್ಕಾರ ರಕ್ಷಿಸುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ. ಅವರ ಕಾಳಜಿಗೆ ಕೃತಜ್ಞತೆಗಳು” ಎಂದು ಹೇಳಿದ್ದರು.

ಇದಾಗಿ ಒಂದೂವರೆ ವರ್ಷ ಕಳೆದರೂ ಪ್ರಕರಣವು ಯಾವುದೇ ತಾರ್ಕಿಕ ಅಂತ್ಯಕ್ಕೆ ತಲುಪಿಲ್ಲ. ಜುಲೈ 2 ರ ಶುಕ್ರವಾರದಂದು ಠೇವಣಿದಾರರನ್ನು ಭೇಟಿಯಾದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ನಿರ್ಮಲಾ ಸೀತಾರಾಮನ್‌, ಆರ್‌ಬಿಐ ನೇಮಿಸಿರುವ ಆಡಳಿತಾಧಿಕಾರಿ ವರದಿ ಸಲ್ಲಿಸುವವರೆಗೆ ತಾಳ್ಮೆಯಿಂದ ಇರಿ ಎಂದು ವಿನಂತಿಸಿದ್ದರು. “ಕೆಲವು ಕಾರ್ಯವಿಧಾನಗಳನ್ನು ಅನುಸರಿಸಬೇಕಾದ ಅಗತ್ಯವಿದ್ದು, ಆಡಳಿತಾಧಿಕಾರಿ ಆರ್‌ಬಿಐಗೆ ವರದಿ ಸಲ್ಲಿಸಿದ ಕೂಡಲೇ ಸಮಸ್ಯೆಯನ್ನು ಬಗೆಹರಿಸಲು ನನ್ನಿಂದಾದ ಪ್ರಯತ್ನವನ್ನು ಖಂಡಿತಾ ಮಾಡುತ್ತೇನೆ” ಹೇಳಿದ್ದರು.

ಬ್ಯಾಂಕಿನ ಒಟ್ಟು 25 ಸಾವಿರ ಮಂದಿ ಹಣ ಕಳೆದುಕೊಂಡಿದ್ದು, 2,130 ಕೋಟಿಗೂ ಅಧಿಕ ಹಣ ವಂಚನೆ ನಡೆಸಿದೆ ಎಂದು ಹೇಳಲಾಗಿದೆ. ಈ ಹಗರಣದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಅಶ್ವಥ ನಾರಾಯಣ ಗೌಡ ಅವರ ಪಾತ್ರವು ಇದೆ ಎಂದು ಆರೋಪಿಸಲಾಗಿದ್ದು, ಅವರು ಕೂಡಾ ಬ್ಯಾಂಕಿಗೆ 12 ಕೋಟಿ ಬಾಕಿ ಕಟ್ಟಬೇಕಿದೆ ಎಂದು ಹೇಳಲಾಗಿದೆ. ಈ ಮಧ್ಯೆ, ಬ್ಯಾಂಕಿನ ಆಡಿಟ್‌ ನಡೆಲಿದ್ದು, ಅದರ ವರದಿ ಬರಬೇಕಿದೆ. ಆದ್ದರಿಂದ ವಹಿವಾಟು ಆರು ತಿಂಗಳು ಯಥಾಸ್ಥಿತಿಯಲ್ಲಿ ಇರಬೇಕು ಎಂದು ಆರ್‌ಬಿಐ ಹೇಳಿದೆ. ಇದರಿಂದಾಗಿ ಠೇವಣಿದಾರರು ತಮ್ಮ ಹಣವನ್ನು ಬ್ಯಾಂಕಿನಿಂದ ತೆಗೆಯಲು ಆಗುತ್ತಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಕನ್ನಡ ಚಿತ್ರನಿರ್ಮಾಣಕ್ಕೆ ಸ್ಥಿರತೆ ತಂದುಕೊಟ್ಟ ಪಾರ್ವತಮ್ಮ ರಾಜಕುಮಾರ್ ಸ್ಮರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...