Homeಕರ್ನಾಟಕಹುಸಿಯಾದ ತೇಜಸ್ವಿ ಸೂರ್ಯ ಭರವಸೆ: ‘ನನ್ನನ್ನು ಕೇಳಿ ಬ್ಯಾಂಕಲ್ಲಿ ಹಣ ಇಟ್ಟಿದ್ದೀರಾ?’ ಎಂದ ನಿರ್ಮಲಾ ಸೀತಾರಾಮನ್!

ಹುಸಿಯಾದ ತೇಜಸ್ವಿ ಸೂರ್ಯ ಭರವಸೆ: ‘ನನ್ನನ್ನು ಕೇಳಿ ಬ್ಯಾಂಕಲ್ಲಿ ಹಣ ಇಟ್ಟಿದ್ದೀರಾ?’ ಎಂದ ನಿರ್ಮಲಾ ಸೀತಾರಾಮನ್!

ಗುರು ರಾಘವೇಂದ್ರ ಸಹಕಾರಿ ಬ್ಯಾಂಕಿನ ಯಾವುದೇ ಠೇವಣಿದಾರರು ಭಯಭೀತರಾಗದಿರಿ. ನಿಮ್ಮ ಹಿತಾಸಕ್ತಿಗಳನ್ನು ಸರ್ಕಾರ ರಕ್ಷಿಸುತ್ತದೆ ಎಂದು ಸಂಸದ ತೇಜಸ್ವಿ ಸೂರ್ಯ ಭರವಸೆ ನೀಡಿದ್ದರು.

- Advertisement -
- Advertisement -

ಬೆಂಗಳೂರಿನ ಗುರುರಾಘವೇಂದ್ರ ಕೋ-ಆಪರೇಟಿವ್‌ ಬ್ಯಾಂಕಿನ ವಂಚನೆ ಪ್ರಕರಣದ ದೂರು ದಾಖಲಾಗಿ ಎರಡು ವರ್ಷಗಳಾದರೂ, ಗ್ರಾಹಕರಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು ದೂರಲಾಗಿದೆ. ಜುಲೈ 2 ರ ಶುಕ್ರವಾರದಂದು ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಬ್ಯಾಂಕ್‌‌ನ ಠೇವಣಿದಾರರು ಭೇಟಿ ಮಾಡಿದ್ದರು. ಈ ವೇಳೆ ನ್ಯಾಯ ಕೊಡಿಸುವಂತೆ ಅವರಲ್ಲಿ ಕೇಳಿಕೊಂಡಾಗ ‘‘ನನ್ನನ್ನು ಕೇಳಿ ಹಣ ಇಟ್ಟಿದ್ದೀರಾ” ಎಂದು ಉಡಾಫೆಯಿಂದ ಮಾತನಾಡಿದರು ಎಂದು ಠೇವಣಿದಾರ ಹರೀಶ್ ಸೋಮವಾರ ಆರೋಪಿಸಿದ್ದಾರೆ.

ಕೆಪಿಸಿಸಿ ವೈದ್ಯಕೀಯ ಘಟಕದ ಕಾರ್ಯದರ್ಶಿ ಡಾ. ಶಂಕರ್‌ ಗುಹಾ ಅವರು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಠೇವಣಿದಾರ ಹರೀಶ್‌, “ಸಚಿವೆ ಸೀತಾರಾಮ್‌ ಅವರು ಇತ್ತೀಚೆಗೆ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಗುರು ರಾಘವೇ೦ದ್ರ ಸಹಕಾರಿ ಬ್ಯಾಂಕ್‌ ಠೇವಣಿದಾರರು ತಾವು ಹೂಡಿಕೆ ಮಾಡಿದ ಹಣ ಕಳೆದುಕೊಂಡಿರುವ ಬಗ್ಗೆ ಹೇಳಲಾಯಿತು. ಅದಕ್ಕೆ ಅವರು, ನನ್ನನ್ನು ಕೇಳಿ ರಾಘವೇಂದ್ರ ಬ್ಯಾಂಕ್‌ನಲ್ಲಿ ಹಣ ಹೂಡಿಕೆ ಮಾಡಿದ್ದೀರಾ” ಎಂದು ಪ್ರಶ್ನಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಿಲಯನ್ಸ್‌ ಫೈನಾನ್ಸ್‌ಗಳಿಂದ ಬ್ಯಾಂಕಿಂಗ್ ಫ್ರಾಡ್- ಕರ್ನಾಟಕ ಬ್ಯಾಂಕ್‌ಗೆ ವಂಚನೆ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ. ಶಂಕರ್‌ ಗುಹಾ, ‘‘ಈ ಹಗರಣದ ಬಗ್ಗೆ ಪ್ರಕರಣ ದಾಖಲಾಗಿ ಎರಡು ವರ್ಷಗಳು ಕಳೆದಿವೆ. ಆದರೂ ಠೇವಣಿದಾರರಿಗೆ ನ್ಯಾಯ ಸಿಕ್ಕಿಲ್ಲ. ಹಣ ಕಳೆದುಕೊಂಡ ಕೊರಗಿನಲ್ಲೇ 70 ಜನ ವಿವಿಧ ಕಾಯಿಲೆಗಳಿಗೆ ತುತ್ತಾಗಿ ಮೃತಪಟ್ಟಿದ್ದಾರೆ. ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸಲಾಗಿದೆಯಾದರೂ, ಏನೂ ಪ್ರಯೋಜನ ಆಗಿಲ್ಲ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು’’ ಎಂದು ಆಗ್ರಹಿಸಿದ್ದಾರೆ.

“ಬ್ಯಾಂಕಿಗೆ ಸತತವಾಗಿ ‘ಎ’ ದರ್ಜೆಯ ಪ್ರಮಾಣ ಪತ್ರ ನೀಡಲಾಗಿದೆ. ಇಂತಹ ವಂಚಕ ಬ್ಯಾಂಕ್‌ಗೆ ಆರ್‌ಬಿಐ ಈ ಪ್ರಮಾಣಪತ್ರ ನೀಡಿದ್ದಾದರೂ ಹೇಗೆ? ವಿವಿಧ ಕಡೆ ಶಾಖಾ ಕಚೇರಿಗಳನ್ನು ತೆರೆಯಲು ಅನುಮತಿ ನೀಡಿರುವುದರ ಹಿಂದಿನ ಉದ್ದೇಶವೇನು? ಈ ಬಗ್ಗೆ ಸಂಸದರನ್ನು ಪ್ರಶ್ನಿಸಿದರೆ ಹಾರಿಕೆಯ ಉತ್ತರ ನೀಡುತ್ತಾರೆ. ಸಂಸದರು ಹಾಗೂ ಶಾಸಕರಿಂದ ಸಮಸ್ಯೆಗೆ ಪರಿಹಾರ ಸಿಗುವುದು ಕಷ್ಟ. ಮುಖ್ಯಮಂತ್ರಿ ಮಧ್ಯ ಪ್ರವೇಶಿಸಬೇಕು. ಇದೇ 14 ರಂದು ಆಡಿಟ್‌ ವರದಿ ನೀಡುವುದಾಗಿ ಹೇಳಿದ್ದಾರೆ. ಕೊಡದಿದ್ದರೆ ‘ಆರ್‌ಬಿಐ ಚಲೋ’ ಅಭಿಯಾನ ಹಮ್ಮಿಕೊಳ್ಳುತ್ತೇವೆ” ಎಂದು ಶಂಕರ್‌‌ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಎಸ್‌ಬಿಐ ಬ್ಯಾಂಕ್‌ನಿಂದ ಗ್ರಾಹಕರಿಗೆ ಎಟಿಎಂ ವಿತ್‌ ಡ್ರಾ ಸೇರಿ ಹಲವು ಶುಲ್ಕಗಳು!

ಪ್ರಕರಣ ಸಂಬಂಧ ಕಳೆದ ವರ್ಷದ ಜನವರಿಯಲ್ಲಿ ಟ್ವೀಟ್ ಮಾಡಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, “ಗುರು ರಾಘವೇಂದ್ರ ಸಹಕಾರಿ ಬ್ಯಾಂಕಿನ ಯಾವುದೇ ಠೇವಣಿದಾರರು ಭಯಭೀತರಾಗದಿರಿ. ಅವರಿಗೆ ನಾನು ಭರವಸೆ ನೀಡುತ್ತೇನೆ. ಗೌರವಾನ್ವಿತ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಕರಣದ ಬಗ್ಗೆ ಮೌಲ್ಯಮಾಪನ ಮಾಡುತ್ತಾರೆ, ಜೊತೆಗೆ ವೈಯಕ್ತಿಕವಾಗಿ ಸಮಸ್ಯೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಠೇವಣಿದಾರರ ಹಿತಾಸಕ್ತಿಗಳನ್ನು ಸರ್ಕಾರ ರಕ್ಷಿಸುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ. ಅವರ ಕಾಳಜಿಗೆ ಕೃತಜ್ಞತೆಗಳು” ಎಂದು ಹೇಳಿದ್ದರು.

ಇದಾಗಿ ಒಂದೂವರೆ ವರ್ಷ ಕಳೆದರೂ ಪ್ರಕರಣವು ಯಾವುದೇ ತಾರ್ಕಿಕ ಅಂತ್ಯಕ್ಕೆ ತಲುಪಿಲ್ಲ. ಜುಲೈ 2 ರ ಶುಕ್ರವಾರದಂದು ಠೇವಣಿದಾರರನ್ನು ಭೇಟಿಯಾದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ನಿರ್ಮಲಾ ಸೀತಾರಾಮನ್‌, ಆರ್‌ಬಿಐ ನೇಮಿಸಿರುವ ಆಡಳಿತಾಧಿಕಾರಿ ವರದಿ ಸಲ್ಲಿಸುವವರೆಗೆ ತಾಳ್ಮೆಯಿಂದ ಇರಿ ಎಂದು ವಿನಂತಿಸಿದ್ದರು. “ಕೆಲವು ಕಾರ್ಯವಿಧಾನಗಳನ್ನು ಅನುಸರಿಸಬೇಕಾದ ಅಗತ್ಯವಿದ್ದು, ಆಡಳಿತಾಧಿಕಾರಿ ಆರ್‌ಬಿಐಗೆ ವರದಿ ಸಲ್ಲಿಸಿದ ಕೂಡಲೇ ಸಮಸ್ಯೆಯನ್ನು ಬಗೆಹರಿಸಲು ನನ್ನಿಂದಾದ ಪ್ರಯತ್ನವನ್ನು ಖಂಡಿತಾ ಮಾಡುತ್ತೇನೆ” ಹೇಳಿದ್ದರು.

ಬ್ಯಾಂಕಿನ ಒಟ್ಟು 25 ಸಾವಿರ ಮಂದಿ ಹಣ ಕಳೆದುಕೊಂಡಿದ್ದು, 2,130 ಕೋಟಿಗೂ ಅಧಿಕ ಹಣ ವಂಚನೆ ನಡೆಸಿದೆ ಎಂದು ಹೇಳಲಾಗಿದೆ. ಈ ಹಗರಣದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಅಶ್ವಥ ನಾರಾಯಣ ಗೌಡ ಅವರ ಪಾತ್ರವು ಇದೆ ಎಂದು ಆರೋಪಿಸಲಾಗಿದ್ದು, ಅವರು ಕೂಡಾ ಬ್ಯಾಂಕಿಗೆ 12 ಕೋಟಿ ಬಾಕಿ ಕಟ್ಟಬೇಕಿದೆ ಎಂದು ಹೇಳಲಾಗಿದೆ. ಈ ಮಧ್ಯೆ, ಬ್ಯಾಂಕಿನ ಆಡಿಟ್‌ ನಡೆಲಿದ್ದು, ಅದರ ವರದಿ ಬರಬೇಕಿದೆ. ಆದ್ದರಿಂದ ವಹಿವಾಟು ಆರು ತಿಂಗಳು ಯಥಾಸ್ಥಿತಿಯಲ್ಲಿ ಇರಬೇಕು ಎಂದು ಆರ್‌ಬಿಐ ಹೇಳಿದೆ. ಇದರಿಂದಾಗಿ ಠೇವಣಿದಾರರು ತಮ್ಮ ಹಣವನ್ನು ಬ್ಯಾಂಕಿನಿಂದ ತೆಗೆಯಲು ಆಗುತ್ತಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಕನ್ನಡ ಚಿತ್ರನಿರ್ಮಾಣಕ್ಕೆ ಸ್ಥಿರತೆ ತಂದುಕೊಟ್ಟ ಪಾರ್ವತಮ್ಮ ರಾಜಕುಮಾರ್ ಸ್ಮರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....