Homeಚಳವಳಿಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಗುರು ರವಿದಾಸ್ ಜಯಂತಿ

ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಗುರು ರವಿದಾಸ್ ಜಯಂತಿ

ಗುರು ರವಿದಾಸ್ ಜಯಂತಿ ಹಿನ್ನೆಲೆ ಪಂಜಾಬ್‌ನ ಅಸೆಂಬ್ಲಿ ಚುನಾವಣೆಯನ್ನು ಫೆ.14ರ ಬದಲು ಫೆ.20 ಕ್ಕೆ ಮುಂದೂಡಲಾಗಿದೆ.

- Advertisement -
- Advertisement -

15 ರಿಂದ 16 ನೇ ಶತಮಾನದಲ್ಲಿ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದ ಗುರು ರವಿದಾಸ್ ಅವರ ಜಯಂತಿ ಇಂದು. ಸಂತ ರವಿದಾಸ್‌ ಬರೆದಿರುವ ದೋಹೆಗಳು/ವಚನಗಳನ್ನು ಸಿಖ್ ಧರ್ಮ ಗ್ರಂಥವಾದ ಗುರು ಗ್ರಂಥ ಸಾಹಿಬ್‌ನಲ್ಲಿಯೂ ಸೇರಿಸಲಾಗಿದೆ.

ಸಂತ, ಕವಿ ಸಮಾಜವನ್ನು ಸುಧಾರಿಸಲು ಮತ್ತು ಜಾತಿ ಆಧಾರಿತ ಶ್ರೇಣಿ ವ್ಯವಸ್ಥೆಯ ಪಕ್ಷಪಾತಗಳನ್ನು ತೆಗೆದುಹಾಕಲು ಧಾರ್ಮಿಕವಾಗಿ ಕೆಲಸ ಮಾಡಿದವರು. ಇವರ ಜನ್ಮದಿನವನ್ನು ಪಂಜಾಬ್, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಚಂಡೀಗಢ ಸೇರಿದಂತೆ ಉತ್ತರ ಭಾರತದಲ್ಲಿ ಆಚರಿಸಲಾಗುತ್ತದೆ.

ಗುರು ರವಿದಾಸ್ ಅವರ ಜನ್ಮದಿನದ ನಿಖರವಾದ ದಿನಾಂಕ ತಿಳಿದಿಲ್ಲ. ಆದರೆ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ 1377 C.E ನಲ್ಲಿ ಜನಿಸಿದರು ಎಂದು ನಂಬಲಾಗಿದೆ. ಅವರ ಜನ್ಮ ವಾರ್ಷಿಕೋತ್ಸವವನ್ನು ಮಾಘ ಪೂರ್ಣಿಮಾದಂದು  (ಮಾಘ ಮಾಸದ ಹುಣ್ಣಿಮೆಯ ದಿನ) ಆಚರಿಸಲಾಗುತ್ತದೆ. ಈ ವರ್ಷ, ಇದು ಫೆಬ್ರವರಿ 16 ರಂದು ಈ ಮಾಘ ಪೂರ್ಣಿಮಾ ಬಂದಿದೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ ಫೆ.14ರ ಬದಲು ಫೆ.20ಕ್ಕೆ ಮುಂದೂಡಿಕೆ

ಚಮ್ಮಾರ ಕುಲದಲ್ಲಿ ಜನಿಸಿದ್ದ ಇವರು, ಜಾತಿಯ ಆಧಾರದ ಮೇಲೆ ಸಮಾನತೆ ಮತ್ತು ಘನತೆಯ ನೀಡದಿರುವ ಬಗ್ಗೆ ಖಂಡಿಸಿದ್ದರು. ಲಿಂಗ ಸಮಾನತೆಯನ್ನು ಉತ್ತೇಜಿಸಿದರು. ಲಿಂಗ ಅಥವಾ ಜಾತಿಯ ಆಧಾರದ ಮೇಲೆ ಸಮಾಜದ ವಿಭಜನೆಯನ್ನು ವಿರೋಧಿಸಿದ್ದರು. ಇವರು ಭಕ್ತಿ ಚಳವಳಿಯ ಮತ್ತೊಬ್ಬ ಪ್ರಮುಖ ಕವಯರ್ತಿ ಮೀರಾ ಬಾಯಿ ಅವರ ಆಧ್ಯಾತ್ಮಿಕ ಮಾರ್ಗದರ್ಶಕರಾಗಿದ್ದರು ಎಂದು ಕೆಲವರು ಹೇಳುತ್ತಾರೆ.

ವಾರಣಾಸಿಯ ಅವರ ಜನ್ಮಸ್ಥಳದಲ್ಲಿ ನಿರ್ಮಿಸಲಾದ ಶ್ರೀ ಗುರು ರವಿದಾಸ್ ಜನಮ್ ಆಸ್ಥಾನ ಮಂದಿರದಲ್ಲಿ ಅದ್ಧೂರಿ ಆಚರಣೆಯನ್ನು ಆಯೋಜಿಸಲಾಗಿದೆ. ಅವರ ಕೆಲವು ಅನುಯಾಯಿಗಳು ಪವಿತ್ರ ನದಿಯಲ್ಲಿ ಸ್ನಾನ ಮಾಡಿ, ಅವರ ಗೌರವಾರ್ಥವಾಗಿ ಆರತಿ ಮಾಡುತ್ತಾರೆ. ರವಿದಾಸ್ ಜನಮ್ ಆಸ್ಥಾನ ಮಂದಿರವು 1970 ರ ದಶಕದಲ್ಲಿ ಉದ್ಘಾಟನೆಗೊಂಡಿತು.

ಗುರು ರವಿದಾಸ್ ಜಯಂತಿಯನ್ನು ಪಂಜಾಬ್‌ನಲ್ಲಿ ವೈಭವಯುತವಾಗಿ ಆಚರಿಸಲಾಗುತ್ತದೆ. ರಾಜ್ಯದ ಜನಸಂಖ್ಯೆಯ ಶೇಕಡಾ 32 ರಷ್ಟಿರುವ ಪರಿಶಿಷ್ಟ ಜಾತಿಗಳ ಸಮುದಾಯದ ಜನರು ಫೆಬ್ರವರಿ 16 ರಂದು ನಡೆಯಲಿರುವ ಅವರ ಜನ್ಮದಿನದಲ್ಲಿ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ, ರಾಜ್ಯದಿಂದ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಪರಿಶಿಷ್ಟ ಜಾತಿ ಸಮುದಾಯದವರು ಫೆಬ್ರವರಿ 10 ರಿಂದ 16 ರವರೆಗೆ ಉತ್ತರ ಪ್ರದೇಶದ ಬನಾರಸ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಪಂಜಾಬ್‌ನಲ್ಲಿ ಅಸೆಂಬ್ಲಿ ಚುನಾವಣೆಯನ್ನು ಫೆ.14ರ ಬದಲು ಫೆ.20 ರಂದು ಚುನಾವಣೆ ನಡೆಸುವುದಾಗಿ ಆಯೋಗ ಘೋಷಿಸಿದೆ.

ಮಾನವತಾವಾದದ ಕುರಿತು ಗುರು ರವಿದಾಸ್ “ಪ್ರತಿಯೊಬ್ಬ ಮಾನವರಲ್ಲಿಯೂ ದೇವರು ನೆಲೆಸಿದ್ದಾರೆ, ಜಾತಿಗಳು, ಪಂಥಗಳು ಮತ್ತು ಇತರ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಗಳ ಆಧಾರದ ಮೇಲೆ ವ್ಯಕ್ತಿಗಳನ್ನು ಪ್ರತ್ಯೇಕಿಸುವುದು ತುಂಬಾ ನಿಷ್ಪ್ರಯೋಜಕವಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಅಂಬೇಡ್ಕರ್‌ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...