Homeಚಳವಳಿಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಗುರು ರವಿದಾಸ್ ಜಯಂತಿ

ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಗುರು ರವಿದಾಸ್ ಜಯಂತಿ

ಗುರು ರವಿದಾಸ್ ಜಯಂತಿ ಹಿನ್ನೆಲೆ ಪಂಜಾಬ್‌ನ ಅಸೆಂಬ್ಲಿ ಚುನಾವಣೆಯನ್ನು ಫೆ.14ರ ಬದಲು ಫೆ.20 ಕ್ಕೆ ಮುಂದೂಡಲಾಗಿದೆ.

- Advertisement -
- Advertisement -

15 ರಿಂದ 16 ನೇ ಶತಮಾನದಲ್ಲಿ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದ ಗುರು ರವಿದಾಸ್ ಅವರ ಜಯಂತಿ ಇಂದು. ಸಂತ ರವಿದಾಸ್‌ ಬರೆದಿರುವ ದೋಹೆಗಳು/ವಚನಗಳನ್ನು ಸಿಖ್ ಧರ್ಮ ಗ್ರಂಥವಾದ ಗುರು ಗ್ರಂಥ ಸಾಹಿಬ್‌ನಲ್ಲಿಯೂ ಸೇರಿಸಲಾಗಿದೆ.

ಸಂತ, ಕವಿ ಸಮಾಜವನ್ನು ಸುಧಾರಿಸಲು ಮತ್ತು ಜಾತಿ ಆಧಾರಿತ ಶ್ರೇಣಿ ವ್ಯವಸ್ಥೆಯ ಪಕ್ಷಪಾತಗಳನ್ನು ತೆಗೆದುಹಾಕಲು ಧಾರ್ಮಿಕವಾಗಿ ಕೆಲಸ ಮಾಡಿದವರು. ಇವರ ಜನ್ಮದಿನವನ್ನು ಪಂಜಾಬ್, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಚಂಡೀಗಢ ಸೇರಿದಂತೆ ಉತ್ತರ ಭಾರತದಲ್ಲಿ ಆಚರಿಸಲಾಗುತ್ತದೆ.

ಗುರು ರವಿದಾಸ್ ಅವರ ಜನ್ಮದಿನದ ನಿಖರವಾದ ದಿನಾಂಕ ತಿಳಿದಿಲ್ಲ. ಆದರೆ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ 1377 C.E ನಲ್ಲಿ ಜನಿಸಿದರು ಎಂದು ನಂಬಲಾಗಿದೆ. ಅವರ ಜನ್ಮ ವಾರ್ಷಿಕೋತ್ಸವವನ್ನು ಮಾಘ ಪೂರ್ಣಿಮಾದಂದು  (ಮಾಘ ಮಾಸದ ಹುಣ್ಣಿಮೆಯ ದಿನ) ಆಚರಿಸಲಾಗುತ್ತದೆ. ಈ ವರ್ಷ, ಇದು ಫೆಬ್ರವರಿ 16 ರಂದು ಈ ಮಾಘ ಪೂರ್ಣಿಮಾ ಬಂದಿದೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ ಫೆ.14ರ ಬದಲು ಫೆ.20ಕ್ಕೆ ಮುಂದೂಡಿಕೆ

ಚಮ್ಮಾರ ಕುಲದಲ್ಲಿ ಜನಿಸಿದ್ದ ಇವರು, ಜಾತಿಯ ಆಧಾರದ ಮೇಲೆ ಸಮಾನತೆ ಮತ್ತು ಘನತೆಯ ನೀಡದಿರುವ ಬಗ್ಗೆ ಖಂಡಿಸಿದ್ದರು. ಲಿಂಗ ಸಮಾನತೆಯನ್ನು ಉತ್ತೇಜಿಸಿದರು. ಲಿಂಗ ಅಥವಾ ಜಾತಿಯ ಆಧಾರದ ಮೇಲೆ ಸಮಾಜದ ವಿಭಜನೆಯನ್ನು ವಿರೋಧಿಸಿದ್ದರು. ಇವರು ಭಕ್ತಿ ಚಳವಳಿಯ ಮತ್ತೊಬ್ಬ ಪ್ರಮುಖ ಕವಯರ್ತಿ ಮೀರಾ ಬಾಯಿ ಅವರ ಆಧ್ಯಾತ್ಮಿಕ ಮಾರ್ಗದರ್ಶಕರಾಗಿದ್ದರು ಎಂದು ಕೆಲವರು ಹೇಳುತ್ತಾರೆ.

ವಾರಣಾಸಿಯ ಅವರ ಜನ್ಮಸ್ಥಳದಲ್ಲಿ ನಿರ್ಮಿಸಲಾದ ಶ್ರೀ ಗುರು ರವಿದಾಸ್ ಜನಮ್ ಆಸ್ಥಾನ ಮಂದಿರದಲ್ಲಿ ಅದ್ಧೂರಿ ಆಚರಣೆಯನ್ನು ಆಯೋಜಿಸಲಾಗಿದೆ. ಅವರ ಕೆಲವು ಅನುಯಾಯಿಗಳು ಪವಿತ್ರ ನದಿಯಲ್ಲಿ ಸ್ನಾನ ಮಾಡಿ, ಅವರ ಗೌರವಾರ್ಥವಾಗಿ ಆರತಿ ಮಾಡುತ್ತಾರೆ. ರವಿದಾಸ್ ಜನಮ್ ಆಸ್ಥಾನ ಮಂದಿರವು 1970 ರ ದಶಕದಲ್ಲಿ ಉದ್ಘಾಟನೆಗೊಂಡಿತು.

ಗುರು ರವಿದಾಸ್ ಜಯಂತಿಯನ್ನು ಪಂಜಾಬ್‌ನಲ್ಲಿ ವೈಭವಯುತವಾಗಿ ಆಚರಿಸಲಾಗುತ್ತದೆ. ರಾಜ್ಯದ ಜನಸಂಖ್ಯೆಯ ಶೇಕಡಾ 32 ರಷ್ಟಿರುವ ಪರಿಶಿಷ್ಟ ಜಾತಿಗಳ ಸಮುದಾಯದ ಜನರು ಫೆಬ್ರವರಿ 16 ರಂದು ನಡೆಯಲಿರುವ ಅವರ ಜನ್ಮದಿನದಲ್ಲಿ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ, ರಾಜ್ಯದಿಂದ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಪರಿಶಿಷ್ಟ ಜಾತಿ ಸಮುದಾಯದವರು ಫೆಬ್ರವರಿ 10 ರಿಂದ 16 ರವರೆಗೆ ಉತ್ತರ ಪ್ರದೇಶದ ಬನಾರಸ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಪಂಜಾಬ್‌ನಲ್ಲಿ ಅಸೆಂಬ್ಲಿ ಚುನಾವಣೆಯನ್ನು ಫೆ.14ರ ಬದಲು ಫೆ.20 ರಂದು ಚುನಾವಣೆ ನಡೆಸುವುದಾಗಿ ಆಯೋಗ ಘೋಷಿಸಿದೆ.

ಮಾನವತಾವಾದದ ಕುರಿತು ಗುರು ರವಿದಾಸ್ “ಪ್ರತಿಯೊಬ್ಬ ಮಾನವರಲ್ಲಿಯೂ ದೇವರು ನೆಲೆಸಿದ್ದಾರೆ, ಜಾತಿಗಳು, ಪಂಥಗಳು ಮತ್ತು ಇತರ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಗಳ ಆಧಾರದ ಮೇಲೆ ವ್ಯಕ್ತಿಗಳನ್ನು ಪ್ರತ್ಯೇಕಿಸುವುದು ತುಂಬಾ ನಿಷ್ಪ್ರಯೋಜಕವಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಅಂಬೇಡ್ಕರ್‌ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...