Homeಚಳವಳಿಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಗುರು ರವಿದಾಸ್ ಜಯಂತಿ

ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಗುರು ರವಿದಾಸ್ ಜಯಂತಿ

ಗುರು ರವಿದಾಸ್ ಜಯಂತಿ ಹಿನ್ನೆಲೆ ಪಂಜಾಬ್‌ನ ಅಸೆಂಬ್ಲಿ ಚುನಾವಣೆಯನ್ನು ಫೆ.14ರ ಬದಲು ಫೆ.20 ಕ್ಕೆ ಮುಂದೂಡಲಾಗಿದೆ.

- Advertisement -
- Advertisement -

15 ರಿಂದ 16 ನೇ ಶತಮಾನದಲ್ಲಿ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದ ಗುರು ರವಿದಾಸ್ ಅವರ ಜಯಂತಿ ಇಂದು. ಸಂತ ರವಿದಾಸ್‌ ಬರೆದಿರುವ ದೋಹೆಗಳು/ವಚನಗಳನ್ನು ಸಿಖ್ ಧರ್ಮ ಗ್ರಂಥವಾದ ಗುರು ಗ್ರಂಥ ಸಾಹಿಬ್‌ನಲ್ಲಿಯೂ ಸೇರಿಸಲಾಗಿದೆ.

ಸಂತ, ಕವಿ ಸಮಾಜವನ್ನು ಸುಧಾರಿಸಲು ಮತ್ತು ಜಾತಿ ಆಧಾರಿತ ಶ್ರೇಣಿ ವ್ಯವಸ್ಥೆಯ ಪಕ್ಷಪಾತಗಳನ್ನು ತೆಗೆದುಹಾಕಲು ಧಾರ್ಮಿಕವಾಗಿ ಕೆಲಸ ಮಾಡಿದವರು. ಇವರ ಜನ್ಮದಿನವನ್ನು ಪಂಜಾಬ್, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಚಂಡೀಗಢ ಸೇರಿದಂತೆ ಉತ್ತರ ಭಾರತದಲ್ಲಿ ಆಚರಿಸಲಾಗುತ್ತದೆ.

ಗುರು ರವಿದಾಸ್ ಅವರ ಜನ್ಮದಿನದ ನಿಖರವಾದ ದಿನಾಂಕ ತಿಳಿದಿಲ್ಲ. ಆದರೆ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ 1377 C.E ನಲ್ಲಿ ಜನಿಸಿದರು ಎಂದು ನಂಬಲಾಗಿದೆ. ಅವರ ಜನ್ಮ ವಾರ್ಷಿಕೋತ್ಸವವನ್ನು ಮಾಘ ಪೂರ್ಣಿಮಾದಂದು  (ಮಾಘ ಮಾಸದ ಹುಣ್ಣಿಮೆಯ ದಿನ) ಆಚರಿಸಲಾಗುತ್ತದೆ. ಈ ವರ್ಷ, ಇದು ಫೆಬ್ರವರಿ 16 ರಂದು ಈ ಮಾಘ ಪೂರ್ಣಿಮಾ ಬಂದಿದೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ ಫೆ.14ರ ಬದಲು ಫೆ.20ಕ್ಕೆ ಮುಂದೂಡಿಕೆ

ಚಮ್ಮಾರ ಕುಲದಲ್ಲಿ ಜನಿಸಿದ್ದ ಇವರು, ಜಾತಿಯ ಆಧಾರದ ಮೇಲೆ ಸಮಾನತೆ ಮತ್ತು ಘನತೆಯ ನೀಡದಿರುವ ಬಗ್ಗೆ ಖಂಡಿಸಿದ್ದರು. ಲಿಂಗ ಸಮಾನತೆಯನ್ನು ಉತ್ತೇಜಿಸಿದರು. ಲಿಂಗ ಅಥವಾ ಜಾತಿಯ ಆಧಾರದ ಮೇಲೆ ಸಮಾಜದ ವಿಭಜನೆಯನ್ನು ವಿರೋಧಿಸಿದ್ದರು. ಇವರು ಭಕ್ತಿ ಚಳವಳಿಯ ಮತ್ತೊಬ್ಬ ಪ್ರಮುಖ ಕವಯರ್ತಿ ಮೀರಾ ಬಾಯಿ ಅವರ ಆಧ್ಯಾತ್ಮಿಕ ಮಾರ್ಗದರ್ಶಕರಾಗಿದ್ದರು ಎಂದು ಕೆಲವರು ಹೇಳುತ್ತಾರೆ.

ವಾರಣಾಸಿಯ ಅವರ ಜನ್ಮಸ್ಥಳದಲ್ಲಿ ನಿರ್ಮಿಸಲಾದ ಶ್ರೀ ಗುರು ರವಿದಾಸ್ ಜನಮ್ ಆಸ್ಥಾನ ಮಂದಿರದಲ್ಲಿ ಅದ್ಧೂರಿ ಆಚರಣೆಯನ್ನು ಆಯೋಜಿಸಲಾಗಿದೆ. ಅವರ ಕೆಲವು ಅನುಯಾಯಿಗಳು ಪವಿತ್ರ ನದಿಯಲ್ಲಿ ಸ್ನಾನ ಮಾಡಿ, ಅವರ ಗೌರವಾರ್ಥವಾಗಿ ಆರತಿ ಮಾಡುತ್ತಾರೆ. ರವಿದಾಸ್ ಜನಮ್ ಆಸ್ಥಾನ ಮಂದಿರವು 1970 ರ ದಶಕದಲ್ಲಿ ಉದ್ಘಾಟನೆಗೊಂಡಿತು.

ಗುರು ರವಿದಾಸ್ ಜಯಂತಿಯನ್ನು ಪಂಜಾಬ್‌ನಲ್ಲಿ ವೈಭವಯುತವಾಗಿ ಆಚರಿಸಲಾಗುತ್ತದೆ. ರಾಜ್ಯದ ಜನಸಂಖ್ಯೆಯ ಶೇಕಡಾ 32 ರಷ್ಟಿರುವ ಪರಿಶಿಷ್ಟ ಜಾತಿಗಳ ಸಮುದಾಯದ ಜನರು ಫೆಬ್ರವರಿ 16 ರಂದು ನಡೆಯಲಿರುವ ಅವರ ಜನ್ಮದಿನದಲ್ಲಿ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ, ರಾಜ್ಯದಿಂದ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಪರಿಶಿಷ್ಟ ಜಾತಿ ಸಮುದಾಯದವರು ಫೆಬ್ರವರಿ 10 ರಿಂದ 16 ರವರೆಗೆ ಉತ್ತರ ಪ್ರದೇಶದ ಬನಾರಸ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಪಂಜಾಬ್‌ನಲ್ಲಿ ಅಸೆಂಬ್ಲಿ ಚುನಾವಣೆಯನ್ನು ಫೆ.14ರ ಬದಲು ಫೆ.20 ರಂದು ಚುನಾವಣೆ ನಡೆಸುವುದಾಗಿ ಆಯೋಗ ಘೋಷಿಸಿದೆ.

ಮಾನವತಾವಾದದ ಕುರಿತು ಗುರು ರವಿದಾಸ್ “ಪ್ರತಿಯೊಬ್ಬ ಮಾನವರಲ್ಲಿಯೂ ದೇವರು ನೆಲೆಸಿದ್ದಾರೆ, ಜಾತಿಗಳು, ಪಂಥಗಳು ಮತ್ತು ಇತರ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಗಳ ಆಧಾರದ ಮೇಲೆ ವ್ಯಕ್ತಿಗಳನ್ನು ಪ್ರತ್ಯೇಕಿಸುವುದು ತುಂಬಾ ನಿಷ್ಪ್ರಯೋಜಕವಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಅಂಬೇಡ್ಕರ್‌ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...