Homeಮುಖಪುಟರಂಜನೆ, ಚಿಂತನೆ ಹದಬೆರೆತ ‘ಗುರು ಶಿಷ್ಯರು’

ರಂಜನೆ, ಚಿಂತನೆ ಹದಬೆರೆತ ‘ಗುರು ಶಿಷ್ಯರು’

- Advertisement -
- Advertisement -

‘ಖೋ ಖೋ’ ಆಟವನ್ನೇ ಉಸಿರಾಡುತ್ತಾ, ತನ್ನ ಗುರು ದತ್ತಣ್ಣ ಹೇಳಿದ ಮಾರ್ಗದಲ್ಲಿ ಹೆಜ್ಜೆ ಇಟ್ಟು ರಾಷ್ಟ್ರಮಟ್ಟದಲ್ಲೂ ಆಟಗಾರನಾಗಿದ್ದ ಮನೋಹರ್‌ (ಶರಣ್‌) ಎಂಬ ಯುವಕ ಕೊನೆಗೆ ಕೆಲಸವೂ ಇಲ್ಲದೆ ಪರಿತಪಿಸುತ್ತಾನೆ. ಖೋಖೋ ಆಟಕ್ಕೆ ಮಾನ್ಯತೆ ಇಲ್ಲವಾಗಿ, ಅದನ್ನೇ ನಂಬಿದ್ದ ಆಟಗಾರರು ಬೀದಿಪಾಲಾಗುತ್ತಾರೆ. ಓದಿನಲ್ಲಿ ಮುಂದಿದ್ದ ಶಿಷ್ಯನನ್ನು ಆಟದತ್ತ ಎಳೆತಂದು ದಿಕ್ಕು ತಪ್ಪಿಸಿದೆ ಎಂಬ ಕೊರಗಿನಲ್ಲಿರುವ ಪಿ.ಟಿ.ಮಾಸ್ಟರ್‌ ದತ್ತಣ್ಣ, ಮನೋಹರ್‌ಗಾಗಿ ಒಂದು ಕೆಲಸ ಹುಡುಕಿಕೊಡಲು ಪರದಾಡುತ್ತಿದ್ದಾರೆ. ಕೊನೆಗೆ ‘ಬೆಟ್ಟದಪುರ’ ಎಂಬ ಕುಗ್ರಾಮದ ಹಿಂದುಳಿದ ಶಾಲೆಯೊಂದರಲ್ಲಿ ಕೆಲಸ ಕೊಡಿಸುತ್ತಾರೆ. ಆಲಸ್ಯ, ಉದಾಸೀನತೆ ಬೆಳೆಸಿಕೊಂಡಿದ್ದ ಮನೋಹರ್‌ ಬೆಟ್ಟದಪುರಕ್ಕೆ ಪಿ.ಟಿ.ಮಾಸ್ಟರ್‌ ಆಗಿ ಬಂದ ಮೇಲೆ ಏನಾಯಿತು?- ಎಂಬುದೇ ‘ಗುರು ಶಿಷ್ಯರು’ ಸಿನಿಮಾ.

ಹಳೆಯ ಫಾರ್ಮುಲಾಗಳಿಂದಲೇ ಜಡ್ಡುಗಟ್ಟಿದ ವ್ಯವಸ್ಥೆಯೊಳಗೆ ಕಾಲಕಾಲಕ್ಕೆ ಹೊಸ ನೀರು ಹರಿಯಬೇಕು. ಹೊಸ ಪ್ರತಿಭೆಗಳು ಅನಾವರಣವಾಗಬೇಕು. ಆಗ ಮಾತ್ರ ಒಂದು ವ್ಯವಸ್ಥೆಯೊಳಗೆ ಚಲನೆಶೀಲತೆ ಬರುತ್ತದೆ. ‘ಜಂಟಲ್‌ ಮ್ಯಾನ್‌’ ಎಂಬ ಸದಭಿರುಚಿಯ ಸಿನಿಮಾ ನೀಡಿದ ನಿರ್ದೇಶಕ ಜಡೇಶ ಕೆ. ಹಂಪಿಯವರು ‘ಗುರು ಶಿಷ್ಯರು’ ಮೂಲಕ ಮತ್ತೊಮ್ಮೆ ತಮ್ಮ ಪ್ರತಿಭೆಯನ್ನು ವಿಸ್ತರಣೆ ಮಾಡಿದ್ದಾರೆ. ಮೂರರಲ್ಲಿ ಮತ್ತೊಂದು ಆಗದಂತಹ ಕ್ರೀಡಾ ಕಥೆಯನ್ನು ನೀಡಿದ್ದಾರೆ.

1981ರಲ್ಲಿ ಎಚ್.ಆರ್‌.ಭಾರ್ಗವ್‌ ಅವರು ನಿರ್ದೇಶಿಸಿದ ‘ಗುರುಶಿಷ್ಯರು’ ಸಿನಿಮಾವನ್ನು ಕನ್ನಡಿಗರು ಮರೆಯಲಾರರು. ಈ ಟೈಟಲ್‌ ಚಿರಪರಿಚಿತ. ಜಡೇಶ ನಿರ್ದೇಶನದ ‘ಗುರುಶಿಷ್ಯರು’ 2022ರ ಸಿನಿಮಾದರೂ ಕಥೆ ನಡೆಯುವುದು 1995ರ ಕಾಲಘಟ್ಟದಲ್ಲಿ. ‘ಜಂಟಲ್‌ಮ್ಯಾನ್‌’ ಸಿನಿಮಾದಂತೆಯೇ ‘ಗುರುಶಿಷ್ಯರು’ ಮೊದಲಾರ್ಧ ಭರಪೂರ ರಂಜನೆಯಾದರೆ, ದ್ವಿತೀಯಾರ್ಥ ಚಿಂತನೆಗೆ ಹೊರಳುತ್ತದೆ.

ಡಬ್ಬಲ್‌ ಮೀನಿಂಗ್‌ಗಳೇ ಹಾಸ್ಯದ ಮುಖವಾಡ ಹೊತ್ತು ರಾರಾಜಿಸುತ್ತಿರುವ ಹೊತ್ತಿನಲ್ಲಿ ಸಹ್ಯವಾದ ಸಂಭಾಷಣೆಯ ಮೂಲಕ ನಗಿಸಬಹುದು ಎಂಬುದನ್ನು ‘ಮಾಸ್ತಿ’ಯವರ ಸಂಭಾಷಣೆ ಸಾಬೀತು ಮಾಡಿದೆ. ಎಲ್ಲಿಯೂ ಅತಿರೇಕವೆನಿಸದ ಹದವಾದ ಸಂಭಾಷಣೆ ಬರೆಯಲಾಗಿದೆ.

ಜಡೇಶ ಅವರು ಕಥೆ ಹಾಗೂ ಚಿತ್ರಕತೆಗೆ ನೀಡಿರುವ ಒತ್ತು ಢಾಳಾಗಿ ಕಾಣುತ್ತದೆ. ಸಂತೆಗೆ ಮೂರು ಮೊಳ ನೇಯ್ಯದಂತೆ ಅಚ್ಚುಕಟ್ಟುತನ ಮೆರೆದಿದ್ದಾರೆ. ಪ್ರತಿಪಾತ್ರಕ್ಕೂ ಮಹತ್ವ ನೀಡಿದ್ದಾರೆ. ಇಂದಿರಾ ಗಾಂಧಿಯವರು ಜಾರಿಗೆ ತಂದ ‘ಉಳುವವನೇ ಭೂಮಿಯ ಒಡೆಯ’ ಕಾನೂನು ಉಂಟು ಮಾಡಿದ ಸಾಮಾಜಿಕ ಪರಿವರ್ತನೆ, ಅದಕ್ಕೆ ಫ್ಯೂಡಲ್‌ ವ್ಯವಸ್ಥೆ ತೋರಿದ ಅಸಹನೆ, ಜೂಜಿನ ಮೋಜು ಇತ್ಯಾದಿ ಅಂಶಗಳನ್ನು ಒಳಗೊಂಡ ಪರಿಸರದಲ್ಲಿ ಕಥೆ ಸಾಗುತ್ತದೆ.

ಜೂಜುಪ್ರಿಯ ಜಮೀನ್ದಾರ (ಅಪೂರ್ವ ಕಾಸರವಳ್ಳಿ) ವಿರುದ್ಧ ಹೋರಾಡುತ್ತಿರುವ ಬೆಟ್ಟದಪುರದ ಜನರು ಖೋ ಖೋ ಆಟದಲ್ಲಿ ಗೆದ್ದು ತಮ್ಮ ಜಮೀನುಗಳನ್ನು ಉಳಿಸುತ್ತೇವೆ ಎಂದು ಸವಾಲು ಹಾಕುವುದು, ತಮ್ಮ ನಂಬಿಕೆಗೆ ಪಿ.ಟಿ. ಮಾಸ್ಟರ್ ಮನೋಹರ್‌ ಮೋಸ ಮಾಡಿದ್ದಾನೆಂದು ಬೇಸರಗೊಂಡ ಊರಿನ ಜನರು ತಮ್ಮ ಮಕ್ಕಳನ್ನು ಖೋ ಖೋ ಆಡಲು ಕಳಿಸದಿರುವಾಗ ಊರ ಹೊರಗೆ ವಾಸಿಸುತ್ತಿರುವ ಹಂದಿ ಜೋಗರ ಹುಡುಗನನ್ನು, ಬಹು ಆಳದ ಕೆರೆಗೆ ಧುಮುಕಿ ಮೀನು ಹಿಡಿಯುವ ಬೆಸ್ತರ ಹುಡುಗನನ್ನು ತಂಡಕ್ಕೆ ಸೇರಿಸಿಕೊಳ್ಳುವುದು, ಊರು ಬಿಟ್ಟು ಹೋದ ಮುಸ್ಲಿಮ್ ಹುಡುಗರು ಮತ್ತೆ ತಂಡಕ್ಕೆ ಬಂದು ಸೇರುವುದು- ಇತ್ಯಾದಿ ದೃಶ್ಯಗಳು ಅಮೀರ್‌ ಖಾನ್‌ ಅಭಿನಯದ ‘ಲಗಾನ್‌’ ಸಿನಿಮಾವನ್ನು ನೆನಪಿಸುತ್ತವೆ.

ಕ್ಷಾಮದಿಂದ ನೊಂದ ಊರಿನ ಜನ ಎಲ್ಲ ಜಾತಿ ಮತವನ್ನು ಮರೆತು, ಒಂದಾಗಿ ಕ್ರಿಕೆಟ್ ಕಲಿತು ನಂತರ ಬ್ರಿಟಿಷರನ್ನು ಸೋಲಿಸಿದ್ದನ್ನು ಲಗಾನ್‌ನಲ್ಲಿ ಕಾಣಬಹುದು. ಜಡೇಶ ಅವರ ಕಥೆಯಲ್ಲೂ ಈ ಸ್ವರೂಪ ಕಂಡು ಬರುತ್ತದೆ. ಜಮೀನ್ದಾರನ ವಿರುದ್ಧ ಪಣ ತೊಟ್ಟು ಊರನ್ನು ಉಳಿಸಲು ಖೋ ಖೋ ಆಡುತ್ತಾರೆ. ಸ್ವಾತಂತ್ರ್ಯ ವೂರ್ವದ ಕಥೆಯಾದ ಲಗಾನ್‌ನಲ್ಲಿ ಅಸ್ಪೃಶ್ಯತೆ ಅಳಿಸಿ ಭಾರತೀಯರು ಒಂದಾಗಿ ಹೋರಾಡಬೇಕಾದ ಎಳೆ ಬರುತ್ತದೆ. ಸ್ವಾತಂತ್ರ್ಯ ನಂತರದ ಕಥೆಯಾದ ಗುರು ಶಿಷ್ಯರಲ್ಲಿ ಹಂದಿಜೋಗರು ಊರ ಹೊರಗೆ ಇರುವಂತೆ ತೋರಿಸಲಾಗಿದೆ. ಹಂದಿಜೋಗರ ಹುಡುಗ ತಂಡಕ್ಕೆ ಬಂದು ಸೇರಿದಾಗಲಾಗಲೀ, ಹಂದಿಯನ್ನು ಓಡಿಸಿಕೊಂಡು ಶಾಲಾ ಅಂಗಳದಲ್ಲಿ ನಿರ್ಭಿಡೆಯಿಂದ ಹಿಡಿಯುವ ವೇಳೆಯಲ್ಲಾಗಲೀ ಅಸ್ಪೃಶ್ಯತೆಯ ಅಂಜಿಕೆ ಪ್ರದರ್ಶನವಾಗಿಲ್ಲ. ಈ ಕುರಿತು ಹೆಚ್ಚಿನ ವಿವರಕ್ಕೆ ಹೋಗದಂತೆ ನಿಭಾಯಿಸಿರುವುದು ಜಡೇಶ್ ಅವರ ಜಾಣ್ಮೆಯೂ ಹೌದು.

ಗಾಂಧಿಯ ಪ್ರತಿಮೆಯ ಎದುರು ನಿಂತು, “ಮಾಡು ಇಲ್ಲವೇ ಮಡಿ” ಎಂದು ಪಣ ತೊಡುವ ಬೆಟ್ಟದಪುರದ ತಂಡ, ಕನ್ನಡ ಭಾವುಟ ಹಿಡಿದು ಬರುವ ಪಿ.ಟಿ.ಮಾಸ್ಟರ್ ಮನೋಹರ್‌- ದೃಶ್ಯಗಳು ನಿರ್ದೇಶಕರ ಅಸ್ಮಿತೆಯ ಗುರುತುಗಳಾಗಿ ಕಾಣುತ್ತವೆ.

ಇದನ್ನೂ ಓದಿರಿ: ‘ಸೀತಾರಾಮಂ’ ಸಿನಿಮಾ ಹಿಂದುತ್ವ ರಾಜಕಾರಣಕ್ಕೆ ಒಳೇಟು ನೀಡಿದ್ದು ಹೀಗೆ…

ಸ್ಪೋರ್ಟ್ಸ್ ಡ್ರಾಮಾ ಸಿನಿಮಾಗಳಲ್ಲಿ ಇರುವ ಸಾಮಾನ್ಯ ರೋಚಕತೆ ಇಲ್ಲಿಯೂ ಇದೆ. ವೈಯಕ್ತಿಕ ಸಾಧನೆಯ ಕಥಾ ಹಂದರವುಳ್ಳ ಸ್ಪೋರ್ಟ್ಸ್ ಡ್ರಾಮಾಗಳಿಗಿಂತ ಸಾಮಾಜಿಕ ವ್ಯವಸ್ಥೆಯೊಂದಿಗೆ ಬರೆತ ಕ್ರೀಡಾ ಕಥನಗಳಿಗೆ ಮಹತ್ವ ಇರುವುದನ್ನು ‘ಗುರು ಶಿಷ್ಯರು’ ಸಿನಿಮಾ ಮನಗಾಣಿಸಿದೆ. ಖೋ ಖೋ ಆಟಕ್ಕೆ ಹಾಗೂ ಖೋ ಖೋ ಆಟಗಾರರಿಗೆ ಹೆಚ್ಚಿನ ಮಹತ್ವವನ್ನು ನೀಡಬೇಕೆಂಬ ಆಶಯವನ್ನು ಈ ಸಿನಿಮಾ ವ್ಯಕ್ತಪಡಿಸಿದೆ. ಅಂದಹಾಗೆ ಶಾಲಾ ಬಾಲಕನ ಲವ್ ಸ್ಟೋರಿಗೆ ನೀಡಿರುವ ಸ್ಪೇಸ್‌ ಸ್ವಲ್ಪ ಹೆಚ್ಚಾಯಿತು ಅನಿಸುತ್ತದೆ.

ಸ್ವಾತಂತ್ರ್ಯ ಹೋರಾಟಗಾರ ಹಾಗೂ ಗಾಂಧಿವಾದಿಯಾಗಿ ಸುರೇಶ್‌ ಹೆಬ್ಳೀಕರ್‌, ಖಳನಾಯಕನಾಗಿ ಅಪೂರ್ವ ಕಾಸರವಳ್ಳಿ, ನಾಯಕಿಯಾಗಿ ನಿಶ್ವಿಕಾ ನಾಯ್ಡು, ಶಿಷ್ಯರ ಪಾತ್ರದಲ್ಲಿ ನಟಿರುವ ಎಲ್ಲ ಮಕ್ಕಳೂ ಇಷ್ಟವಾಗುತ್ತಾರೆ. ಅಜನೀಶ್ ಅವರ ಸಂಗೀತ ಮೆಚ್ಚುಗೆಯಾಗುತ್ತದೆ. ಹಾಡುಗಳು ಇಂಪಾಗಿವೆ. ಛಾಯಾಗ್ರಾಹಕ ಅರೂರ್‌ ಸುಧಾಕರ್‌ ಶೆಟ್ಟಿಯವರು ಹಳ್ಳಿಯ ಪರಿಸರವನ್ನು ಸೊಗಸಾಗಿ ಸೆರೆಹಿಡಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....