Homeಮುಖಪುಟರಂಜನೆ, ಚಿಂತನೆ ಹದಬೆರೆತ ‘ಗುರು ಶಿಷ್ಯರು’

ರಂಜನೆ, ಚಿಂತನೆ ಹದಬೆರೆತ ‘ಗುರು ಶಿಷ್ಯರು’

- Advertisement -
- Advertisement -

‘ಖೋ ಖೋ’ ಆಟವನ್ನೇ ಉಸಿರಾಡುತ್ತಾ, ತನ್ನ ಗುರು ದತ್ತಣ್ಣ ಹೇಳಿದ ಮಾರ್ಗದಲ್ಲಿ ಹೆಜ್ಜೆ ಇಟ್ಟು ರಾಷ್ಟ್ರಮಟ್ಟದಲ್ಲೂ ಆಟಗಾರನಾಗಿದ್ದ ಮನೋಹರ್‌ (ಶರಣ್‌) ಎಂಬ ಯುವಕ ಕೊನೆಗೆ ಕೆಲಸವೂ ಇಲ್ಲದೆ ಪರಿತಪಿಸುತ್ತಾನೆ. ಖೋಖೋ ಆಟಕ್ಕೆ ಮಾನ್ಯತೆ ಇಲ್ಲವಾಗಿ, ಅದನ್ನೇ ನಂಬಿದ್ದ ಆಟಗಾರರು ಬೀದಿಪಾಲಾಗುತ್ತಾರೆ. ಓದಿನಲ್ಲಿ ಮುಂದಿದ್ದ ಶಿಷ್ಯನನ್ನು ಆಟದತ್ತ ಎಳೆತಂದು ದಿಕ್ಕು ತಪ್ಪಿಸಿದೆ ಎಂಬ ಕೊರಗಿನಲ್ಲಿರುವ ಪಿ.ಟಿ.ಮಾಸ್ಟರ್‌ ದತ್ತಣ್ಣ, ಮನೋಹರ್‌ಗಾಗಿ ಒಂದು ಕೆಲಸ ಹುಡುಕಿಕೊಡಲು ಪರದಾಡುತ್ತಿದ್ದಾರೆ. ಕೊನೆಗೆ ‘ಬೆಟ್ಟದಪುರ’ ಎಂಬ ಕುಗ್ರಾಮದ ಹಿಂದುಳಿದ ಶಾಲೆಯೊಂದರಲ್ಲಿ ಕೆಲಸ ಕೊಡಿಸುತ್ತಾರೆ. ಆಲಸ್ಯ, ಉದಾಸೀನತೆ ಬೆಳೆಸಿಕೊಂಡಿದ್ದ ಮನೋಹರ್‌ ಬೆಟ್ಟದಪುರಕ್ಕೆ ಪಿ.ಟಿ.ಮಾಸ್ಟರ್‌ ಆಗಿ ಬಂದ ಮೇಲೆ ಏನಾಯಿತು?- ಎಂಬುದೇ ‘ಗುರು ಶಿಷ್ಯರು’ ಸಿನಿಮಾ.

ಹಳೆಯ ಫಾರ್ಮುಲಾಗಳಿಂದಲೇ ಜಡ್ಡುಗಟ್ಟಿದ ವ್ಯವಸ್ಥೆಯೊಳಗೆ ಕಾಲಕಾಲಕ್ಕೆ ಹೊಸ ನೀರು ಹರಿಯಬೇಕು. ಹೊಸ ಪ್ರತಿಭೆಗಳು ಅನಾವರಣವಾಗಬೇಕು. ಆಗ ಮಾತ್ರ ಒಂದು ವ್ಯವಸ್ಥೆಯೊಳಗೆ ಚಲನೆಶೀಲತೆ ಬರುತ್ತದೆ. ‘ಜಂಟಲ್‌ ಮ್ಯಾನ್‌’ ಎಂಬ ಸದಭಿರುಚಿಯ ಸಿನಿಮಾ ನೀಡಿದ ನಿರ್ದೇಶಕ ಜಡೇಶ ಕೆ. ಹಂಪಿಯವರು ‘ಗುರು ಶಿಷ್ಯರು’ ಮೂಲಕ ಮತ್ತೊಮ್ಮೆ ತಮ್ಮ ಪ್ರತಿಭೆಯನ್ನು ವಿಸ್ತರಣೆ ಮಾಡಿದ್ದಾರೆ. ಮೂರರಲ್ಲಿ ಮತ್ತೊಂದು ಆಗದಂತಹ ಕ್ರೀಡಾ ಕಥೆಯನ್ನು ನೀಡಿದ್ದಾರೆ.

1981ರಲ್ಲಿ ಎಚ್.ಆರ್‌.ಭಾರ್ಗವ್‌ ಅವರು ನಿರ್ದೇಶಿಸಿದ ‘ಗುರುಶಿಷ್ಯರು’ ಸಿನಿಮಾವನ್ನು ಕನ್ನಡಿಗರು ಮರೆಯಲಾರರು. ಈ ಟೈಟಲ್‌ ಚಿರಪರಿಚಿತ. ಜಡೇಶ ನಿರ್ದೇಶನದ ‘ಗುರುಶಿಷ್ಯರು’ 2022ರ ಸಿನಿಮಾದರೂ ಕಥೆ ನಡೆಯುವುದು 1995ರ ಕಾಲಘಟ್ಟದಲ್ಲಿ. ‘ಜಂಟಲ್‌ಮ್ಯಾನ್‌’ ಸಿನಿಮಾದಂತೆಯೇ ‘ಗುರುಶಿಷ್ಯರು’ ಮೊದಲಾರ್ಧ ಭರಪೂರ ರಂಜನೆಯಾದರೆ, ದ್ವಿತೀಯಾರ್ಥ ಚಿಂತನೆಗೆ ಹೊರಳುತ್ತದೆ.

ಡಬ್ಬಲ್‌ ಮೀನಿಂಗ್‌ಗಳೇ ಹಾಸ್ಯದ ಮುಖವಾಡ ಹೊತ್ತು ರಾರಾಜಿಸುತ್ತಿರುವ ಹೊತ್ತಿನಲ್ಲಿ ಸಹ್ಯವಾದ ಸಂಭಾಷಣೆಯ ಮೂಲಕ ನಗಿಸಬಹುದು ಎಂಬುದನ್ನು ‘ಮಾಸ್ತಿ’ಯವರ ಸಂಭಾಷಣೆ ಸಾಬೀತು ಮಾಡಿದೆ. ಎಲ್ಲಿಯೂ ಅತಿರೇಕವೆನಿಸದ ಹದವಾದ ಸಂಭಾಷಣೆ ಬರೆಯಲಾಗಿದೆ.

ಜಡೇಶ ಅವರು ಕಥೆ ಹಾಗೂ ಚಿತ್ರಕತೆಗೆ ನೀಡಿರುವ ಒತ್ತು ಢಾಳಾಗಿ ಕಾಣುತ್ತದೆ. ಸಂತೆಗೆ ಮೂರು ಮೊಳ ನೇಯ್ಯದಂತೆ ಅಚ್ಚುಕಟ್ಟುತನ ಮೆರೆದಿದ್ದಾರೆ. ಪ್ರತಿಪಾತ್ರಕ್ಕೂ ಮಹತ್ವ ನೀಡಿದ್ದಾರೆ. ಇಂದಿರಾ ಗಾಂಧಿಯವರು ಜಾರಿಗೆ ತಂದ ‘ಉಳುವವನೇ ಭೂಮಿಯ ಒಡೆಯ’ ಕಾನೂನು ಉಂಟು ಮಾಡಿದ ಸಾಮಾಜಿಕ ಪರಿವರ್ತನೆ, ಅದಕ್ಕೆ ಫ್ಯೂಡಲ್‌ ವ್ಯವಸ್ಥೆ ತೋರಿದ ಅಸಹನೆ, ಜೂಜಿನ ಮೋಜು ಇತ್ಯಾದಿ ಅಂಶಗಳನ್ನು ಒಳಗೊಂಡ ಪರಿಸರದಲ್ಲಿ ಕಥೆ ಸಾಗುತ್ತದೆ.

ಜೂಜುಪ್ರಿಯ ಜಮೀನ್ದಾರ (ಅಪೂರ್ವ ಕಾಸರವಳ್ಳಿ) ವಿರುದ್ಧ ಹೋರಾಡುತ್ತಿರುವ ಬೆಟ್ಟದಪುರದ ಜನರು ಖೋ ಖೋ ಆಟದಲ್ಲಿ ಗೆದ್ದು ತಮ್ಮ ಜಮೀನುಗಳನ್ನು ಉಳಿಸುತ್ತೇವೆ ಎಂದು ಸವಾಲು ಹಾಕುವುದು, ತಮ್ಮ ನಂಬಿಕೆಗೆ ಪಿ.ಟಿ. ಮಾಸ್ಟರ್ ಮನೋಹರ್‌ ಮೋಸ ಮಾಡಿದ್ದಾನೆಂದು ಬೇಸರಗೊಂಡ ಊರಿನ ಜನರು ತಮ್ಮ ಮಕ್ಕಳನ್ನು ಖೋ ಖೋ ಆಡಲು ಕಳಿಸದಿರುವಾಗ ಊರ ಹೊರಗೆ ವಾಸಿಸುತ್ತಿರುವ ಹಂದಿ ಜೋಗರ ಹುಡುಗನನ್ನು, ಬಹು ಆಳದ ಕೆರೆಗೆ ಧುಮುಕಿ ಮೀನು ಹಿಡಿಯುವ ಬೆಸ್ತರ ಹುಡುಗನನ್ನು ತಂಡಕ್ಕೆ ಸೇರಿಸಿಕೊಳ್ಳುವುದು, ಊರು ಬಿಟ್ಟು ಹೋದ ಮುಸ್ಲಿಮ್ ಹುಡುಗರು ಮತ್ತೆ ತಂಡಕ್ಕೆ ಬಂದು ಸೇರುವುದು- ಇತ್ಯಾದಿ ದೃಶ್ಯಗಳು ಅಮೀರ್‌ ಖಾನ್‌ ಅಭಿನಯದ ‘ಲಗಾನ್‌’ ಸಿನಿಮಾವನ್ನು ನೆನಪಿಸುತ್ತವೆ.

ಕ್ಷಾಮದಿಂದ ನೊಂದ ಊರಿನ ಜನ ಎಲ್ಲ ಜಾತಿ ಮತವನ್ನು ಮರೆತು, ಒಂದಾಗಿ ಕ್ರಿಕೆಟ್ ಕಲಿತು ನಂತರ ಬ್ರಿಟಿಷರನ್ನು ಸೋಲಿಸಿದ್ದನ್ನು ಲಗಾನ್‌ನಲ್ಲಿ ಕಾಣಬಹುದು. ಜಡೇಶ ಅವರ ಕಥೆಯಲ್ಲೂ ಈ ಸ್ವರೂಪ ಕಂಡು ಬರುತ್ತದೆ. ಜಮೀನ್ದಾರನ ವಿರುದ್ಧ ಪಣ ತೊಟ್ಟು ಊರನ್ನು ಉಳಿಸಲು ಖೋ ಖೋ ಆಡುತ್ತಾರೆ. ಸ್ವಾತಂತ್ರ್ಯ ವೂರ್ವದ ಕಥೆಯಾದ ಲಗಾನ್‌ನಲ್ಲಿ ಅಸ್ಪೃಶ್ಯತೆ ಅಳಿಸಿ ಭಾರತೀಯರು ಒಂದಾಗಿ ಹೋರಾಡಬೇಕಾದ ಎಳೆ ಬರುತ್ತದೆ. ಸ್ವಾತಂತ್ರ್ಯ ನಂತರದ ಕಥೆಯಾದ ಗುರು ಶಿಷ್ಯರಲ್ಲಿ ಹಂದಿಜೋಗರು ಊರ ಹೊರಗೆ ಇರುವಂತೆ ತೋರಿಸಲಾಗಿದೆ. ಹಂದಿಜೋಗರ ಹುಡುಗ ತಂಡಕ್ಕೆ ಬಂದು ಸೇರಿದಾಗಲಾಗಲೀ, ಹಂದಿಯನ್ನು ಓಡಿಸಿಕೊಂಡು ಶಾಲಾ ಅಂಗಳದಲ್ಲಿ ನಿರ್ಭಿಡೆಯಿಂದ ಹಿಡಿಯುವ ವೇಳೆಯಲ್ಲಾಗಲೀ ಅಸ್ಪೃಶ್ಯತೆಯ ಅಂಜಿಕೆ ಪ್ರದರ್ಶನವಾಗಿಲ್ಲ. ಈ ಕುರಿತು ಹೆಚ್ಚಿನ ವಿವರಕ್ಕೆ ಹೋಗದಂತೆ ನಿಭಾಯಿಸಿರುವುದು ಜಡೇಶ್ ಅವರ ಜಾಣ್ಮೆಯೂ ಹೌದು.

ಗಾಂಧಿಯ ಪ್ರತಿಮೆಯ ಎದುರು ನಿಂತು, “ಮಾಡು ಇಲ್ಲವೇ ಮಡಿ” ಎಂದು ಪಣ ತೊಡುವ ಬೆಟ್ಟದಪುರದ ತಂಡ, ಕನ್ನಡ ಭಾವುಟ ಹಿಡಿದು ಬರುವ ಪಿ.ಟಿ.ಮಾಸ್ಟರ್ ಮನೋಹರ್‌- ದೃಶ್ಯಗಳು ನಿರ್ದೇಶಕರ ಅಸ್ಮಿತೆಯ ಗುರುತುಗಳಾಗಿ ಕಾಣುತ್ತವೆ.

ಇದನ್ನೂ ಓದಿರಿ: ‘ಸೀತಾರಾಮಂ’ ಸಿನಿಮಾ ಹಿಂದುತ್ವ ರಾಜಕಾರಣಕ್ಕೆ ಒಳೇಟು ನೀಡಿದ್ದು ಹೀಗೆ…

ಸ್ಪೋರ್ಟ್ಸ್ ಡ್ರಾಮಾ ಸಿನಿಮಾಗಳಲ್ಲಿ ಇರುವ ಸಾಮಾನ್ಯ ರೋಚಕತೆ ಇಲ್ಲಿಯೂ ಇದೆ. ವೈಯಕ್ತಿಕ ಸಾಧನೆಯ ಕಥಾ ಹಂದರವುಳ್ಳ ಸ್ಪೋರ್ಟ್ಸ್ ಡ್ರಾಮಾಗಳಿಗಿಂತ ಸಾಮಾಜಿಕ ವ್ಯವಸ್ಥೆಯೊಂದಿಗೆ ಬರೆತ ಕ್ರೀಡಾ ಕಥನಗಳಿಗೆ ಮಹತ್ವ ಇರುವುದನ್ನು ‘ಗುರು ಶಿಷ್ಯರು’ ಸಿನಿಮಾ ಮನಗಾಣಿಸಿದೆ. ಖೋ ಖೋ ಆಟಕ್ಕೆ ಹಾಗೂ ಖೋ ಖೋ ಆಟಗಾರರಿಗೆ ಹೆಚ್ಚಿನ ಮಹತ್ವವನ್ನು ನೀಡಬೇಕೆಂಬ ಆಶಯವನ್ನು ಈ ಸಿನಿಮಾ ವ್ಯಕ್ತಪಡಿಸಿದೆ. ಅಂದಹಾಗೆ ಶಾಲಾ ಬಾಲಕನ ಲವ್ ಸ್ಟೋರಿಗೆ ನೀಡಿರುವ ಸ್ಪೇಸ್‌ ಸ್ವಲ್ಪ ಹೆಚ್ಚಾಯಿತು ಅನಿಸುತ್ತದೆ.

ಸ್ವಾತಂತ್ರ್ಯ ಹೋರಾಟಗಾರ ಹಾಗೂ ಗಾಂಧಿವಾದಿಯಾಗಿ ಸುರೇಶ್‌ ಹೆಬ್ಳೀಕರ್‌, ಖಳನಾಯಕನಾಗಿ ಅಪೂರ್ವ ಕಾಸರವಳ್ಳಿ, ನಾಯಕಿಯಾಗಿ ನಿಶ್ವಿಕಾ ನಾಯ್ಡು, ಶಿಷ್ಯರ ಪಾತ್ರದಲ್ಲಿ ನಟಿರುವ ಎಲ್ಲ ಮಕ್ಕಳೂ ಇಷ್ಟವಾಗುತ್ತಾರೆ. ಅಜನೀಶ್ ಅವರ ಸಂಗೀತ ಮೆಚ್ಚುಗೆಯಾಗುತ್ತದೆ. ಹಾಡುಗಳು ಇಂಪಾಗಿವೆ. ಛಾಯಾಗ್ರಾಹಕ ಅರೂರ್‌ ಸುಧಾಕರ್‌ ಶೆಟ್ಟಿಯವರು ಹಳ್ಳಿಯ ಪರಿಸರವನ್ನು ಸೊಗಸಾಗಿ ಸೆರೆಹಿಡಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...