Homeಮುಖಪುಟದೆಹಲಿ: ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ಲಂಗರ್‌ ಆರಂಭಿಸಿದ ಗುರುದ್ವಾರ

ದೆಹಲಿ: ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ಲಂಗರ್‌ ಆರಂಭಿಸಿದ ಗುರುದ್ವಾರ

- Advertisement -
- Advertisement -

ಕೊರೊನಾ ಸೋಂಕಿತರಿಗಾಗಿ ಮಸೀದಿಗಳು, ಮಠಗಳು ಆಸ್ಪತ್ರೆಗಳಾಗಿ ಬದಲಾಗಿವೆ. ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಗುರುದ್ವಾರಗಳು ಆಮ್ಲಜನಕ ಬಿಕ್ಕಟಿನ ಹಿನ್ನೆಲೆಯಲ್ಲಿ ಆಕ್ಸಿಜನ್ ಒದಗಿಸಲು ದೆಹಲಿಯ ಗಾಜಿಯಾಬಾದ್ ಬಳಿ ಆಕ್ಸಿಜನ್ ಲಂಗರ್ ಆರಂಭಿಸಿವೆ.

ಕೊರೊನಾ ವೈರಸ್ ಸೋಂಕಿತರು ನವದೆಹಲಿ ಆಸ್ಪತ್ರೆಯಲ್ಲಿ ತುರ್ತು ಆರೈಕೆಯಲ್ಲಿರಬೇಕಾದವರೂ ಈಗ ಸಿಖ್ ಗುರುದ್ವಾರದ ಹೊರಗೆ ಕಾರಿನ ಹಿಂಬದಿಯ ಸೀಟಿನಲ್ಲಿ, ಬೆಂಚಿನ ಮೇಲೆ, ಮರದ ನೆರಳಿನಲ್ಲಿ ಆಕ್ಸಿಜನ್ ಮಾಸ್ಕ್ ತೊಟ್ಟು ಕುಳಿತಿದ್ದಾರೆ.

ನವದೆಹಲಿಯ ಹೊರವಲಯದಲ್ಲಿರುವ ಗಾಜಿಯಾಬಾದ್ ನಗರದ ಸಿಖ್ ಗುರುದ್ವಾರ (ದೇವಸ್ಥಾನ) ದಲ್ಲಿ, ಸಿಖ್ ನೆರವು ಗುಂಪು ಖಾಲ್ಸಾ ಹೆಲ್ಪ್ ಇಂಟರ್ನ್ಯಾಷನಲ್ ಸಂಸ್ಥೆ, ತುರ್ತು ಅಗತ್ಯವಿರುವವರಿಗೆ ಸಹಾಯ ಮಾಡಲು  ಕಡಿಮೆ ಪ್ರಮಾಣದಲ್ಲಿ ಆಮ್ಲಜನಕವನ್ನು ಖರೀದಿಸಿ, ನೀಡುತ್ತಿದೆ.

ಇದನ್ನೂ ಓದಿ: ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ಕೊರೊನಾ ರೋಗಿಗಳು ಗುರುದ್ವಾರದ ಹೊರಗೆ ಕಾರುಗಳು, ವ್ಯಾನ್‌ಗಳು ಮತ್ತು ರಿಕ್ಷಾಗಳಲ್ಲಿ ಬೀದಿಯಲ್ಲಿಯೇ ನಿಲ್ಲಿಸಿಕೊಂಡು ಆಮ್ಲಜನಕದ ಮಾಸ್ಕ್ ಹಾಕಿಕೊಂಡು ಉಸಿರಾಡಲು ಹೋರಾಟ ನಡೆಸುತ್ತಿದ್ದಾರೆ. ಇತ್ತ ಸ್ವಯಂಸೇವಕರು ಆಮ್ಲಜನಕದ ಸಿಲಿಂಡರ್‌ಗಳನ್ನು ಹಿಡಿದಿದುಕೊಂಡು ಓಡಾಡುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.

“ನನಗೆ ಬೇರೆಲ್ಲಿಯೂ ಸಹಾಯ ಸಿಗಲಿಲ್ಲ ಅದಕ್ಕೆ ನಾನು ಇಲ್ಲಿಗೆ ಬಂದಿದ್ದೇನೆ” ಎಂದು ಕಾರಿನಲ್ಲಿ ತನ್ನ ತಾಯಿ ದೇವಿಯವರ ಪಕ್ಕದಲ್ಲಿ ಕುಳಿತಿದ್ದ ಮನೋಜ್ ಕುಮಾರ್ ಹೇಳುತ್ತಾರೆ. ನಾನು ಆಕ್ಸಿಜನ್‌ಗಾಗಿ ಎಲ್ಲಾ ಕಡೆ ವಿಚಾರಿಸಿದೆ. ಆದರ ಎಲ್ಲೂ ಸಿಗಲಿಲ್ಲ. ತಕ್ಷಣ ನಾನು ಗುರುದ್ವಾರಗೆ ಕರೆ ಮಾಡಿದೆ. ಅವರು ತಕ್ಷಣ ಇಲ್ಲಿಗೆ ಬೇಗ  ತಲುಪಲು ತಿಳಿಸಿದರು” ಎಂದು ಕುಮಾರ್ ಹೇಳಿದ್ದಾರೆ.

ಗುರುದ್ವಾರದ ಅಧ್ಯಕ್ಷ ಮತ್ತು ಖಲ್ಸಾ ಹೆಲ್ಪ್ ಇಂಟರ್‌ನ್ಯಾಷನಲ್‌ನ ಸಂಸ್ಥಾಪಕ ರಮ್ಮಿ, ನವದೆಹಲಿಯಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಮೂರು ದಿನಗಳ ಹಿಂದೆ ಆಕ್ಸಿಜನ್ ಲಂಗರ್‌ ಸೇವೆಯನ್ನು ನೀಡಲು ಪ್ರಾರಂಭಿಸಿದೆ. ಜನರು ಕೊರೊನಾದಿಂದ ಬೀದಿಗಳಲ್ಲಿ ಸಾಯುತ್ತಿದ್ದಾರೆ. ಅದಕ್ಕಾಗಿಯೇ ನಾವು ಇದನ್ನು ಪ್ರಾರಂಭಿಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜಕೀಯ ಕೆಲಸ ಬಿಟ್ಟು, ಜನರ ಸಹಾಯಕ್ಕೆ ನಿಲ್ಲುವಂತೆ ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

ಖಲ್ಸಾ ಹೆಲ್ಪ್ ಇಂಟರ್ನ್ಯಾಷನಲ್ ಗ್ರೂಪ್ ಇಲ್ಲಿಯವರೆಗೆ ಸುಮಾರು 700 ರೋಗಿಗಳನ್ನು ಉಳಿಸಿದೆ ಎಂದು ರಮ್ಮಿ ಅಂದಾಜು ಮಾಡಿದ್ದಾರೆ.


ಇದನ್ನೂ ಓದಿ: ಆಕ್ಸಿಜನ್ ಬಿಕ್ಕಟ್ಟಿನಲ್ಲಿ ಹಲವು ರಾಜ್ಯಗಳು, ನಮ್ಮಲ್ಲಿ ಕೊರತೆಯಿಲ್ಲ ಎಂದ ಉತ್ತರಪ್ರದೇಶ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...