Homeಮುಖಪುಟದೆಹಲಿ: ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ಲಂಗರ್‌ ಆರಂಭಿಸಿದ ಗುರುದ್ವಾರ

ದೆಹಲಿ: ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ಲಂಗರ್‌ ಆರಂಭಿಸಿದ ಗುರುದ್ವಾರ

- Advertisement -
- Advertisement -

ಕೊರೊನಾ ಸೋಂಕಿತರಿಗಾಗಿ ಮಸೀದಿಗಳು, ಮಠಗಳು ಆಸ್ಪತ್ರೆಗಳಾಗಿ ಬದಲಾಗಿವೆ. ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಗುರುದ್ವಾರಗಳು ಆಮ್ಲಜನಕ ಬಿಕ್ಕಟಿನ ಹಿನ್ನೆಲೆಯಲ್ಲಿ ಆಕ್ಸಿಜನ್ ಒದಗಿಸಲು ದೆಹಲಿಯ ಗಾಜಿಯಾಬಾದ್ ಬಳಿ ಆಕ್ಸಿಜನ್ ಲಂಗರ್ ಆರಂಭಿಸಿವೆ.

ಕೊರೊನಾ ವೈರಸ್ ಸೋಂಕಿತರು ನವದೆಹಲಿ ಆಸ್ಪತ್ರೆಯಲ್ಲಿ ತುರ್ತು ಆರೈಕೆಯಲ್ಲಿರಬೇಕಾದವರೂ ಈಗ ಸಿಖ್ ಗುರುದ್ವಾರದ ಹೊರಗೆ ಕಾರಿನ ಹಿಂಬದಿಯ ಸೀಟಿನಲ್ಲಿ, ಬೆಂಚಿನ ಮೇಲೆ, ಮರದ ನೆರಳಿನಲ್ಲಿ ಆಕ್ಸಿಜನ್ ಮಾಸ್ಕ್ ತೊಟ್ಟು ಕುಳಿತಿದ್ದಾರೆ.

ನವದೆಹಲಿಯ ಹೊರವಲಯದಲ್ಲಿರುವ ಗಾಜಿಯಾಬಾದ್ ನಗರದ ಸಿಖ್ ಗುರುದ್ವಾರ (ದೇವಸ್ಥಾನ) ದಲ್ಲಿ, ಸಿಖ್ ನೆರವು ಗುಂಪು ಖಾಲ್ಸಾ ಹೆಲ್ಪ್ ಇಂಟರ್ನ್ಯಾಷನಲ್ ಸಂಸ್ಥೆ, ತುರ್ತು ಅಗತ್ಯವಿರುವವರಿಗೆ ಸಹಾಯ ಮಾಡಲು  ಕಡಿಮೆ ಪ್ರಮಾಣದಲ್ಲಿ ಆಮ್ಲಜನಕವನ್ನು ಖರೀದಿಸಿ, ನೀಡುತ್ತಿದೆ.

ಇದನ್ನೂ ಓದಿ: ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ಕೊರೊನಾ ರೋಗಿಗಳು ಗುರುದ್ವಾರದ ಹೊರಗೆ ಕಾರುಗಳು, ವ್ಯಾನ್‌ಗಳು ಮತ್ತು ರಿಕ್ಷಾಗಳಲ್ಲಿ ಬೀದಿಯಲ್ಲಿಯೇ ನಿಲ್ಲಿಸಿಕೊಂಡು ಆಮ್ಲಜನಕದ ಮಾಸ್ಕ್ ಹಾಕಿಕೊಂಡು ಉಸಿರಾಡಲು ಹೋರಾಟ ನಡೆಸುತ್ತಿದ್ದಾರೆ. ಇತ್ತ ಸ್ವಯಂಸೇವಕರು ಆಮ್ಲಜನಕದ ಸಿಲಿಂಡರ್‌ಗಳನ್ನು ಹಿಡಿದಿದುಕೊಂಡು ಓಡಾಡುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.

“ನನಗೆ ಬೇರೆಲ್ಲಿಯೂ ಸಹಾಯ ಸಿಗಲಿಲ್ಲ ಅದಕ್ಕೆ ನಾನು ಇಲ್ಲಿಗೆ ಬಂದಿದ್ದೇನೆ” ಎಂದು ಕಾರಿನಲ್ಲಿ ತನ್ನ ತಾಯಿ ದೇವಿಯವರ ಪಕ್ಕದಲ್ಲಿ ಕುಳಿತಿದ್ದ ಮನೋಜ್ ಕುಮಾರ್ ಹೇಳುತ್ತಾರೆ. ನಾನು ಆಕ್ಸಿಜನ್‌ಗಾಗಿ ಎಲ್ಲಾ ಕಡೆ ವಿಚಾರಿಸಿದೆ. ಆದರ ಎಲ್ಲೂ ಸಿಗಲಿಲ್ಲ. ತಕ್ಷಣ ನಾನು ಗುರುದ್ವಾರಗೆ ಕರೆ ಮಾಡಿದೆ. ಅವರು ತಕ್ಷಣ ಇಲ್ಲಿಗೆ ಬೇಗ  ತಲುಪಲು ತಿಳಿಸಿದರು” ಎಂದು ಕುಮಾರ್ ಹೇಳಿದ್ದಾರೆ.

ಗುರುದ್ವಾರದ ಅಧ್ಯಕ್ಷ ಮತ್ತು ಖಲ್ಸಾ ಹೆಲ್ಪ್ ಇಂಟರ್‌ನ್ಯಾಷನಲ್‌ನ ಸಂಸ್ಥಾಪಕ ರಮ್ಮಿ, ನವದೆಹಲಿಯಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಮೂರು ದಿನಗಳ ಹಿಂದೆ ಆಕ್ಸಿಜನ್ ಲಂಗರ್‌ ಸೇವೆಯನ್ನು ನೀಡಲು ಪ್ರಾರಂಭಿಸಿದೆ. ಜನರು ಕೊರೊನಾದಿಂದ ಬೀದಿಗಳಲ್ಲಿ ಸಾಯುತ್ತಿದ್ದಾರೆ. ಅದಕ್ಕಾಗಿಯೇ ನಾವು ಇದನ್ನು ಪ್ರಾರಂಭಿಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜಕೀಯ ಕೆಲಸ ಬಿಟ್ಟು, ಜನರ ಸಹಾಯಕ್ಕೆ ನಿಲ್ಲುವಂತೆ ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

ಖಲ್ಸಾ ಹೆಲ್ಪ್ ಇಂಟರ್ನ್ಯಾಷನಲ್ ಗ್ರೂಪ್ ಇಲ್ಲಿಯವರೆಗೆ ಸುಮಾರು 700 ರೋಗಿಗಳನ್ನು ಉಳಿಸಿದೆ ಎಂದು ರಮ್ಮಿ ಅಂದಾಜು ಮಾಡಿದ್ದಾರೆ.


ಇದನ್ನೂ ಓದಿ: ಆಕ್ಸಿಜನ್ ಬಿಕ್ಕಟ್ಟಿನಲ್ಲಿ ಹಲವು ರಾಜ್ಯಗಳು, ನಮ್ಮಲ್ಲಿ ಕೊರತೆಯಿಲ್ಲ ಎಂದ ಉತ್ತರಪ್ರದೇಶ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...