Homeಮುಖಪುಟದೆಹಲಿ: ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ಲಂಗರ್‌ ಆರಂಭಿಸಿದ ಗುರುದ್ವಾರ

ದೆಹಲಿ: ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ಲಂಗರ್‌ ಆರಂಭಿಸಿದ ಗುರುದ್ವಾರ

- Advertisement -
- Advertisement -

ಕೊರೊನಾ ಸೋಂಕಿತರಿಗಾಗಿ ಮಸೀದಿಗಳು, ಮಠಗಳು ಆಸ್ಪತ್ರೆಗಳಾಗಿ ಬದಲಾಗಿವೆ. ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಗುರುದ್ವಾರಗಳು ಆಮ್ಲಜನಕ ಬಿಕ್ಕಟಿನ ಹಿನ್ನೆಲೆಯಲ್ಲಿ ಆಕ್ಸಿಜನ್ ಒದಗಿಸಲು ದೆಹಲಿಯ ಗಾಜಿಯಾಬಾದ್ ಬಳಿ ಆಕ್ಸಿಜನ್ ಲಂಗರ್ ಆರಂಭಿಸಿವೆ.

ಕೊರೊನಾ ವೈರಸ್ ಸೋಂಕಿತರು ನವದೆಹಲಿ ಆಸ್ಪತ್ರೆಯಲ್ಲಿ ತುರ್ತು ಆರೈಕೆಯಲ್ಲಿರಬೇಕಾದವರೂ ಈಗ ಸಿಖ್ ಗುರುದ್ವಾರದ ಹೊರಗೆ ಕಾರಿನ ಹಿಂಬದಿಯ ಸೀಟಿನಲ್ಲಿ, ಬೆಂಚಿನ ಮೇಲೆ, ಮರದ ನೆರಳಿನಲ್ಲಿ ಆಕ್ಸಿಜನ್ ಮಾಸ್ಕ್ ತೊಟ್ಟು ಕುಳಿತಿದ್ದಾರೆ.

ನವದೆಹಲಿಯ ಹೊರವಲಯದಲ್ಲಿರುವ ಗಾಜಿಯಾಬಾದ್ ನಗರದ ಸಿಖ್ ಗುರುದ್ವಾರ (ದೇವಸ್ಥಾನ) ದಲ್ಲಿ, ಸಿಖ್ ನೆರವು ಗುಂಪು ಖಾಲ್ಸಾ ಹೆಲ್ಪ್ ಇಂಟರ್ನ್ಯಾಷನಲ್ ಸಂಸ್ಥೆ, ತುರ್ತು ಅಗತ್ಯವಿರುವವರಿಗೆ ಸಹಾಯ ಮಾಡಲು  ಕಡಿಮೆ ಪ್ರಮಾಣದಲ್ಲಿ ಆಮ್ಲಜನಕವನ್ನು ಖರೀದಿಸಿ, ನೀಡುತ್ತಿದೆ.

ಇದನ್ನೂ ಓದಿ: ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ಕೊರೊನಾ ರೋಗಿಗಳು ಗುರುದ್ವಾರದ ಹೊರಗೆ ಕಾರುಗಳು, ವ್ಯಾನ್‌ಗಳು ಮತ್ತು ರಿಕ್ಷಾಗಳಲ್ಲಿ ಬೀದಿಯಲ್ಲಿಯೇ ನಿಲ್ಲಿಸಿಕೊಂಡು ಆಮ್ಲಜನಕದ ಮಾಸ್ಕ್ ಹಾಕಿಕೊಂಡು ಉಸಿರಾಡಲು ಹೋರಾಟ ನಡೆಸುತ್ತಿದ್ದಾರೆ. ಇತ್ತ ಸ್ವಯಂಸೇವಕರು ಆಮ್ಲಜನಕದ ಸಿಲಿಂಡರ್‌ಗಳನ್ನು ಹಿಡಿದಿದುಕೊಂಡು ಓಡಾಡುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.

“ನನಗೆ ಬೇರೆಲ್ಲಿಯೂ ಸಹಾಯ ಸಿಗಲಿಲ್ಲ ಅದಕ್ಕೆ ನಾನು ಇಲ್ಲಿಗೆ ಬಂದಿದ್ದೇನೆ” ಎಂದು ಕಾರಿನಲ್ಲಿ ತನ್ನ ತಾಯಿ ದೇವಿಯವರ ಪಕ್ಕದಲ್ಲಿ ಕುಳಿತಿದ್ದ ಮನೋಜ್ ಕುಮಾರ್ ಹೇಳುತ್ತಾರೆ. ನಾನು ಆಕ್ಸಿಜನ್‌ಗಾಗಿ ಎಲ್ಲಾ ಕಡೆ ವಿಚಾರಿಸಿದೆ. ಆದರ ಎಲ್ಲೂ ಸಿಗಲಿಲ್ಲ. ತಕ್ಷಣ ನಾನು ಗುರುದ್ವಾರಗೆ ಕರೆ ಮಾಡಿದೆ. ಅವರು ತಕ್ಷಣ ಇಲ್ಲಿಗೆ ಬೇಗ  ತಲುಪಲು ತಿಳಿಸಿದರು” ಎಂದು ಕುಮಾರ್ ಹೇಳಿದ್ದಾರೆ.

ಗುರುದ್ವಾರದ ಅಧ್ಯಕ್ಷ ಮತ್ತು ಖಲ್ಸಾ ಹೆಲ್ಪ್ ಇಂಟರ್‌ನ್ಯಾಷನಲ್‌ನ ಸಂಸ್ಥಾಪಕ ರಮ್ಮಿ, ನವದೆಹಲಿಯಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಮೂರು ದಿನಗಳ ಹಿಂದೆ ಆಕ್ಸಿಜನ್ ಲಂಗರ್‌ ಸೇವೆಯನ್ನು ನೀಡಲು ಪ್ರಾರಂಭಿಸಿದೆ. ಜನರು ಕೊರೊನಾದಿಂದ ಬೀದಿಗಳಲ್ಲಿ ಸಾಯುತ್ತಿದ್ದಾರೆ. ಅದಕ್ಕಾಗಿಯೇ ನಾವು ಇದನ್ನು ಪ್ರಾರಂಭಿಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜಕೀಯ ಕೆಲಸ ಬಿಟ್ಟು, ಜನರ ಸಹಾಯಕ್ಕೆ ನಿಲ್ಲುವಂತೆ ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

ಖಲ್ಸಾ ಹೆಲ್ಪ್ ಇಂಟರ್ನ್ಯಾಷನಲ್ ಗ್ರೂಪ್ ಇಲ್ಲಿಯವರೆಗೆ ಸುಮಾರು 700 ರೋಗಿಗಳನ್ನು ಉಳಿಸಿದೆ ಎಂದು ರಮ್ಮಿ ಅಂದಾಜು ಮಾಡಿದ್ದಾರೆ.


ಇದನ್ನೂ ಓದಿ: ಆಕ್ಸಿಜನ್ ಬಿಕ್ಕಟ್ಟಿನಲ್ಲಿ ಹಲವು ರಾಜ್ಯಗಳು, ನಮ್ಮಲ್ಲಿ ಕೊರತೆಯಿಲ್ಲ ಎಂದ ಉತ್ತರಪ್ರದೇಶ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...