Homeಮುಖಪುಟಗುರುಗ್ರಾಮ: 25 ವರ್ಷದ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ, ತೀವ್ರ ಹಲ್ಲೆ

ಗುರುಗ್ರಾಮ: 25 ವರ್ಷದ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ, ತೀವ್ರ ಹಲ್ಲೆ

ಸಂತ್ರಸ್ತೆಯ ಹೇಳಿಕೆಯನ್ನು ಆಧರಿಸಿ ಪೊಲೀಸರು ಆರೋಪಿಗಳಾದ ರಂಜನ್ ಯಾದವ್(23), ಪವನ್ (24), ಪಂಕಜ್ ಕುಮಾರ್ (26) ಮತ್ತು ಗೋವಿಂದ ಯಾದವ್ (20) ರನ್ನು ಬಂಧಿಸಿದ್ದಾರೆ.

- Advertisement -
- Advertisement -

ದೇಶಾದಾದ್ಯಂತ ಅತ್ಯಾಚಾರಗಳ ವಿರುದ್ಧ ಪ್ರಬಲ ಹೋರಾಟ ನಡೆಯುತ್ತಿರುವ ಸಮಯದಲ್ಲೇ ಹರಿಯಾಣದ ಗುರುಗ್ರಾಮದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರದ ದುರ್ಘಟನೆ ವರದಿಯಾಗಿದೆ. 25 ವರ್ಷದ ಹುಡುಗಿಯೊಬ್ಬಳು ತನ್ನ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರವೆಸಗಿ, ಕ್ರೂರವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಗುರುಗ್ರಾಮದ ಡಿಎಲ್‌ಎಫ್ 2ನೇ ಹಂತ ಪ್ರದೇಶದ ರಿಯಲ್ ಎಸ್ಟೇಟ್ ಕಚೇರಿಯಲ್ಲಿ ಈ ದುರ್ಘಟನೆ ಜರುಗಿದ್ದು, ತೀವ್ರ ಗಾಯಗಳಾಗಿದ್ದ ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ವರು ಆರೋಪಿಗಳಲ್ಲಿ ಮೂವರು ಆಹಾರ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುವವರೆಂದು ಗುರುತಿಸಿದ್ದು ಎಲ್ಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ಸಂತ್ರಸ್ತ ಕುಟುಂಬದ ಮೇಲೆ FIR ದಾಖಲಿಸಿ: ಮೇಲ್ಜಾತಿಗಳ ಬೃಹತ್ ಸಭೆಯಲ್ಲಿ ಒತ್ತಾಯ!


ಆರೋಪಿತರಲ್ಲಿ ಒಬ್ಬಾತ ಸಂತ್ರಸ್ತೆಗೆ ಪರಿಚಯವಿದ್ದು ಆತನು ಭಾನುವಾರ ಮುಂಜಾನೆ 1:30ರ ಸಮಯದಲ್ಲಿ ಸಿಕಂದರ್‌ಪುರ ಮೆಟ್ರೊ ನಿಲ್ದಾಣದಿಂದ ಆಕೆಯನ್ನು ಬೈಕಿನಲ್ಲಿ ತಾನು ಕೆಲಸ ಮಾಡುವ ಡಿಎಲ್‌ಎಫ್ 2ನೇ ಹಂತ ಪ್ರದೇಶದ ರಿಯಲ್ ಎಸ್ಟೇಟ್ ಕಚೇರಿ ಬಳಿಗೆ ಕರೆದೊಯ್ದಿದ್ದಾನೆ. ಆದರೆ ಅಲ್ಲಿ ಆತನ ಮೂವರು ಸ್ನೇಹಿತರಿದ್ದುದ್ದನ್ನು ಗಮನಿಸಿದ ಆಕೆ ಅಲ್ಲಿಂದ ಹೊರಡಲು ಮುಂದಾಗಿದ್ದಾಳೆ. ಆ ವೇಳೆ ಆ ನಾಲ್ವರು ಸೇರಿ ಬಲವಂತವಾಗಿ ಸಾಮೂಹಿಕ ಅತ್ಯಾಚಾರವೆಸಗಿ, ಆಕೆಯ ತಲೆಗೆ ಕ್ರೂರವಾಗಿ ಥಳಿಸಿದ್ದಾರೆ ಎಂದು ಸಂತ್ರಸ್ತೆಯ ಹೇಳಿಕೆ ಆಧರಿಸಿ ಪೊಲೀಸರು ತಿಳಿಸಿದ್ದಾರೆ.

ನಂತರ ಆಕೆಯನ್ನು ಕಚೇರಿಯ ಕೊಠಡಿಯೊಂದರಲ್ಲಿ ಕೂಡಿಹಾಕಿ ಆರೋಪಿಗಳು ಪರಾರಿಯಾಗಿದ್ದಾರೆ. ತಲೆಗೆ ತೀವ್ರ ಪೆಟ್ಟುನಿಂದ ರಕ್ತಸ್ರಾವವಾಗುತ್ತಿದ್ದ ಸಂತ್ರಸ್ತೆಯನ್ನು ಪಕ್ಕದ ಸೆಕ್ಯುರಿಟಿ ಗಾರ್ಡ್ ಒಬ್ಬ ನೋಡಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ನಂತರ ಪೊಲೀಸರು ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಕೆಗೆ ಪ್ರಜ್ಞೆ ಬಂದ ನಂತರ ನೀಡಿದ ಹೇಳಿಕೆಯನ್ನು ಆಧರಿಸಿ ಪೊಲೀಸರು ಆರೋಪಿಗಳಾದ ರಂಜನ್ ಯಾದವ್(23), ಪವನ್ (24), ಪಂಕಜ್ ಕುಮಾರ್ (26) ಮತ್ತು ಗೋವಿಂದ ಯಾದವ್ (20) ರನ್ನು ಬಂಧಿಸಿದ್ದಾರೆ.

ಆರೋಪಿಗಳ ಮೇಲೆ ಐಪಿಸಿಯ ಹಲವು ಕಲಂಗಳಡಿ ಪ್ರಕರಣ ದಾಖಲಾಗಿದೆ. ಎನ್‌ಸಿಆರ್‌ಬಿಯ ‘ಭಾರತದಲ್ಲಿ ಅಪರಾಧಗಳು’ ವರದಿಯ ಪ್ರಕಾರ 2019ರಲ್ಲಿ ಹರಿಯಾಣ ರಾಜ್ಯವೊಂದರಲ್ಲೇ 159 ಸಾಮೂಹಿಕ ಅತ್ಯಾಚಾರಗಳು ವರದಿಯಾಗಿವೆ.


ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...