Homeಮುಖಪುಟಗುರುಗ್ರಾಮ: 25 ವರ್ಷದ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ, ತೀವ್ರ ಹಲ್ಲೆ

ಗುರುಗ್ರಾಮ: 25 ವರ್ಷದ ಹುಡುಗಿ ಮೇಲೆ ಸಾಮೂಹಿಕ ಅತ್ಯಾಚಾರ, ತೀವ್ರ ಹಲ್ಲೆ

ಸಂತ್ರಸ್ತೆಯ ಹೇಳಿಕೆಯನ್ನು ಆಧರಿಸಿ ಪೊಲೀಸರು ಆರೋಪಿಗಳಾದ ರಂಜನ್ ಯಾದವ್(23), ಪವನ್ (24), ಪಂಕಜ್ ಕುಮಾರ್ (26) ಮತ್ತು ಗೋವಿಂದ ಯಾದವ್ (20) ರನ್ನು ಬಂಧಿಸಿದ್ದಾರೆ.

- Advertisement -
- Advertisement -

ದೇಶಾದಾದ್ಯಂತ ಅತ್ಯಾಚಾರಗಳ ವಿರುದ್ಧ ಪ್ರಬಲ ಹೋರಾಟ ನಡೆಯುತ್ತಿರುವ ಸಮಯದಲ್ಲೇ ಹರಿಯಾಣದ ಗುರುಗ್ರಾಮದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರದ ದುರ್ಘಟನೆ ವರದಿಯಾಗಿದೆ. 25 ವರ್ಷದ ಹುಡುಗಿಯೊಬ್ಬಳು ತನ್ನ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರವೆಸಗಿ, ಕ್ರೂರವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಗುರುಗ್ರಾಮದ ಡಿಎಲ್‌ಎಫ್ 2ನೇ ಹಂತ ಪ್ರದೇಶದ ರಿಯಲ್ ಎಸ್ಟೇಟ್ ಕಚೇರಿಯಲ್ಲಿ ಈ ದುರ್ಘಟನೆ ಜರುಗಿದ್ದು, ತೀವ್ರ ಗಾಯಗಳಾಗಿದ್ದ ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ವರು ಆರೋಪಿಗಳಲ್ಲಿ ಮೂವರು ಆಹಾರ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುವವರೆಂದು ಗುರುತಿಸಿದ್ದು ಎಲ್ಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ಸಂತ್ರಸ್ತ ಕುಟುಂಬದ ಮೇಲೆ FIR ದಾಖಲಿಸಿ: ಮೇಲ್ಜಾತಿಗಳ ಬೃಹತ್ ಸಭೆಯಲ್ಲಿ ಒತ್ತಾಯ!


ಆರೋಪಿತರಲ್ಲಿ ಒಬ್ಬಾತ ಸಂತ್ರಸ್ತೆಗೆ ಪರಿಚಯವಿದ್ದು ಆತನು ಭಾನುವಾರ ಮುಂಜಾನೆ 1:30ರ ಸಮಯದಲ್ಲಿ ಸಿಕಂದರ್‌ಪುರ ಮೆಟ್ರೊ ನಿಲ್ದಾಣದಿಂದ ಆಕೆಯನ್ನು ಬೈಕಿನಲ್ಲಿ ತಾನು ಕೆಲಸ ಮಾಡುವ ಡಿಎಲ್‌ಎಫ್ 2ನೇ ಹಂತ ಪ್ರದೇಶದ ರಿಯಲ್ ಎಸ್ಟೇಟ್ ಕಚೇರಿ ಬಳಿಗೆ ಕರೆದೊಯ್ದಿದ್ದಾನೆ. ಆದರೆ ಅಲ್ಲಿ ಆತನ ಮೂವರು ಸ್ನೇಹಿತರಿದ್ದುದ್ದನ್ನು ಗಮನಿಸಿದ ಆಕೆ ಅಲ್ಲಿಂದ ಹೊರಡಲು ಮುಂದಾಗಿದ್ದಾಳೆ. ಆ ವೇಳೆ ಆ ನಾಲ್ವರು ಸೇರಿ ಬಲವಂತವಾಗಿ ಸಾಮೂಹಿಕ ಅತ್ಯಾಚಾರವೆಸಗಿ, ಆಕೆಯ ತಲೆಗೆ ಕ್ರೂರವಾಗಿ ಥಳಿಸಿದ್ದಾರೆ ಎಂದು ಸಂತ್ರಸ್ತೆಯ ಹೇಳಿಕೆ ಆಧರಿಸಿ ಪೊಲೀಸರು ತಿಳಿಸಿದ್ದಾರೆ.

ನಂತರ ಆಕೆಯನ್ನು ಕಚೇರಿಯ ಕೊಠಡಿಯೊಂದರಲ್ಲಿ ಕೂಡಿಹಾಕಿ ಆರೋಪಿಗಳು ಪರಾರಿಯಾಗಿದ್ದಾರೆ. ತಲೆಗೆ ತೀವ್ರ ಪೆಟ್ಟುನಿಂದ ರಕ್ತಸ್ರಾವವಾಗುತ್ತಿದ್ದ ಸಂತ್ರಸ್ತೆಯನ್ನು ಪಕ್ಕದ ಸೆಕ್ಯುರಿಟಿ ಗಾರ್ಡ್ ಒಬ್ಬ ನೋಡಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ನಂತರ ಪೊಲೀಸರು ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಕೆಗೆ ಪ್ರಜ್ಞೆ ಬಂದ ನಂತರ ನೀಡಿದ ಹೇಳಿಕೆಯನ್ನು ಆಧರಿಸಿ ಪೊಲೀಸರು ಆರೋಪಿಗಳಾದ ರಂಜನ್ ಯಾದವ್(23), ಪವನ್ (24), ಪಂಕಜ್ ಕುಮಾರ್ (26) ಮತ್ತು ಗೋವಿಂದ ಯಾದವ್ (20) ರನ್ನು ಬಂಧಿಸಿದ್ದಾರೆ.

ಆರೋಪಿಗಳ ಮೇಲೆ ಐಪಿಸಿಯ ಹಲವು ಕಲಂಗಳಡಿ ಪ್ರಕರಣ ದಾಖಲಾಗಿದೆ. ಎನ್‌ಸಿಆರ್‌ಬಿಯ ‘ಭಾರತದಲ್ಲಿ ಅಪರಾಧಗಳು’ ವರದಿಯ ಪ್ರಕಾರ 2019ರಲ್ಲಿ ಹರಿಯಾಣ ರಾಜ್ಯವೊಂದರಲ್ಲೇ 159 ಸಾಮೂಹಿಕ ಅತ್ಯಾಚಾರಗಳು ವರದಿಯಾಗಿವೆ.


ಇದನ್ನೂ ಓದಿ: ಅಡೆತಡೆ ದಾಟಿ ಹತ್ರಾಸ್ ತಲುಪಿದ ಭೀಮ್‌ ಆರ್ಮಿ ಆಜಾದ್‌ಗೆ ಠಾಕೂರ್ ಯುವಕರಿಂದ ಬಹಿರಂಗ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...