Homeಮುಖಪುಟಗುರುಗ್ರಾಮ್: ಮುಸ್ಲಿಮರಿಗೆ ಸಾಮಾಜಿಕ,ಆರ್ಥಿಕ ಬಹಿಷ್ಕಾರಕ್ಕೆ ಕರೆ

ಗುರುಗ್ರಾಮ್: ಮುಸ್ಲಿಮರಿಗೆ ಸಾಮಾಜಿಕ,ಆರ್ಥಿಕ ಬಹಿಷ್ಕಾರಕ್ಕೆ ಕರೆ

- Advertisement -
- Advertisement -

ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಗುರುಗ್ರಾಮ್ ಸೆಕ್ಟರ್ 57ರಲ್ಲಿ ಆದಿತ್ಯವಾರ ಹಿಂದೂ ಮಹಾಪಂಚಾಯತ್ ಹೆಸರಿನಲ್ಲಿ ನೂರಾರು ಮಂದಿ ಸೇರಿದ್ದು, ಮುಸ್ಲಿಮರಿಗೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರವನ್ನು ಘೋಷಿಸಿದ್ದಾರೆ. ಕಳೆದ ವಾರ ಕೋಮುಗಲಭೆಯ ಸಂದರ್ಭದಲ್ಲಿ ಹಿಂದುತ್ವದ ಗುಂಪೊಂದು ಮಸೀದಿಯ ಮೇಲೆ ದಾಳಿ ನಡೆಸಿ ಉಪ ಇಮಾಮ್‌ರನ್ನು ಹತ್ಯೆಗೈದ ಪ್ರದೇಶದಲ್ಲೇ ಈ ಬೆಳವಣಿಗೆ ನಡೆದಿದೆ.

ಅಂಜುಮನ್ ಮಸೀದಿ ಬಳಿಯಲ್ಲಿ ಇರುವ ಟಿಗ್ರಾ ಹಳ್ಳಿಯಲ್ಲಿ  ಮಹಾಪಂಚಾಯತ್ ನಡೆದಿದೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಮಸೀದಿಯ ಮೇಲೆ ದಾಳಿ ಪ್ರಕರಣದ ಆರೋಪಿತರು ಅಮಾಯಕರು ಎಂದು ಸಭೆಯಲ್ಲಿ  ಸೇರಿದವರು ಹೇಳಿದ್ದಾರೆ. ಆರೋಪಿಗಳ ಹೆಸರನ್ನು 8 ದಿನಗಳ ಒಳಗೆ ಪ್ರಕರಣದಿಂದ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ಪ್ರತಿಭಟನೆ ಮಾಡುವ(ಚಕ್ಕಾ ಜಾಮ್) ಬೆದರಿಕೆಯನ್ನು ಹಾಕಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿ ಬಂಧಿತರ ಬಗ್ಗೆ ಸಾಕ್ಷಿ ಕೊಡಬೇಕು. ಮಸೀದಿ ಬಳಿ ವಾಸಿಸುವ ಕುಟುಂಬವನ್ನು ಟಾರ್ಗೆಟ್ ಮಾಡಲಾಗಿದೆ ಮತ್ತು ದೌರ್ಜನ್ಯ ಮಾಡಲಾಗುತ್ತಿದೆ. ಇದನ್ನು ನಾವು ಮರುಕಳಿಸಲು ಬಿಡುವುದಿಲ್ಲ ಎಂದು ವಜೀರಾಬಾದ್ ಸೆಕ್ಟರ್ 57ರ ಸರಪಂಚ್ ಸುಬೇ ಸಿಂಗ್ ಬೊಹ್ರಾ ಹೇಳಿರುವುದಾಗಿ ಹಿಂದೂಸ್ತಾನ್  ಟೈಮ್ಸ್ ವರದಿ ಮಾಡಿದೆ.

ಗುರುಗ್ರಾಮ್‌ನಲ್ಲಿ ನೂರಾರು ಮುಸ್ಲಿಂ ಸಮುದಾಯದ ಜನರು ಬಡಗಿಗಳು, ಕ್ಷೌರಿಕರು, ತರಕಾರಿ ಮಾರಾಟಗಾರರು, ಮೆಕ್ಯಾನಿಕ್‌ಗಳು ಮತ್ತು ಕ್ಯಾಬ್ ಡ್ರೈವರ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ನಾವು ಯಾವಾಗಲೂ ಅವರನ್ನು ಬೆಂಬಲಿಸುತ್ತೇವೆ. ಆದರೆ ಈಗ ಅವರು ನಗರದ ಅಶಾಂತಿಗೆ ಕಾರಣವಾಗಿದ್ದು, ಅವರನ್ನು ನಾವು ಬೆಂಬಲಿಸುವುದಿಲ್ಲ. ಇನ್ನು ಮುಸ್ಲಿಮರನ್ನು ನಗರದಲ್ಲಿ ಕೆಲಸ ಮಾಡಲು ಬಿಡಬಾರದು. ಅಪಾರ್ಟ್‌ಮೆಂಟ್ ಅಥವಾ ಕೊಳೆಗೇರಿಗಳನ್ನು ಬಾಡಿಗೆಗೆ ನೀಡದಂತೆ ನಾವು ನಗರದ ಜನರಿಗೆ ಮನವಿ ಮಾಡುತ್ತೇವೆ ಎಂದು ಬಜರಂಗದಳದ ಸದಸ್ಯ ಕುಲಭೂಷಣ್ ಭಾರದ್ವಾಜ್ ಹೇಳಿದ್ದಾರೆ.

ಗುರುಗ್ರಾಮ್ ನ ಹಿರಿಯ ಪೊಲೀಸ್ ಅಧಿಕಾರಿ ವಿಕಾಶ್ ಕೌಶಿಕ್ ಅವರು ನಿನ್ನೆ ಎಎನ್ ಐ ಜೊತೆ ಮಾತನಾಡಿ, ಕ್ರಾಯಕ್ರಮ ಶಾಂತಿಯಿಂದ ನಡೆಯಲಿದೆ ಎಂದು ಸಂಘಟಕರು ಪೊಲೀಸರಿಗೆ ತಿಳಿಸಿದ್ದಾರೆ.ಕಳೆದ ಎರಡು ಮೂರು ದಿನಗಳಿಂದ ಗುರುಗ್ರಾಮ ಶಾಂತಿಯುತವಾಗಿದೆ. ಯಾವುದೇ ಅಹಿತಕರ  ಘಟನೆ ವರದಿಯಾಗಿಲ್ಲ. ಇಂದಿನ ಪಂಚಾಯತ್ ಶಾಂತಿಯುತವಾಗಿ ನಡೆಯುತ್ತದೆ ಎಂದು ನಾವು ಭಾವಿಸುತ್ತೇವೆ. ನಾವು ಎಲ್ಲರೊಂದಿಗೆ ಮಾತುಕತೆ ನಡೆಸಿದ್ದೇವೆ. ಪಂಚಾಯತ್ ಶಾಂತಿಯುತವಾಗಿ ನಡೆಯುತ್ತದೆ ಎಂದು ಅವರು ನಮಗೆ ಭರವಸೆ ನೀಡಿದ್ದಾರೆ  ಪಂಚಾಯತ್ 9 ಗಂಟೆಗೆ ಪ್ರಾರಂಭವಾಗುತ್ತದೆ. ಸುಮಾರು 500-1,000 ಜನರು ಬರುವ ನಿರೀಕ್ಷೆಯಿದೆ ಎಂದು  ಹೇಳಿದ್ದರು.ಆದರೆ, ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪೊಲೀಸರು ಏಕೆ ಈ ವಿಚಾರದಲ್ಲಿ ಮಧ್ಯಪ್ರವೇಶಿಸುತ್ತಿಲ್ಲ ಎಂದು ಅವರು ಹೇಳಲಿಲ್ಲ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಭಾನುವಾರ ಈ ಬಹಿಷ್ಕಾರದ ಕರೆಯನ್ನು  ಖಂಡಿಸಿದೆ. ಪಕ್ಷದ ನಾಲ್ವರು ಸದಸ್ಯರ ನಿಯೋಗ ಭಾನುವಾರ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ.

ಹರ್ಯಾಣ ಜಿಲ್ಲೆಯ ರೇವಾರಿ ಬ್ಲಾಕ್ ದಹಿನಾದಿಂದ ಜೈನಾಬಾದ್ ಪಂಚಾಯತ್ ಸರಪಂಚ ಭಾವನಾ ಯಾದವ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ,ಬಿಜೆಪಿ ಆಡಳಿತದಲ್ಲಿ ವ್ಯವಸ್ಥಿತವಾಗಿ ಬೆಳೆಸಲಾಗುತ್ತಿರುವ ಅಲ್ಪಸಂಖ್ಯಾತರ ವಿರುದ್ಧ ಸಂಘಟಿತ ತಾರತಮ್ಯದ ಕಹಿ ವಾಸ್ತವವನ್ನು ಈ ಬೆಳವಣಿಗೆ ಬಹಿರಂಗಪಡಿಸುತ್ತದೆ ಎಂದು ಹೇಳಿದ್ದಾರೆ.

ಪತ್ರದಲ್ಲಿ ಆಘಾತಕಾರಿ ವಿಚಾರ ಉಲ್ಲೇಖಿಸಲಾಗಿದೆ. ಪಂಚಾಯತ್ ಪ್ರದೇಶದಲ್ಲಿ ಮುಸ್ಲಿಮರು ಅಥವಾ ದುಷ್ಕರ್ಮಿಗಳು ಯಾವುದೇ ವ್ಯಾಪಾರ  ಚಟುವಟಿಕೆಯನ್ನು ಮಾಡಲು ಅನುಮತಿಸುವುದಿಲ್ಲ ಎಂಬ ನಿರ್ಧಾರವನ್ನು ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಸಲ್ಲಿಸುತ್ತದೆ. ಇದರಲ್ಲಿ ಮುಸ್ಲಿಮರನ್ನು ಕಳ್ಳರು ಮತ್ತು ದನ-ಕಳ್ಳರಿಗೆ ಸಮನಾಗಿರುತ್ತದೆ ಎಂದು ಹೇಳಲಾಗಿದೆ ಎನ್ನಲಾಗಿದೆ.

ಗ್ರಾಮದಲ್ಲಿ ಶಾಂತಿಯನ್ನು ಖಾತ್ರಿಪಡಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪತ್ರದಲ್ಲಿ ಹೇಳಲಾಗಿದೆ, ಗ್ರಾಮದಲ್ಲಿ ಮುಸ್ಲಿಮರ ಉಪಸ್ಥಿತಿಯು ಕೋಮುಗಲಭೆಗೆ ಏಕೈಕ ಕಾರಣವಾಗಿದೆ ಎಂದು ಬಿಂಬಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...