Homeಮುಖಪುಟಗುರುಗ್ರಾಮ್: ಮುಸ್ಲಿಮರಿಗೆ ಸಾಮಾಜಿಕ,ಆರ್ಥಿಕ ಬಹಿಷ್ಕಾರಕ್ಕೆ ಕರೆ

ಗುರುಗ್ರಾಮ್: ಮುಸ್ಲಿಮರಿಗೆ ಸಾಮಾಜಿಕ,ಆರ್ಥಿಕ ಬಹಿಷ್ಕಾರಕ್ಕೆ ಕರೆ

- Advertisement -
- Advertisement -

ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಗುರುಗ್ರಾಮ್ ಸೆಕ್ಟರ್ 57ರಲ್ಲಿ ಆದಿತ್ಯವಾರ ಹಿಂದೂ ಮಹಾಪಂಚಾಯತ್ ಹೆಸರಿನಲ್ಲಿ ನೂರಾರು ಮಂದಿ ಸೇರಿದ್ದು, ಮುಸ್ಲಿಮರಿಗೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರವನ್ನು ಘೋಷಿಸಿದ್ದಾರೆ. ಕಳೆದ ವಾರ ಕೋಮುಗಲಭೆಯ ಸಂದರ್ಭದಲ್ಲಿ ಹಿಂದುತ್ವದ ಗುಂಪೊಂದು ಮಸೀದಿಯ ಮೇಲೆ ದಾಳಿ ನಡೆಸಿ ಉಪ ಇಮಾಮ್‌ರನ್ನು ಹತ್ಯೆಗೈದ ಪ್ರದೇಶದಲ್ಲೇ ಈ ಬೆಳವಣಿಗೆ ನಡೆದಿದೆ.

ಅಂಜುಮನ್ ಮಸೀದಿ ಬಳಿಯಲ್ಲಿ ಇರುವ ಟಿಗ್ರಾ ಹಳ್ಳಿಯಲ್ಲಿ  ಮಹಾಪಂಚಾಯತ್ ನಡೆದಿದೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಮಸೀದಿಯ ಮೇಲೆ ದಾಳಿ ಪ್ರಕರಣದ ಆರೋಪಿತರು ಅಮಾಯಕರು ಎಂದು ಸಭೆಯಲ್ಲಿ  ಸೇರಿದವರು ಹೇಳಿದ್ದಾರೆ. ಆರೋಪಿಗಳ ಹೆಸರನ್ನು 8 ದಿನಗಳ ಒಳಗೆ ಪ್ರಕರಣದಿಂದ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ಪ್ರತಿಭಟನೆ ಮಾಡುವ(ಚಕ್ಕಾ ಜಾಮ್) ಬೆದರಿಕೆಯನ್ನು ಹಾಕಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿ ಬಂಧಿತರ ಬಗ್ಗೆ ಸಾಕ್ಷಿ ಕೊಡಬೇಕು. ಮಸೀದಿ ಬಳಿ ವಾಸಿಸುವ ಕುಟುಂಬವನ್ನು ಟಾರ್ಗೆಟ್ ಮಾಡಲಾಗಿದೆ ಮತ್ತು ದೌರ್ಜನ್ಯ ಮಾಡಲಾಗುತ್ತಿದೆ. ಇದನ್ನು ನಾವು ಮರುಕಳಿಸಲು ಬಿಡುವುದಿಲ್ಲ ಎಂದು ವಜೀರಾಬಾದ್ ಸೆಕ್ಟರ್ 57ರ ಸರಪಂಚ್ ಸುಬೇ ಸಿಂಗ್ ಬೊಹ್ರಾ ಹೇಳಿರುವುದಾಗಿ ಹಿಂದೂಸ್ತಾನ್  ಟೈಮ್ಸ್ ವರದಿ ಮಾಡಿದೆ.

ಗುರುಗ್ರಾಮ್‌ನಲ್ಲಿ ನೂರಾರು ಮುಸ್ಲಿಂ ಸಮುದಾಯದ ಜನರು ಬಡಗಿಗಳು, ಕ್ಷೌರಿಕರು, ತರಕಾರಿ ಮಾರಾಟಗಾರರು, ಮೆಕ್ಯಾನಿಕ್‌ಗಳು ಮತ್ತು ಕ್ಯಾಬ್ ಡ್ರೈವರ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ನಾವು ಯಾವಾಗಲೂ ಅವರನ್ನು ಬೆಂಬಲಿಸುತ್ತೇವೆ. ಆದರೆ ಈಗ ಅವರು ನಗರದ ಅಶಾಂತಿಗೆ ಕಾರಣವಾಗಿದ್ದು, ಅವರನ್ನು ನಾವು ಬೆಂಬಲಿಸುವುದಿಲ್ಲ. ಇನ್ನು ಮುಸ್ಲಿಮರನ್ನು ನಗರದಲ್ಲಿ ಕೆಲಸ ಮಾಡಲು ಬಿಡಬಾರದು. ಅಪಾರ್ಟ್‌ಮೆಂಟ್ ಅಥವಾ ಕೊಳೆಗೇರಿಗಳನ್ನು ಬಾಡಿಗೆಗೆ ನೀಡದಂತೆ ನಾವು ನಗರದ ಜನರಿಗೆ ಮನವಿ ಮಾಡುತ್ತೇವೆ ಎಂದು ಬಜರಂಗದಳದ ಸದಸ್ಯ ಕುಲಭೂಷಣ್ ಭಾರದ್ವಾಜ್ ಹೇಳಿದ್ದಾರೆ.

ಗುರುಗ್ರಾಮ್ ನ ಹಿರಿಯ ಪೊಲೀಸ್ ಅಧಿಕಾರಿ ವಿಕಾಶ್ ಕೌಶಿಕ್ ಅವರು ನಿನ್ನೆ ಎಎನ್ ಐ ಜೊತೆ ಮಾತನಾಡಿ, ಕ್ರಾಯಕ್ರಮ ಶಾಂತಿಯಿಂದ ನಡೆಯಲಿದೆ ಎಂದು ಸಂಘಟಕರು ಪೊಲೀಸರಿಗೆ ತಿಳಿಸಿದ್ದಾರೆ.ಕಳೆದ ಎರಡು ಮೂರು ದಿನಗಳಿಂದ ಗುರುಗ್ರಾಮ ಶಾಂತಿಯುತವಾಗಿದೆ. ಯಾವುದೇ ಅಹಿತಕರ  ಘಟನೆ ವರದಿಯಾಗಿಲ್ಲ. ಇಂದಿನ ಪಂಚಾಯತ್ ಶಾಂತಿಯುತವಾಗಿ ನಡೆಯುತ್ತದೆ ಎಂದು ನಾವು ಭಾವಿಸುತ್ತೇವೆ. ನಾವು ಎಲ್ಲರೊಂದಿಗೆ ಮಾತುಕತೆ ನಡೆಸಿದ್ದೇವೆ. ಪಂಚಾಯತ್ ಶಾಂತಿಯುತವಾಗಿ ನಡೆಯುತ್ತದೆ ಎಂದು ಅವರು ನಮಗೆ ಭರವಸೆ ನೀಡಿದ್ದಾರೆ  ಪಂಚಾಯತ್ 9 ಗಂಟೆಗೆ ಪ್ರಾರಂಭವಾಗುತ್ತದೆ. ಸುಮಾರು 500-1,000 ಜನರು ಬರುವ ನಿರೀಕ್ಷೆಯಿದೆ ಎಂದು  ಹೇಳಿದ್ದರು.ಆದರೆ, ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪೊಲೀಸರು ಏಕೆ ಈ ವಿಚಾರದಲ್ಲಿ ಮಧ್ಯಪ್ರವೇಶಿಸುತ್ತಿಲ್ಲ ಎಂದು ಅವರು ಹೇಳಲಿಲ್ಲ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಭಾನುವಾರ ಈ ಬಹಿಷ್ಕಾರದ ಕರೆಯನ್ನು  ಖಂಡಿಸಿದೆ. ಪಕ್ಷದ ನಾಲ್ವರು ಸದಸ್ಯರ ನಿಯೋಗ ಭಾನುವಾರ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ.

ಹರ್ಯಾಣ ಜಿಲ್ಲೆಯ ರೇವಾರಿ ಬ್ಲಾಕ್ ದಹಿನಾದಿಂದ ಜೈನಾಬಾದ್ ಪಂಚಾಯತ್ ಸರಪಂಚ ಭಾವನಾ ಯಾದವ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ,ಬಿಜೆಪಿ ಆಡಳಿತದಲ್ಲಿ ವ್ಯವಸ್ಥಿತವಾಗಿ ಬೆಳೆಸಲಾಗುತ್ತಿರುವ ಅಲ್ಪಸಂಖ್ಯಾತರ ವಿರುದ್ಧ ಸಂಘಟಿತ ತಾರತಮ್ಯದ ಕಹಿ ವಾಸ್ತವವನ್ನು ಈ ಬೆಳವಣಿಗೆ ಬಹಿರಂಗಪಡಿಸುತ್ತದೆ ಎಂದು ಹೇಳಿದ್ದಾರೆ.

ಪತ್ರದಲ್ಲಿ ಆಘಾತಕಾರಿ ವಿಚಾರ ಉಲ್ಲೇಖಿಸಲಾಗಿದೆ. ಪಂಚಾಯತ್ ಪ್ರದೇಶದಲ್ಲಿ ಮುಸ್ಲಿಮರು ಅಥವಾ ದುಷ್ಕರ್ಮಿಗಳು ಯಾವುದೇ ವ್ಯಾಪಾರ  ಚಟುವಟಿಕೆಯನ್ನು ಮಾಡಲು ಅನುಮತಿಸುವುದಿಲ್ಲ ಎಂಬ ನಿರ್ಧಾರವನ್ನು ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಸಲ್ಲಿಸುತ್ತದೆ. ಇದರಲ್ಲಿ ಮುಸ್ಲಿಮರನ್ನು ಕಳ್ಳರು ಮತ್ತು ದನ-ಕಳ್ಳರಿಗೆ ಸಮನಾಗಿರುತ್ತದೆ ಎಂದು ಹೇಳಲಾಗಿದೆ ಎನ್ನಲಾಗಿದೆ.

ಗ್ರಾಮದಲ್ಲಿ ಶಾಂತಿಯನ್ನು ಖಾತ್ರಿಪಡಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪತ್ರದಲ್ಲಿ ಹೇಳಲಾಗಿದೆ, ಗ್ರಾಮದಲ್ಲಿ ಮುಸ್ಲಿಮರ ಉಪಸ್ಥಿತಿಯು ಕೋಮುಗಲಭೆಗೆ ಏಕೈಕ ಕಾರಣವಾಗಿದೆ ಎಂದು ಬಿಂಬಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...