Homeಮುಖಪುಟಗುರುಗ್ರಾಮ್: ಮುಸ್ಲಿಮರಿಗೆ ಸಾಮಾಜಿಕ,ಆರ್ಥಿಕ ಬಹಿಷ್ಕಾರಕ್ಕೆ ಕರೆ

ಗುರುಗ್ರಾಮ್: ಮುಸ್ಲಿಮರಿಗೆ ಸಾಮಾಜಿಕ,ಆರ್ಥಿಕ ಬಹಿಷ್ಕಾರಕ್ಕೆ ಕರೆ

- Advertisement -
- Advertisement -

ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಗುರುಗ್ರಾಮ್ ಸೆಕ್ಟರ್ 57ರಲ್ಲಿ ಆದಿತ್ಯವಾರ ಹಿಂದೂ ಮಹಾಪಂಚಾಯತ್ ಹೆಸರಿನಲ್ಲಿ ನೂರಾರು ಮಂದಿ ಸೇರಿದ್ದು, ಮುಸ್ಲಿಮರಿಗೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರವನ್ನು ಘೋಷಿಸಿದ್ದಾರೆ. ಕಳೆದ ವಾರ ಕೋಮುಗಲಭೆಯ ಸಂದರ್ಭದಲ್ಲಿ ಹಿಂದುತ್ವದ ಗುಂಪೊಂದು ಮಸೀದಿಯ ಮೇಲೆ ದಾಳಿ ನಡೆಸಿ ಉಪ ಇಮಾಮ್‌ರನ್ನು ಹತ್ಯೆಗೈದ ಪ್ರದೇಶದಲ್ಲೇ ಈ ಬೆಳವಣಿಗೆ ನಡೆದಿದೆ.

ಅಂಜುಮನ್ ಮಸೀದಿ ಬಳಿಯಲ್ಲಿ ಇರುವ ಟಿಗ್ರಾ ಹಳ್ಳಿಯಲ್ಲಿ  ಮಹಾಪಂಚಾಯತ್ ನಡೆದಿದೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಮಸೀದಿಯ ಮೇಲೆ ದಾಳಿ ಪ್ರಕರಣದ ಆರೋಪಿತರು ಅಮಾಯಕರು ಎಂದು ಸಭೆಯಲ್ಲಿ  ಸೇರಿದವರು ಹೇಳಿದ್ದಾರೆ. ಆರೋಪಿಗಳ ಹೆಸರನ್ನು 8 ದಿನಗಳ ಒಳಗೆ ಪ್ರಕರಣದಿಂದ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ಪ್ರತಿಭಟನೆ ಮಾಡುವ(ಚಕ್ಕಾ ಜಾಮ್) ಬೆದರಿಕೆಯನ್ನು ಹಾಕಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿ ಬಂಧಿತರ ಬಗ್ಗೆ ಸಾಕ್ಷಿ ಕೊಡಬೇಕು. ಮಸೀದಿ ಬಳಿ ವಾಸಿಸುವ ಕುಟುಂಬವನ್ನು ಟಾರ್ಗೆಟ್ ಮಾಡಲಾಗಿದೆ ಮತ್ತು ದೌರ್ಜನ್ಯ ಮಾಡಲಾಗುತ್ತಿದೆ. ಇದನ್ನು ನಾವು ಮರುಕಳಿಸಲು ಬಿಡುವುದಿಲ್ಲ ಎಂದು ವಜೀರಾಬಾದ್ ಸೆಕ್ಟರ್ 57ರ ಸರಪಂಚ್ ಸುಬೇ ಸಿಂಗ್ ಬೊಹ್ರಾ ಹೇಳಿರುವುದಾಗಿ ಹಿಂದೂಸ್ತಾನ್  ಟೈಮ್ಸ್ ವರದಿ ಮಾಡಿದೆ.

ಗುರುಗ್ರಾಮ್‌ನಲ್ಲಿ ನೂರಾರು ಮುಸ್ಲಿಂ ಸಮುದಾಯದ ಜನರು ಬಡಗಿಗಳು, ಕ್ಷೌರಿಕರು, ತರಕಾರಿ ಮಾರಾಟಗಾರರು, ಮೆಕ್ಯಾನಿಕ್‌ಗಳು ಮತ್ತು ಕ್ಯಾಬ್ ಡ್ರೈವರ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ನಾವು ಯಾವಾಗಲೂ ಅವರನ್ನು ಬೆಂಬಲಿಸುತ್ತೇವೆ. ಆದರೆ ಈಗ ಅವರು ನಗರದ ಅಶಾಂತಿಗೆ ಕಾರಣವಾಗಿದ್ದು, ಅವರನ್ನು ನಾವು ಬೆಂಬಲಿಸುವುದಿಲ್ಲ. ಇನ್ನು ಮುಸ್ಲಿಮರನ್ನು ನಗರದಲ್ಲಿ ಕೆಲಸ ಮಾಡಲು ಬಿಡಬಾರದು. ಅಪಾರ್ಟ್‌ಮೆಂಟ್ ಅಥವಾ ಕೊಳೆಗೇರಿಗಳನ್ನು ಬಾಡಿಗೆಗೆ ನೀಡದಂತೆ ನಾವು ನಗರದ ಜನರಿಗೆ ಮನವಿ ಮಾಡುತ್ತೇವೆ ಎಂದು ಬಜರಂಗದಳದ ಸದಸ್ಯ ಕುಲಭೂಷಣ್ ಭಾರದ್ವಾಜ್ ಹೇಳಿದ್ದಾರೆ.

ಗುರುಗ್ರಾಮ್ ನ ಹಿರಿಯ ಪೊಲೀಸ್ ಅಧಿಕಾರಿ ವಿಕಾಶ್ ಕೌಶಿಕ್ ಅವರು ನಿನ್ನೆ ಎಎನ್ ಐ ಜೊತೆ ಮಾತನಾಡಿ, ಕ್ರಾಯಕ್ರಮ ಶಾಂತಿಯಿಂದ ನಡೆಯಲಿದೆ ಎಂದು ಸಂಘಟಕರು ಪೊಲೀಸರಿಗೆ ತಿಳಿಸಿದ್ದಾರೆ.ಕಳೆದ ಎರಡು ಮೂರು ದಿನಗಳಿಂದ ಗುರುಗ್ರಾಮ ಶಾಂತಿಯುತವಾಗಿದೆ. ಯಾವುದೇ ಅಹಿತಕರ  ಘಟನೆ ವರದಿಯಾಗಿಲ್ಲ. ಇಂದಿನ ಪಂಚಾಯತ್ ಶಾಂತಿಯುತವಾಗಿ ನಡೆಯುತ್ತದೆ ಎಂದು ನಾವು ಭಾವಿಸುತ್ತೇವೆ. ನಾವು ಎಲ್ಲರೊಂದಿಗೆ ಮಾತುಕತೆ ನಡೆಸಿದ್ದೇವೆ. ಪಂಚಾಯತ್ ಶಾಂತಿಯುತವಾಗಿ ನಡೆಯುತ್ತದೆ ಎಂದು ಅವರು ನಮಗೆ ಭರವಸೆ ನೀಡಿದ್ದಾರೆ  ಪಂಚಾಯತ್ 9 ಗಂಟೆಗೆ ಪ್ರಾರಂಭವಾಗುತ್ತದೆ. ಸುಮಾರು 500-1,000 ಜನರು ಬರುವ ನಿರೀಕ್ಷೆಯಿದೆ ಎಂದು  ಹೇಳಿದ್ದರು.ಆದರೆ, ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪೊಲೀಸರು ಏಕೆ ಈ ವಿಚಾರದಲ್ಲಿ ಮಧ್ಯಪ್ರವೇಶಿಸುತ್ತಿಲ್ಲ ಎಂದು ಅವರು ಹೇಳಲಿಲ್ಲ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಭಾನುವಾರ ಈ ಬಹಿಷ್ಕಾರದ ಕರೆಯನ್ನು  ಖಂಡಿಸಿದೆ. ಪಕ್ಷದ ನಾಲ್ವರು ಸದಸ್ಯರ ನಿಯೋಗ ಭಾನುವಾರ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ.

ಹರ್ಯಾಣ ಜಿಲ್ಲೆಯ ರೇವಾರಿ ಬ್ಲಾಕ್ ದಹಿನಾದಿಂದ ಜೈನಾಬಾದ್ ಪಂಚಾಯತ್ ಸರಪಂಚ ಭಾವನಾ ಯಾದವ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ,ಬಿಜೆಪಿ ಆಡಳಿತದಲ್ಲಿ ವ್ಯವಸ್ಥಿತವಾಗಿ ಬೆಳೆಸಲಾಗುತ್ತಿರುವ ಅಲ್ಪಸಂಖ್ಯಾತರ ವಿರುದ್ಧ ಸಂಘಟಿತ ತಾರತಮ್ಯದ ಕಹಿ ವಾಸ್ತವವನ್ನು ಈ ಬೆಳವಣಿಗೆ ಬಹಿರಂಗಪಡಿಸುತ್ತದೆ ಎಂದು ಹೇಳಿದ್ದಾರೆ.

ಪತ್ರದಲ್ಲಿ ಆಘಾತಕಾರಿ ವಿಚಾರ ಉಲ್ಲೇಖಿಸಲಾಗಿದೆ. ಪಂಚಾಯತ್ ಪ್ರದೇಶದಲ್ಲಿ ಮುಸ್ಲಿಮರು ಅಥವಾ ದುಷ್ಕರ್ಮಿಗಳು ಯಾವುದೇ ವ್ಯಾಪಾರ  ಚಟುವಟಿಕೆಯನ್ನು ಮಾಡಲು ಅನುಮತಿಸುವುದಿಲ್ಲ ಎಂಬ ನಿರ್ಧಾರವನ್ನು ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಸಲ್ಲಿಸುತ್ತದೆ. ಇದರಲ್ಲಿ ಮುಸ್ಲಿಮರನ್ನು ಕಳ್ಳರು ಮತ್ತು ದನ-ಕಳ್ಳರಿಗೆ ಸಮನಾಗಿರುತ್ತದೆ ಎಂದು ಹೇಳಲಾಗಿದೆ ಎನ್ನಲಾಗಿದೆ.

ಗ್ರಾಮದಲ್ಲಿ ಶಾಂತಿಯನ್ನು ಖಾತ್ರಿಪಡಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪತ್ರದಲ್ಲಿ ಹೇಳಲಾಗಿದೆ, ಗ್ರಾಮದಲ್ಲಿ ಮುಸ್ಲಿಮರ ಉಪಸ್ಥಿತಿಯು ಕೋಮುಗಲಭೆಗೆ ಏಕೈಕ ಕಾರಣವಾಗಿದೆ ಎಂದು ಬಿಂಬಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...