Homeಮುಖಪುಟಗುರುಗ್ರಾಮ್: ಮುಸ್ಲಿಮರಿಗೆ ಸಾಮಾಜಿಕ,ಆರ್ಥಿಕ ಬಹಿಷ್ಕಾರಕ್ಕೆ ಕರೆ

ಗುರುಗ್ರಾಮ್: ಮುಸ್ಲಿಮರಿಗೆ ಸಾಮಾಜಿಕ,ಆರ್ಥಿಕ ಬಹಿಷ್ಕಾರಕ್ಕೆ ಕರೆ

- Advertisement -
- Advertisement -

ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಗುರುಗ್ರಾಮ್ ಸೆಕ್ಟರ್ 57ರಲ್ಲಿ ಆದಿತ್ಯವಾರ ಹಿಂದೂ ಮಹಾಪಂಚಾಯತ್ ಹೆಸರಿನಲ್ಲಿ ನೂರಾರು ಮಂದಿ ಸೇರಿದ್ದು, ಮುಸ್ಲಿಮರಿಗೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರವನ್ನು ಘೋಷಿಸಿದ್ದಾರೆ. ಕಳೆದ ವಾರ ಕೋಮುಗಲಭೆಯ ಸಂದರ್ಭದಲ್ಲಿ ಹಿಂದುತ್ವದ ಗುಂಪೊಂದು ಮಸೀದಿಯ ಮೇಲೆ ದಾಳಿ ನಡೆಸಿ ಉಪ ಇಮಾಮ್‌ರನ್ನು ಹತ್ಯೆಗೈದ ಪ್ರದೇಶದಲ್ಲೇ ಈ ಬೆಳವಣಿಗೆ ನಡೆದಿದೆ.

ಅಂಜುಮನ್ ಮಸೀದಿ ಬಳಿಯಲ್ಲಿ ಇರುವ ಟಿಗ್ರಾ ಹಳ್ಳಿಯಲ್ಲಿ  ಮಹಾಪಂಚಾಯತ್ ನಡೆದಿದೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಮಸೀದಿಯ ಮೇಲೆ ದಾಳಿ ಪ್ರಕರಣದ ಆರೋಪಿತರು ಅಮಾಯಕರು ಎಂದು ಸಭೆಯಲ್ಲಿ  ಸೇರಿದವರು ಹೇಳಿದ್ದಾರೆ. ಆರೋಪಿಗಳ ಹೆಸರನ್ನು 8 ದಿನಗಳ ಒಳಗೆ ಪ್ರಕರಣದಿಂದ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ಪ್ರತಿಭಟನೆ ಮಾಡುವ(ಚಕ್ಕಾ ಜಾಮ್) ಬೆದರಿಕೆಯನ್ನು ಹಾಕಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿ ಬಂಧಿತರ ಬಗ್ಗೆ ಸಾಕ್ಷಿ ಕೊಡಬೇಕು. ಮಸೀದಿ ಬಳಿ ವಾಸಿಸುವ ಕುಟುಂಬವನ್ನು ಟಾರ್ಗೆಟ್ ಮಾಡಲಾಗಿದೆ ಮತ್ತು ದೌರ್ಜನ್ಯ ಮಾಡಲಾಗುತ್ತಿದೆ. ಇದನ್ನು ನಾವು ಮರುಕಳಿಸಲು ಬಿಡುವುದಿಲ್ಲ ಎಂದು ವಜೀರಾಬಾದ್ ಸೆಕ್ಟರ್ 57ರ ಸರಪಂಚ್ ಸುಬೇ ಸಿಂಗ್ ಬೊಹ್ರಾ ಹೇಳಿರುವುದಾಗಿ ಹಿಂದೂಸ್ತಾನ್  ಟೈಮ್ಸ್ ವರದಿ ಮಾಡಿದೆ.

ಗುರುಗ್ರಾಮ್‌ನಲ್ಲಿ ನೂರಾರು ಮುಸ್ಲಿಂ ಸಮುದಾಯದ ಜನರು ಬಡಗಿಗಳು, ಕ್ಷೌರಿಕರು, ತರಕಾರಿ ಮಾರಾಟಗಾರರು, ಮೆಕ್ಯಾನಿಕ್‌ಗಳು ಮತ್ತು ಕ್ಯಾಬ್ ಡ್ರೈವರ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ನಾವು ಯಾವಾಗಲೂ ಅವರನ್ನು ಬೆಂಬಲಿಸುತ್ತೇವೆ. ಆದರೆ ಈಗ ಅವರು ನಗರದ ಅಶಾಂತಿಗೆ ಕಾರಣವಾಗಿದ್ದು, ಅವರನ್ನು ನಾವು ಬೆಂಬಲಿಸುವುದಿಲ್ಲ. ಇನ್ನು ಮುಸ್ಲಿಮರನ್ನು ನಗರದಲ್ಲಿ ಕೆಲಸ ಮಾಡಲು ಬಿಡಬಾರದು. ಅಪಾರ್ಟ್‌ಮೆಂಟ್ ಅಥವಾ ಕೊಳೆಗೇರಿಗಳನ್ನು ಬಾಡಿಗೆಗೆ ನೀಡದಂತೆ ನಾವು ನಗರದ ಜನರಿಗೆ ಮನವಿ ಮಾಡುತ್ತೇವೆ ಎಂದು ಬಜರಂಗದಳದ ಸದಸ್ಯ ಕುಲಭೂಷಣ್ ಭಾರದ್ವಾಜ್ ಹೇಳಿದ್ದಾರೆ.

ಗುರುಗ್ರಾಮ್ ನ ಹಿರಿಯ ಪೊಲೀಸ್ ಅಧಿಕಾರಿ ವಿಕಾಶ್ ಕೌಶಿಕ್ ಅವರು ನಿನ್ನೆ ಎಎನ್ ಐ ಜೊತೆ ಮಾತನಾಡಿ, ಕ್ರಾಯಕ್ರಮ ಶಾಂತಿಯಿಂದ ನಡೆಯಲಿದೆ ಎಂದು ಸಂಘಟಕರು ಪೊಲೀಸರಿಗೆ ತಿಳಿಸಿದ್ದಾರೆ.ಕಳೆದ ಎರಡು ಮೂರು ದಿನಗಳಿಂದ ಗುರುಗ್ರಾಮ ಶಾಂತಿಯುತವಾಗಿದೆ. ಯಾವುದೇ ಅಹಿತಕರ  ಘಟನೆ ವರದಿಯಾಗಿಲ್ಲ. ಇಂದಿನ ಪಂಚಾಯತ್ ಶಾಂತಿಯುತವಾಗಿ ನಡೆಯುತ್ತದೆ ಎಂದು ನಾವು ಭಾವಿಸುತ್ತೇವೆ. ನಾವು ಎಲ್ಲರೊಂದಿಗೆ ಮಾತುಕತೆ ನಡೆಸಿದ್ದೇವೆ. ಪಂಚಾಯತ್ ಶಾಂತಿಯುತವಾಗಿ ನಡೆಯುತ್ತದೆ ಎಂದು ಅವರು ನಮಗೆ ಭರವಸೆ ನೀಡಿದ್ದಾರೆ  ಪಂಚಾಯತ್ 9 ಗಂಟೆಗೆ ಪ್ರಾರಂಭವಾಗುತ್ತದೆ. ಸುಮಾರು 500-1,000 ಜನರು ಬರುವ ನಿರೀಕ್ಷೆಯಿದೆ ಎಂದು  ಹೇಳಿದ್ದರು.ಆದರೆ, ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪೊಲೀಸರು ಏಕೆ ಈ ವಿಚಾರದಲ್ಲಿ ಮಧ್ಯಪ್ರವೇಶಿಸುತ್ತಿಲ್ಲ ಎಂದು ಅವರು ಹೇಳಲಿಲ್ಲ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಭಾನುವಾರ ಈ ಬಹಿಷ್ಕಾರದ ಕರೆಯನ್ನು  ಖಂಡಿಸಿದೆ. ಪಕ್ಷದ ನಾಲ್ವರು ಸದಸ್ಯರ ನಿಯೋಗ ಭಾನುವಾರ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ.

ಹರ್ಯಾಣ ಜಿಲ್ಲೆಯ ರೇವಾರಿ ಬ್ಲಾಕ್ ದಹಿನಾದಿಂದ ಜೈನಾಬಾದ್ ಪಂಚಾಯತ್ ಸರಪಂಚ ಭಾವನಾ ಯಾದವ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ,ಬಿಜೆಪಿ ಆಡಳಿತದಲ್ಲಿ ವ್ಯವಸ್ಥಿತವಾಗಿ ಬೆಳೆಸಲಾಗುತ್ತಿರುವ ಅಲ್ಪಸಂಖ್ಯಾತರ ವಿರುದ್ಧ ಸಂಘಟಿತ ತಾರತಮ್ಯದ ಕಹಿ ವಾಸ್ತವವನ್ನು ಈ ಬೆಳವಣಿಗೆ ಬಹಿರಂಗಪಡಿಸುತ್ತದೆ ಎಂದು ಹೇಳಿದ್ದಾರೆ.

ಪತ್ರದಲ್ಲಿ ಆಘಾತಕಾರಿ ವಿಚಾರ ಉಲ್ಲೇಖಿಸಲಾಗಿದೆ. ಪಂಚಾಯತ್ ಪ್ರದೇಶದಲ್ಲಿ ಮುಸ್ಲಿಮರು ಅಥವಾ ದುಷ್ಕರ್ಮಿಗಳು ಯಾವುದೇ ವ್ಯಾಪಾರ  ಚಟುವಟಿಕೆಯನ್ನು ಮಾಡಲು ಅನುಮತಿಸುವುದಿಲ್ಲ ಎಂಬ ನಿರ್ಧಾರವನ್ನು ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಸಲ್ಲಿಸುತ್ತದೆ. ಇದರಲ್ಲಿ ಮುಸ್ಲಿಮರನ್ನು ಕಳ್ಳರು ಮತ್ತು ದನ-ಕಳ್ಳರಿಗೆ ಸಮನಾಗಿರುತ್ತದೆ ಎಂದು ಹೇಳಲಾಗಿದೆ ಎನ್ನಲಾಗಿದೆ.

ಗ್ರಾಮದಲ್ಲಿ ಶಾಂತಿಯನ್ನು ಖಾತ್ರಿಪಡಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಪತ್ರದಲ್ಲಿ ಹೇಳಲಾಗಿದೆ, ಗ್ರಾಮದಲ್ಲಿ ಮುಸ್ಲಿಮರ ಉಪಸ್ಥಿತಿಯು ಕೋಮುಗಲಭೆಗೆ ಏಕೈಕ ಕಾರಣವಾಗಿದೆ ಎಂದು ಬಿಂಬಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...