Homeಮುಖಪುಟಗುಜರಾತ್ | ಆಸ್ಪತ್ರೆಯ ರೋಗಿಗಳನ್ನು ರಾತ್ರಿ ಎಬ್ಬಿಸಿ ಅವರಿಗೆ ತಿಳಿಯದಂತೆ ಪಕ್ಷದ ಸದಸ್ಯರನ್ನಾಗಿಸಿದ ಬಿಜೆಪಿ!

ಗುಜರಾತ್ | ಆಸ್ಪತ್ರೆಯ ರೋಗಿಗಳನ್ನು ರಾತ್ರಿ ಎಬ್ಬಿಸಿ ಅವರಿಗೆ ತಿಳಿಯದಂತೆ ಪಕ್ಷದ ಸದಸ್ಯರನ್ನಾಗಿಸಿದ ಬಿಜೆಪಿ!

- Advertisement -
- Advertisement -

ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳನ್ನು ಅವರಿಗೆ ಗೊತ್ತಿಲ್ಲತೆ ಅವರಿಂದ ಒಟಿಪಿ ಸಂಗ್ರಹಿಸಿ ಅವರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡುವ ಅಭಿಯಾನ ಗುಜರಾತ್‌ನಲ್ಲಿ ಬೆಳಕಿಗೆ ಬಂದಿದೆ. ರಾಜ್‌ಕೋಟ್‌ನ ರಾಂಚೋದ್ದಾಸ್ ಬಾಪು ಚಾರಿಟೇಬಲ್ ಟ್ರಸ್ಟ್ ಕಣ್ಣಿನ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ರೋಗಿಗಳನ್ನು ಮಧ್ಯರಾತ್ರಿಯಲ್ಲಿ ಎಬ್ಬಿಸಿ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯ ನಂತರ ಬಿಜೆಪಿ ಸದಸ್ಯರಾಗಿಸುತ್ತಿರುವ ವಿಡಿಯೊ ವೈರಲ್ ಆಗಿದೆ. ಗುಜರಾತ್

ಜುನಾಗಢ್‌ನ ತ್ರಿಮೂರ್ತಿ ಆಸ್ಪತ್ರೆಯಲ್ಲಿ ನೋಂದಾಯಿತ ರೋಗಿಗಳನ್ನು ಸೆಪ್ಟೆಂಬರ್ 16 ರಂದು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಾಗಿ ರಾಜ್‌ಕೋಟ್‌ಗೆ ಕರೆತರಲಾಯಿತು ಎಂದು ವರದಿಗಳು ಹೇಳಿವೆ. ರಾತ್ರಿಯಲ್ಲಿ ಒಬ್ಬ ವ್ಯಕ್ತಿ ಅವರನ್ನು ಎಬ್ಬಿಸಿ, ಅವರಿಂದ OTP ಗಳನ್ನು ಸಂಗ್ರಹಿಸಿ, ಅವರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜುನಾಗಢದ ರೋಗಿಯಾದ ಕಮಲೇಶ್ ತುಮ್ಮರ್ ಈ ಘಟನೆಯನ್ನು ವಿಡಿಯೋದಲ್ಲಿ ಸೆರೆಹಿಡಿದು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ. ಅನೇಕ ರೋಗಿಗಳಿಗೆ ದೃಢೀಕರಣ ಸಂದೇಶಗಳು ಬಂದಾಗಲೇ ತಮ್ಮನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಿರುವುದು ಅರಿವಾಗಿದೆ ಎಂದು ವರದಿಯಾಗಿದೆ.

“ಕಳೆದ ಭಾನುವಾರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಾಗಿ ನಾನು ರಾಜ್‌ಕೋಟ್‌ಗೆ ಹೋಗಿದ್ದೆ. ರಾತ್ರಿ 8 ಗಂಟೆ ಸುಮಾರಿಗೆ ನಿದ್ರೆಗೆ ಜಾರಿದ್ದೆ. ರಾತ್ರಿ 10:30-11 ಗಂಟೆಯ ಸುಮಾರಿಗೆ, ಯಾರೋ ನನ್ನನ್ನು ಎಬ್ಬಿಸಿದರು, ನನ್ನ ಮೊಬೈಲ್ ಸಂಖ್ಯೆಯನ್ನು ಕೇಳಿದರು. ಅವರು ಹೇಳಿದ್ದು ಆಸ್ಪತ್ರೆಗಾಗಿ ಇರಬೇಕು ಎಂದು ನಾನು ಭಾವಿಸಿದ್ದೆ. ಆದರೆ ನನಗೆ ತಿಳಿಯುವ ಮೊದಲು, ಅವರು ನನ್ನ ಫೋನ್ ತೆಗೆದುಕೊಂಡು, OTP ಯನ್ನು ಪಡೆದರು. ನಾನು ನನ್ನ ಫೋನ್ ಅನ್ನು ಮರಳಿ ಪಡೆದಾಗ, ನಾನು ಬಿಜೆಪಿ ಸದಸ್ಯನಾಗಿದ್ದೆ” ಎಂದು ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ಜುನಾಗಢದಿಂದ ತೆರಳಿದ್ದ ಕಮಲೇಶ್ ತುಮ್ಮರ್ ಆರೋಪಿಸಿದ್ದಾರೆ. ಗುಜರಾತ್

‘ನನ್ನನ್ನು ಬಿಜೆಪಿ ಸದಸ್ಯನನ್ನಾಗಿ ಮಾಡಿದ್ದೀಯಾ’ ಎಂದು ನಾನು ಅವರನ್ನು ಕೇಳಿದಾಗ, ಅವರು, ‘ಬೇರೆ ದಾರಿಯಿಲ್ಲ’ ಎಂದು ಉತ್ತರಿಸಿದ್ದರು. ಇದು ನಡೆಯಬಾರದು. ಆದರೆ ಅಲ್ಲಿದ್ದ  400 ಜನರಲ್ಲಿ, ಸುಮಾರು 200-250 ಜನರು ಬಿಜೆಪಿ ಸದಸ್ಯರಾಗಿದ್ದಾರೆ. ಅವರನ್ನು ಅವರಿಗೆ ತಿಳಿಯದಂತೆ ಬಲವಂತವಾಗಿ ಸದಸ್ಯತ್ವಕ್ಕೆ ಒಳಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಂಚೋದ್ದಾಸ್ ಚಾರಿಟೇಬಲ್ ಟ್ರಸ್ಟ್‌ನ ಶಾಂತಿ ವಡೋಲಿಯಾ ಹೇಳಿಕೆ ನೀಡಿದ್ದು, “ನಮ್ಮ ಟ್ರಸ್ಟ್ ಗುಜರಾತ್‌ನಾದ್ಯಂತ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಾಗಿ ರೋಗಿಗಳನ್ನು ಕರೆತರುತ್ತದೆ. ಅಕ್ಟೋಬರ್ 16 ರಂದು ನಾವು ಜುನಾಗಢ್‌ನಲ್ಲಿ ಶಿಬಿರವನ್ನು ನಡೆಸಿದ್ದೇವೆ, ಇದನ್ನು ಡಾ. ಚಿಖಾಲಿಯಾ ಅವರು ತ್ರಿಮೂರ್ತಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದರು. ರೋಗಿಗಳನ್ನು ನಂತರ ರಾಜ್‌ಕೋಟ್‌ಗೆ ಕರೆತರಲಾಯಿತು” ಎಂದು ಹೇಳಿದ್ದಾರೆ.

“ಈ ವಿಷಯ ಈಗಷ್ಟೇ ನಮ್ಮ ಗಮನಕ್ಕೆ ಬಂದಿದ್ದು, ತನಿಖೆ ನಡೆಯುತ್ತಿದೆ. ಟ್ರಸ್ಟ್‌ನ ಯಾವುದೇ ಸದಸ್ಯರು ಭಾಗಿಯಾಗಿರುವುದು ಕಂಡುಬಂದರೆ, ನಿಯಮಗಳ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ವಡೋಲಿಯಾ ಭರವಸೆ ನೀಡಿದ್ದಾರೆ.

ರಾಜ್‌ಕೋಟ್ ನಗರ ಬಿಜೆಪಿ ಅಧ್ಯಕ್ಷ ಮುಖೇಶ್ ದೋಷಿ ಮಾತನಾಡಿ, “ವೀಡಿಯೊದಲ್ಲಿ ಕಂಡುಬರುವ ವ್ಯಕ್ತಿಯನ್ನು ಗುರುತಿಸುವುದು ಸೇರಿದಂತೆ ಸಂಪೂರ್ಣ ವಿಷಯದ ಬಗ್ಗೆ ತನಿಖೆ ನಡೆಸುವಂತೆ ನಾನು ನನ್ನ ವಲಯ ಕಾರ್ಯದರ್ಶಿಗೆ ಆದೇಶಿಸಿದ್ದೇನೆ. ಮಲಗಿರುವ ರೋಗಿಗಳನ್ನು ಎಬ್ಬಿಸಲು ಮತ್ತು ಅವರನ್ನು ಸದಸ್ಯರನ್ನಾಗಿ ಮಾಡಲು ಯಾರಿಗೂ ಸೂಚನೆಗಳನ್ನು ನೀಡಲಾಗಿಲ್ಲ. ಇಂತಹ ಅತಿರೇಕದ ಕ್ರಮಗಳು ಸಹಿಸುವುದಿಲ್ಲ” ಎಂದು ಹೇಳಿದ್ದಾರೆ.

“ಎಲ್ಲಾ ನಗರ ಬಿಜೆಪಿ ಕಾರ್ಯಕರ್ತರು ಕಳೆದ 50 ದಿನಗಳ ಮಿತಿಯೊಳಗೆ ಇರುವಾಗ ತಮ್ಮ ಸದಸ್ಯತ್ವದ ಗುರಿಯನ್ನು ಮೀರಿದ್ದಾರೆ. ನಾನು ಈ ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ ಮತ್ತು ಸಂಪೂರ್ಣ ತನಿಖೆಗೆ ಭರವಸೆ ನೀಡುತ್ತೇನೆ. ಇದು ಬಿಜೆಪಿ ಮಾನಹಾನಿ ಮಾಡುವ ಪಿತೂರಿ ಎಂದು ಪರಿಗಣಿಸಿದ್ದೇವೆ” ದೋಷಿ ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ

‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...