Homeಮುಖಪುಟಗುಜರಾತ್ | ಆಸ್ಪತ್ರೆಯ ರೋಗಿಗಳನ್ನು ರಾತ್ರಿ ಎಬ್ಬಿಸಿ ಅವರಿಗೆ ತಿಳಿಯದಂತೆ ಪಕ್ಷದ ಸದಸ್ಯರನ್ನಾಗಿಸಿದ ಬಿಜೆಪಿ!

ಗುಜರಾತ್ | ಆಸ್ಪತ್ರೆಯ ರೋಗಿಗಳನ್ನು ರಾತ್ರಿ ಎಬ್ಬಿಸಿ ಅವರಿಗೆ ತಿಳಿಯದಂತೆ ಪಕ್ಷದ ಸದಸ್ಯರನ್ನಾಗಿಸಿದ ಬಿಜೆಪಿ!

- Advertisement -
- Advertisement -

ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳನ್ನು ಅವರಿಗೆ ಗೊತ್ತಿಲ್ಲತೆ ಅವರಿಂದ ಒಟಿಪಿ ಸಂಗ್ರಹಿಸಿ ಅವರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡುವ ಅಭಿಯಾನ ಗುಜರಾತ್‌ನಲ್ಲಿ ಬೆಳಕಿಗೆ ಬಂದಿದೆ. ರಾಜ್‌ಕೋಟ್‌ನ ರಾಂಚೋದ್ದಾಸ್ ಬಾಪು ಚಾರಿಟೇಬಲ್ ಟ್ರಸ್ಟ್ ಕಣ್ಣಿನ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ರೋಗಿಗಳನ್ನು ಮಧ್ಯರಾತ್ರಿಯಲ್ಲಿ ಎಬ್ಬಿಸಿ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯ ನಂತರ ಬಿಜೆಪಿ ಸದಸ್ಯರಾಗಿಸುತ್ತಿರುವ ವಿಡಿಯೊ ವೈರಲ್ ಆಗಿದೆ. ಗುಜರಾತ್

ಜುನಾಗಢ್‌ನ ತ್ರಿಮೂರ್ತಿ ಆಸ್ಪತ್ರೆಯಲ್ಲಿ ನೋಂದಾಯಿತ ರೋಗಿಗಳನ್ನು ಸೆಪ್ಟೆಂಬರ್ 16 ರಂದು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಾಗಿ ರಾಜ್‌ಕೋಟ್‌ಗೆ ಕರೆತರಲಾಯಿತು ಎಂದು ವರದಿಗಳು ಹೇಳಿವೆ. ರಾತ್ರಿಯಲ್ಲಿ ಒಬ್ಬ ವ್ಯಕ್ತಿ ಅವರನ್ನು ಎಬ್ಬಿಸಿ, ಅವರಿಂದ OTP ಗಳನ್ನು ಸಂಗ್ರಹಿಸಿ, ಅವರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜುನಾಗಢದ ರೋಗಿಯಾದ ಕಮಲೇಶ್ ತುಮ್ಮರ್ ಈ ಘಟನೆಯನ್ನು ವಿಡಿಯೋದಲ್ಲಿ ಸೆರೆಹಿಡಿದು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ. ಅನೇಕ ರೋಗಿಗಳಿಗೆ ದೃಢೀಕರಣ ಸಂದೇಶಗಳು ಬಂದಾಗಲೇ ತಮ್ಮನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಿರುವುದು ಅರಿವಾಗಿದೆ ಎಂದು ವರದಿಯಾಗಿದೆ.

“ಕಳೆದ ಭಾನುವಾರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಾಗಿ ನಾನು ರಾಜ್‌ಕೋಟ್‌ಗೆ ಹೋಗಿದ್ದೆ. ರಾತ್ರಿ 8 ಗಂಟೆ ಸುಮಾರಿಗೆ ನಿದ್ರೆಗೆ ಜಾರಿದ್ದೆ. ರಾತ್ರಿ 10:30-11 ಗಂಟೆಯ ಸುಮಾರಿಗೆ, ಯಾರೋ ನನ್ನನ್ನು ಎಬ್ಬಿಸಿದರು, ನನ್ನ ಮೊಬೈಲ್ ಸಂಖ್ಯೆಯನ್ನು ಕೇಳಿದರು. ಅವರು ಹೇಳಿದ್ದು ಆಸ್ಪತ್ರೆಗಾಗಿ ಇರಬೇಕು ಎಂದು ನಾನು ಭಾವಿಸಿದ್ದೆ. ಆದರೆ ನನಗೆ ತಿಳಿಯುವ ಮೊದಲು, ಅವರು ನನ್ನ ಫೋನ್ ತೆಗೆದುಕೊಂಡು, OTP ಯನ್ನು ಪಡೆದರು. ನಾನು ನನ್ನ ಫೋನ್ ಅನ್ನು ಮರಳಿ ಪಡೆದಾಗ, ನಾನು ಬಿಜೆಪಿ ಸದಸ್ಯನಾಗಿದ್ದೆ” ಎಂದು ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ಜುನಾಗಢದಿಂದ ತೆರಳಿದ್ದ ಕಮಲೇಶ್ ತುಮ್ಮರ್ ಆರೋಪಿಸಿದ್ದಾರೆ. ಗುಜರಾತ್

‘ನನ್ನನ್ನು ಬಿಜೆಪಿ ಸದಸ್ಯನನ್ನಾಗಿ ಮಾಡಿದ್ದೀಯಾ’ ಎಂದು ನಾನು ಅವರನ್ನು ಕೇಳಿದಾಗ, ಅವರು, ‘ಬೇರೆ ದಾರಿಯಿಲ್ಲ’ ಎಂದು ಉತ್ತರಿಸಿದ್ದರು. ಇದು ನಡೆಯಬಾರದು. ಆದರೆ ಅಲ್ಲಿದ್ದ  400 ಜನರಲ್ಲಿ, ಸುಮಾರು 200-250 ಜನರು ಬಿಜೆಪಿ ಸದಸ್ಯರಾಗಿದ್ದಾರೆ. ಅವರನ್ನು ಅವರಿಗೆ ತಿಳಿಯದಂತೆ ಬಲವಂತವಾಗಿ ಸದಸ್ಯತ್ವಕ್ಕೆ ಒಳಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಂಚೋದ್ದಾಸ್ ಚಾರಿಟೇಬಲ್ ಟ್ರಸ್ಟ್‌ನ ಶಾಂತಿ ವಡೋಲಿಯಾ ಹೇಳಿಕೆ ನೀಡಿದ್ದು, “ನಮ್ಮ ಟ್ರಸ್ಟ್ ಗುಜರಾತ್‌ನಾದ್ಯಂತ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಾಗಿ ರೋಗಿಗಳನ್ನು ಕರೆತರುತ್ತದೆ. ಅಕ್ಟೋಬರ್ 16 ರಂದು ನಾವು ಜುನಾಗಢ್‌ನಲ್ಲಿ ಶಿಬಿರವನ್ನು ನಡೆಸಿದ್ದೇವೆ, ಇದನ್ನು ಡಾ. ಚಿಖಾಲಿಯಾ ಅವರು ತ್ರಿಮೂರ್ತಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದರು. ರೋಗಿಗಳನ್ನು ನಂತರ ರಾಜ್‌ಕೋಟ್‌ಗೆ ಕರೆತರಲಾಯಿತು” ಎಂದು ಹೇಳಿದ್ದಾರೆ.

“ಈ ವಿಷಯ ಈಗಷ್ಟೇ ನಮ್ಮ ಗಮನಕ್ಕೆ ಬಂದಿದ್ದು, ತನಿಖೆ ನಡೆಯುತ್ತಿದೆ. ಟ್ರಸ್ಟ್‌ನ ಯಾವುದೇ ಸದಸ್ಯರು ಭಾಗಿಯಾಗಿರುವುದು ಕಂಡುಬಂದರೆ, ನಿಯಮಗಳ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ವಡೋಲಿಯಾ ಭರವಸೆ ನೀಡಿದ್ದಾರೆ.

ರಾಜ್‌ಕೋಟ್ ನಗರ ಬಿಜೆಪಿ ಅಧ್ಯಕ್ಷ ಮುಖೇಶ್ ದೋಷಿ ಮಾತನಾಡಿ, “ವೀಡಿಯೊದಲ್ಲಿ ಕಂಡುಬರುವ ವ್ಯಕ್ತಿಯನ್ನು ಗುರುತಿಸುವುದು ಸೇರಿದಂತೆ ಸಂಪೂರ್ಣ ವಿಷಯದ ಬಗ್ಗೆ ತನಿಖೆ ನಡೆಸುವಂತೆ ನಾನು ನನ್ನ ವಲಯ ಕಾರ್ಯದರ್ಶಿಗೆ ಆದೇಶಿಸಿದ್ದೇನೆ. ಮಲಗಿರುವ ರೋಗಿಗಳನ್ನು ಎಬ್ಬಿಸಲು ಮತ್ತು ಅವರನ್ನು ಸದಸ್ಯರನ್ನಾಗಿ ಮಾಡಲು ಯಾರಿಗೂ ಸೂಚನೆಗಳನ್ನು ನೀಡಲಾಗಿಲ್ಲ. ಇಂತಹ ಅತಿರೇಕದ ಕ್ರಮಗಳು ಸಹಿಸುವುದಿಲ್ಲ” ಎಂದು ಹೇಳಿದ್ದಾರೆ.

“ಎಲ್ಲಾ ನಗರ ಬಿಜೆಪಿ ಕಾರ್ಯಕರ್ತರು ಕಳೆದ 50 ದಿನಗಳ ಮಿತಿಯೊಳಗೆ ಇರುವಾಗ ತಮ್ಮ ಸದಸ್ಯತ್ವದ ಗುರಿಯನ್ನು ಮೀರಿದ್ದಾರೆ. ನಾನು ಈ ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ ಮತ್ತು ಸಂಪೂರ್ಣ ತನಿಖೆಗೆ ಭರವಸೆ ನೀಡುತ್ತೇನೆ. ಇದು ಬಿಜೆಪಿ ಮಾನಹಾನಿ ಮಾಡುವ ಪಿತೂರಿ ಎಂದು ಪರಿಗಣಿಸಿದ್ದೇವೆ” ದೋಷಿ ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ

‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...