Homeಮುಖಪುಟಗುಜರಾತ್ | ಆಸ್ಪತ್ರೆಯ ರೋಗಿಗಳನ್ನು ರಾತ್ರಿ ಎಬ್ಬಿಸಿ ಅವರಿಗೆ ತಿಳಿಯದಂತೆ ಪಕ್ಷದ ಸದಸ್ಯರನ್ನಾಗಿಸಿದ ಬಿಜೆಪಿ!

ಗುಜರಾತ್ | ಆಸ್ಪತ್ರೆಯ ರೋಗಿಗಳನ್ನು ರಾತ್ರಿ ಎಬ್ಬಿಸಿ ಅವರಿಗೆ ತಿಳಿಯದಂತೆ ಪಕ್ಷದ ಸದಸ್ಯರನ್ನಾಗಿಸಿದ ಬಿಜೆಪಿ!

- Advertisement -
- Advertisement -

ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳನ್ನು ಅವರಿಗೆ ಗೊತ್ತಿಲ್ಲತೆ ಅವರಿಂದ ಒಟಿಪಿ ಸಂಗ್ರಹಿಸಿ ಅವರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡುವ ಅಭಿಯಾನ ಗುಜರಾತ್‌ನಲ್ಲಿ ಬೆಳಕಿಗೆ ಬಂದಿದೆ. ರಾಜ್‌ಕೋಟ್‌ನ ರಾಂಚೋದ್ದಾಸ್ ಬಾಪು ಚಾರಿಟೇಬಲ್ ಟ್ರಸ್ಟ್ ಕಣ್ಣಿನ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ರೋಗಿಗಳನ್ನು ಮಧ್ಯರಾತ್ರಿಯಲ್ಲಿ ಎಬ್ಬಿಸಿ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯ ನಂತರ ಬಿಜೆಪಿ ಸದಸ್ಯರಾಗಿಸುತ್ತಿರುವ ವಿಡಿಯೊ ವೈರಲ್ ಆಗಿದೆ. ಗುಜರಾತ್

ಜುನಾಗಢ್‌ನ ತ್ರಿಮೂರ್ತಿ ಆಸ್ಪತ್ರೆಯಲ್ಲಿ ನೋಂದಾಯಿತ ರೋಗಿಗಳನ್ನು ಸೆಪ್ಟೆಂಬರ್ 16 ರಂದು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಾಗಿ ರಾಜ್‌ಕೋಟ್‌ಗೆ ಕರೆತರಲಾಯಿತು ಎಂದು ವರದಿಗಳು ಹೇಳಿವೆ. ರಾತ್ರಿಯಲ್ಲಿ ಒಬ್ಬ ವ್ಯಕ್ತಿ ಅವರನ್ನು ಎಬ್ಬಿಸಿ, ಅವರಿಂದ OTP ಗಳನ್ನು ಸಂಗ್ರಹಿಸಿ, ಅವರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜುನಾಗಢದ ರೋಗಿಯಾದ ಕಮಲೇಶ್ ತುಮ್ಮರ್ ಈ ಘಟನೆಯನ್ನು ವಿಡಿಯೋದಲ್ಲಿ ಸೆರೆಹಿಡಿದು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ. ಅನೇಕ ರೋಗಿಗಳಿಗೆ ದೃಢೀಕರಣ ಸಂದೇಶಗಳು ಬಂದಾಗಲೇ ತಮ್ಮನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಿರುವುದು ಅರಿವಾಗಿದೆ ಎಂದು ವರದಿಯಾಗಿದೆ.

“ಕಳೆದ ಭಾನುವಾರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಾಗಿ ನಾನು ರಾಜ್‌ಕೋಟ್‌ಗೆ ಹೋಗಿದ್ದೆ. ರಾತ್ರಿ 8 ಗಂಟೆ ಸುಮಾರಿಗೆ ನಿದ್ರೆಗೆ ಜಾರಿದ್ದೆ. ರಾತ್ರಿ 10:30-11 ಗಂಟೆಯ ಸುಮಾರಿಗೆ, ಯಾರೋ ನನ್ನನ್ನು ಎಬ್ಬಿಸಿದರು, ನನ್ನ ಮೊಬೈಲ್ ಸಂಖ್ಯೆಯನ್ನು ಕೇಳಿದರು. ಅವರು ಹೇಳಿದ್ದು ಆಸ್ಪತ್ರೆಗಾಗಿ ಇರಬೇಕು ಎಂದು ನಾನು ಭಾವಿಸಿದ್ದೆ. ಆದರೆ ನನಗೆ ತಿಳಿಯುವ ಮೊದಲು, ಅವರು ನನ್ನ ಫೋನ್ ತೆಗೆದುಕೊಂಡು, OTP ಯನ್ನು ಪಡೆದರು. ನಾನು ನನ್ನ ಫೋನ್ ಅನ್ನು ಮರಳಿ ಪಡೆದಾಗ, ನಾನು ಬಿಜೆಪಿ ಸದಸ್ಯನಾಗಿದ್ದೆ” ಎಂದು ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ಜುನಾಗಢದಿಂದ ತೆರಳಿದ್ದ ಕಮಲೇಶ್ ತುಮ್ಮರ್ ಆರೋಪಿಸಿದ್ದಾರೆ. ಗುಜರಾತ್

‘ನನ್ನನ್ನು ಬಿಜೆಪಿ ಸದಸ್ಯನನ್ನಾಗಿ ಮಾಡಿದ್ದೀಯಾ’ ಎಂದು ನಾನು ಅವರನ್ನು ಕೇಳಿದಾಗ, ಅವರು, ‘ಬೇರೆ ದಾರಿಯಿಲ್ಲ’ ಎಂದು ಉತ್ತರಿಸಿದ್ದರು. ಇದು ನಡೆಯಬಾರದು. ಆದರೆ ಅಲ್ಲಿದ್ದ  400 ಜನರಲ್ಲಿ, ಸುಮಾರು 200-250 ಜನರು ಬಿಜೆಪಿ ಸದಸ್ಯರಾಗಿದ್ದಾರೆ. ಅವರನ್ನು ಅವರಿಗೆ ತಿಳಿಯದಂತೆ ಬಲವಂತವಾಗಿ ಸದಸ್ಯತ್ವಕ್ಕೆ ಒಳಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಂಚೋದ್ದಾಸ್ ಚಾರಿಟೇಬಲ್ ಟ್ರಸ್ಟ್‌ನ ಶಾಂತಿ ವಡೋಲಿಯಾ ಹೇಳಿಕೆ ನೀಡಿದ್ದು, “ನಮ್ಮ ಟ್ರಸ್ಟ್ ಗುಜರಾತ್‌ನಾದ್ಯಂತ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಾಗಿ ರೋಗಿಗಳನ್ನು ಕರೆತರುತ್ತದೆ. ಅಕ್ಟೋಬರ್ 16 ರಂದು ನಾವು ಜುನಾಗಢ್‌ನಲ್ಲಿ ಶಿಬಿರವನ್ನು ನಡೆಸಿದ್ದೇವೆ, ಇದನ್ನು ಡಾ. ಚಿಖಾಲಿಯಾ ಅವರು ತ್ರಿಮೂರ್ತಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದರು. ರೋಗಿಗಳನ್ನು ನಂತರ ರಾಜ್‌ಕೋಟ್‌ಗೆ ಕರೆತರಲಾಯಿತು” ಎಂದು ಹೇಳಿದ್ದಾರೆ.

“ಈ ವಿಷಯ ಈಗಷ್ಟೇ ನಮ್ಮ ಗಮನಕ್ಕೆ ಬಂದಿದ್ದು, ತನಿಖೆ ನಡೆಯುತ್ತಿದೆ. ಟ್ರಸ್ಟ್‌ನ ಯಾವುದೇ ಸದಸ್ಯರು ಭಾಗಿಯಾಗಿರುವುದು ಕಂಡುಬಂದರೆ, ನಿಯಮಗಳ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ವಡೋಲಿಯಾ ಭರವಸೆ ನೀಡಿದ್ದಾರೆ.

ರಾಜ್‌ಕೋಟ್ ನಗರ ಬಿಜೆಪಿ ಅಧ್ಯಕ್ಷ ಮುಖೇಶ್ ದೋಷಿ ಮಾತನಾಡಿ, “ವೀಡಿಯೊದಲ್ಲಿ ಕಂಡುಬರುವ ವ್ಯಕ್ತಿಯನ್ನು ಗುರುತಿಸುವುದು ಸೇರಿದಂತೆ ಸಂಪೂರ್ಣ ವಿಷಯದ ಬಗ್ಗೆ ತನಿಖೆ ನಡೆಸುವಂತೆ ನಾನು ನನ್ನ ವಲಯ ಕಾರ್ಯದರ್ಶಿಗೆ ಆದೇಶಿಸಿದ್ದೇನೆ. ಮಲಗಿರುವ ರೋಗಿಗಳನ್ನು ಎಬ್ಬಿಸಲು ಮತ್ತು ಅವರನ್ನು ಸದಸ್ಯರನ್ನಾಗಿ ಮಾಡಲು ಯಾರಿಗೂ ಸೂಚನೆಗಳನ್ನು ನೀಡಲಾಗಿಲ್ಲ. ಇಂತಹ ಅತಿರೇಕದ ಕ್ರಮಗಳು ಸಹಿಸುವುದಿಲ್ಲ” ಎಂದು ಹೇಳಿದ್ದಾರೆ.

“ಎಲ್ಲಾ ನಗರ ಬಿಜೆಪಿ ಕಾರ್ಯಕರ್ತರು ಕಳೆದ 50 ದಿನಗಳ ಮಿತಿಯೊಳಗೆ ಇರುವಾಗ ತಮ್ಮ ಸದಸ್ಯತ್ವದ ಗುರಿಯನ್ನು ಮೀರಿದ್ದಾರೆ. ನಾನು ಈ ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ ಮತ್ತು ಸಂಪೂರ್ಣ ತನಿಖೆಗೆ ಭರವಸೆ ನೀಡುತ್ತೇನೆ. ಇದು ಬಿಜೆಪಿ ಮಾನಹಾನಿ ಮಾಡುವ ಪಿತೂರಿ ಎಂದು ಪರಿಗಣಿಸಿದ್ದೇವೆ” ದೋಷಿ ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ

‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...