Homeಮುಖಪುಟಗುಜರಾತ್ | ಆಸ್ಪತ್ರೆಯ ರೋಗಿಗಳನ್ನು ರಾತ್ರಿ ಎಬ್ಬಿಸಿ ಅವರಿಗೆ ತಿಳಿಯದಂತೆ ಪಕ್ಷದ ಸದಸ್ಯರನ್ನಾಗಿಸಿದ ಬಿಜೆಪಿ!

ಗುಜರಾತ್ | ಆಸ್ಪತ್ರೆಯ ರೋಗಿಗಳನ್ನು ರಾತ್ರಿ ಎಬ್ಬಿಸಿ ಅವರಿಗೆ ತಿಳಿಯದಂತೆ ಪಕ್ಷದ ಸದಸ್ಯರನ್ನಾಗಿಸಿದ ಬಿಜೆಪಿ!

- Advertisement -
- Advertisement -

ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳನ್ನು ಅವರಿಗೆ ಗೊತ್ತಿಲ್ಲತೆ ಅವರಿಂದ ಒಟಿಪಿ ಸಂಗ್ರಹಿಸಿ ಅವರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡುವ ಅಭಿಯಾನ ಗುಜರಾತ್‌ನಲ್ಲಿ ಬೆಳಕಿಗೆ ಬಂದಿದೆ. ರಾಜ್‌ಕೋಟ್‌ನ ರಾಂಚೋದ್ದಾಸ್ ಬಾಪು ಚಾರಿಟೇಬಲ್ ಟ್ರಸ್ಟ್ ಕಣ್ಣಿನ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ರೋಗಿಗಳನ್ನು ಮಧ್ಯರಾತ್ರಿಯಲ್ಲಿ ಎಬ್ಬಿಸಿ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯ ನಂತರ ಬಿಜೆಪಿ ಸದಸ್ಯರಾಗಿಸುತ್ತಿರುವ ವಿಡಿಯೊ ವೈರಲ್ ಆಗಿದೆ. ಗುಜರಾತ್

ಜುನಾಗಢ್‌ನ ತ್ರಿಮೂರ್ತಿ ಆಸ್ಪತ್ರೆಯಲ್ಲಿ ನೋಂದಾಯಿತ ರೋಗಿಗಳನ್ನು ಸೆಪ್ಟೆಂಬರ್ 16 ರಂದು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಾಗಿ ರಾಜ್‌ಕೋಟ್‌ಗೆ ಕರೆತರಲಾಯಿತು ಎಂದು ವರದಿಗಳು ಹೇಳಿವೆ. ರಾತ್ರಿಯಲ್ಲಿ ಒಬ್ಬ ವ್ಯಕ್ತಿ ಅವರನ್ನು ಎಬ್ಬಿಸಿ, ಅವರಿಂದ OTP ಗಳನ್ನು ಸಂಗ್ರಹಿಸಿ, ಅವರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜುನಾಗಢದ ರೋಗಿಯಾದ ಕಮಲೇಶ್ ತುಮ್ಮರ್ ಈ ಘಟನೆಯನ್ನು ವಿಡಿಯೋದಲ್ಲಿ ಸೆರೆಹಿಡಿದು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ. ಅನೇಕ ರೋಗಿಗಳಿಗೆ ದೃಢೀಕರಣ ಸಂದೇಶಗಳು ಬಂದಾಗಲೇ ತಮ್ಮನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಿರುವುದು ಅರಿವಾಗಿದೆ ಎಂದು ವರದಿಯಾಗಿದೆ.

“ಕಳೆದ ಭಾನುವಾರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಾಗಿ ನಾನು ರಾಜ್‌ಕೋಟ್‌ಗೆ ಹೋಗಿದ್ದೆ. ರಾತ್ರಿ 8 ಗಂಟೆ ಸುಮಾರಿಗೆ ನಿದ್ರೆಗೆ ಜಾರಿದ್ದೆ. ರಾತ್ರಿ 10:30-11 ಗಂಟೆಯ ಸುಮಾರಿಗೆ, ಯಾರೋ ನನ್ನನ್ನು ಎಬ್ಬಿಸಿದರು, ನನ್ನ ಮೊಬೈಲ್ ಸಂಖ್ಯೆಯನ್ನು ಕೇಳಿದರು. ಅವರು ಹೇಳಿದ್ದು ಆಸ್ಪತ್ರೆಗಾಗಿ ಇರಬೇಕು ಎಂದು ನಾನು ಭಾವಿಸಿದ್ದೆ. ಆದರೆ ನನಗೆ ತಿಳಿಯುವ ಮೊದಲು, ಅವರು ನನ್ನ ಫೋನ್ ತೆಗೆದುಕೊಂಡು, OTP ಯನ್ನು ಪಡೆದರು. ನಾನು ನನ್ನ ಫೋನ್ ಅನ್ನು ಮರಳಿ ಪಡೆದಾಗ, ನಾನು ಬಿಜೆಪಿ ಸದಸ್ಯನಾಗಿದ್ದೆ” ಎಂದು ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ಜುನಾಗಢದಿಂದ ತೆರಳಿದ್ದ ಕಮಲೇಶ್ ತುಮ್ಮರ್ ಆರೋಪಿಸಿದ್ದಾರೆ. ಗುಜರಾತ್

‘ನನ್ನನ್ನು ಬಿಜೆಪಿ ಸದಸ್ಯನನ್ನಾಗಿ ಮಾಡಿದ್ದೀಯಾ’ ಎಂದು ನಾನು ಅವರನ್ನು ಕೇಳಿದಾಗ, ಅವರು, ‘ಬೇರೆ ದಾರಿಯಿಲ್ಲ’ ಎಂದು ಉತ್ತರಿಸಿದ್ದರು. ಇದು ನಡೆಯಬಾರದು. ಆದರೆ ಅಲ್ಲಿದ್ದ  400 ಜನರಲ್ಲಿ, ಸುಮಾರು 200-250 ಜನರು ಬಿಜೆಪಿ ಸದಸ್ಯರಾಗಿದ್ದಾರೆ. ಅವರನ್ನು ಅವರಿಗೆ ತಿಳಿಯದಂತೆ ಬಲವಂತವಾಗಿ ಸದಸ್ಯತ್ವಕ್ಕೆ ಒಳಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಂಚೋದ್ದಾಸ್ ಚಾರಿಟೇಬಲ್ ಟ್ರಸ್ಟ್‌ನ ಶಾಂತಿ ವಡೋಲಿಯಾ ಹೇಳಿಕೆ ನೀಡಿದ್ದು, “ನಮ್ಮ ಟ್ರಸ್ಟ್ ಗುಜರಾತ್‌ನಾದ್ಯಂತ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಾಗಿ ರೋಗಿಗಳನ್ನು ಕರೆತರುತ್ತದೆ. ಅಕ್ಟೋಬರ್ 16 ರಂದು ನಾವು ಜುನಾಗಢ್‌ನಲ್ಲಿ ಶಿಬಿರವನ್ನು ನಡೆಸಿದ್ದೇವೆ, ಇದನ್ನು ಡಾ. ಚಿಖಾಲಿಯಾ ಅವರು ತ್ರಿಮೂರ್ತಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದರು. ರೋಗಿಗಳನ್ನು ನಂತರ ರಾಜ್‌ಕೋಟ್‌ಗೆ ಕರೆತರಲಾಯಿತು” ಎಂದು ಹೇಳಿದ್ದಾರೆ.

“ಈ ವಿಷಯ ಈಗಷ್ಟೇ ನಮ್ಮ ಗಮನಕ್ಕೆ ಬಂದಿದ್ದು, ತನಿಖೆ ನಡೆಯುತ್ತಿದೆ. ಟ್ರಸ್ಟ್‌ನ ಯಾವುದೇ ಸದಸ್ಯರು ಭಾಗಿಯಾಗಿರುವುದು ಕಂಡುಬಂದರೆ, ನಿಯಮಗಳ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ವಡೋಲಿಯಾ ಭರವಸೆ ನೀಡಿದ್ದಾರೆ.

ರಾಜ್‌ಕೋಟ್ ನಗರ ಬಿಜೆಪಿ ಅಧ್ಯಕ್ಷ ಮುಖೇಶ್ ದೋಷಿ ಮಾತನಾಡಿ, “ವೀಡಿಯೊದಲ್ಲಿ ಕಂಡುಬರುವ ವ್ಯಕ್ತಿಯನ್ನು ಗುರುತಿಸುವುದು ಸೇರಿದಂತೆ ಸಂಪೂರ್ಣ ವಿಷಯದ ಬಗ್ಗೆ ತನಿಖೆ ನಡೆಸುವಂತೆ ನಾನು ನನ್ನ ವಲಯ ಕಾರ್ಯದರ್ಶಿಗೆ ಆದೇಶಿಸಿದ್ದೇನೆ. ಮಲಗಿರುವ ರೋಗಿಗಳನ್ನು ಎಬ್ಬಿಸಲು ಮತ್ತು ಅವರನ್ನು ಸದಸ್ಯರನ್ನಾಗಿ ಮಾಡಲು ಯಾರಿಗೂ ಸೂಚನೆಗಳನ್ನು ನೀಡಲಾಗಿಲ್ಲ. ಇಂತಹ ಅತಿರೇಕದ ಕ್ರಮಗಳು ಸಹಿಸುವುದಿಲ್ಲ” ಎಂದು ಹೇಳಿದ್ದಾರೆ.

“ಎಲ್ಲಾ ನಗರ ಬಿಜೆಪಿ ಕಾರ್ಯಕರ್ತರು ಕಳೆದ 50 ದಿನಗಳ ಮಿತಿಯೊಳಗೆ ಇರುವಾಗ ತಮ್ಮ ಸದಸ್ಯತ್ವದ ಗುರಿಯನ್ನು ಮೀರಿದ್ದಾರೆ. ನಾನು ಈ ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ ಮತ್ತು ಸಂಪೂರ್ಣ ತನಿಖೆಗೆ ಭರವಸೆ ನೀಡುತ್ತೇನೆ. ಇದು ಬಿಜೆಪಿ ಮಾನಹಾನಿ ಮಾಡುವ ಪಿತೂರಿ ಎಂದು ಪರಿಗಣಿಸಿದ್ದೇವೆ” ದೋಷಿ ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ

‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...