Homeಅಂಕಣಗಳುಕರ್ತಾರ್‍ಪುರ್ ಕಾರಿಡಾರ್: ಭಾರತ-ಪಾಕ್ ನಡುವೆ ಸಿಖ್ ಧಾರ್ಮಿಕ ಸೇತು

ಕರ್ತಾರ್‍ಪುರ್ ಕಾರಿಡಾರ್: ಭಾರತ-ಪಾಕ್ ನಡುವೆ ಸಿಖ್ ಧಾರ್ಮಿಕ ಸೇತು

- Advertisement -
- Advertisement -

ಲೇಖಕರು: ಆರ್ತಿ ಗಾರ್ಗಿ |

28ನೇ ನವೆಂಬರ್, ಬುಧವಾರ. ‘ಜೋ ಬೋಲೆ ಸೊ ನಿಹಾಲ್, ಸತ್ ಸ್ರೀ ಅಕಾಲ್’ ಎಂಬ ಘೋಷಣೆಗಳೊಂದಿಗೆ ನೂರಾರು ಸಿಖ್ ಯಾತ್ರಿಕರು ಕರ್ತಾರಪುರದ ಪುಣ್ಯಕ್ಷೇತ್ರದೆಡೆಗೆ ಒಟ್ಟಿಗೆ ಹೆಜ್ಜೆ ಹಾಕುತ್ತಿದ್ದರು. ದೇಶವಿಭಜನೆಯ ನಂತರ ಮೊಟ್ಟಮೊದಲ ಬಾರಿ ಭಾರತದ ಸಿಖ್ಖರು (ಭಾರತದಲ್ಲಿರುವ) ಡೇರಾ ನಾನಕ್ ಸಾಹಿಬ್‍ದಿಂದ ಕೇವಲ ನಾಲ್ಕು ಕಿಲೋಮೀಟರ್ ದೂರದ, ಪಾಕಿಸ್ತಾನದ ಕರ್ತಾರಪುರ ಸಾಹಿಬ್ ಗುರುದ್ವಾರದೆಡೆಗೆ ಹೋಗುತ್ತಿದ್ದರು. ಫತೆಹ್‍ಗಢ್ ಚೂರಿಯಾ ಗ್ರಾಮದ 65 ವರ್ಷದ ಸಿಖ್ ವ್ಯಕ್ತಿ, ಭಾರತ-ಪಾಕಿಸ್ತಾನದ ಗಡಿಯನ್ನು ದಾಟಿದ ಮೊದಲ ಕೆಲವರಲ್ಲಿ ಒಬ್ಬರು, “ಕೊನೆಗೂ ಈ ಕರ್ತಾರಪುರ್ ಕಾರಿಡಾರ್‍ನ ಕನಸು ನನಸಾಯಿತು” ಎಂದು ಉತ್ಸಾಹದಿಂದ ಹೇಳಿದರು.
ಇಂತಹ ಅನೇಕ ಸಿಖ್ಖರಿಗೆ ಕರ್ತಾರಪುರ ಕ್ಷೇತ್ರ ಕಣ್ಣಳತೆಯಲ್ಲಿದ್ದರೂ ಕಳೆದ 70 ವರ್ಷಗಳಿಂದ ಒಂದು ದೂರದ ಕನಸಾಗಿಯೇ ಉಳಿದಿತ್ತು. ಬುಧವಾರದಂದು, ಇವರೆಲ್ಲರ ನಿರೀಕ್ಷೆ ಸುಖಾಂತ್ಯ ಕಂಡಿತು.
ಕರ್ತಾರಪುರ್ ಸಾಹಿಬ್, ಏನಿದರ ಕತೆ?
ಜಗತ್ತಿನಾದ್ಯಂತ ಇರುವ ಸಿಖ್ಖರಿಗೆ ಕರ್ತಾರಪುರ್ ಸಾಹಿಬ್ ಗುರುದ್ವಾರ ಭಾರಿ ಪ್ರಾಮುಖ್ಯತೆ ಹೊಂದಿದ ಕ್ಷೇತ್ರವಾಗಿದೆ. ಧರ್ಮಗುರು ಗುರುನಾನಕ್ ಅವರು ತಮ್ಮ ಮೂರು ದಶಕಗಳ ಸುದೀರ್ಘ ತೀರ್ಥಯಾತ್ರೆಯ ನಂತರ ಇದೇ ಜಾಗದಲ್ಲಿ ನೆಲೆಸುವ ನಿರ್ಣಯ ತೆಗೆದುಕೊಂಡಿದ್ದರು. ಇಲ್ಲಿಯೇ ಗುರು ನಾನಕ್ ಅವರು ಕೃಷಿ ಮಾಡುತ್ತ, ಶಾಂತಿಯ ಸಂದೇಶವನ್ನು ಹರಡುತ್ತ ತಮ್ಮ ಕೊನೆಯ ದಿನಗಳನ್ನು ಕಳೆದಿದ್ದು ಎಂದು ನಂಬಲಾಗುತ್ತದೆ. ಇಲ್ಲಿ ಅವರು ತಮ್ಮ ಸಾವಿಗಿಂತ ಮುಂಚೆ 17 ವರ್ಷಗಳನ್ನು ಕಳೆದು, ತಮ್ಮ ಶಿಷ್ಯನಾದ ಭಾಯಿ ಲೆಹ್ನಾ (ಗುರು ಅಂಗದ್) ಅವರನ್ನು ಮುಂದಿನ ಗುರುವಾಗಿ ನೇಮಿಸಿದರು. 1947 ರಲ್ಲಿ ದೇಶವಿಭಜನೆಯಾಗಿ, ಕರ್ತಾರಪುರ ಸಾಹಿಬ್ ಗುರುದ್ವಾರ ಪಾಕಿಸ್ತಾನಕ್ಕೆ ಸೇರಿತು. ಸದ್ಯಕ್ಕೆ ಅಟ್ಟಾರಿ-ವಾಘಾ ಗಡಿಯ ಪಕ್ಕದ ನರೋವಾಲ್ ನಗರದಲ್ಲಿ ಸ್ಥಿತವಾಗಿದೆ.
ಒಬ್ಬರೇ ನಾನಕರಿಗೆ ಒಂದು ಸಮಾಧಿ, ಒಂದು ಗೋರಿ
ಕರ್ತಾರಪುರ ಸಾಹಿಬ್‍ನ ಮುಖ್ಯ ಸಮುಚ್ಚಯ ಗುರು ನಾನಕ್ ಅವರ ಒಂದು ಸಮಾಧಿ ಹಾಗೂ ಒಂದು ಗೋರಿಯನ್ನು ಹೊಂದಿದೆ. ಅದರ ಹಿಂದಿನ ಜನಪದ ಕಥೆ ಇಂತಿದೆ.
ಗುರು ನಾನಕ್ ಅವರ ಸಾವಿನ ನಂತರ ಅವರ ಅಂತ್ಯಕ್ರಿಯೆಯ ವಿಷಯವಾಗಿ, ಅವರ ಹಿಂದೂ ಮತ್ತು ಮುಸ್ಲಿಮ್ ಭಕ್ತರ ನಡುವೆ ವಾಗ್ವಾದ ಶುರುವಾಯಿತು. ಹಿಂದೂ ಭಕ್ತರು ಅವರನ್ನು ದಹನ ಮಾಡಬೇಕು ಎಂದು ಪಟ್ಟುಹಿಡಿದರೆ, ಮುಸ್ಲಿಮರು ಹೂಳಬೇಕೆಂದರು. ವಾದ ವಿವಾದದಲ್ಲಿ ಮಧ್ಯರಾತ್ರಿಯಾದಾಗ, ಮಾರನೇ ದಿನ ಇದನ್ನು ಬಗೆಹರಿಸುವ ಎಂದು ಎರಡೂ ಗುಂಪುಗಳು ನಿರ್ಣಯಿಸಿ ಮಲಗಿದವು. ಆದರೆ, ಬೆಳಗ್ಗೆ ಎದ್ದಾಗ ಅವರಿಗೆ ಕಂಡಿದ್ದು, ಗುರು ನಾನಕ್ ಅವರ ದೇಹವಿಟ್ಟಿದ್ದ ಜಾಗದಲ್ಲಿ ಒಂದು ಹೂವಿನ ದೊಡ್ಡ ರಾಶಿ. ಆಗಲೂ ಒಮ್ಮತಕ್ಕೆ ಬರಲಾಗದ್ದರಿಂದ, ಆ ಹೂವಿನ ರಾಶಿಯನ್ನು ಎರಡೂ ಗುಂಪುಗಳಿಗೆ ವಿಂಗಡಿಸಲಾಯಿತು. ಮುಸ್ಲಿಮ್ ಭಕ್ತಾದಿಗಳು ಅವರಿಗನುಗುಣವಾಗಿ ಅಂತ್ಯಕ್ರಿಯೆ ಮಾಡಿದರೆ, ಹಿಂದೂಗಳು ತಮಗನುಗುಣವಾಗಿ ಮಾಡಿದರು. ಹಾಗಾಗಿ, ಕರ್ತಾರಪುರ್ ಸಾಹಿಬ್‍ನಲ್ಲಿ ಒಂದು ಸಮಾಧಿ ಮತ್ತೊಂದು ಗೋರಿ ಎರಡೂ ಇವೆ.
ಭಾರತ-ಪಾಕಿಸ್ತಾನದ ಗಡಿಯಿಂದ ಬರೀ 1 ಕಿಲೋಮೀಟರ್ ದೂರದಲ್ಲಿರುವ ಪಂಜಾಬಿನ ಡೇರಾ ಬಾಬಾ ನಾನಕ್‍ದಿಂದ ಯಾತ್ರೆ ಪ್ರಾರಂಭವಾಗುತ್ತದೆ. 4-5 ಕಿಲೋಮೋಟರ್ ದೂರದಿಂದ, ಗಡಿಯಲ್ಲಿ ನಿಂತು ಕರ್ತಾರಪುರ್ ಸಾಹಿಬ್ ಸಮುಚ್ಚಯವನ್ನು ಬರಿಗಣ್ಣಿನಿಂದ ನೋಡಬಹದು. ದೇಶವಿಭಜನೆಯ ನಂತರ ಯಾತ್ರಿಗಳು ಬೈನಾಕ್ಯುಲರ್ ಬಳಸಿ ದರ್ಶನ ಪಡೆಯುತ್ತಿದ್ದರು.
ತಮ್ಮ ಅತ್ಯಂತ ಪವಿತ್ರ ಕ್ಷೇತ್ರವು ಗಡಿಯ ಕಾರಣದಿಂದಾಗಿ ಬೇರ್ಪಟ್ಟಿರುವುದು ಸಿಖ್ ಯಾತ್ರಿಗಳಿಗೆ ಒಂದು ನೋವಿನ ವಿಷಯವಾಗಿತ್ತು. ಆದರೆ, ಈ ಸಮಸ್ಯೆಯನ್ನು ಬಗೆಹರಿಸಲು ಎರಡೂ ದೇಶಗಳಿಗೆ ಇಷ್ಟು ದೀರ್ಘ ಸಮಯ ಏಕೆ ಹಿಡಿಯಿತು?
ಇಂದಿರಾ ಗಾಂಧಿಯಿಂದ ಅಟಲ್ ಬಿಹಾರಿ ವಾಜಪೇಯಿವರೆಗೆ
ಒಂದು ತಿಂಗಳ ಹಿಂದೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಔಪಚಾರಿಕವಾಗಿ ಘೋಷಿಸಿದ ಈ ಕರ್ತಾರಪುರ್ ಕಾರಿಡಾರ್ ಅನ್ನು ಈ ಹಿಂದೆ ಪ್ರಸ್ತಾಪಿಸಿದ್ದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ. ಉಭಯದೇಶಗಳ ನಡುವಿನ ಐತಿಹಾಸಿಕ ಬಸ್ ಡಿಪ್ಲೊಮಸಿಯ ಸಂದರ್ಭದಲ್ಲಿ ಇದನ್ನು ಹೇಳಿದ್ದರು. ಪಾಕಿಸ್ತಾನವೂ ವಿಸಾ ಅಥವಾ ಪಾಸ್‍ಪೋರ್ಟ್ ಇಲ್ಲದೇ ಯಾತ್ರಿಗಳಿಗೆ ಈ ಕ್ಷೇತ್ರಕ್ಕೆ ಭೇಟಿ ನೀಡಲು ಒಂದು ಸೇತುವೆಯನ್ನು ನಿರ್ಮಿಸಲು ಒಪ್ಪಿಕೊಂಡಿತ್ತು. ಆದರೆ, ಎರಡೂ ದೇಶಗಳ ನಡುವಿನ ಶಾಂತಿ ಹೆಚ್ಚುಕಾಲ ಉಳಿಯಲಿಲ್ಲ. ಗಡಿಪ್ರದೇಶದಲ್ಲಾದ ಚಟುವಟಿಕೆಗಳಿಂದ ಕಾರ್ಗಿಲ್ ಯುದ್ಧವೇ ಆಯಿತು. ಈ ಬೆಳವಣಿಗೆ ಕಾರಿಡಾರ್‍ನ ಮಾತುಕತೆಗಳನ್ನು ಕೊನೆಗಾಣಿಸಿತು. ವಾಜಪೇಯಿ ಅವರ ಶಾಂತಿ ಉಪಕ್ರಮದ ಅಂಗವಾಗಿ ಮಾಡಿದ ಲಾಹೋರ್ ಪ್ರಯಾಣದಲ್ಲಿ ಕರ್ತಾರಪುರ್ ಕಾರಿಡಾರಿನ ಮೊದಲ ಪ್ರಸ್ತಾಪ ಸಿಗುತ್ತಾದರೂ, 1869 ರಲ್ಲೇ ಈ ವಿಷಯ ಭಾರತೀಯ ಸರಕಾರದ ಗಮನ ಸೆಳೆದಿತ್ತು.
1969 ಗುರು ನಾನಕ್ ಅವರ 500 ನೇ ಜನ್ಮಶತಾಬ್ದಿಯ ವರ್ಷವಾಗಿತ್ತು. ಅದರ ಸಂಭ್ರಮಾಚರಣೆಯ ಸಮಯದಲ್ಲಿ, ಅಂದಿನ ಪ್ರಧಾನಿಯವರು ಪಂಜಾಬ್ ಸರಕಾರಕ್ಕೆ ಆಶ್ವಾಸನೆಯೊಂದನ್ನು ನೀಡಿದ್ದರು. ಕರ್ತಾರಪುರ್ ಸಾಹಿಬ್‍ಗೆ ಪ್ರವೇಶ ಸಿಗುವಂತೆ ಪಾಕಿಸ್ತಾನದೊಂದಿಗೆ ಭೂವಿನಿಮಯ ಮಾಡಿಕೊಳ್ಳುವುದಾಗಿ ನುಡಿದಿದ್ದರು. ಕರ್ತಾರಪುರ್ ಸಾಹಿಬ್‍ಗಾಗಿ ಅದರ ಪಕ್ಕದ ಭಾರತೀಯ ಭೂಭಾಗದೊಂದಿಗೆ ವಿನಿಮಯ ಮಾಡಿಕೊಳ್ಳಲು ಪಾಕಿಸ್ತಾನದೊಂದಿಗೆ ಮಾತುಕತೆ ಮಾಡುವುದಾಗಿ ಇಂದಿರಾ ಗಾಂಧಿ ಹೇಳಿದ್ದರು. ಭಾರತದಲ್ಲಿಯ ನಂಕಾನಾ ಸಾಹಿಬ್‍ಗೆ ಪಾಕಿಸ್ತಾನದ ಯಾತ್ರಿಗಳಿಗೆ ಉಚಿತ ವೀಸಾ ನೀಡುವುದಾಗಿಯೂ ಅವರು ಹೇಳಿದ್ದರು. ಆದರೆ, ಈ ಆಶ್ವಾಸನೆಯ ತದನಂತರ ನಡೆದ ಭಾರತ-ಪಾಕಿಸ್ತಾನ್ ಯುದ್ಧ, ಬಾಂಗ್ಲಾದೇಶದ ಸೃಷ್ಟಿ, ಇವೆಲ್ಲ ಕಾರಣದಿಂದ ಕಾರಿಡಾರ್ ವಿಷಯ ಸ್ಮøತಿಪಟಲದಿಂದ ಅಳಿಸಿಹೋಯಿತು.
ಕರ್ತಾರಪುರ್ ಸಾಹಿಬ್ ಕ್ಷೇತ್ರಕ್ಕೆ ಪ್ರವೇಶವನ್ನು ಗಂಭೀರವಾಗಿ ಪರಿಗಣಿಸಿದ ಎರಡೂ ಸಂದರ್ಭಗಳಲ್ಲಿ, ಗಡಿಪ್ರದೇಶದಲ್ಲಿ ಹಿಂಸಾಚರಣೆ ಪ್ರಾರಂಭವಾಗಿ ಉಭಯದೇಶಗಳ ಸಂಬಂಧ ಹದಗೆಟ್ಟವು.
ಬುಧವಾರ, 28 ನವೆಂಬರ್‍ದಂದು ಶಾಂತಿಯ ಸಂದೇಶವನ್ನು ನೀಡುತ್ತ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದು “ನೀವು ಒಂದು ಹೆಜ್ಜೆಯಿಟ್ಟಲ್ಲಿ, ನಾವು ಎರಡು ಹೆಜ್ಜೆಯನ್ನಿಡುತ್ತೇವೆ”. ಅದಕ್ಕಿಂತ ಮುಂಚೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೂ ಈ ಹೆಜ್ಜೆಗೆ ತಮ್ಮ ಬೆಂಬಲ ನೀಡಿದ್ದರು. ಈ ಕರ್ತಾರಪುರ್ ಕಾರಿಡಾರ್ ಭಾರತ ಮತ್ತು ಪಾಕಿಸ್ತಾನ್ ನಡುವೆಯ ‘ಬರ್ಲಿನ್ ಗೋಡೆ’ ಯಾಗಿ ಪರಿವರ್ತನೆಯಾಗುವ ಸಾಧ್ಯತೆಯನ್ನೂ ಪ್ರಸ್ತಾಪಿಸಿದ್ದರು. ‘ಬರ್ಲಿನ್ ಗೋಡೆ ಧ್ವಂಸವಾಗುವುದು ಎಂದು ಯಾರು ನಂಬಿದ್ದರು? ಗುರು ನಾನಕ್ ಅವರ ಆಶೀರ್ವಾದದೊಂದಿಗೆ, ಈ ಕರ್ತಾರಪುರ್ ಕಾರಿಡಾರ್ ಗಡಿಗಳಾಚೆಯ ಜನರನ್ನು ಬೆಸೆಯುವ ಮಾಧ್ಯಮವಾಗಬಲ್ಲದು”. ಎಂದು ಮೋದಿ ಹೇಳಿದ್ದರು.
ಕೇಂದ್ರೀಯ ಸಚಿವೆ ಹರಸಿಮ್ರತ್ ಕೌರ್ ಅವರು ಕರ್ತಾರಪುರ್ ಕಾರಿಡಾರ್ ಉದ್ಘಾಟನೆಯ ಸಮಯದಲ್ಲಿ ಪ್ರಧಾನಮಂತ್ರಿಯ ಸಂದೇಶವನ್ನು ಒತ್ತಿಹೇಳುವಾಗಲೇ, ವಿದೇಶಾಂಗ ಸಚಿವೆ ಉಭಯ ದೇಶಗಳ ಮಧ್ಯೆ ಮಾತುಕತೆಗೆ ಇದೊಂದೇ ಕಾರಣವಾಗಲಾರದು ಎಂದರು. ಇನ್ನೂ ಕೆಲವರು, ಈ ಕಾರಿಡಾರ್‍ನಿಂದಾಗಿ ಖಾಲಿಸ್ತಾನಿ ಅಪಾಯ ಹಿಂದಿರುಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದಾರೆ.
ಈಗ ಹಳಿತಪ್ಪಿದ ಭಾರತ-ಪಾಕಿಸ್ತಾನದ ಮಾತುಕತೆಗಳನ್ನು ಮತ್ತೆ ಸರಿದಾರಿಗೆ ತರುವಲ್ಲಿ ಈ ಕಾರಿಡಾರ್ ಅದೃಷ್ಟಸೂಚಕವಾಗಿ ಪರಿಣಮಿಸಬಲ್ಲದೋ ಇಲ್ಲವೋ ಎನ್ನುವುದನ್ನು ಎರಡೂ ದೇಶದ ಸರಕಾರಗಳು ನಿರ್ಣಯಿಸಬೇಕಿದೆ. ಆದರೆ, ಒಂದಂತೂ ಸ್ಪಷ್ಟ, ಇಬ್ಭಾಗವಾಗಿರುವ ಎರಡೂ ದೇಶಗಳನ್ನು ಬೆಸೆಯುವುದರಲ್ಲಿ ಧರ್ಮ ಒಂದು ಸಾಧ್ಯತೆಯನ್ನು ಹುಟ್ಟುಹಾಕಬಹುದು ಎನ್ನುವುದನ್ನು ಈ ಕರ್ತಾರಪುರ್ ಕಾರಿಡಾರ್ ತೋರಿಸಿಕೊಟ್ಟಿದೆ.

ಕೃಪೆ: ಎಚ್‍ಡಬ್ಲ್ಯು ನ್ಯೂಸ್
ಕನ್ನಡಕ್ಕೆ: ರಾಜಶೇಖರ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...