Homeಮುಖಪುಟ'ಭಾರತೀಯ' ಎಂದು ಘೋಷಿಸಲ್ಪಟ್ಟು ನಂತರ 'ವಿದೇಶಿ' ಎಂದು ಬಂಧಿಸಲ್ಪಟ್ಟ ಮಹಿಳೆಯ ಬಿಡುಗಡೆಗೆ ಗುವಾಹಟಿ ಹೈಕೋರ್ಟ್ ಆದೇಶ

‘ಭಾರತೀಯ’ ಎಂದು ಘೋಷಿಸಲ್ಪಟ್ಟು ನಂತರ ‘ವಿದೇಶಿ’ ಎಂದು ಬಂಧಿಸಲ್ಪಟ್ಟ ಮಹಿಳೆಯ ಬಿಡುಗಡೆಗೆ ಗುವಾಹಟಿ ಹೈಕೋರ್ಟ್ ಆದೇಶ

- Advertisement -
- Advertisement -

ವಿದೇಶಿಯರ ನ್ಯಾಯಮಂಡಳಿ (ಎಫ್‌ಟಿ)ಯು 2016 ರಲ್ಲಿ ‘ಭಾರತೀಯ’ ಎಂದು ಘೋಷಿಸಿ ನಂತರ, 2021 ರಲ್ಲಿ ‘ವಿದೇಶಿ’ ಎಂದು ಘೋಷಿಸಿದ್ದ 55 ವರ್ಷದ ಅಸ್ಸಾಂ ನಿವಾಸಿ ಹಸೀನಾ ಭಾನು ಅವರನ್ನು ಬಿಡುಗಡೆಗೊಳಿಸುವಂತೆ ಗುವಾಹಟಿ ಹೈಕೋರ್ಟ್‌ ಮಧ್ಯಪ್ರವೇಶಿಸಿ ಆದೇಶ ನೀಡಿದೆ.

ಹಸೀನಾ ಭಾನು, ಅಸ್ಸಾಂನ ದರ್ರಾಂಗ್ ನಿವಾಸಿಯಾಗಿದ್ದು, ಎಫ್‌ಟಿಯು ಅಕ್ಟೋಬರ್‌ ತಿಂಗಳಲ್ಲಿ ವಿದೇಶಿಯೆಂದು ಘೋಷಿಸಿತ್ತು. ಇದರ ನಂತರ ಅವರನ್ನು ತೇಜ್‌ಪುರ ಬಂಧನ ಶಿಬಿರದಲ್ಲಿ ಇರಿಸಲಾಗಿತ್ತು. ಈ ವೇಳೆ ಅವರು, 2016 ರಲ್ಲಿ ಎಫ್‌ಟಿಯು ತನ್ನನ್ನು ವಿದೇಶಿ ಅಥವಾ ಅಕ್ರಮ ವಲಸಿಗ ಅಲ್ಲ ಎಂದು ಘೋಷಿಸಿದ್ದನ್ನು ಉಲ್ಲೇಖಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ಇದನ್ನೂ ಓದಿ:ಕಳೆದ 5 ವರ್ಷಗಳಲ್ಲಿ ಭಾರತದ ಪೌರತ್ವ ಪಡೆದವರಿಗಿಂತ ತ್ಯಜಿಸಿದವರು 56 ಪಟ್ಟು ಜಾಸ್ತಿ!

ಅಸ್ಸಾಂನ ಮಾಂಗ್ಲೋದೊಯ್‌‌ನಲ್ಲಿರುವ 1 ನೇ ಎಫ್‌ಟಿಯು 2016ರ ಆಗಸ್ಟ್ ತಿಂಗಳಲ್ಲಿ, “ಹಸೀನಾ ಭಾನು ವಿದೇಶಿ ಅಥವಾ ಅಕ್ರಮ ವಲಸಿಗ” ಅಲ್ಲ ಎಂದು ಘೋಷಿಸಿತ್ತು. ಆದಾಗ್ಯೂ, 2017ರಲ್ಲಿ ಆಕೆ ಬಾಂಗ್ಲಾದೇಶಿ ಪ್ರಜೆಯೆಂದು ಶಂಕಿಸಿ ಅಸ್ಸಾಂ ಬಾರ್ಡರ್ ಪೋಲೀಸರು ಉಲ್ಲೇಖಿಸಿದ ನಂತರ ಅದೇ ಎಫ್‌ಟಿಯಲ್ಲಿ ಆಕೆಯ ವಿರುದ್ಧ ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿತ್ತು.

2021 ಮಾರ್ಚ್‌ ತಿಂಗಳಲ್ಲಿ ನ್ಯಾಯಮಂಡಳಿಯು ಆಕೆಯನ್ನು “ವಿದೇಶಿ” ಎಂದು ಘೋಷಿಸುವ ಅಭಿಪ್ರಾಯವನ್ನು ಅಂಗೀಕರಿಸಿತ್ತು. ಇದರ ನಂತರ ಆಕೆಯನ್ನು ಬಂಧಿಸಿ ಅಕ್ಟೋಬರ್‌ನಲ್ಲಿ ತೇಜ್‌ಪುರ ಜೈಲಿನಲ್ಲಿ ಬಂಧನ ಶಿಬಿರದಲ್ಲಿ ಇರಿಸಲಾಗಿತ್ತು.

ಗುವಾಹತ್‌ ಹೈಕೋರ್ಟ್‌ ಸೋಮವಾರದಂದು ವಿದೇಶಿಯರ ನ್ಯಾಯಮಂಡಳಿಯ 2021 ರ ಅಭಿಪ್ರಾಯವನ್ನು ಬದಿಗಿಟ್ಟು, “ಎಫ್‌‌ಟಿಯ ಎರಡೂ ತೀರ್ಪುಗಳಲ್ಲಿ ಅರ್ಜಿದಾರರ ಗುರುತು ಒಂದೇ ಆಗಿರುತ್ತದೆ ಮತ್ತು ಒಂದೇ ವ್ಯಕ್ತಿಗೆ ಸಂಬಂಧಿಸಿದಂತೆ ಎರಡನೇ ಆಕ್ಷೇಪಾರ್ಹ ಅಭಿಪ್ರಾಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ:ಮುಸ್ಲಿಮೇತರ ನಿರಾಶ್ರಿತರಿಂದ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿದ ಕೇಂದ್ರ ಸರ್ಕಾರ

2019 ರ ಸುಪ್ರೀಂ ಕೋರ್ಟ್ ತೀರ್ಪನ್ನೂ ಉಲ್ಲೇಖಿಸಿದ [ಅಬ್ದುಲ್ ಕುದ್ದೂಸ್ Vs. ಯೂನಿಯನ್ ಆಫ್ ಇಂಡಿಯಾ, (2019) 6 SCC 604] ಹೈಕೋರ್ಟ್‌, “ರೆಸ್ ಜುಡಿಕಟ ತತ್ವವು ಒಮ್ಮೆ ತೀರ್ಪು ನೀಡಿದ ನಂತರ ಅದೇ ಜನರು ಅದೇ ಸಮಸ್ಯೆಯನ್ನು ಪುನಃ ತೆರೆಯುವುದನ್ನು ತಡೆಯುತ್ತದೆ. ಈ ತತ್ವ ವಿದೇಶಿಯರ ನ್ಯಾಯಮಂಡಳಿಯ ಮುಂದೆ ನಡೆಯುವ ಪ್ರಕ್ರಿಯೆಯಲ್ಲಿಯೂ ಸಹ ಅನ್ವಯಿಸುತ್ತದೆ” ಎಂದು ಹೇಳಿದೆ.

“ವಿದೇಶಿಯರ ನ್ಯಾಯಮಂಡಳಿಯು ಈ ವಿಷಯವನ್ನು ಹೇಗೆ ಪರಿಶೀಲಿಸಿತು ಮತ್ತು ಮೇಲೆ ಹೇಳಿದ ಅವಲೋಕನವನ್ನು ಹೇಗೆ ಮಾಡಿದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಎನ್ ಕೋಟೀಶ್ವರ್ ಸಿಂಗ್ ಮತ್ತು ಮಾಲಾಶ್ರೀ ನಂದಿ ಅವರ ಪೀಠವು ಹೇಳಿದ್ದು, ಹೆಚ್ಚಿನ ದಾಖಲೆಗಳನ್ನು ಕೇಳದೆ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚಿಸಿದೆ.

ಸೋಮವಾರ ನ್ಯಾಯಾಲಯದ ನಿರ್ದೇಶನದ ನಂತರ ಹಸೀನಾ ಭಾನು ಅವರನ್ನು ಬಿಡುಗಡೆ ಆದೇಶವನ್ನು ಅನುಮೋದಿಸಿದ್ದಾಗಿ ದರ್ರಾಂಗ್ ಎಸ್ಪಿ ಸುಶಾಂತ ಬಿಸ್ವಾ ಶರ್ಮಾ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದ ಅರ್ಜಿದಾರನಿಗೆ 25 ಸಾವಿರ ದಂಡ!

ಹಸೀನಾ ಭಾನು ಅವರನ್ನು ಗುರುವಾರದಂದು ತೇಜ್‌ಪುರ ಜೈಲಿನಿಂದ (ದರ್ಂಗ್‌ನಿಂದ ಸುಮಾರು 100 ಕಿಮೀ ದೂರ) ಕರೆದುಕೊಂಡು ಹೋಗುವುದಾಗಿ ಕುಟುಂಬಸ್ಥರು ತಿಳಿಸಿದ್ದರು.

“ನಮಗೆ ಈಗ ಸಮಾಧಾನವಾಗಿದೆ. ಅವರನ್ನು ಈಗಾಗಲೇ 2016 ರಲ್ಲಿ ಭಾರತೀಯ ಎಂದು ಘೋಷಿಸಲಾಗಿತ್ತು. ಆದರೆ ಅದೇ ನ್ಯಾಯಾಲಯವು 2019 ರಲ್ಲಿ ಅವರ ಮೇಲೆ ಮತ್ತೊಂದು ವಿದೇಶಿ ಪ್ರಕರಣವನ್ನು ಹಾಕಿ…ನಮ್ಮನ್ನು ಓಡಾಡುವಂತೆ ಮಾಡಿತು. ಇದರಿಂದಾಗಿ ಸಾಕಷ್ಟು ಹಣವು ಖರ್ಚಾಗಿದ್ದು, ನಮಗೆ ಕಿರುಕುಳವು ಆಯಿತು. ನ್ಯಾಯ ನೀಡಿದ್ದಕ್ಕಾಗಿ ನಾವು ಗುವಾಹಟಿ ಹೈಕೋರ್ಟ್‌ಗೆ ಕೃತಜ್ಞರಾಗಿರುತ್ತೇವೆ” ಎಂದು ಹಸಿನಾ ಭಾನು ಅವರ ಸೋದರ ಅಕ್ರಂ ಹುಸೇನ್ ಹೇಳಿದ್ದಾರೆ.

“ಹಸೀನಾ ಭಾನು ಬಡ ರೈತ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ಎಲ್ಲಾ ದಾಖಲೆಗಳು ಕ್ರಮಬದ್ಧವಾಗಿವೆ” ಎಂದು ಹಸೀನಾ ಭಾನು ಅವರ ವಕೀಲ ಜಾಕಿರ್ ಹುಸೇನ್ ಹೇಳಿದ್ದಾರೆ.

ಅಸ್ಸಾಂನಲ್ಲಿ ಪೌರತ್ವ ಪ್ರಕರಣಗಳಲ್ಲಿ ಕೆಲಸ ಮಾಡುತ್ತಿರುವ ವಕೀಲಾಗಿರುವ ಜಾಕಿರ್‌ ಹುಸೇನ್‌, “ಈ ತೀರ್ಪು ಬಹಳ ಮಹತ್ವದ್ದಾಗಿದೆ. ಯಾಕೆಂದರೆ ವಿದೇಶಿಯರ ನ್ಯಾಯಮಂಡಳಿಗಳು ಈ ಹಿಂದೆ ‘ಭಾರತೀಯ’ ಎಂದು ಘೋಷಿಸಿದ ಅದೇ ವ್ಯಕ್ತಿಗಳ ವಿರುದ್ಧ ವಿಚಾರಣೆಯನ್ನು ಪ್ರಾರಂಭಿಸುವುದು ಸಾಮಾನ್ಯವಾಗಿದೆ. ಇದರ ವಿರುದ್ದ ಈ ತೀರ್ಪು ಉತ್ತಮ ನಿದರ್ಶನವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....