Homeಮುಖಪುಟ'ಭಾರತೀಯ' ಎಂದು ಘೋಷಿಸಲ್ಪಟ್ಟು ನಂತರ 'ವಿದೇಶಿ' ಎಂದು ಬಂಧಿಸಲ್ಪಟ್ಟ ಮಹಿಳೆಯ ಬಿಡುಗಡೆಗೆ ಗುವಾಹಟಿ ಹೈಕೋರ್ಟ್ ಆದೇಶ

‘ಭಾರತೀಯ’ ಎಂದು ಘೋಷಿಸಲ್ಪಟ್ಟು ನಂತರ ‘ವಿದೇಶಿ’ ಎಂದು ಬಂಧಿಸಲ್ಪಟ್ಟ ಮಹಿಳೆಯ ಬಿಡುಗಡೆಗೆ ಗುವಾಹಟಿ ಹೈಕೋರ್ಟ್ ಆದೇಶ

- Advertisement -
- Advertisement -

ವಿದೇಶಿಯರ ನ್ಯಾಯಮಂಡಳಿ (ಎಫ್‌ಟಿ)ಯು 2016 ರಲ್ಲಿ ‘ಭಾರತೀಯ’ ಎಂದು ಘೋಷಿಸಿ ನಂತರ, 2021 ರಲ್ಲಿ ‘ವಿದೇಶಿ’ ಎಂದು ಘೋಷಿಸಿದ್ದ 55 ವರ್ಷದ ಅಸ್ಸಾಂ ನಿವಾಸಿ ಹಸೀನಾ ಭಾನು ಅವರನ್ನು ಬಿಡುಗಡೆಗೊಳಿಸುವಂತೆ ಗುವಾಹಟಿ ಹೈಕೋರ್ಟ್‌ ಮಧ್ಯಪ್ರವೇಶಿಸಿ ಆದೇಶ ನೀಡಿದೆ.

ಹಸೀನಾ ಭಾನು, ಅಸ್ಸಾಂನ ದರ್ರಾಂಗ್ ನಿವಾಸಿಯಾಗಿದ್ದು, ಎಫ್‌ಟಿಯು ಅಕ್ಟೋಬರ್‌ ತಿಂಗಳಲ್ಲಿ ವಿದೇಶಿಯೆಂದು ಘೋಷಿಸಿತ್ತು. ಇದರ ನಂತರ ಅವರನ್ನು ತೇಜ್‌ಪುರ ಬಂಧನ ಶಿಬಿರದಲ್ಲಿ ಇರಿಸಲಾಗಿತ್ತು. ಈ ವೇಳೆ ಅವರು, 2016 ರಲ್ಲಿ ಎಫ್‌ಟಿಯು ತನ್ನನ್ನು ವಿದೇಶಿ ಅಥವಾ ಅಕ್ರಮ ವಲಸಿಗ ಅಲ್ಲ ಎಂದು ಘೋಷಿಸಿದ್ದನ್ನು ಉಲ್ಲೇಖಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ಇದನ್ನೂ ಓದಿ:ಕಳೆದ 5 ವರ್ಷಗಳಲ್ಲಿ ಭಾರತದ ಪೌರತ್ವ ಪಡೆದವರಿಗಿಂತ ತ್ಯಜಿಸಿದವರು 56 ಪಟ್ಟು ಜಾಸ್ತಿ!

ಅಸ್ಸಾಂನ ಮಾಂಗ್ಲೋದೊಯ್‌‌ನಲ್ಲಿರುವ 1 ನೇ ಎಫ್‌ಟಿಯು 2016ರ ಆಗಸ್ಟ್ ತಿಂಗಳಲ್ಲಿ, “ಹಸೀನಾ ಭಾನು ವಿದೇಶಿ ಅಥವಾ ಅಕ್ರಮ ವಲಸಿಗ” ಅಲ್ಲ ಎಂದು ಘೋಷಿಸಿತ್ತು. ಆದಾಗ್ಯೂ, 2017ರಲ್ಲಿ ಆಕೆ ಬಾಂಗ್ಲಾದೇಶಿ ಪ್ರಜೆಯೆಂದು ಶಂಕಿಸಿ ಅಸ್ಸಾಂ ಬಾರ್ಡರ್ ಪೋಲೀಸರು ಉಲ್ಲೇಖಿಸಿದ ನಂತರ ಅದೇ ಎಫ್‌ಟಿಯಲ್ಲಿ ಆಕೆಯ ವಿರುದ್ಧ ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿತ್ತು.

2021 ಮಾರ್ಚ್‌ ತಿಂಗಳಲ್ಲಿ ನ್ಯಾಯಮಂಡಳಿಯು ಆಕೆಯನ್ನು “ವಿದೇಶಿ” ಎಂದು ಘೋಷಿಸುವ ಅಭಿಪ್ರಾಯವನ್ನು ಅಂಗೀಕರಿಸಿತ್ತು. ಇದರ ನಂತರ ಆಕೆಯನ್ನು ಬಂಧಿಸಿ ಅಕ್ಟೋಬರ್‌ನಲ್ಲಿ ತೇಜ್‌ಪುರ ಜೈಲಿನಲ್ಲಿ ಬಂಧನ ಶಿಬಿರದಲ್ಲಿ ಇರಿಸಲಾಗಿತ್ತು.

ಗುವಾಹತ್‌ ಹೈಕೋರ್ಟ್‌ ಸೋಮವಾರದಂದು ವಿದೇಶಿಯರ ನ್ಯಾಯಮಂಡಳಿಯ 2021 ರ ಅಭಿಪ್ರಾಯವನ್ನು ಬದಿಗಿಟ್ಟು, “ಎಫ್‌‌ಟಿಯ ಎರಡೂ ತೀರ್ಪುಗಳಲ್ಲಿ ಅರ್ಜಿದಾರರ ಗುರುತು ಒಂದೇ ಆಗಿರುತ್ತದೆ ಮತ್ತು ಒಂದೇ ವ್ಯಕ್ತಿಗೆ ಸಂಬಂಧಿಸಿದಂತೆ ಎರಡನೇ ಆಕ್ಷೇಪಾರ್ಹ ಅಭಿಪ್ರಾಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ:ಮುಸ್ಲಿಮೇತರ ನಿರಾಶ್ರಿತರಿಂದ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿದ ಕೇಂದ್ರ ಸರ್ಕಾರ

2019 ರ ಸುಪ್ರೀಂ ಕೋರ್ಟ್ ತೀರ್ಪನ್ನೂ ಉಲ್ಲೇಖಿಸಿದ [ಅಬ್ದುಲ್ ಕುದ್ದೂಸ್ Vs. ಯೂನಿಯನ್ ಆಫ್ ಇಂಡಿಯಾ, (2019) 6 SCC 604] ಹೈಕೋರ್ಟ್‌, “ರೆಸ್ ಜುಡಿಕಟ ತತ್ವವು ಒಮ್ಮೆ ತೀರ್ಪು ನೀಡಿದ ನಂತರ ಅದೇ ಜನರು ಅದೇ ಸಮಸ್ಯೆಯನ್ನು ಪುನಃ ತೆರೆಯುವುದನ್ನು ತಡೆಯುತ್ತದೆ. ಈ ತತ್ವ ವಿದೇಶಿಯರ ನ್ಯಾಯಮಂಡಳಿಯ ಮುಂದೆ ನಡೆಯುವ ಪ್ರಕ್ರಿಯೆಯಲ್ಲಿಯೂ ಸಹ ಅನ್ವಯಿಸುತ್ತದೆ” ಎಂದು ಹೇಳಿದೆ.

“ವಿದೇಶಿಯರ ನ್ಯಾಯಮಂಡಳಿಯು ಈ ವಿಷಯವನ್ನು ಹೇಗೆ ಪರಿಶೀಲಿಸಿತು ಮತ್ತು ಮೇಲೆ ಹೇಳಿದ ಅವಲೋಕನವನ್ನು ಹೇಗೆ ಮಾಡಿದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಎನ್ ಕೋಟೀಶ್ವರ್ ಸಿಂಗ್ ಮತ್ತು ಮಾಲಾಶ್ರೀ ನಂದಿ ಅವರ ಪೀಠವು ಹೇಳಿದ್ದು, ಹೆಚ್ಚಿನ ದಾಖಲೆಗಳನ್ನು ಕೇಳದೆ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚಿಸಿದೆ.

ಸೋಮವಾರ ನ್ಯಾಯಾಲಯದ ನಿರ್ದೇಶನದ ನಂತರ ಹಸೀನಾ ಭಾನು ಅವರನ್ನು ಬಿಡುಗಡೆ ಆದೇಶವನ್ನು ಅನುಮೋದಿಸಿದ್ದಾಗಿ ದರ್ರಾಂಗ್ ಎಸ್ಪಿ ಸುಶಾಂತ ಬಿಸ್ವಾ ಶರ್ಮಾ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದ ಅರ್ಜಿದಾರನಿಗೆ 25 ಸಾವಿರ ದಂಡ!

ಹಸೀನಾ ಭಾನು ಅವರನ್ನು ಗುರುವಾರದಂದು ತೇಜ್‌ಪುರ ಜೈಲಿನಿಂದ (ದರ್ಂಗ್‌ನಿಂದ ಸುಮಾರು 100 ಕಿಮೀ ದೂರ) ಕರೆದುಕೊಂಡು ಹೋಗುವುದಾಗಿ ಕುಟುಂಬಸ್ಥರು ತಿಳಿಸಿದ್ದರು.

“ನಮಗೆ ಈಗ ಸಮಾಧಾನವಾಗಿದೆ. ಅವರನ್ನು ಈಗಾಗಲೇ 2016 ರಲ್ಲಿ ಭಾರತೀಯ ಎಂದು ಘೋಷಿಸಲಾಗಿತ್ತು. ಆದರೆ ಅದೇ ನ್ಯಾಯಾಲಯವು 2019 ರಲ್ಲಿ ಅವರ ಮೇಲೆ ಮತ್ತೊಂದು ವಿದೇಶಿ ಪ್ರಕರಣವನ್ನು ಹಾಕಿ…ನಮ್ಮನ್ನು ಓಡಾಡುವಂತೆ ಮಾಡಿತು. ಇದರಿಂದಾಗಿ ಸಾಕಷ್ಟು ಹಣವು ಖರ್ಚಾಗಿದ್ದು, ನಮಗೆ ಕಿರುಕುಳವು ಆಯಿತು. ನ್ಯಾಯ ನೀಡಿದ್ದಕ್ಕಾಗಿ ನಾವು ಗುವಾಹಟಿ ಹೈಕೋರ್ಟ್‌ಗೆ ಕೃತಜ್ಞರಾಗಿರುತ್ತೇವೆ” ಎಂದು ಹಸಿನಾ ಭಾನು ಅವರ ಸೋದರ ಅಕ್ರಂ ಹುಸೇನ್ ಹೇಳಿದ್ದಾರೆ.

“ಹಸೀನಾ ಭಾನು ಬಡ ರೈತ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ಎಲ್ಲಾ ದಾಖಲೆಗಳು ಕ್ರಮಬದ್ಧವಾಗಿವೆ” ಎಂದು ಹಸೀನಾ ಭಾನು ಅವರ ವಕೀಲ ಜಾಕಿರ್ ಹುಸೇನ್ ಹೇಳಿದ್ದಾರೆ.

ಅಸ್ಸಾಂನಲ್ಲಿ ಪೌರತ್ವ ಪ್ರಕರಣಗಳಲ್ಲಿ ಕೆಲಸ ಮಾಡುತ್ತಿರುವ ವಕೀಲಾಗಿರುವ ಜಾಕಿರ್‌ ಹುಸೇನ್‌, “ಈ ತೀರ್ಪು ಬಹಳ ಮಹತ್ವದ್ದಾಗಿದೆ. ಯಾಕೆಂದರೆ ವಿದೇಶಿಯರ ನ್ಯಾಯಮಂಡಳಿಗಳು ಈ ಹಿಂದೆ ‘ಭಾರತೀಯ’ ಎಂದು ಘೋಷಿಸಿದ ಅದೇ ವ್ಯಕ್ತಿಗಳ ವಿರುದ್ಧ ವಿಚಾರಣೆಯನ್ನು ಪ್ರಾರಂಭಿಸುವುದು ಸಾಮಾನ್ಯವಾಗಿದೆ. ಇದರ ವಿರುದ್ದ ಈ ತೀರ್ಪು ಉತ್ತಮ ನಿದರ್ಶನವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...