Homeಮುಖಪುಟ'ಭಾರತೀಯ' ಎಂದು ಘೋಷಿಸಲ್ಪಟ್ಟು ನಂತರ 'ವಿದೇಶಿ' ಎಂದು ಬಂಧಿಸಲ್ಪಟ್ಟ ಮಹಿಳೆಯ ಬಿಡುಗಡೆಗೆ ಗುವಾಹಟಿ ಹೈಕೋರ್ಟ್ ಆದೇಶ

‘ಭಾರತೀಯ’ ಎಂದು ಘೋಷಿಸಲ್ಪಟ್ಟು ನಂತರ ‘ವಿದೇಶಿ’ ಎಂದು ಬಂಧಿಸಲ್ಪಟ್ಟ ಮಹಿಳೆಯ ಬಿಡುಗಡೆಗೆ ಗುವಾಹಟಿ ಹೈಕೋರ್ಟ್ ಆದೇಶ

- Advertisement -
- Advertisement -

ವಿದೇಶಿಯರ ನ್ಯಾಯಮಂಡಳಿ (ಎಫ್‌ಟಿ)ಯು 2016 ರಲ್ಲಿ ‘ಭಾರತೀಯ’ ಎಂದು ಘೋಷಿಸಿ ನಂತರ, 2021 ರಲ್ಲಿ ‘ವಿದೇಶಿ’ ಎಂದು ಘೋಷಿಸಿದ್ದ 55 ವರ್ಷದ ಅಸ್ಸಾಂ ನಿವಾಸಿ ಹಸೀನಾ ಭಾನು ಅವರನ್ನು ಬಿಡುಗಡೆಗೊಳಿಸುವಂತೆ ಗುವಾಹಟಿ ಹೈಕೋರ್ಟ್‌ ಮಧ್ಯಪ್ರವೇಶಿಸಿ ಆದೇಶ ನೀಡಿದೆ.

ಹಸೀನಾ ಭಾನು, ಅಸ್ಸಾಂನ ದರ್ರಾಂಗ್ ನಿವಾಸಿಯಾಗಿದ್ದು, ಎಫ್‌ಟಿಯು ಅಕ್ಟೋಬರ್‌ ತಿಂಗಳಲ್ಲಿ ವಿದೇಶಿಯೆಂದು ಘೋಷಿಸಿತ್ತು. ಇದರ ನಂತರ ಅವರನ್ನು ತೇಜ್‌ಪುರ ಬಂಧನ ಶಿಬಿರದಲ್ಲಿ ಇರಿಸಲಾಗಿತ್ತು. ಈ ವೇಳೆ ಅವರು, 2016 ರಲ್ಲಿ ಎಫ್‌ಟಿಯು ತನ್ನನ್ನು ವಿದೇಶಿ ಅಥವಾ ಅಕ್ರಮ ವಲಸಿಗ ಅಲ್ಲ ಎಂದು ಘೋಷಿಸಿದ್ದನ್ನು ಉಲ್ಲೇಖಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ಇದನ್ನೂ ಓದಿ:ಕಳೆದ 5 ವರ್ಷಗಳಲ್ಲಿ ಭಾರತದ ಪೌರತ್ವ ಪಡೆದವರಿಗಿಂತ ತ್ಯಜಿಸಿದವರು 56 ಪಟ್ಟು ಜಾಸ್ತಿ!

ಅಸ್ಸಾಂನ ಮಾಂಗ್ಲೋದೊಯ್‌‌ನಲ್ಲಿರುವ 1 ನೇ ಎಫ್‌ಟಿಯು 2016ರ ಆಗಸ್ಟ್ ತಿಂಗಳಲ್ಲಿ, “ಹಸೀನಾ ಭಾನು ವಿದೇಶಿ ಅಥವಾ ಅಕ್ರಮ ವಲಸಿಗ” ಅಲ್ಲ ಎಂದು ಘೋಷಿಸಿತ್ತು. ಆದಾಗ್ಯೂ, 2017ರಲ್ಲಿ ಆಕೆ ಬಾಂಗ್ಲಾದೇಶಿ ಪ್ರಜೆಯೆಂದು ಶಂಕಿಸಿ ಅಸ್ಸಾಂ ಬಾರ್ಡರ್ ಪೋಲೀಸರು ಉಲ್ಲೇಖಿಸಿದ ನಂತರ ಅದೇ ಎಫ್‌ಟಿಯಲ್ಲಿ ಆಕೆಯ ವಿರುದ್ಧ ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿತ್ತು.

2021 ಮಾರ್ಚ್‌ ತಿಂಗಳಲ್ಲಿ ನ್ಯಾಯಮಂಡಳಿಯು ಆಕೆಯನ್ನು “ವಿದೇಶಿ” ಎಂದು ಘೋಷಿಸುವ ಅಭಿಪ್ರಾಯವನ್ನು ಅಂಗೀಕರಿಸಿತ್ತು. ಇದರ ನಂತರ ಆಕೆಯನ್ನು ಬಂಧಿಸಿ ಅಕ್ಟೋಬರ್‌ನಲ್ಲಿ ತೇಜ್‌ಪುರ ಜೈಲಿನಲ್ಲಿ ಬಂಧನ ಶಿಬಿರದಲ್ಲಿ ಇರಿಸಲಾಗಿತ್ತು.

ಗುವಾಹತ್‌ ಹೈಕೋರ್ಟ್‌ ಸೋಮವಾರದಂದು ವಿದೇಶಿಯರ ನ್ಯಾಯಮಂಡಳಿಯ 2021 ರ ಅಭಿಪ್ರಾಯವನ್ನು ಬದಿಗಿಟ್ಟು, “ಎಫ್‌‌ಟಿಯ ಎರಡೂ ತೀರ್ಪುಗಳಲ್ಲಿ ಅರ್ಜಿದಾರರ ಗುರುತು ಒಂದೇ ಆಗಿರುತ್ತದೆ ಮತ್ತು ಒಂದೇ ವ್ಯಕ್ತಿಗೆ ಸಂಬಂಧಿಸಿದಂತೆ ಎರಡನೇ ಆಕ್ಷೇಪಾರ್ಹ ಅಭಿಪ್ರಾಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ:ಮುಸ್ಲಿಮೇತರ ನಿರಾಶ್ರಿತರಿಂದ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿದ ಕೇಂದ್ರ ಸರ್ಕಾರ

2019 ರ ಸುಪ್ರೀಂ ಕೋರ್ಟ್ ತೀರ್ಪನ್ನೂ ಉಲ್ಲೇಖಿಸಿದ [ಅಬ್ದುಲ್ ಕುದ್ದೂಸ್ Vs. ಯೂನಿಯನ್ ಆಫ್ ಇಂಡಿಯಾ, (2019) 6 SCC 604] ಹೈಕೋರ್ಟ್‌, “ರೆಸ್ ಜುಡಿಕಟ ತತ್ವವು ಒಮ್ಮೆ ತೀರ್ಪು ನೀಡಿದ ನಂತರ ಅದೇ ಜನರು ಅದೇ ಸಮಸ್ಯೆಯನ್ನು ಪುನಃ ತೆರೆಯುವುದನ್ನು ತಡೆಯುತ್ತದೆ. ಈ ತತ್ವ ವಿದೇಶಿಯರ ನ್ಯಾಯಮಂಡಳಿಯ ಮುಂದೆ ನಡೆಯುವ ಪ್ರಕ್ರಿಯೆಯಲ್ಲಿಯೂ ಸಹ ಅನ್ವಯಿಸುತ್ತದೆ” ಎಂದು ಹೇಳಿದೆ.

“ವಿದೇಶಿಯರ ನ್ಯಾಯಮಂಡಳಿಯು ಈ ವಿಷಯವನ್ನು ಹೇಗೆ ಪರಿಶೀಲಿಸಿತು ಮತ್ತು ಮೇಲೆ ಹೇಳಿದ ಅವಲೋಕನವನ್ನು ಹೇಗೆ ಮಾಡಿದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಎನ್ ಕೋಟೀಶ್ವರ್ ಸಿಂಗ್ ಮತ್ತು ಮಾಲಾಶ್ರೀ ನಂದಿ ಅವರ ಪೀಠವು ಹೇಳಿದ್ದು, ಹೆಚ್ಚಿನ ದಾಖಲೆಗಳನ್ನು ಕೇಳದೆ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚಿಸಿದೆ.

ಸೋಮವಾರ ನ್ಯಾಯಾಲಯದ ನಿರ್ದೇಶನದ ನಂತರ ಹಸೀನಾ ಭಾನು ಅವರನ್ನು ಬಿಡುಗಡೆ ಆದೇಶವನ್ನು ಅನುಮೋದಿಸಿದ್ದಾಗಿ ದರ್ರಾಂಗ್ ಎಸ್ಪಿ ಸುಶಾಂತ ಬಿಸ್ವಾ ಶರ್ಮಾ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದ ಅರ್ಜಿದಾರನಿಗೆ 25 ಸಾವಿರ ದಂಡ!

ಹಸೀನಾ ಭಾನು ಅವರನ್ನು ಗುರುವಾರದಂದು ತೇಜ್‌ಪುರ ಜೈಲಿನಿಂದ (ದರ್ಂಗ್‌ನಿಂದ ಸುಮಾರು 100 ಕಿಮೀ ದೂರ) ಕರೆದುಕೊಂಡು ಹೋಗುವುದಾಗಿ ಕುಟುಂಬಸ್ಥರು ತಿಳಿಸಿದ್ದರು.

“ನಮಗೆ ಈಗ ಸಮಾಧಾನವಾಗಿದೆ. ಅವರನ್ನು ಈಗಾಗಲೇ 2016 ರಲ್ಲಿ ಭಾರತೀಯ ಎಂದು ಘೋಷಿಸಲಾಗಿತ್ತು. ಆದರೆ ಅದೇ ನ್ಯಾಯಾಲಯವು 2019 ರಲ್ಲಿ ಅವರ ಮೇಲೆ ಮತ್ತೊಂದು ವಿದೇಶಿ ಪ್ರಕರಣವನ್ನು ಹಾಕಿ…ನಮ್ಮನ್ನು ಓಡಾಡುವಂತೆ ಮಾಡಿತು. ಇದರಿಂದಾಗಿ ಸಾಕಷ್ಟು ಹಣವು ಖರ್ಚಾಗಿದ್ದು, ನಮಗೆ ಕಿರುಕುಳವು ಆಯಿತು. ನ್ಯಾಯ ನೀಡಿದ್ದಕ್ಕಾಗಿ ನಾವು ಗುವಾಹಟಿ ಹೈಕೋರ್ಟ್‌ಗೆ ಕೃತಜ್ಞರಾಗಿರುತ್ತೇವೆ” ಎಂದು ಹಸಿನಾ ಭಾನು ಅವರ ಸೋದರ ಅಕ್ರಂ ಹುಸೇನ್ ಹೇಳಿದ್ದಾರೆ.

“ಹಸೀನಾ ಭಾನು ಬಡ ರೈತ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ಎಲ್ಲಾ ದಾಖಲೆಗಳು ಕ್ರಮಬದ್ಧವಾಗಿವೆ” ಎಂದು ಹಸೀನಾ ಭಾನು ಅವರ ವಕೀಲ ಜಾಕಿರ್ ಹುಸೇನ್ ಹೇಳಿದ್ದಾರೆ.

ಅಸ್ಸಾಂನಲ್ಲಿ ಪೌರತ್ವ ಪ್ರಕರಣಗಳಲ್ಲಿ ಕೆಲಸ ಮಾಡುತ್ತಿರುವ ವಕೀಲಾಗಿರುವ ಜಾಕಿರ್‌ ಹುಸೇನ್‌, “ಈ ತೀರ್ಪು ಬಹಳ ಮಹತ್ವದ್ದಾಗಿದೆ. ಯಾಕೆಂದರೆ ವಿದೇಶಿಯರ ನ್ಯಾಯಮಂಡಳಿಗಳು ಈ ಹಿಂದೆ ‘ಭಾರತೀಯ’ ಎಂದು ಘೋಷಿಸಿದ ಅದೇ ವ್ಯಕ್ತಿಗಳ ವಿರುದ್ಧ ವಿಚಾರಣೆಯನ್ನು ಪ್ರಾರಂಭಿಸುವುದು ಸಾಮಾನ್ಯವಾಗಿದೆ. ಇದರ ವಿರುದ್ದ ಈ ತೀರ್ಪು ಉತ್ತಮ ನಿದರ್ಶನವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...