Homeಮುಖಪುಟ'ಭಾರತೀಯ' ಎಂದು ಘೋಷಿಸಲ್ಪಟ್ಟು ನಂತರ 'ವಿದೇಶಿ' ಎಂದು ಬಂಧಿಸಲ್ಪಟ್ಟ ಮಹಿಳೆಯ ಬಿಡುಗಡೆಗೆ ಗುವಾಹಟಿ ಹೈಕೋರ್ಟ್ ಆದೇಶ

‘ಭಾರತೀಯ’ ಎಂದು ಘೋಷಿಸಲ್ಪಟ್ಟು ನಂತರ ‘ವಿದೇಶಿ’ ಎಂದು ಬಂಧಿಸಲ್ಪಟ್ಟ ಮಹಿಳೆಯ ಬಿಡುಗಡೆಗೆ ಗುವಾಹಟಿ ಹೈಕೋರ್ಟ್ ಆದೇಶ

- Advertisement -
- Advertisement -

ವಿದೇಶಿಯರ ನ್ಯಾಯಮಂಡಳಿ (ಎಫ್‌ಟಿ)ಯು 2016 ರಲ್ಲಿ ‘ಭಾರತೀಯ’ ಎಂದು ಘೋಷಿಸಿ ನಂತರ, 2021 ರಲ್ಲಿ ‘ವಿದೇಶಿ’ ಎಂದು ಘೋಷಿಸಿದ್ದ 55 ವರ್ಷದ ಅಸ್ಸಾಂ ನಿವಾಸಿ ಹಸೀನಾ ಭಾನು ಅವರನ್ನು ಬಿಡುಗಡೆಗೊಳಿಸುವಂತೆ ಗುವಾಹಟಿ ಹೈಕೋರ್ಟ್‌ ಮಧ್ಯಪ್ರವೇಶಿಸಿ ಆದೇಶ ನೀಡಿದೆ.

ಹಸೀನಾ ಭಾನು, ಅಸ್ಸಾಂನ ದರ್ರಾಂಗ್ ನಿವಾಸಿಯಾಗಿದ್ದು, ಎಫ್‌ಟಿಯು ಅಕ್ಟೋಬರ್‌ ತಿಂಗಳಲ್ಲಿ ವಿದೇಶಿಯೆಂದು ಘೋಷಿಸಿತ್ತು. ಇದರ ನಂತರ ಅವರನ್ನು ತೇಜ್‌ಪುರ ಬಂಧನ ಶಿಬಿರದಲ್ಲಿ ಇರಿಸಲಾಗಿತ್ತು. ಈ ವೇಳೆ ಅವರು, 2016 ರಲ್ಲಿ ಎಫ್‌ಟಿಯು ತನ್ನನ್ನು ವಿದೇಶಿ ಅಥವಾ ಅಕ್ರಮ ವಲಸಿಗ ಅಲ್ಲ ಎಂದು ಘೋಷಿಸಿದ್ದನ್ನು ಉಲ್ಲೇಖಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ಇದನ್ನೂ ಓದಿ:ಕಳೆದ 5 ವರ್ಷಗಳಲ್ಲಿ ಭಾರತದ ಪೌರತ್ವ ಪಡೆದವರಿಗಿಂತ ತ್ಯಜಿಸಿದವರು 56 ಪಟ್ಟು ಜಾಸ್ತಿ!

ಅಸ್ಸಾಂನ ಮಾಂಗ್ಲೋದೊಯ್‌‌ನಲ್ಲಿರುವ 1 ನೇ ಎಫ್‌ಟಿಯು 2016ರ ಆಗಸ್ಟ್ ತಿಂಗಳಲ್ಲಿ, “ಹಸೀನಾ ಭಾನು ವಿದೇಶಿ ಅಥವಾ ಅಕ್ರಮ ವಲಸಿಗ” ಅಲ್ಲ ಎಂದು ಘೋಷಿಸಿತ್ತು. ಆದಾಗ್ಯೂ, 2017ರಲ್ಲಿ ಆಕೆ ಬಾಂಗ್ಲಾದೇಶಿ ಪ್ರಜೆಯೆಂದು ಶಂಕಿಸಿ ಅಸ್ಸಾಂ ಬಾರ್ಡರ್ ಪೋಲೀಸರು ಉಲ್ಲೇಖಿಸಿದ ನಂತರ ಅದೇ ಎಫ್‌ಟಿಯಲ್ಲಿ ಆಕೆಯ ವಿರುದ್ಧ ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿತ್ತು.

2021 ಮಾರ್ಚ್‌ ತಿಂಗಳಲ್ಲಿ ನ್ಯಾಯಮಂಡಳಿಯು ಆಕೆಯನ್ನು “ವಿದೇಶಿ” ಎಂದು ಘೋಷಿಸುವ ಅಭಿಪ್ರಾಯವನ್ನು ಅಂಗೀಕರಿಸಿತ್ತು. ಇದರ ನಂತರ ಆಕೆಯನ್ನು ಬಂಧಿಸಿ ಅಕ್ಟೋಬರ್‌ನಲ್ಲಿ ತೇಜ್‌ಪುರ ಜೈಲಿನಲ್ಲಿ ಬಂಧನ ಶಿಬಿರದಲ್ಲಿ ಇರಿಸಲಾಗಿತ್ತು.

ಗುವಾಹತ್‌ ಹೈಕೋರ್ಟ್‌ ಸೋಮವಾರದಂದು ವಿದೇಶಿಯರ ನ್ಯಾಯಮಂಡಳಿಯ 2021 ರ ಅಭಿಪ್ರಾಯವನ್ನು ಬದಿಗಿಟ್ಟು, “ಎಫ್‌‌ಟಿಯ ಎರಡೂ ತೀರ್ಪುಗಳಲ್ಲಿ ಅರ್ಜಿದಾರರ ಗುರುತು ಒಂದೇ ಆಗಿರುತ್ತದೆ ಮತ್ತು ಒಂದೇ ವ್ಯಕ್ತಿಗೆ ಸಂಬಂಧಿಸಿದಂತೆ ಎರಡನೇ ಆಕ್ಷೇಪಾರ್ಹ ಅಭಿಪ್ರಾಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ:ಮುಸ್ಲಿಮೇತರ ನಿರಾಶ್ರಿತರಿಂದ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿದ ಕೇಂದ್ರ ಸರ್ಕಾರ

2019 ರ ಸುಪ್ರೀಂ ಕೋರ್ಟ್ ತೀರ್ಪನ್ನೂ ಉಲ್ಲೇಖಿಸಿದ [ಅಬ್ದುಲ್ ಕುದ್ದೂಸ್ Vs. ಯೂನಿಯನ್ ಆಫ್ ಇಂಡಿಯಾ, (2019) 6 SCC 604] ಹೈಕೋರ್ಟ್‌, “ರೆಸ್ ಜುಡಿಕಟ ತತ್ವವು ಒಮ್ಮೆ ತೀರ್ಪು ನೀಡಿದ ನಂತರ ಅದೇ ಜನರು ಅದೇ ಸಮಸ್ಯೆಯನ್ನು ಪುನಃ ತೆರೆಯುವುದನ್ನು ತಡೆಯುತ್ತದೆ. ಈ ತತ್ವ ವಿದೇಶಿಯರ ನ್ಯಾಯಮಂಡಳಿಯ ಮುಂದೆ ನಡೆಯುವ ಪ್ರಕ್ರಿಯೆಯಲ್ಲಿಯೂ ಸಹ ಅನ್ವಯಿಸುತ್ತದೆ” ಎಂದು ಹೇಳಿದೆ.

“ವಿದೇಶಿಯರ ನ್ಯಾಯಮಂಡಳಿಯು ಈ ವಿಷಯವನ್ನು ಹೇಗೆ ಪರಿಶೀಲಿಸಿತು ಮತ್ತು ಮೇಲೆ ಹೇಳಿದ ಅವಲೋಕನವನ್ನು ಹೇಗೆ ಮಾಡಿದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಎನ್ ಕೋಟೀಶ್ವರ್ ಸಿಂಗ್ ಮತ್ತು ಮಾಲಾಶ್ರೀ ನಂದಿ ಅವರ ಪೀಠವು ಹೇಳಿದ್ದು, ಹೆಚ್ಚಿನ ದಾಖಲೆಗಳನ್ನು ಕೇಳದೆ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚಿಸಿದೆ.

ಸೋಮವಾರ ನ್ಯಾಯಾಲಯದ ನಿರ್ದೇಶನದ ನಂತರ ಹಸೀನಾ ಭಾನು ಅವರನ್ನು ಬಿಡುಗಡೆ ಆದೇಶವನ್ನು ಅನುಮೋದಿಸಿದ್ದಾಗಿ ದರ್ರಾಂಗ್ ಎಸ್ಪಿ ಸುಶಾಂತ ಬಿಸ್ವಾ ಶರ್ಮಾ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದ ಅರ್ಜಿದಾರನಿಗೆ 25 ಸಾವಿರ ದಂಡ!

ಹಸೀನಾ ಭಾನು ಅವರನ್ನು ಗುರುವಾರದಂದು ತೇಜ್‌ಪುರ ಜೈಲಿನಿಂದ (ದರ್ಂಗ್‌ನಿಂದ ಸುಮಾರು 100 ಕಿಮೀ ದೂರ) ಕರೆದುಕೊಂಡು ಹೋಗುವುದಾಗಿ ಕುಟುಂಬಸ್ಥರು ತಿಳಿಸಿದ್ದರು.

“ನಮಗೆ ಈಗ ಸಮಾಧಾನವಾಗಿದೆ. ಅವರನ್ನು ಈಗಾಗಲೇ 2016 ರಲ್ಲಿ ಭಾರತೀಯ ಎಂದು ಘೋಷಿಸಲಾಗಿತ್ತು. ಆದರೆ ಅದೇ ನ್ಯಾಯಾಲಯವು 2019 ರಲ್ಲಿ ಅವರ ಮೇಲೆ ಮತ್ತೊಂದು ವಿದೇಶಿ ಪ್ರಕರಣವನ್ನು ಹಾಕಿ…ನಮ್ಮನ್ನು ಓಡಾಡುವಂತೆ ಮಾಡಿತು. ಇದರಿಂದಾಗಿ ಸಾಕಷ್ಟು ಹಣವು ಖರ್ಚಾಗಿದ್ದು, ನಮಗೆ ಕಿರುಕುಳವು ಆಯಿತು. ನ್ಯಾಯ ನೀಡಿದ್ದಕ್ಕಾಗಿ ನಾವು ಗುವಾಹಟಿ ಹೈಕೋರ್ಟ್‌ಗೆ ಕೃತಜ್ಞರಾಗಿರುತ್ತೇವೆ” ಎಂದು ಹಸಿನಾ ಭಾನು ಅವರ ಸೋದರ ಅಕ್ರಂ ಹುಸೇನ್ ಹೇಳಿದ್ದಾರೆ.

“ಹಸೀನಾ ಭಾನು ಬಡ ರೈತ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ಎಲ್ಲಾ ದಾಖಲೆಗಳು ಕ್ರಮಬದ್ಧವಾಗಿವೆ” ಎಂದು ಹಸೀನಾ ಭಾನು ಅವರ ವಕೀಲ ಜಾಕಿರ್ ಹುಸೇನ್ ಹೇಳಿದ್ದಾರೆ.

ಅಸ್ಸಾಂನಲ್ಲಿ ಪೌರತ್ವ ಪ್ರಕರಣಗಳಲ್ಲಿ ಕೆಲಸ ಮಾಡುತ್ತಿರುವ ವಕೀಲಾಗಿರುವ ಜಾಕಿರ್‌ ಹುಸೇನ್‌, “ಈ ತೀರ್ಪು ಬಹಳ ಮಹತ್ವದ್ದಾಗಿದೆ. ಯಾಕೆಂದರೆ ವಿದೇಶಿಯರ ನ್ಯಾಯಮಂಡಳಿಗಳು ಈ ಹಿಂದೆ ‘ಭಾರತೀಯ’ ಎಂದು ಘೋಷಿಸಿದ ಅದೇ ವ್ಯಕ್ತಿಗಳ ವಿರುದ್ಧ ವಿಚಾರಣೆಯನ್ನು ಪ್ರಾರಂಭಿಸುವುದು ಸಾಮಾನ್ಯವಾಗಿದೆ. ಇದರ ವಿರುದ್ದ ಈ ತೀರ್ಪು ಉತ್ತಮ ನಿದರ್ಶನವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...