Homeಮುಖಪುಟ'ಭಾರತೀಯ' ಎಂದು ಘೋಷಿಸಲ್ಪಟ್ಟು ನಂತರ 'ವಿದೇಶಿ' ಎಂದು ಬಂಧಿಸಲ್ಪಟ್ಟ ಮಹಿಳೆಯ ಬಿಡುಗಡೆಗೆ ಗುವಾಹಟಿ ಹೈಕೋರ್ಟ್ ಆದೇಶ

‘ಭಾರತೀಯ’ ಎಂದು ಘೋಷಿಸಲ್ಪಟ್ಟು ನಂತರ ‘ವಿದೇಶಿ’ ಎಂದು ಬಂಧಿಸಲ್ಪಟ್ಟ ಮಹಿಳೆಯ ಬಿಡುಗಡೆಗೆ ಗುವಾಹಟಿ ಹೈಕೋರ್ಟ್ ಆದೇಶ

- Advertisement -
- Advertisement -

ವಿದೇಶಿಯರ ನ್ಯಾಯಮಂಡಳಿ (ಎಫ್‌ಟಿ)ಯು 2016 ರಲ್ಲಿ ‘ಭಾರತೀಯ’ ಎಂದು ಘೋಷಿಸಿ ನಂತರ, 2021 ರಲ್ಲಿ ‘ವಿದೇಶಿ’ ಎಂದು ಘೋಷಿಸಿದ್ದ 55 ವರ್ಷದ ಅಸ್ಸಾಂ ನಿವಾಸಿ ಹಸೀನಾ ಭಾನು ಅವರನ್ನು ಬಿಡುಗಡೆಗೊಳಿಸುವಂತೆ ಗುವಾಹಟಿ ಹೈಕೋರ್ಟ್‌ ಮಧ್ಯಪ್ರವೇಶಿಸಿ ಆದೇಶ ನೀಡಿದೆ.

ಹಸೀನಾ ಭಾನು, ಅಸ್ಸಾಂನ ದರ್ರಾಂಗ್ ನಿವಾಸಿಯಾಗಿದ್ದು, ಎಫ್‌ಟಿಯು ಅಕ್ಟೋಬರ್‌ ತಿಂಗಳಲ್ಲಿ ವಿದೇಶಿಯೆಂದು ಘೋಷಿಸಿತ್ತು. ಇದರ ನಂತರ ಅವರನ್ನು ತೇಜ್‌ಪುರ ಬಂಧನ ಶಿಬಿರದಲ್ಲಿ ಇರಿಸಲಾಗಿತ್ತು. ಈ ವೇಳೆ ಅವರು, 2016 ರಲ್ಲಿ ಎಫ್‌ಟಿಯು ತನ್ನನ್ನು ವಿದೇಶಿ ಅಥವಾ ಅಕ್ರಮ ವಲಸಿಗ ಅಲ್ಲ ಎಂದು ಘೋಷಿಸಿದ್ದನ್ನು ಉಲ್ಲೇಖಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ಇದನ್ನೂ ಓದಿ:ಕಳೆದ 5 ವರ್ಷಗಳಲ್ಲಿ ಭಾರತದ ಪೌರತ್ವ ಪಡೆದವರಿಗಿಂತ ತ್ಯಜಿಸಿದವರು 56 ಪಟ್ಟು ಜಾಸ್ತಿ!

ಅಸ್ಸಾಂನ ಮಾಂಗ್ಲೋದೊಯ್‌‌ನಲ್ಲಿರುವ 1 ನೇ ಎಫ್‌ಟಿಯು 2016ರ ಆಗಸ್ಟ್ ತಿಂಗಳಲ್ಲಿ, “ಹಸೀನಾ ಭಾನು ವಿದೇಶಿ ಅಥವಾ ಅಕ್ರಮ ವಲಸಿಗ” ಅಲ್ಲ ಎಂದು ಘೋಷಿಸಿತ್ತು. ಆದಾಗ್ಯೂ, 2017ರಲ್ಲಿ ಆಕೆ ಬಾಂಗ್ಲಾದೇಶಿ ಪ್ರಜೆಯೆಂದು ಶಂಕಿಸಿ ಅಸ್ಸಾಂ ಬಾರ್ಡರ್ ಪೋಲೀಸರು ಉಲ್ಲೇಖಿಸಿದ ನಂತರ ಅದೇ ಎಫ್‌ಟಿಯಲ್ಲಿ ಆಕೆಯ ವಿರುದ್ಧ ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿತ್ತು.

2021 ಮಾರ್ಚ್‌ ತಿಂಗಳಲ್ಲಿ ನ್ಯಾಯಮಂಡಳಿಯು ಆಕೆಯನ್ನು “ವಿದೇಶಿ” ಎಂದು ಘೋಷಿಸುವ ಅಭಿಪ್ರಾಯವನ್ನು ಅಂಗೀಕರಿಸಿತ್ತು. ಇದರ ನಂತರ ಆಕೆಯನ್ನು ಬಂಧಿಸಿ ಅಕ್ಟೋಬರ್‌ನಲ್ಲಿ ತೇಜ್‌ಪುರ ಜೈಲಿನಲ್ಲಿ ಬಂಧನ ಶಿಬಿರದಲ್ಲಿ ಇರಿಸಲಾಗಿತ್ತು.

ಗುವಾಹತ್‌ ಹೈಕೋರ್ಟ್‌ ಸೋಮವಾರದಂದು ವಿದೇಶಿಯರ ನ್ಯಾಯಮಂಡಳಿಯ 2021 ರ ಅಭಿಪ್ರಾಯವನ್ನು ಬದಿಗಿಟ್ಟು, “ಎಫ್‌‌ಟಿಯ ಎರಡೂ ತೀರ್ಪುಗಳಲ್ಲಿ ಅರ್ಜಿದಾರರ ಗುರುತು ಒಂದೇ ಆಗಿರುತ್ತದೆ ಮತ್ತು ಒಂದೇ ವ್ಯಕ್ತಿಗೆ ಸಂಬಂಧಿಸಿದಂತೆ ಎರಡನೇ ಆಕ್ಷೇಪಾರ್ಹ ಅಭಿಪ್ರಾಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ:ಮುಸ್ಲಿಮೇತರ ನಿರಾಶ್ರಿತರಿಂದ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿದ ಕೇಂದ್ರ ಸರ್ಕಾರ

2019 ರ ಸುಪ್ರೀಂ ಕೋರ್ಟ್ ತೀರ್ಪನ್ನೂ ಉಲ್ಲೇಖಿಸಿದ [ಅಬ್ದುಲ್ ಕುದ್ದೂಸ್ Vs. ಯೂನಿಯನ್ ಆಫ್ ಇಂಡಿಯಾ, (2019) 6 SCC 604] ಹೈಕೋರ್ಟ್‌, “ರೆಸ್ ಜುಡಿಕಟ ತತ್ವವು ಒಮ್ಮೆ ತೀರ್ಪು ನೀಡಿದ ನಂತರ ಅದೇ ಜನರು ಅದೇ ಸಮಸ್ಯೆಯನ್ನು ಪುನಃ ತೆರೆಯುವುದನ್ನು ತಡೆಯುತ್ತದೆ. ಈ ತತ್ವ ವಿದೇಶಿಯರ ನ್ಯಾಯಮಂಡಳಿಯ ಮುಂದೆ ನಡೆಯುವ ಪ್ರಕ್ರಿಯೆಯಲ್ಲಿಯೂ ಸಹ ಅನ್ವಯಿಸುತ್ತದೆ” ಎಂದು ಹೇಳಿದೆ.

“ವಿದೇಶಿಯರ ನ್ಯಾಯಮಂಡಳಿಯು ಈ ವಿಷಯವನ್ನು ಹೇಗೆ ಪರಿಶೀಲಿಸಿತು ಮತ್ತು ಮೇಲೆ ಹೇಳಿದ ಅವಲೋಕನವನ್ನು ಹೇಗೆ ಮಾಡಿದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಎನ್ ಕೋಟೀಶ್ವರ್ ಸಿಂಗ್ ಮತ್ತು ಮಾಲಾಶ್ರೀ ನಂದಿ ಅವರ ಪೀಠವು ಹೇಳಿದ್ದು, ಹೆಚ್ಚಿನ ದಾಖಲೆಗಳನ್ನು ಕೇಳದೆ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚಿಸಿದೆ.

ಸೋಮವಾರ ನ್ಯಾಯಾಲಯದ ನಿರ್ದೇಶನದ ನಂತರ ಹಸೀನಾ ಭಾನು ಅವರನ್ನು ಬಿಡುಗಡೆ ಆದೇಶವನ್ನು ಅನುಮೋದಿಸಿದ್ದಾಗಿ ದರ್ರಾಂಗ್ ಎಸ್ಪಿ ಸುಶಾಂತ ಬಿಸ್ವಾ ಶರ್ಮಾ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದ ಅರ್ಜಿದಾರನಿಗೆ 25 ಸಾವಿರ ದಂಡ!

ಹಸೀನಾ ಭಾನು ಅವರನ್ನು ಗುರುವಾರದಂದು ತೇಜ್‌ಪುರ ಜೈಲಿನಿಂದ (ದರ್ಂಗ್‌ನಿಂದ ಸುಮಾರು 100 ಕಿಮೀ ದೂರ) ಕರೆದುಕೊಂಡು ಹೋಗುವುದಾಗಿ ಕುಟುಂಬಸ್ಥರು ತಿಳಿಸಿದ್ದರು.

“ನಮಗೆ ಈಗ ಸಮಾಧಾನವಾಗಿದೆ. ಅವರನ್ನು ಈಗಾಗಲೇ 2016 ರಲ್ಲಿ ಭಾರತೀಯ ಎಂದು ಘೋಷಿಸಲಾಗಿತ್ತು. ಆದರೆ ಅದೇ ನ್ಯಾಯಾಲಯವು 2019 ರಲ್ಲಿ ಅವರ ಮೇಲೆ ಮತ್ತೊಂದು ವಿದೇಶಿ ಪ್ರಕರಣವನ್ನು ಹಾಕಿ…ನಮ್ಮನ್ನು ಓಡಾಡುವಂತೆ ಮಾಡಿತು. ಇದರಿಂದಾಗಿ ಸಾಕಷ್ಟು ಹಣವು ಖರ್ಚಾಗಿದ್ದು, ನಮಗೆ ಕಿರುಕುಳವು ಆಯಿತು. ನ್ಯಾಯ ನೀಡಿದ್ದಕ್ಕಾಗಿ ನಾವು ಗುವಾಹಟಿ ಹೈಕೋರ್ಟ್‌ಗೆ ಕೃತಜ್ಞರಾಗಿರುತ್ತೇವೆ” ಎಂದು ಹಸಿನಾ ಭಾನು ಅವರ ಸೋದರ ಅಕ್ರಂ ಹುಸೇನ್ ಹೇಳಿದ್ದಾರೆ.

“ಹಸೀನಾ ಭಾನು ಬಡ ರೈತ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ಎಲ್ಲಾ ದಾಖಲೆಗಳು ಕ್ರಮಬದ್ಧವಾಗಿವೆ” ಎಂದು ಹಸೀನಾ ಭಾನು ಅವರ ವಕೀಲ ಜಾಕಿರ್ ಹುಸೇನ್ ಹೇಳಿದ್ದಾರೆ.

ಅಸ್ಸಾಂನಲ್ಲಿ ಪೌರತ್ವ ಪ್ರಕರಣಗಳಲ್ಲಿ ಕೆಲಸ ಮಾಡುತ್ತಿರುವ ವಕೀಲಾಗಿರುವ ಜಾಕಿರ್‌ ಹುಸೇನ್‌, “ಈ ತೀರ್ಪು ಬಹಳ ಮಹತ್ವದ್ದಾಗಿದೆ. ಯಾಕೆಂದರೆ ವಿದೇಶಿಯರ ನ್ಯಾಯಮಂಡಳಿಗಳು ಈ ಹಿಂದೆ ‘ಭಾರತೀಯ’ ಎಂದು ಘೋಷಿಸಿದ ಅದೇ ವ್ಯಕ್ತಿಗಳ ವಿರುದ್ಧ ವಿಚಾರಣೆಯನ್ನು ಪ್ರಾರಂಭಿಸುವುದು ಸಾಮಾನ್ಯವಾಗಿದೆ. ಇದರ ವಿರುದ್ದ ಈ ತೀರ್ಪು ಉತ್ತಮ ನಿದರ್ಶನವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...