Homeಮುಖಪುಟ'ಭಾರತೀಯ' ಎಂದು ಘೋಷಿಸಲ್ಪಟ್ಟು ನಂತರ 'ವಿದೇಶಿ' ಎಂದು ಬಂಧಿಸಲ್ಪಟ್ಟ ಮಹಿಳೆಯ ಬಿಡುಗಡೆಗೆ ಗುವಾಹಟಿ ಹೈಕೋರ್ಟ್ ಆದೇಶ

‘ಭಾರತೀಯ’ ಎಂದು ಘೋಷಿಸಲ್ಪಟ್ಟು ನಂತರ ‘ವಿದೇಶಿ’ ಎಂದು ಬಂಧಿಸಲ್ಪಟ್ಟ ಮಹಿಳೆಯ ಬಿಡುಗಡೆಗೆ ಗುವಾಹಟಿ ಹೈಕೋರ್ಟ್ ಆದೇಶ

- Advertisement -
- Advertisement -

ವಿದೇಶಿಯರ ನ್ಯಾಯಮಂಡಳಿ (ಎಫ್‌ಟಿ)ಯು 2016 ರಲ್ಲಿ ‘ಭಾರತೀಯ’ ಎಂದು ಘೋಷಿಸಿ ನಂತರ, 2021 ರಲ್ಲಿ ‘ವಿದೇಶಿ’ ಎಂದು ಘೋಷಿಸಿದ್ದ 55 ವರ್ಷದ ಅಸ್ಸಾಂ ನಿವಾಸಿ ಹಸೀನಾ ಭಾನು ಅವರನ್ನು ಬಿಡುಗಡೆಗೊಳಿಸುವಂತೆ ಗುವಾಹಟಿ ಹೈಕೋರ್ಟ್‌ ಮಧ್ಯಪ್ರವೇಶಿಸಿ ಆದೇಶ ನೀಡಿದೆ.

ಹಸೀನಾ ಭಾನು, ಅಸ್ಸಾಂನ ದರ್ರಾಂಗ್ ನಿವಾಸಿಯಾಗಿದ್ದು, ಎಫ್‌ಟಿಯು ಅಕ್ಟೋಬರ್‌ ತಿಂಗಳಲ್ಲಿ ವಿದೇಶಿಯೆಂದು ಘೋಷಿಸಿತ್ತು. ಇದರ ನಂತರ ಅವರನ್ನು ತೇಜ್‌ಪುರ ಬಂಧನ ಶಿಬಿರದಲ್ಲಿ ಇರಿಸಲಾಗಿತ್ತು. ಈ ವೇಳೆ ಅವರು, 2016 ರಲ್ಲಿ ಎಫ್‌ಟಿಯು ತನ್ನನ್ನು ವಿದೇಶಿ ಅಥವಾ ಅಕ್ರಮ ವಲಸಿಗ ಅಲ್ಲ ಎಂದು ಘೋಷಿಸಿದ್ದನ್ನು ಉಲ್ಲೇಖಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ಇದನ್ನೂ ಓದಿ:ಕಳೆದ 5 ವರ್ಷಗಳಲ್ಲಿ ಭಾರತದ ಪೌರತ್ವ ಪಡೆದವರಿಗಿಂತ ತ್ಯಜಿಸಿದವರು 56 ಪಟ್ಟು ಜಾಸ್ತಿ!

ಅಸ್ಸಾಂನ ಮಾಂಗ್ಲೋದೊಯ್‌‌ನಲ್ಲಿರುವ 1 ನೇ ಎಫ್‌ಟಿಯು 2016ರ ಆಗಸ್ಟ್ ತಿಂಗಳಲ್ಲಿ, “ಹಸೀನಾ ಭಾನು ವಿದೇಶಿ ಅಥವಾ ಅಕ್ರಮ ವಲಸಿಗ” ಅಲ್ಲ ಎಂದು ಘೋಷಿಸಿತ್ತು. ಆದಾಗ್ಯೂ, 2017ರಲ್ಲಿ ಆಕೆ ಬಾಂಗ್ಲಾದೇಶಿ ಪ್ರಜೆಯೆಂದು ಶಂಕಿಸಿ ಅಸ್ಸಾಂ ಬಾರ್ಡರ್ ಪೋಲೀಸರು ಉಲ್ಲೇಖಿಸಿದ ನಂತರ ಅದೇ ಎಫ್‌ಟಿಯಲ್ಲಿ ಆಕೆಯ ವಿರುದ್ಧ ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿತ್ತು.

2021 ಮಾರ್ಚ್‌ ತಿಂಗಳಲ್ಲಿ ನ್ಯಾಯಮಂಡಳಿಯು ಆಕೆಯನ್ನು “ವಿದೇಶಿ” ಎಂದು ಘೋಷಿಸುವ ಅಭಿಪ್ರಾಯವನ್ನು ಅಂಗೀಕರಿಸಿತ್ತು. ಇದರ ನಂತರ ಆಕೆಯನ್ನು ಬಂಧಿಸಿ ಅಕ್ಟೋಬರ್‌ನಲ್ಲಿ ತೇಜ್‌ಪುರ ಜೈಲಿನಲ್ಲಿ ಬಂಧನ ಶಿಬಿರದಲ್ಲಿ ಇರಿಸಲಾಗಿತ್ತು.

ಗುವಾಹತ್‌ ಹೈಕೋರ್ಟ್‌ ಸೋಮವಾರದಂದು ವಿದೇಶಿಯರ ನ್ಯಾಯಮಂಡಳಿಯ 2021 ರ ಅಭಿಪ್ರಾಯವನ್ನು ಬದಿಗಿಟ್ಟು, “ಎಫ್‌‌ಟಿಯ ಎರಡೂ ತೀರ್ಪುಗಳಲ್ಲಿ ಅರ್ಜಿದಾರರ ಗುರುತು ಒಂದೇ ಆಗಿರುತ್ತದೆ ಮತ್ತು ಒಂದೇ ವ್ಯಕ್ತಿಗೆ ಸಂಬಂಧಿಸಿದಂತೆ ಎರಡನೇ ಆಕ್ಷೇಪಾರ್ಹ ಅಭಿಪ್ರಾಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ:ಮುಸ್ಲಿಮೇತರ ನಿರಾಶ್ರಿತರಿಂದ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿದ ಕೇಂದ್ರ ಸರ್ಕಾರ

2019 ರ ಸುಪ್ರೀಂ ಕೋರ್ಟ್ ತೀರ್ಪನ್ನೂ ಉಲ್ಲೇಖಿಸಿದ [ಅಬ್ದುಲ್ ಕುದ್ದೂಸ್ Vs. ಯೂನಿಯನ್ ಆಫ್ ಇಂಡಿಯಾ, (2019) 6 SCC 604] ಹೈಕೋರ್ಟ್‌, “ರೆಸ್ ಜುಡಿಕಟ ತತ್ವವು ಒಮ್ಮೆ ತೀರ್ಪು ನೀಡಿದ ನಂತರ ಅದೇ ಜನರು ಅದೇ ಸಮಸ್ಯೆಯನ್ನು ಪುನಃ ತೆರೆಯುವುದನ್ನು ತಡೆಯುತ್ತದೆ. ಈ ತತ್ವ ವಿದೇಶಿಯರ ನ್ಯಾಯಮಂಡಳಿಯ ಮುಂದೆ ನಡೆಯುವ ಪ್ರಕ್ರಿಯೆಯಲ್ಲಿಯೂ ಸಹ ಅನ್ವಯಿಸುತ್ತದೆ” ಎಂದು ಹೇಳಿದೆ.

“ವಿದೇಶಿಯರ ನ್ಯಾಯಮಂಡಳಿಯು ಈ ವಿಷಯವನ್ನು ಹೇಗೆ ಪರಿಶೀಲಿಸಿತು ಮತ್ತು ಮೇಲೆ ಹೇಳಿದ ಅವಲೋಕನವನ್ನು ಹೇಗೆ ಮಾಡಿದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಎನ್ ಕೋಟೀಶ್ವರ್ ಸಿಂಗ್ ಮತ್ತು ಮಾಲಾಶ್ರೀ ನಂದಿ ಅವರ ಪೀಠವು ಹೇಳಿದ್ದು, ಹೆಚ್ಚಿನ ದಾಖಲೆಗಳನ್ನು ಕೇಳದೆ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚಿಸಿದೆ.

ಸೋಮವಾರ ನ್ಯಾಯಾಲಯದ ನಿರ್ದೇಶನದ ನಂತರ ಹಸೀನಾ ಭಾನು ಅವರನ್ನು ಬಿಡುಗಡೆ ಆದೇಶವನ್ನು ಅನುಮೋದಿಸಿದ್ದಾಗಿ ದರ್ರಾಂಗ್ ಎಸ್ಪಿ ಸುಶಾಂತ ಬಿಸ್ವಾ ಶರ್ಮಾ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದ ಅರ್ಜಿದಾರನಿಗೆ 25 ಸಾವಿರ ದಂಡ!

ಹಸೀನಾ ಭಾನು ಅವರನ್ನು ಗುರುವಾರದಂದು ತೇಜ್‌ಪುರ ಜೈಲಿನಿಂದ (ದರ್ಂಗ್‌ನಿಂದ ಸುಮಾರು 100 ಕಿಮೀ ದೂರ) ಕರೆದುಕೊಂಡು ಹೋಗುವುದಾಗಿ ಕುಟುಂಬಸ್ಥರು ತಿಳಿಸಿದ್ದರು.

“ನಮಗೆ ಈಗ ಸಮಾಧಾನವಾಗಿದೆ. ಅವರನ್ನು ಈಗಾಗಲೇ 2016 ರಲ್ಲಿ ಭಾರತೀಯ ಎಂದು ಘೋಷಿಸಲಾಗಿತ್ತು. ಆದರೆ ಅದೇ ನ್ಯಾಯಾಲಯವು 2019 ರಲ್ಲಿ ಅವರ ಮೇಲೆ ಮತ್ತೊಂದು ವಿದೇಶಿ ಪ್ರಕರಣವನ್ನು ಹಾಕಿ…ನಮ್ಮನ್ನು ಓಡಾಡುವಂತೆ ಮಾಡಿತು. ಇದರಿಂದಾಗಿ ಸಾಕಷ್ಟು ಹಣವು ಖರ್ಚಾಗಿದ್ದು, ನಮಗೆ ಕಿರುಕುಳವು ಆಯಿತು. ನ್ಯಾಯ ನೀಡಿದ್ದಕ್ಕಾಗಿ ನಾವು ಗುವಾಹಟಿ ಹೈಕೋರ್ಟ್‌ಗೆ ಕೃತಜ್ಞರಾಗಿರುತ್ತೇವೆ” ಎಂದು ಹಸಿನಾ ಭಾನು ಅವರ ಸೋದರ ಅಕ್ರಂ ಹುಸೇನ್ ಹೇಳಿದ್ದಾರೆ.

“ಹಸೀನಾ ಭಾನು ಬಡ ರೈತ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ಎಲ್ಲಾ ದಾಖಲೆಗಳು ಕ್ರಮಬದ್ಧವಾಗಿವೆ” ಎಂದು ಹಸೀನಾ ಭಾನು ಅವರ ವಕೀಲ ಜಾಕಿರ್ ಹುಸೇನ್ ಹೇಳಿದ್ದಾರೆ.

ಅಸ್ಸಾಂನಲ್ಲಿ ಪೌರತ್ವ ಪ್ರಕರಣಗಳಲ್ಲಿ ಕೆಲಸ ಮಾಡುತ್ತಿರುವ ವಕೀಲಾಗಿರುವ ಜಾಕಿರ್‌ ಹುಸೇನ್‌, “ಈ ತೀರ್ಪು ಬಹಳ ಮಹತ್ವದ್ದಾಗಿದೆ. ಯಾಕೆಂದರೆ ವಿದೇಶಿಯರ ನ್ಯಾಯಮಂಡಳಿಗಳು ಈ ಹಿಂದೆ ‘ಭಾರತೀಯ’ ಎಂದು ಘೋಷಿಸಿದ ಅದೇ ವ್ಯಕ್ತಿಗಳ ವಿರುದ್ಧ ವಿಚಾರಣೆಯನ್ನು ಪ್ರಾರಂಭಿಸುವುದು ಸಾಮಾನ್ಯವಾಗಿದೆ. ಇದರ ವಿರುದ್ದ ಈ ತೀರ್ಪು ಉತ್ತಮ ನಿದರ್ಶನವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...