Homeಮುಖಪುಟ'ಭಾರತೀಯ' ಎಂದು ಘೋಷಿಸಲ್ಪಟ್ಟು ನಂತರ 'ವಿದೇಶಿ' ಎಂದು ಬಂಧಿಸಲ್ಪಟ್ಟ ಮಹಿಳೆಯ ಬಿಡುಗಡೆಗೆ ಗುವಾಹಟಿ ಹೈಕೋರ್ಟ್ ಆದೇಶ

‘ಭಾರತೀಯ’ ಎಂದು ಘೋಷಿಸಲ್ಪಟ್ಟು ನಂತರ ‘ವಿದೇಶಿ’ ಎಂದು ಬಂಧಿಸಲ್ಪಟ್ಟ ಮಹಿಳೆಯ ಬಿಡುಗಡೆಗೆ ಗುವಾಹಟಿ ಹೈಕೋರ್ಟ್ ಆದೇಶ

- Advertisement -
- Advertisement -

ವಿದೇಶಿಯರ ನ್ಯಾಯಮಂಡಳಿ (ಎಫ್‌ಟಿ)ಯು 2016 ರಲ್ಲಿ ‘ಭಾರತೀಯ’ ಎಂದು ಘೋಷಿಸಿ ನಂತರ, 2021 ರಲ್ಲಿ ‘ವಿದೇಶಿ’ ಎಂದು ಘೋಷಿಸಿದ್ದ 55 ವರ್ಷದ ಅಸ್ಸಾಂ ನಿವಾಸಿ ಹಸೀನಾ ಭಾನು ಅವರನ್ನು ಬಿಡುಗಡೆಗೊಳಿಸುವಂತೆ ಗುವಾಹಟಿ ಹೈಕೋರ್ಟ್‌ ಮಧ್ಯಪ್ರವೇಶಿಸಿ ಆದೇಶ ನೀಡಿದೆ.

ಹಸೀನಾ ಭಾನು, ಅಸ್ಸಾಂನ ದರ್ರಾಂಗ್ ನಿವಾಸಿಯಾಗಿದ್ದು, ಎಫ್‌ಟಿಯು ಅಕ್ಟೋಬರ್‌ ತಿಂಗಳಲ್ಲಿ ವಿದೇಶಿಯೆಂದು ಘೋಷಿಸಿತ್ತು. ಇದರ ನಂತರ ಅವರನ್ನು ತೇಜ್‌ಪುರ ಬಂಧನ ಶಿಬಿರದಲ್ಲಿ ಇರಿಸಲಾಗಿತ್ತು. ಈ ವೇಳೆ ಅವರು, 2016 ರಲ್ಲಿ ಎಫ್‌ಟಿಯು ತನ್ನನ್ನು ವಿದೇಶಿ ಅಥವಾ ಅಕ್ರಮ ವಲಸಿಗ ಅಲ್ಲ ಎಂದು ಘೋಷಿಸಿದ್ದನ್ನು ಉಲ್ಲೇಖಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ಇದನ್ನೂ ಓದಿ:ಕಳೆದ 5 ವರ್ಷಗಳಲ್ಲಿ ಭಾರತದ ಪೌರತ್ವ ಪಡೆದವರಿಗಿಂತ ತ್ಯಜಿಸಿದವರು 56 ಪಟ್ಟು ಜಾಸ್ತಿ!

ಅಸ್ಸಾಂನ ಮಾಂಗ್ಲೋದೊಯ್‌‌ನಲ್ಲಿರುವ 1 ನೇ ಎಫ್‌ಟಿಯು 2016ರ ಆಗಸ್ಟ್ ತಿಂಗಳಲ್ಲಿ, “ಹಸೀನಾ ಭಾನು ವಿದೇಶಿ ಅಥವಾ ಅಕ್ರಮ ವಲಸಿಗ” ಅಲ್ಲ ಎಂದು ಘೋಷಿಸಿತ್ತು. ಆದಾಗ್ಯೂ, 2017ರಲ್ಲಿ ಆಕೆ ಬಾಂಗ್ಲಾದೇಶಿ ಪ್ರಜೆಯೆಂದು ಶಂಕಿಸಿ ಅಸ್ಸಾಂ ಬಾರ್ಡರ್ ಪೋಲೀಸರು ಉಲ್ಲೇಖಿಸಿದ ನಂತರ ಅದೇ ಎಫ್‌ಟಿಯಲ್ಲಿ ಆಕೆಯ ವಿರುದ್ಧ ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿತ್ತು.

2021 ಮಾರ್ಚ್‌ ತಿಂಗಳಲ್ಲಿ ನ್ಯಾಯಮಂಡಳಿಯು ಆಕೆಯನ್ನು “ವಿದೇಶಿ” ಎಂದು ಘೋಷಿಸುವ ಅಭಿಪ್ರಾಯವನ್ನು ಅಂಗೀಕರಿಸಿತ್ತು. ಇದರ ನಂತರ ಆಕೆಯನ್ನು ಬಂಧಿಸಿ ಅಕ್ಟೋಬರ್‌ನಲ್ಲಿ ತೇಜ್‌ಪುರ ಜೈಲಿನಲ್ಲಿ ಬಂಧನ ಶಿಬಿರದಲ್ಲಿ ಇರಿಸಲಾಗಿತ್ತು.

ಗುವಾಹತ್‌ ಹೈಕೋರ್ಟ್‌ ಸೋಮವಾರದಂದು ವಿದೇಶಿಯರ ನ್ಯಾಯಮಂಡಳಿಯ 2021 ರ ಅಭಿಪ್ರಾಯವನ್ನು ಬದಿಗಿಟ್ಟು, “ಎಫ್‌‌ಟಿಯ ಎರಡೂ ತೀರ್ಪುಗಳಲ್ಲಿ ಅರ್ಜಿದಾರರ ಗುರುತು ಒಂದೇ ಆಗಿರುತ್ತದೆ ಮತ್ತು ಒಂದೇ ವ್ಯಕ್ತಿಗೆ ಸಂಬಂಧಿಸಿದಂತೆ ಎರಡನೇ ಆಕ್ಷೇಪಾರ್ಹ ಅಭಿಪ್ರಾಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ:ಮುಸ್ಲಿಮೇತರ ನಿರಾಶ್ರಿತರಿಂದ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿದ ಕೇಂದ್ರ ಸರ್ಕಾರ

2019 ರ ಸುಪ್ರೀಂ ಕೋರ್ಟ್ ತೀರ್ಪನ್ನೂ ಉಲ್ಲೇಖಿಸಿದ [ಅಬ್ದುಲ್ ಕುದ್ದೂಸ್ Vs. ಯೂನಿಯನ್ ಆಫ್ ಇಂಡಿಯಾ, (2019) 6 SCC 604] ಹೈಕೋರ್ಟ್‌, “ರೆಸ್ ಜುಡಿಕಟ ತತ್ವವು ಒಮ್ಮೆ ತೀರ್ಪು ನೀಡಿದ ನಂತರ ಅದೇ ಜನರು ಅದೇ ಸಮಸ್ಯೆಯನ್ನು ಪುನಃ ತೆರೆಯುವುದನ್ನು ತಡೆಯುತ್ತದೆ. ಈ ತತ್ವ ವಿದೇಶಿಯರ ನ್ಯಾಯಮಂಡಳಿಯ ಮುಂದೆ ನಡೆಯುವ ಪ್ರಕ್ರಿಯೆಯಲ್ಲಿಯೂ ಸಹ ಅನ್ವಯಿಸುತ್ತದೆ” ಎಂದು ಹೇಳಿದೆ.

“ವಿದೇಶಿಯರ ನ್ಯಾಯಮಂಡಳಿಯು ಈ ವಿಷಯವನ್ನು ಹೇಗೆ ಪರಿಶೀಲಿಸಿತು ಮತ್ತು ಮೇಲೆ ಹೇಳಿದ ಅವಲೋಕನವನ್ನು ಹೇಗೆ ಮಾಡಿದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಎನ್ ಕೋಟೀಶ್ವರ್ ಸಿಂಗ್ ಮತ್ತು ಮಾಲಾಶ್ರೀ ನಂದಿ ಅವರ ಪೀಠವು ಹೇಳಿದ್ದು, ಹೆಚ್ಚಿನ ದಾಖಲೆಗಳನ್ನು ಕೇಳದೆ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚಿಸಿದೆ.

ಸೋಮವಾರ ನ್ಯಾಯಾಲಯದ ನಿರ್ದೇಶನದ ನಂತರ ಹಸೀನಾ ಭಾನು ಅವರನ್ನು ಬಿಡುಗಡೆ ಆದೇಶವನ್ನು ಅನುಮೋದಿಸಿದ್ದಾಗಿ ದರ್ರಾಂಗ್ ಎಸ್ಪಿ ಸುಶಾಂತ ಬಿಸ್ವಾ ಶರ್ಮಾ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದ ಅರ್ಜಿದಾರನಿಗೆ 25 ಸಾವಿರ ದಂಡ!

ಹಸೀನಾ ಭಾನು ಅವರನ್ನು ಗುರುವಾರದಂದು ತೇಜ್‌ಪುರ ಜೈಲಿನಿಂದ (ದರ್ಂಗ್‌ನಿಂದ ಸುಮಾರು 100 ಕಿಮೀ ದೂರ) ಕರೆದುಕೊಂಡು ಹೋಗುವುದಾಗಿ ಕುಟುಂಬಸ್ಥರು ತಿಳಿಸಿದ್ದರು.

“ನಮಗೆ ಈಗ ಸಮಾಧಾನವಾಗಿದೆ. ಅವರನ್ನು ಈಗಾಗಲೇ 2016 ರಲ್ಲಿ ಭಾರತೀಯ ಎಂದು ಘೋಷಿಸಲಾಗಿತ್ತು. ಆದರೆ ಅದೇ ನ್ಯಾಯಾಲಯವು 2019 ರಲ್ಲಿ ಅವರ ಮೇಲೆ ಮತ್ತೊಂದು ವಿದೇಶಿ ಪ್ರಕರಣವನ್ನು ಹಾಕಿ…ನಮ್ಮನ್ನು ಓಡಾಡುವಂತೆ ಮಾಡಿತು. ಇದರಿಂದಾಗಿ ಸಾಕಷ್ಟು ಹಣವು ಖರ್ಚಾಗಿದ್ದು, ನಮಗೆ ಕಿರುಕುಳವು ಆಯಿತು. ನ್ಯಾಯ ನೀಡಿದ್ದಕ್ಕಾಗಿ ನಾವು ಗುವಾಹಟಿ ಹೈಕೋರ್ಟ್‌ಗೆ ಕೃತಜ್ಞರಾಗಿರುತ್ತೇವೆ” ಎಂದು ಹಸಿನಾ ಭಾನು ಅವರ ಸೋದರ ಅಕ್ರಂ ಹುಸೇನ್ ಹೇಳಿದ್ದಾರೆ.

“ಹಸೀನಾ ಭಾನು ಬಡ ರೈತ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ಎಲ್ಲಾ ದಾಖಲೆಗಳು ಕ್ರಮಬದ್ಧವಾಗಿವೆ” ಎಂದು ಹಸೀನಾ ಭಾನು ಅವರ ವಕೀಲ ಜಾಕಿರ್ ಹುಸೇನ್ ಹೇಳಿದ್ದಾರೆ.

ಅಸ್ಸಾಂನಲ್ಲಿ ಪೌರತ್ವ ಪ್ರಕರಣಗಳಲ್ಲಿ ಕೆಲಸ ಮಾಡುತ್ತಿರುವ ವಕೀಲಾಗಿರುವ ಜಾಕಿರ್‌ ಹುಸೇನ್‌, “ಈ ತೀರ್ಪು ಬಹಳ ಮಹತ್ವದ್ದಾಗಿದೆ. ಯಾಕೆಂದರೆ ವಿದೇಶಿಯರ ನ್ಯಾಯಮಂಡಳಿಗಳು ಈ ಹಿಂದೆ ‘ಭಾರತೀಯ’ ಎಂದು ಘೋಷಿಸಿದ ಅದೇ ವ್ಯಕ್ತಿಗಳ ವಿರುದ್ಧ ವಿಚಾರಣೆಯನ್ನು ಪ್ರಾರಂಭಿಸುವುದು ಸಾಮಾನ್ಯವಾಗಿದೆ. ಇದರ ವಿರುದ್ದ ಈ ತೀರ್ಪು ಉತ್ತಮ ನಿದರ್ಶನವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ದೇಶ ವಿಭಜನೆ ಕಾಲದ ನಿರಾಶ್ರಿತರಿಗೆ ಪೌರತ್ವದ ಕುರಿತು ಸಂವಿಧಾನ ಸಭೆಯಲ್ಲಿ ಕಾವೇರಿದ ಚರ್ಚೆ: ಯುದ್ಧವಿನ್ನೂ ಮುಗಿದಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...