Homeಮುಖಪುಟಗ್ವಾಲಿಯರ್‌: ತನ್ನ ಪಾದ ನೆಕ್ಕುವಂತೆ ಮುಸ್ಲಿಂ ವ್ಯಕ್ತಿಗೆ ಚಪ್ಪಲಿಯಿಂದ ಥಳಿಸಿದ ಹಿಂದುತ್ವ ಮುಖಂಡ; ವೀಡಿಯೊ ವೈರಲ್

ಗ್ವಾಲಿಯರ್‌: ತನ್ನ ಪಾದ ನೆಕ್ಕುವಂತೆ ಮುಸ್ಲಿಂ ವ್ಯಕ್ತಿಗೆ ಚಪ್ಪಲಿಯಿಂದ ಥಳಿಸಿದ ಹಿಂದುತ್ವ ಮುಖಂಡ; ವೀಡಿಯೊ ವೈರಲ್

- Advertisement -
- Advertisement -

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಚಲಿಸುವ ವಾಹನದಲ್ಲಿ ಗೋಲು ಗುರ್ಜರ್ ಮತ್ತು ಅವನ ಸ್ನೇಹಿತರು ಮೊಹ್ಸಿನ್‌ ಎನ್ನುವ ಮುಸ್ಲಿಂ ವ್ಯಕ್ತಿಯನ್ನು ಚಪ್ಪಲಿಯಿಂದ ಥಳಿಸಿದ್ದಾರೆ ಮತ್ತು ನಿಂದನೆ ಮಾಡುತ್ತ ಅವನ ಪಾದಗಳನ್ನು ನೆಕ್ಕುವಂತೆ ಒತ್ತಾಯಿಸುತ್ತಿರುವ ವಿಡಿಯೋ ವೈರಲ್ ಆಗಿದೆ. (ಗೋಲು ಗುರ್ಜರ್ ಹಿಂದುತ್ವ ಸಂಘಟನೆಯ ಮುಖಂಡ)

ರಾಜ್ಯದಲ್ಲಿ ಸಿಧಿ ಮೂತ್ರ ವಿಸರ್ಜನೆಯ ಘಟನೆಯ ಕೋಲಾಹಲದ ನಡುವೆಯೇ ಈ ಘಟನೆ ನಡೆದಿದೆ. ಈ ವೀಡಿಯೊ ವೈರಲ್ ಆದಬೆನ್ನಲ್ಲೇ ಇಬ್ಬರನ್ನು ಬಂಧಿಸಲಾಗಿದೆ. ಸಂತ್ರಸ್ತೆ ಮತ್ತು ಆರೋಪಿಗಳು ಗ್ವಾಲಿಯರ್ ಜಿಲ್ಲೆಯ ದಾಬ್ರಾ ಪಟ್ಟಣದ ನಿವಾಸಿಗಳು ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಸಂತ್ರಸ್ತ ವ್ಯಕ್ತಿಗೆ ಇನ್ನೊಬ್ಬ ವ್ಯಕ್ತಿ ಹಲವು ಬಾರಿ ಕಪಾಳಮೋಕ್ಷ ಮಾಡುತ್ತಿದ್ದಾನೆ. ಅವನು ಚಲಿಸುವ ವಾಹನದಲ್ಲಿ “ಗೋಲು ಗುರ್ಜರ್ ಬಾಪ್ ಹೈ” (ಗೋಲು ಗುರ್ಜರ್ ತಂದೆ) ಎಂದು ಹೇಳಲು ಒತ್ತಾಯ ಮಾಡುತ್ತಿರುವುದನ್ನು ಕಾಣಬಹುದು.

ನಂತರ ಸಂತ್ರಸ್ತನು ಆರೋಪಿಯ ಪಾದವನ್ನು ನೆಕ್ಕುತ್ತಿರುವುದನ್ನು ಕಾಣಬಹುದು. ಆರೋಪಿಯು ಸಂತ್ರಸ್ತೆಯ ಮುಖದ ಮೇಲೆ ಪದೇ ಪದೇ ಥಳಿಸುವುದು ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸುವುದನ್ನು ಸಹ ಕಾಣಬಹುದು. ಮತ್ತೊಂದು ವೀಡಿಯೊ ಕ್ಲಿಪ್‌ನಲ್ಲಿ, ಆರೋಪಿಯು ಬಲಿಪಶುವಿನ ಮುಖದ ಮೇಲೆ ಪಾದರಕ್ಷೆಯಿಂದ ಹಲವಾರು ಬಾರಿ ಹೊಡೆಯುವುದನ್ನು ಕಾಣಬಹುದು.

ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ದಬ್ರಾ ಉಪವಿಭಾಗದ ಪೊಲೀಸ್ ಅಧಿಕಾರಿ (SDOP) ವಿವೇಕ್ ಕುಮಾರ್ ಶರ್ಮಾ ಅವರು, ”ಶುಕ್ರವಾರ ಸಂಜೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ವೈರಲ್ ಆಗಿದ್ದು, ಅದು ವ್ಯಕ್ತಿಯೊಬ್ಬನನ್ನು ವಾಹನದಲ್ಲಿ ಥಳಿಸುತ್ತಿರುವುದನ್ನು ತೋರಿಸುತ್ತದೆ. ವೀಡಿಯೊ ಕ್ಲಿಪ್ ಅನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

”ಸಂತ್ರಸ್ತನ ಕುಟುಂಬದ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಅಪಹರಣ ಮತ್ತು ಥಳಿಸಿದ ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ಯುವಕರಿಗೆ ಮಲ ತಿನಿಸಿ ಮೆರವಣಿಗೆ: ಮಧ್ಯಪ್ರದೇಶದಲ್ಲಿ ಮುಂದುವರೆದ ಜಾತಿ ದೌರ್ಜನ್ಯ

ಮಧ್ಯಪ್ರದೇಶ: ಇಬ್ಬರು ದಲಿತ ಯುವಕರಿಗೆ ಮಲ ತಿನಿಸಿ ಮೆರವಣಿಗೆ

ಮಧ್ಯಪ್ರದೇಶದಲ್ಲಿ ಇತ್ತಿಚೆಗೆ ಆದಿವಾಸಿ ವ್ಯಕ್ತಿ ಮೇಲೆ ಬಿಜೆಪಿ ಮುಖಂಡನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ಮತ್ತೊಂದು ಆಘಾತಕಾರಿ, ಹೇಯ ಕೃತ್ಯ ಬಹಿರಂಗವಾಗಿದೆ. ಇಬ್ಬರು ದಲಿತ ಯುವಕರಿಗೆ ಮಲ ತಿನಿಸಿ ಮೆರವಣಿಗೆ ಮಾಡಲಾಗಿದೆ.

ಮಧ್ಯಪ್ರದೇಶದ ಶಿವಗಿರಿ ಎಂಬಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಇಬ್ಬರು ದಲಿತ ಯುವಕರ ಮುಖಕ್ಕೆ ಮಸಿ ಬಳಿದು, ಮಲ ತಿನಿಸಿ, ಚಪ್ಪಲಿ ಹಾರ ಹಾಕಿ ಊರೆಲ್ಲಾ ಮೆರವಣಿಗೆ ಮಾಡಲಾಗಿದೆ. ಅಲ್ಲದೆ ಅವರ ಮನೆಯನ್ನೂ ದ್ವಂಸ ಮಾಡಲಾಗಿದೆ.

ಈ ಘಟನೆ ಜೂನ್​ 30ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿ 7 ಜನರನ್ನು ಬಂಧಿಸಲಾಗಿದೆ.

”ಆರೋಪಿ ಕುಟುಂಬದ ಯುವತಿ(26)ಯೊಂದಿಗೆ 23 ಮತ್ತು 24 ವರ್ಷ ವಯಸ್ಸಿನ ಇಬ್ಬರು ದಲಿತ ಯುವಕರು ಫೋನ್‌ನಲ್ಲಿ ಮಾತನಾಡಿದ್ದಾರೆ. ಈ ವಿಷಯ ತಿಳಿದ ಮನೆಯವರು ಆ ಇಬ್ಬರು ಯುವಕರನ್ನು ಮನೆಗೆ ಕರೆಸುವಂತೆ ಯುವತಿಗೆ ಒತ್ತಾಯಿಸಿದ್ದಾರೆ. ಅದರಂತೆ ಯುವಕರ ಜೂನ್ 30ರಂದು ಯುವತಿಯ ಮನೆಗೆ ಬಂದಾಗ ಕುಟುಂಬಸ್ಥರೆಲ್ಲ ಸೇರಿಕೊಂಡು ಯುವಕರ ಮೇಲೆ ಹಲ್ಲೆ ನಡೆಸಿ, ಮುಖಕ್ಕೆ ಕಪ್ಪು ಮಸಿ ಬಳಿದು, ಮಲವನ್ನು ತಿನ್ನುವಂತೆ ಒತ್ತಾಯಿಸಿದ್ದಾರೆ. ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ” ಎಂದು ಶಿವಪುರಿ ಎಸ್‌ಪಿ ರಘುವಂಶ್ ಸಿಂಗ್ ಭಡೋರಿಯಾ ಹೇಳಿದ್ದಾರೆ.

”ತಮ್ಮ ಮನೆಯ ಯುವತಿಗೆ ಕಿರುಕುಳ ನೀಡಿದ್ದಕ್ಕಾಗಿ ಮತ್ತು ಅನುಚಿತವಾಗಿ ಸ್ಪರ್ಶಿಸಿದ್ದಕ್ಕಾಗಿ ಇಬ್ಬರು ಯುವಕರನ್ನು ಥಳಿಸಿದ್ದಾಗಿ ಕುಟುಂಬಸ್ಥರು ಹೇಳಿಕೆ ನೀಡಿದ್ದಾರೆ. ತನಿಖೆಯ ಸಂದರ್ಭದಲ್ಲಿ ಕುಟುಂಬದವರ ಹೇಳಿಕೆಗಳು ಸುಳ್ಳು ಎಂದು ಸಾಬೀತಾಗಿದ್ದು ಆರೋಪಿಗಳು ತಮ್ಮನ್ನು ಲೈಂಗಿಕ ಕಿರುಕುಳದ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸಿದ್ದಾರೆ” ಎಂದು ದಲಿತ ಯುವಕರು ಕಣ್ಣೀರಿಟ್ಟಿದ್ದಾರೆ.

”ನಮ್ಮನ್ನು ಭೇಟಿಯಾಗಲು ಕರೆದ ನಂತರ ನಾವು ಅವರ ಮನೆಗೆ ಹೋದೆವು. ನಾವು ಯಾವುದೇ ಅಪರಾಧ ಮಾಡಿಲ್ಲ” ಎಂದು ದೌರ್ಜನ್ಯಕ್ಕೊಳಗಾದ ಇಬ್ಬರು ಯುವಕರು ತಿಳಿಸಿದ್ದಾರೆ.

ಇದನ್ನೂ ಓದಿ: ಸಿಧಿ ಮೂತ್ರ ವಿಸರ್ಜನೆ ಪ್ರಕರಣ ಟೀಕಿಸಿ ಕಾರ್ಟೂನ್ ಟ್ವೀಟ್: ಗಾಯಕಿ ನೇಹಾ ಸಿಂಗ್ ವಿರುದ್ಧ FIR ದಾಖಲು

ಸಿಧಿ ಮೂತ್ರ ವಿಸರ್ಜನೆ ಪ್ರಕರಣದ ಆರೋಪಿ ಬಂಧನ

ಇತ್ತಿಚೆಗೆ ರಾಜ್ಯದ ಸಿಧಿ ಜಿಲ್ಲೆಯಲ್ಲಿ ಬುಡಕಟ್ಟು ಯುವಕನ ಮೇಲೆ ಬಿಜೆಪಿ ಮುಖಂಡನೊಬ್ಬ ಮೂತ್ರ ವಿಸರ್ಜನೆ ಮಾಡಿರುವ ವೀಡಿಯೊ ವೈರಲ್ ಆಗಿತ್ತು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಯ ವಿಡಿಯೋ ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಆರೋಪಿ ಪ್ರವೇಶ್ ಶುಕ್ಲಾನನ್ನು ಬಂಧಿಸಲಾಗಿದೆ.

ಸಿಧಿ ಜಿಲ್ಲೆಯಲ್ಲಿ ಮೂತ್ರ ವಿಸರ್ಜನೆ ಘಟನೆಯ ಸಂತ್ರಸ್ತರು ಕೃತ್ಯದಲ್ಲಿ ಭಾಗಿಯಾಗಿರುವ ಶುಕ್ಲಾಗೆ ತನ್ನ ತಪ್ಪಿನ ಅರಿವಾಗಿದೆ ಹಾಗಾಗಿ ಅವರನ್ನು ಬಿಡುಗಡೆ ಮಾಡಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಶುಕ್ಲಾ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

”ಸರಕಾರಕ್ಕೆ ನನ್ನ ಬೇಡಿಕೆ ಏನೆಂದರೆ (ಆರೋಪಿಯಿಂದ) ತಪ್ಪಾಗಿದೆ … ಈಗ ಪ್ರವೇಶ್ ಶುಕ್ಲಾ ಅವರನ್ನು ಬಿಡುಗಡೆ ಮಾಡಬೇಕು. ಈ ಹಿಂದೆ ಏನು ನಡೆದಿದ್ದರೂ, ಅವರು ತಮ್ಮ ತಪ್ಪನ್ನು ಅರಿತುಕೊಂಡಿದ್ದಾರೆ” ಎಂದು ಆರೋಪಿಗಳ ವಿರುದ್ಧದ ಕ್ರಮದ ಬಗ್ಗೆ ಬುಡಕಟ್ಟು ಯುವಕ ರಾವತ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....