Homeಮುಖಪುಟಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ನೂತನ ಮುಖ್ಯ ಚು. ಆಯುಕ್ತ ಜ್ಞಾನೇಶ್...

ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ನೂತನ ಮುಖ್ಯ ಚು. ಆಯುಕ್ತ ಜ್ಞಾನೇಶ್ ಕುಮಾರ್

- Advertisement -
- Advertisement -

ಚುನಾವಣಾ ಆಯುಕ್ತರಾಗಿದ್ದ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಸೋಮವಾರ (ಫೆಬ್ರವರಿ 17, 2025) ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ.

ಚುನಾವಣಾ ಆಯುಕ್ತರ (ಇಸಿ) ನೇಮಕ ಸಮಿತಿಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನು ಹೊರಗಿಡುವ ಹೊಸ ಕಾನೂನು ಜಾರಿಯಾದ ಬಳಿಕ ನೇಮಕಗೊಂಡ ಮೊದಲ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್.

ಇವರ ಅಧಿಕಾರಾವಧಿ ಜನವರಿ 26, 2029ರವರೆಗೆ ಇರಲಿದೆ. ಅಂದರೆ, ಚುನಾವಣಾ ಆಯೋಗವು ಮುಂದಿನ ಲೋಕಸಭಾ ಚುನಾವಣಾ ವೇಳಾಪಟ್ಟಿ ಘೋಷಿಸುವ ಕೆಲವು ದಿನಗಳ ಮೊದಲು ಅಧಿಕಾರವಧಿ ಕೊನೆಯಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಸಮಿತಿಯು ನವದೆಹಲಿಯಲ್ಲಿ ಸಭೆ ನಡೆಸಿದ ನಂತರ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಜ್ಞಾನೇಶ್ ಕುಮಾರ್ ಬುಧವಾರ (ಫೆಬ್ರವರಿ 19, 2025) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಂದೇ ಅವರ ನೇಮಕ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

“ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯುಕ್ತರ ನೇಮಕ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ನಿರ್ಧರಿಸುವವರೆಗೆ, ಹೊಸ ಆಯುಕ್ತರನ್ನು ನೇಮಿಸದಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಅದನ್ನು ಲೆಕ್ಕಿಸದೆ ತರಾತುರಿಯಲ್ಲಿ ಆಯುಕ್ತರನ್ನು ನೇಮಿಸಲಾಗಿದೆ. ಇದು ಸಂವಿಧಾನದ ಆಶಯಕ್ಕೆ ವಿರುದ್ದ” ಎಂದು ಕಾಂಗ್ರೆಸ್ ಆರೋಪಿಸಿದೆ.

ಜ್ಞಾನೇಶ್ ಕುಮಾರ್ ಗುರುವಾರ (ಫೆ.20) ನಿವೃತ್ತಯಾಗಲಿರುವ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಂತರ ನೇಮಕಗೊಂಡಿರುವ ಅತ್ಯಂತ ಹಿರಿಯ ಚುನಾವಣಾ ಆಯುಕ್ತರಾಗಿದ್ದಾರೆ.

ಐಎಎಸ್‌ ಹುದ್ದೆಯಿಂದ ನಿವೃತ್ತರಾದ ಎರಡು ತಿಂಗಳೊಳಗೆ, ಮಾರ್ಚ್ 14, 2024ರಂದು ಜ್ಞಾನೇಶ್ ಕುಮಾರ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಯಿತು. ಅವರು ಮಾರ್ಚ್ 15ರಂದು ಅಧಿಕಾರ ವಹಿಸಿಕೊಂಡರು. ಮರುದಿನವೇ, ಭಾರತದ ಚುನಾವಣಾ ಆಯೋಗವು ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿತು.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಸಹ ಚುನಾವಣಾ ಆಯುಕ್ತ ಡಾ. ಸುಖ್‌ಬೀರ್ ಸಿಂಗ್ ಸಂಧು ಅವರೊಂದಿಗೆ ಕಳೆದ 11 ತಿಂಗಳಿನಿಂದ ಜ್ಞಾನೇಶ್ ಕುಮಾರ್ ಅವರು ಭಾರತೀಯ ಚುನಾವಣಾ ಆಯೋಗದ ಭಾಗವಾಗಿದ್ದಾರೆ. ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ವಿಧಾನಸಭಾ ಚುನಾವಣೆ, 2024ರ ಲೋಕಸಭಾ ಚುನಾವಣೆ ಮತ್ತು ಹರಿಯಾಣ, ಜಾರ್ಖಂಡ್, ಮಹಾರಾಷ್ಟ್ರ ಮತ್ತು ದೆಹಲಿಯ ವಿಧಾನಸಭಾ ಚುನಾವಣೆಗಳನ್ನು ಈ ಅವಧಿಯಲ್ಲಿ ಆಯೋಗ ನಡೆಸಿದೆ.

ಹೊಸ ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ಅವರ ಅಧಿಕಾರಾವಧಿಯು ಜನವರಿ 26, 2029 ರವರೆಗೆ ಇರುತ್ತದೆ. ಈ ಅವಧಿಯಲ್ಲಿ 20 ವಿಧಾನಸಭಾ ಚುನಾವಣೆಗಳು, 2027ರಲ್ಲಿ ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿ ಚುನಾವಣೆಗಳು ನಡೆಯಲಿವೆ. 2029ರ ಲೋಕಸಭಾ ಚುನಾವಣೆಗೆ ಆಯೋಗದ ಸಿದ್ದತೆ ಮಾಡಿಕೊಳ್ಳಲಿದೆ.

1988ರ ಬ್ಯಾಚ್‌ನ ಕೇರಳ ಕೇಡರ್‌ನ ಮಾಜಿ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಯಾಗಿರುವ ಜ್ಞಾನೇಶ್ ಕುಮಾರ್, ಜನವರಿ 31, 2024 ರಂದು ಕೇಂದ್ರ ಸಹಕಾರ ಕಾರ್ಯದರ್ಶಿಯಾಗಿದ್ದಾಗ ನಿವೃತ್ತರಾದರು. ಮಾರ್ಚ್ 14, 2024 ರಂದು ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಯಿತು.

ಕೇಂದ್ರ ಗೃಹ ಸಚಿವಾಲಯದಲ್ಲಿ ಸೇವೆ ಸಲ್ಲಿಸಿದ ಅವಧಿಯಲ್ಲಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ನಿರ್ಧಾರಗಳನ್ನು ಅನುಷ್ಠಾನಗೊಳಿಸುವಲ್ಲಿ ಮತ್ತು ಆಯೋಧ್ಯೆಯ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸ್ಥಾಪನೆಯಲ್ಲಿ ಜ್ಞಾನೇಶ್ ಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು.

ಶಿಕ್ಷಣ ಮತ್ತು ವೃತ್ತಿಜೀವನ

ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಯಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಮುಗಿಸಿದ ನಂತರ, ಜ್ಞಾನೇಶ್ ಕುಮಾರ್ ಐಸಿಎಫ್‌ಎಐಯಲ್ಲಿ ವ್ಯವಹಾರ ಹಣಕಾಸು ಮತ್ತು ಅಮೆರಿಕದ ಹಾರ್ವರ್ಡ್ ವಿಶ್ವವಿದ್ಯಾಲಯದ ಹೆಚ್‌ಐಐಡಿಯಲ್ಲಿ ಭಾರತ ಮತ್ತು ಪರಿಸರ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ.

ಕೇರಳ ಸರ್ಕಾರದಲ್ಲಿ ಎರ್ನಾಕುಲಂನ ಸಹಾಯಕ ಕಲೆಕ್ಟರ್, ಅಡೂರ್‌ನ ಉಪ-ಕಲೆಕ್ಟರ್, ಕೇರಳ ರಾಜ್ಯ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಕೊಚ್ಚಿನ್ ಕಾರ್ಪೊರೇಶನ್‌ನ ಆಯುಕ್ತರಾಗಿ ಮತ್ತು ಇತರ ಹುದ್ದೆಗಳಲ್ಲಿ ಜ್ಞಾನೇಶ್ ಕುಮಾರ್ ಕೆಲಸ ಮಾಡಿದ್ದಾರೆ.

ಕೇರಳ ಸರ್ಕಾರದ ಕಾರ್ಯದರ್ಶಿಯಾಗಿ, ಜ್ಞಾನೇಶ್ ಕುಮಾರ್ ಹಣಕಾಸು ಸಂಪನ್ಮೂಲಗಳು, ತ್ವರಿತ ಯೋಜನೆಗಳು ಮತ್ತು ಲೋಕೋಪಯೋಗಿ ಇಲಾಖೆಯಂತಹ ವೈವಿಧ್ಯಮಯ ಇಲಾಖೆಗಳನ್ನು ನಿರ್ವಹಿಸಿದ್ದಾರೆ.

ಭಾರತ ಸರ್ಕಾರದಲ್ಲಿ, ಅವರು ರಕ್ಷಣಾ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿ, ಗೃಹ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿ ಮತ್ತು ಹೆಚ್ಚುವರಿ ಕಾರ್ಯದರ್ಶಿ, ಸಂಸದೀಯ ವ್ಯವಹಾರಗಳ ಖಾತೆ ಸಚಿವಾಲಯದಲ್ಲಿ ಕಾರ್ಯದರ್ಶಿ ಮತ್ತು ಸಹಕಾರ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.

ಹೊಸ ಕಾನೂನಿನಡಿ ನೇಮಕವಾದ ಮೊದಲ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...