Homeಮುಖಪುಟಜ್ಞಾನವಾಪಿ ಪ್ರಕರಣ: ಹಿಂದೂ ಪರ ವಕೀಲನಿಂದ ಎಎಸ್‌ಐ ಸಮೀಕ್ಷೆ ವರದಿ ಬಹಿರಂಗ

ಜ್ಞಾನವಾಪಿ ಪ್ರಕರಣ: ಹಿಂದೂ ಪರ ವಕೀಲನಿಂದ ಎಎಸ್‌ಐ ಸಮೀಕ್ಷೆ ವರದಿ ಬಹಿರಂಗ

- Advertisement -
- Advertisement -

ವಾರಣಾಸಿಯ ಜ್ಞಾನವಾಪಿ ಮಸೀದಿಯು ದೇವಾಲಯದ ಅಡಿಪಾಯದ ಮೇಲೆ ನಿರ್ಮಿಸಲಾಗಿದೆ. ಮಸೀದಿಗೂ ಮುನ್ನ ಅಲ್ಲೊಂದು ದೊಡ್ಡ ಹಿಂದೂ ದೇವಾಲಯವಿತ್ತು ಎಂದು ಹಿಂದೂ ಅರ್ಜಿದಾರರ ಪರ ವಕೀಲ ಹೇಳಿದ್ದಾರೆ. ಇತ್ತೀಚೆಗೆ ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ನಡೆಸಿದ ಸಮೀಕ್ಷೆಯ 839 ಪುಟಗಳ ವರದಿಯಲ್ಲಿ ಈ ವಿಚಾರವನ್ನು ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.

ಗುರುವಾರ ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿಂದೂ ಅರ್ಜಿದಾರರ ಪರ ವಕೀಲ ವಿಷ್ಣು ಜೈನ್, ಎಎಸ್‌ಐ ವರದಿಯದ್ದು ಎನ್ನಲಾದ ಆಯ್ದ ಭಾಗಗಳನ್ನು ಓದಿದರು. “ಪುರಾತತ್ವ ಇಲಾಖೆಯು ತನ್ನ ಸಮೀಕ್ಷೆಯಲ್ಲಿ, ಪೂರ್ವ ಅಸ್ತಿತ್ವದಲ್ಲಿರುವ ರಚನೆ ಮತ್ತು ಕಾರಿಡಾರ್ ಪಕ್ಕದಲ್ಲಿನ ಬಾವಿಯನ್ನು ಕಂಡು ಹಿಡಿದಿದೆ. ಸೆಂಟ್ರಲ್ ಚೇಂಬರ್ ಮತ್ತು ಮುಖ್ಯ ದ್ವಾರವು ಮೊದಲೇ ಅಸ್ತಿತ್ವದಲ್ಲಿರುವ ರಚನೆಯನ್ನು ಹೊಂದಿದೆ. ಎಎಸ್‌ಐ ತನ್ನ ಸಮೀಕ್ಷೆಯಲ್ಲಿ ಕಂಬಗಳು ಮತ್ತು ಅವುಗಳ ಮೇಲಿನ ರಚನೆಗಳನ್ನು ಅಧ್ಯಯನ ಮಾಡಿದೆ. ಎಲ್ಲವೂ ದೇವಾಲಯದ ಭಾಗವಾಗಿದೆ ಎಂದು ಉಲ್ಲೇಖಿಸಿದೆ ಎಂದು ಹೇಳಿದರು.

“ಹಿಂದೂ ದೇವಾಲಯದ 34 ಶಾಸನಗಳು ಮಸೀದಿಯ ಆವರಣದಲ್ಲಿ ಕಂಡು ಬಂದಿವೆ. ಶಾಸನಗಳು ದೇವನಾಗರಿ, ತೆಲುಗು ಮತ್ತು ಕನ್ನಡದಲ್ಲಿವೆ. ಜನಾರ್ದನ, ರುದ್ರ ಮತ್ತು ಉಮೇಶ್ವರ ದೇವತೆಗಳ ಹೆಸರುಗಳು ಶಾಸನಗಳಲ್ಲಿ ಕಂಡು ಬಂದಿವೆ” ಎಂದಿದ್ದಾರೆ.

ಆದಿ ವಿಶ್ವೇಶ್ವರ (ಶಿವ) ಮಂದಿರವನ್ನು ಧ್ವಂಸಗೈದು ಮಸೀದಿ ನಿರ್ಮಿಸಲಾಗಿದೆ ಎಂದು ವಕೀಲ ವಿಷ್ಣು ಜೈನ್ ಹೇಳಿದ್ದಾರೆ. ಮಸೀದಿ ಪರ ಕಾನೂನು ಸಮರ ನಡೆಸುತ್ತಿರುವ ಅಂಜುಮಾನ್ ಇಂತಿಝಾಮಿಯಾ ಮಸೀದಿ ಸಮಿತಿಯ ಜೊತೆ ಕಾರ್ಯದರ್ಶಿ ಎಸ್‌.ಎಂ ಯಾಸೀನ್, ನಾವು ಎಎಸ್‌ಐ ವರದಿಯನ್ನು ಓದಿಲ್ಲ. ವರದಿ ನೋಡಿದ ಬಳಿಕ ಪ್ರತಿಕ್ರಿಯಿಸುತ್ತೇವೆ ಎಂದಿದ್ದಾರೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ ಅವರು ಕಳೆದ ವರ್ಷ ಜುಲೈ 21 ರಂದು ಎಎಸ್‌ಐಗೆ ಜ್ಞಾನವಾಪಿ ಆವರಣದ ವೈಜ್ಞಾನಿಕ ಸಮೀಕ್ಷೆಯನ್ನು ಮಾಡಿ, ಮಸೀದಿಯು ಹಳೆಯ ರಚನೆಯ ಮೇಲೆ ನಿಂತಿದೆಯೇ ಎಂದು ನಿರ್ಧರಿಸಲು ಸೂಚಿಸಿದ್ದರು.

ಅದರಂತೆ ಸಮೀಕ್ಷೆ ನಡೆಸಿದ ಪುರಾತತ್ವ ಇಲಾಖೆಯು ಒಂದು ತಿಂಗಳ ಹಿಂದೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ಕಳೆದ ಬುಧವಾರ, ವಾರಣಾಸಿ ನ್ಯಾಯಾಲಯವು ಎರಡೂ ಕಡೆಯವರಿಗೆ ವರದಿಯನ್ನು ನೀಡುವಂತೆ ಆದೇಶಿಸಿತ್ತು.

ಇದನ್ನೂ ಓದಿ: ಪಿ ಬಿ ವರಾಳೆ ಪ್ರಮಾಣ ವಚನ: ಸುಪ್ರೀಂನಲ್ಲಿ ಮೂರಕ್ಕೇರಿದ ದಲಿತ ಸಮುದಾಯದ ನ್ಯಾಯಮೂರ್ತಿಗಳ ಸಂಖ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...