Homeಮುಖಪುಟಜ್ಞಾನವಾಪಿ ಪ್ರಕರಣ: ಹಿಂದೂ ಪರ ವಕೀಲನಿಂದ ಎಎಸ್‌ಐ ಸಮೀಕ್ಷೆ ವರದಿ ಬಹಿರಂಗ

ಜ್ಞಾನವಾಪಿ ಪ್ರಕರಣ: ಹಿಂದೂ ಪರ ವಕೀಲನಿಂದ ಎಎಸ್‌ಐ ಸಮೀಕ್ಷೆ ವರದಿ ಬಹಿರಂಗ

- Advertisement -
- Advertisement -

ವಾರಣಾಸಿಯ ಜ್ಞಾನವಾಪಿ ಮಸೀದಿಯು ದೇವಾಲಯದ ಅಡಿಪಾಯದ ಮೇಲೆ ನಿರ್ಮಿಸಲಾಗಿದೆ. ಮಸೀದಿಗೂ ಮುನ್ನ ಅಲ್ಲೊಂದು ದೊಡ್ಡ ಹಿಂದೂ ದೇವಾಲಯವಿತ್ತು ಎಂದು ಹಿಂದೂ ಅರ್ಜಿದಾರರ ಪರ ವಕೀಲ ಹೇಳಿದ್ದಾರೆ. ಇತ್ತೀಚೆಗೆ ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ನಡೆಸಿದ ಸಮೀಕ್ಷೆಯ 839 ಪುಟಗಳ ವರದಿಯಲ್ಲಿ ಈ ವಿಚಾರವನ್ನು ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.

ಗುರುವಾರ ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿಂದೂ ಅರ್ಜಿದಾರರ ಪರ ವಕೀಲ ವಿಷ್ಣು ಜೈನ್, ಎಎಸ್‌ಐ ವರದಿಯದ್ದು ಎನ್ನಲಾದ ಆಯ್ದ ಭಾಗಗಳನ್ನು ಓದಿದರು. “ಪುರಾತತ್ವ ಇಲಾಖೆಯು ತನ್ನ ಸಮೀಕ್ಷೆಯಲ್ಲಿ, ಪೂರ್ವ ಅಸ್ತಿತ್ವದಲ್ಲಿರುವ ರಚನೆ ಮತ್ತು ಕಾರಿಡಾರ್ ಪಕ್ಕದಲ್ಲಿನ ಬಾವಿಯನ್ನು ಕಂಡು ಹಿಡಿದಿದೆ. ಸೆಂಟ್ರಲ್ ಚೇಂಬರ್ ಮತ್ತು ಮುಖ್ಯ ದ್ವಾರವು ಮೊದಲೇ ಅಸ್ತಿತ್ವದಲ್ಲಿರುವ ರಚನೆಯನ್ನು ಹೊಂದಿದೆ. ಎಎಸ್‌ಐ ತನ್ನ ಸಮೀಕ್ಷೆಯಲ್ಲಿ ಕಂಬಗಳು ಮತ್ತು ಅವುಗಳ ಮೇಲಿನ ರಚನೆಗಳನ್ನು ಅಧ್ಯಯನ ಮಾಡಿದೆ. ಎಲ್ಲವೂ ದೇವಾಲಯದ ಭಾಗವಾಗಿದೆ ಎಂದು ಉಲ್ಲೇಖಿಸಿದೆ ಎಂದು ಹೇಳಿದರು.

“ಹಿಂದೂ ದೇವಾಲಯದ 34 ಶಾಸನಗಳು ಮಸೀದಿಯ ಆವರಣದಲ್ಲಿ ಕಂಡು ಬಂದಿವೆ. ಶಾಸನಗಳು ದೇವನಾಗರಿ, ತೆಲುಗು ಮತ್ತು ಕನ್ನಡದಲ್ಲಿವೆ. ಜನಾರ್ದನ, ರುದ್ರ ಮತ್ತು ಉಮೇಶ್ವರ ದೇವತೆಗಳ ಹೆಸರುಗಳು ಶಾಸನಗಳಲ್ಲಿ ಕಂಡು ಬಂದಿವೆ” ಎಂದಿದ್ದಾರೆ.

ಆದಿ ವಿಶ್ವೇಶ್ವರ (ಶಿವ) ಮಂದಿರವನ್ನು ಧ್ವಂಸಗೈದು ಮಸೀದಿ ನಿರ್ಮಿಸಲಾಗಿದೆ ಎಂದು ವಕೀಲ ವಿಷ್ಣು ಜೈನ್ ಹೇಳಿದ್ದಾರೆ. ಮಸೀದಿ ಪರ ಕಾನೂನು ಸಮರ ನಡೆಸುತ್ತಿರುವ ಅಂಜುಮಾನ್ ಇಂತಿಝಾಮಿಯಾ ಮಸೀದಿ ಸಮಿತಿಯ ಜೊತೆ ಕಾರ್ಯದರ್ಶಿ ಎಸ್‌.ಎಂ ಯಾಸೀನ್, ನಾವು ಎಎಸ್‌ಐ ವರದಿಯನ್ನು ಓದಿಲ್ಲ. ವರದಿ ನೋಡಿದ ಬಳಿಕ ಪ್ರತಿಕ್ರಿಯಿಸುತ್ತೇವೆ ಎಂದಿದ್ದಾರೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ ಅವರು ಕಳೆದ ವರ್ಷ ಜುಲೈ 21 ರಂದು ಎಎಸ್‌ಐಗೆ ಜ್ಞಾನವಾಪಿ ಆವರಣದ ವೈಜ್ಞಾನಿಕ ಸಮೀಕ್ಷೆಯನ್ನು ಮಾಡಿ, ಮಸೀದಿಯು ಹಳೆಯ ರಚನೆಯ ಮೇಲೆ ನಿಂತಿದೆಯೇ ಎಂದು ನಿರ್ಧರಿಸಲು ಸೂಚಿಸಿದ್ದರು.

ಅದರಂತೆ ಸಮೀಕ್ಷೆ ನಡೆಸಿದ ಪುರಾತತ್ವ ಇಲಾಖೆಯು ಒಂದು ತಿಂಗಳ ಹಿಂದೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ಕಳೆದ ಬುಧವಾರ, ವಾರಣಾಸಿ ನ್ಯಾಯಾಲಯವು ಎರಡೂ ಕಡೆಯವರಿಗೆ ವರದಿಯನ್ನು ನೀಡುವಂತೆ ಆದೇಶಿಸಿತ್ತು.

ಇದನ್ನೂ ಓದಿ: ಪಿ ಬಿ ವರಾಳೆ ಪ್ರಮಾಣ ವಚನ: ಸುಪ್ರೀಂನಲ್ಲಿ ಮೂರಕ್ಕೇರಿದ ದಲಿತ ಸಮುದಾಯದ ನ್ಯಾಯಮೂರ್ತಿಗಳ ಸಂಖ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...