Homeಮುಖಪುಟಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಮರ ಐದು ಅರ್ಜಿಗಳು ವಜಾ

ಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಮರ ಐದು ಅರ್ಜಿಗಳು ವಜಾ

- Advertisement -
- Advertisement -

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪ್ರಾರ್ಥನೆಗೆ ಅವಕಾಶ ಕೋರಿದ್ದ ಹಿಂದೂಗಳ ಅರ್ಜಿ ಮತ್ತು ಎಎಸ್‌ಐ ಸಮೀಕ್ಷೆ ಆದೇಶ ಪ್ರಶ್ನಿಸಿ ಮುಸ್ಲಿಮರು ಸಲ್ಲಿಸಿದ್ದ ಐದು ಅರ್ಜಿಗಳನ್ನು ಅಲಹಾಬಾದ್ ಹೈಕೋರ್ಟ್ ಇಂದು(ಡಿ.19) ತಿರಸ್ಕರಿಸಿದೆ.

ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರಿದ್ದ ಏಕ ಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು,1991ರ ಹಿಂದೂಗಳ ಅರ್ಜಿ ವಿಚಾರಣೆಗೆ ಅನುಮತಿ ನೀಡಿದೆ. 6 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸುವಂತೆ ವಾರಣಾಸಿ ನ್ಯಾಯಾಲಯಕ್ಕೆ ಸೂಚಿಸಿದೆ.

ತಿರಸ್ಕೃತಗೊಂಡ ಮುಸ್ಲಿಮರ ಐದು ಅರ್ಜಿಗಳಲ್ಲಿ ಮೂರು ಅರ್ಜಿಗಳು 1991ರಲ್ಲಿ ವಾರಣಾಸಿ ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣದ ನಿರ್ವಹಣೆಗೆ ಸಂಬಂಧಿಸಿವೆ. ಉಳಿದ ಎರಡು ಅರ್ಜಿಗಳು ಎಎಸ್ಐನ ಸರ್ವೆ ಆದೇಶದ ವಿರುದ್ಧವಾಗಿವೆ.

ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಸಮಿತಿ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಿದ ನ್ಯಾಯಾಲಯ, ಮಸೀದಿಯ ಆವರಣವು ಮುಸ್ಲಿಂ ಅಥವಾ ಹಿಂದೂ ಕುರುಗಳನ್ನು ಹೊಂದಿರಬಹುದು. ಆದರೆ, ಸಮಸ್ಯೆಯ ಆರಂಭ ಹಂತದಲ್ಲೇ ಅದನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಜ್ಞಾನವಾಪಿ ಮಸೀದಿಯು ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿ ಅದರ ಅವಶೇಗಳ ಮೇಲೆ ಕಟ್ಟಲಾಗಿದೆ. ಅದನ್ನು ಹಿಂದೂಗಳಿಗೆ ಹಸ್ತಾಂತರಿಸುವಂತೆ ವಾರಣಾಸಿ ನ್ಯಾಯಾಲಯದಲ್ಲಿ ಅರ್ಜಿಗಳು ಸಲ್ಲಿಕೆಯಾಗಿವೆ.

ಆದರೆ, ಇದಕ್ಕೆ ಉತ್ತರ ಪ್ರದೇಶ ಸುನ್ನೀ ವಕ್ಪ್‌ ಮಂಡಳಿ ಮತ್ತು ಜ್ಞಾನವಾಪಿ ಮಸೀದಿ ನಿರ್ವಹಿಸಿರುವ ಅಂಜುಮನ್ ಇಂತೇಜಾಮಿಯಾ ಮಸಾಜಿದ್ ವಿರೋಧ ವ್ಯಕ್ತಪಡಿಸಿದ್ದು, ಇದು 1991ರ ಆರಾಧನಾ ಸ್ಥಳಗಳ ಕಾಯಿದೆ (ವಿಶೇಷ ನಿಬಂಧನೆಗಳು) ವಿರುದ್ದವಾಗಿದೆ ಎಂದು ವಾದಿಸಿದೆ.

1991ರ ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ ಸ್ವಾತಂತ್ರ್ಯ ನಂತರ ಯಾವುದೇ ಧಾರ್ಮಿಕ ಸ್ಥಳಗಳ ರಚನೆಯನ್ನು ಅದರ ಸ್ವರೂಪದಿಂದ ಪರಿವರ್ತಿಸುವುದನ್ನು ನಿಷೇಧಿಸುತ್ತದೆ.

ಕಳೆದ ತಿಂಗಳು, ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಇನ್ನೊಬ್ಬರು ನ್ಯಾಯಾಧೀಶರ ಪೀಠದಿಂದ ತನ್ನ ಪೀಠಕ್ಕೆ ವರ್ಗಾಯಿಸಿದ್ದ ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಿತಿಂಕರ್ ದಿವಾಕರ್ ( ನಿವೃತ್ತ) ನೀಡಿದ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

ಸಿಜೆಐ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು, ಹಿಂದಿನ ನ್ಯಾಯಾಧೀಶರು (ನ್ಯಾಯಮೂರ್ತಿ ಪ್ರಕಾಶ್ ಪಾಡಿಯಾ) 2021 ರಲ್ಲಿ ತೀರ್ಪನ್ನು ಕಾಯ್ದಿರಿಸಿದರೂ ಮತ್ತು ಎಪ್ಪತ್ತೈದು ವಿಚಾರಣೆಗಳನ್ನು ನಡೆಸಿದರೂ ತೀರ್ಪು ನೀಡಲಿಲ್ಲ. ಆದ್ದರಿಂದ, ಪ್ರಕರಣಗಳನ್ನು ವರ್ಗಾಯಿಸಲು ಸಿಜೆ ಅವರ ಆದೇಶವು ಸಮರ್ಥನೀಯವಾಗಿದೆ ಎಂದು ಹೇಳಿತ್ತು.

ವೈಜ್ಞಾನಿಕ ಸಮೀಕ್ಷೆ ವರದಿ ಕೋರ್ಟ್‌ಗೆ ಸಲ್ಲಿಕೆ

ಭಾರತೀಯ ಪುರಾತತ್ವ ಇಲಾಖೆಯು ವಾರಣಾಸಿಯ ಜಿಲ್ಲಾ ನ್ಯಾಯಾಲಯಕ್ಕೆ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಸೋಮವಾರ(ಡಿ.18) ಸಲ್ಲಿಸಿದೆ.

ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ. ವರದಿಯನ್ನು ಬಹಿರಂಗಗೊಳಿಸಲಾಗುತ್ತದೆಯೇ? ಸರ್ವೆ ಮಾಹಿತಿಯನ್ನು ಹಿಂದೂ ಪರ ಮತ್ತು ಮುಸ್ಲಿಂ ಪರ ಅರ್ಜಿದಾರರ ಜೊತೆ ಹಂಚಿಕೊಳ್ಳಲಾಗುತ್ತದೆಯೇ ಎಂಬುವುದು ಸ್ಪಷ್ಟವಾಗಿಲ್ಲ. ಮುಂದಿನ ವಿಚಾರಣೆ ಡಿ. 21ರಂದು ನಡೆಯಲಿದೆ.

ಏನಿದು ವಿವಾದ?

ಜ್ಞಾನವಾಪಿ ಮಸೀದಿಯನ್ನು 1669ರಲ್ಲಿ ಮೊಘಲ್ ದೊರೆ ಔರಂಗಜೇಬನು ಪ್ರಾಚೀನ ವಿಶ್ವೇಶ್ವರ ದೇವಾಲಯವನ್ನು ಕೆಡವಿ ನಿರ್ಮಿಸಿದನು ಎಂಬುವುದು ಹಿಂದೂಪರರ ವಾದ. ಜ್ಞಾನವಾಪಿ ಮಸೀದಿಯ ಪ್ರಕರಣವು 1991ರಿಂದ ನ್ಯಾಯಾಲಯದಲ್ಲಿದೆ. ಕಾಶಿ ವಿಶ್ವನಾಥ ದೇವಾಲಯದ ಅರ್ಚಕರ ವಂಶಸ್ಥರಾದ ಪಂಡಿತ್ ಸೋಮನಾಥ ವ್ಯಾಸ್ ಸೇರಿದಂತೆ ಮೂವರು ವಾರಣಾಸಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಔರಂಗಜೇಬನು ದೇವಾಲಯ ಧ್ವಂಸಗೊಳಿಸಿದ್ದಾನೆ ಎಂದು ದಾವೆ ಹೂಡಿದ್ದರು. ಇದಲ್ಲದೆ ವಿಶ್ವನಾಥ ದೇವರ ಜ್ಯೋತಿರ್ಲಿಂಗವು ಜ್ಞಾನವಾಪಿ ಮಸೀದಿಯ ಆವರಣದಲ್ಲಿದೆ ಎಂದು ಹೇಳುವ ಇನ್ನೊಂದು ಅರ್ಜಿಯೂ ನ್ಯಾಯಾಲಯದಲ್ಲಿದೆ.

2021ರ ಆ.18ರಂದು ವಾರಣಾಸಿಯ ಅದೇ ನ್ಯಾಯಾಲಯದಲ್ಲಿ, ಶೃಂಗಾರ ಗೌರಿ, ಹನುಮಾನ್ ಮತ್ತು ಗಣೇಶ ಚಿತ್ರಗಳು ಇವೆಯೆಂದು ಮತ್ತು ಪೂಜೆಗೆ ಅನುಮತಿ ಕೋರಿ ಐವರು ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದರು, ಇದರ ಬೆನ್ನಲ್ಲೆ ವಸ್ತು ಸ್ಥಿತಿ ತಿಳಿಯಲು ಆಯೋಗ ರಚಿಸಲಾಗಿತ್ತು.

ಏ.2021ರಲ್ಲಿ ವಾರಣಾಸಿ ನ್ಯಾಯಾಲಯವು ಸಮೀಕ್ಷೆ ನಡೆಸಿ ಅದರ ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಇಲಾಖೆ(ಎಎಸ್‌ಐ)ಗೆ ನಿರ್ದೇಶನ ನೀಡಿತ್ತು. ಆದರೆ, ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಮತ್ತು ಜ್ಞಾನವಾಪಿ ಮಸೀದಿಯನ್ನು ನಡೆಸುತ್ತಿರುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಹಿಂದೂ ಪರರ ಅರ್ಜಿ ಮತ್ತು ಮಸೀದಿಯ ಸಮೀಕ್ಷೆಗಾಗಿ ವಾರಣಾಸಿ ನ್ಯಾಯಾಲಯ ನೀಡಿರುವ ಆದೇಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಇದನ್ನೂ ಓದಿ : ಜ್ಞಾನವಾಪಿ ಮಸೀದಿ ವಿವಾದ: ವೈಜ್ಞಾನಿಕ ಸಮೀಕ್ಷೆ ವರದಿ ಕೋರ್ಟ್‌ಗೆ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...