Homeಮುಖಪುಟಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಮರ ಐದು ಅರ್ಜಿಗಳು ವಜಾ

ಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಮರ ಐದು ಅರ್ಜಿಗಳು ವಜಾ

- Advertisement -
- Advertisement -

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪ್ರಾರ್ಥನೆಗೆ ಅವಕಾಶ ಕೋರಿದ್ದ ಹಿಂದೂಗಳ ಅರ್ಜಿ ಮತ್ತು ಎಎಸ್‌ಐ ಸಮೀಕ್ಷೆ ಆದೇಶ ಪ್ರಶ್ನಿಸಿ ಮುಸ್ಲಿಮರು ಸಲ್ಲಿಸಿದ್ದ ಐದು ಅರ್ಜಿಗಳನ್ನು ಅಲಹಾಬಾದ್ ಹೈಕೋರ್ಟ್ ಇಂದು(ಡಿ.19) ತಿರಸ್ಕರಿಸಿದೆ.

ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರಿದ್ದ ಏಕ ಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು,1991ರ ಹಿಂದೂಗಳ ಅರ್ಜಿ ವಿಚಾರಣೆಗೆ ಅನುಮತಿ ನೀಡಿದೆ. 6 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸುವಂತೆ ವಾರಣಾಸಿ ನ್ಯಾಯಾಲಯಕ್ಕೆ ಸೂಚಿಸಿದೆ.

ತಿರಸ್ಕೃತಗೊಂಡ ಮುಸ್ಲಿಮರ ಐದು ಅರ್ಜಿಗಳಲ್ಲಿ ಮೂರು ಅರ್ಜಿಗಳು 1991ರಲ್ಲಿ ವಾರಣಾಸಿ ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣದ ನಿರ್ವಹಣೆಗೆ ಸಂಬಂಧಿಸಿವೆ. ಉಳಿದ ಎರಡು ಅರ್ಜಿಗಳು ಎಎಸ್ಐನ ಸರ್ವೆ ಆದೇಶದ ವಿರುದ್ಧವಾಗಿವೆ.

ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಸಮಿತಿ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಿದ ನ್ಯಾಯಾಲಯ, ಮಸೀದಿಯ ಆವರಣವು ಮುಸ್ಲಿಂ ಅಥವಾ ಹಿಂದೂ ಕುರುಗಳನ್ನು ಹೊಂದಿರಬಹುದು. ಆದರೆ, ಸಮಸ್ಯೆಯ ಆರಂಭ ಹಂತದಲ್ಲೇ ಅದನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಜ್ಞಾನವಾಪಿ ಮಸೀದಿಯು ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿ ಅದರ ಅವಶೇಗಳ ಮೇಲೆ ಕಟ್ಟಲಾಗಿದೆ. ಅದನ್ನು ಹಿಂದೂಗಳಿಗೆ ಹಸ್ತಾಂತರಿಸುವಂತೆ ವಾರಣಾಸಿ ನ್ಯಾಯಾಲಯದಲ್ಲಿ ಅರ್ಜಿಗಳು ಸಲ್ಲಿಕೆಯಾಗಿವೆ.

ಆದರೆ, ಇದಕ್ಕೆ ಉತ್ತರ ಪ್ರದೇಶ ಸುನ್ನೀ ವಕ್ಪ್‌ ಮಂಡಳಿ ಮತ್ತು ಜ್ಞಾನವಾಪಿ ಮಸೀದಿ ನಿರ್ವಹಿಸಿರುವ ಅಂಜುಮನ್ ಇಂತೇಜಾಮಿಯಾ ಮಸಾಜಿದ್ ವಿರೋಧ ವ್ಯಕ್ತಪಡಿಸಿದ್ದು, ಇದು 1991ರ ಆರಾಧನಾ ಸ್ಥಳಗಳ ಕಾಯಿದೆ (ವಿಶೇಷ ನಿಬಂಧನೆಗಳು) ವಿರುದ್ದವಾಗಿದೆ ಎಂದು ವಾದಿಸಿದೆ.

1991ರ ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ ಸ್ವಾತಂತ್ರ್ಯ ನಂತರ ಯಾವುದೇ ಧಾರ್ಮಿಕ ಸ್ಥಳಗಳ ರಚನೆಯನ್ನು ಅದರ ಸ್ವರೂಪದಿಂದ ಪರಿವರ್ತಿಸುವುದನ್ನು ನಿಷೇಧಿಸುತ್ತದೆ.

ಕಳೆದ ತಿಂಗಳು, ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಇನ್ನೊಬ್ಬರು ನ್ಯಾಯಾಧೀಶರ ಪೀಠದಿಂದ ತನ್ನ ಪೀಠಕ್ಕೆ ವರ್ಗಾಯಿಸಿದ್ದ ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಿತಿಂಕರ್ ದಿವಾಕರ್ ( ನಿವೃತ್ತ) ನೀಡಿದ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

ಸಿಜೆಐ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು, ಹಿಂದಿನ ನ್ಯಾಯಾಧೀಶರು (ನ್ಯಾಯಮೂರ್ತಿ ಪ್ರಕಾಶ್ ಪಾಡಿಯಾ) 2021 ರಲ್ಲಿ ತೀರ್ಪನ್ನು ಕಾಯ್ದಿರಿಸಿದರೂ ಮತ್ತು ಎಪ್ಪತ್ತೈದು ವಿಚಾರಣೆಗಳನ್ನು ನಡೆಸಿದರೂ ತೀರ್ಪು ನೀಡಲಿಲ್ಲ. ಆದ್ದರಿಂದ, ಪ್ರಕರಣಗಳನ್ನು ವರ್ಗಾಯಿಸಲು ಸಿಜೆ ಅವರ ಆದೇಶವು ಸಮರ್ಥನೀಯವಾಗಿದೆ ಎಂದು ಹೇಳಿತ್ತು.

ವೈಜ್ಞಾನಿಕ ಸಮೀಕ್ಷೆ ವರದಿ ಕೋರ್ಟ್‌ಗೆ ಸಲ್ಲಿಕೆ

ಭಾರತೀಯ ಪುರಾತತ್ವ ಇಲಾಖೆಯು ವಾರಣಾಸಿಯ ಜಿಲ್ಲಾ ನ್ಯಾಯಾಲಯಕ್ಕೆ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಸೋಮವಾರ(ಡಿ.18) ಸಲ್ಲಿಸಿದೆ.

ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ. ವರದಿಯನ್ನು ಬಹಿರಂಗಗೊಳಿಸಲಾಗುತ್ತದೆಯೇ? ಸರ್ವೆ ಮಾಹಿತಿಯನ್ನು ಹಿಂದೂ ಪರ ಮತ್ತು ಮುಸ್ಲಿಂ ಪರ ಅರ್ಜಿದಾರರ ಜೊತೆ ಹಂಚಿಕೊಳ್ಳಲಾಗುತ್ತದೆಯೇ ಎಂಬುವುದು ಸ್ಪಷ್ಟವಾಗಿಲ್ಲ. ಮುಂದಿನ ವಿಚಾರಣೆ ಡಿ. 21ರಂದು ನಡೆಯಲಿದೆ.

ಏನಿದು ವಿವಾದ?

ಜ್ಞಾನವಾಪಿ ಮಸೀದಿಯನ್ನು 1669ರಲ್ಲಿ ಮೊಘಲ್ ದೊರೆ ಔರಂಗಜೇಬನು ಪ್ರಾಚೀನ ವಿಶ್ವೇಶ್ವರ ದೇವಾಲಯವನ್ನು ಕೆಡವಿ ನಿರ್ಮಿಸಿದನು ಎಂಬುವುದು ಹಿಂದೂಪರರ ವಾದ. ಜ್ಞಾನವಾಪಿ ಮಸೀದಿಯ ಪ್ರಕರಣವು 1991ರಿಂದ ನ್ಯಾಯಾಲಯದಲ್ಲಿದೆ. ಕಾಶಿ ವಿಶ್ವನಾಥ ದೇವಾಲಯದ ಅರ್ಚಕರ ವಂಶಸ್ಥರಾದ ಪಂಡಿತ್ ಸೋಮನಾಥ ವ್ಯಾಸ್ ಸೇರಿದಂತೆ ಮೂವರು ವಾರಣಾಸಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಔರಂಗಜೇಬನು ದೇವಾಲಯ ಧ್ವಂಸಗೊಳಿಸಿದ್ದಾನೆ ಎಂದು ದಾವೆ ಹೂಡಿದ್ದರು. ಇದಲ್ಲದೆ ವಿಶ್ವನಾಥ ದೇವರ ಜ್ಯೋತಿರ್ಲಿಂಗವು ಜ್ಞಾನವಾಪಿ ಮಸೀದಿಯ ಆವರಣದಲ್ಲಿದೆ ಎಂದು ಹೇಳುವ ಇನ್ನೊಂದು ಅರ್ಜಿಯೂ ನ್ಯಾಯಾಲಯದಲ್ಲಿದೆ.

2021ರ ಆ.18ರಂದು ವಾರಣಾಸಿಯ ಅದೇ ನ್ಯಾಯಾಲಯದಲ್ಲಿ, ಶೃಂಗಾರ ಗೌರಿ, ಹನುಮಾನ್ ಮತ್ತು ಗಣೇಶ ಚಿತ್ರಗಳು ಇವೆಯೆಂದು ಮತ್ತು ಪೂಜೆಗೆ ಅನುಮತಿ ಕೋರಿ ಐವರು ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದರು, ಇದರ ಬೆನ್ನಲ್ಲೆ ವಸ್ತು ಸ್ಥಿತಿ ತಿಳಿಯಲು ಆಯೋಗ ರಚಿಸಲಾಗಿತ್ತು.

ಏ.2021ರಲ್ಲಿ ವಾರಣಾಸಿ ನ್ಯಾಯಾಲಯವು ಸಮೀಕ್ಷೆ ನಡೆಸಿ ಅದರ ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಇಲಾಖೆ(ಎಎಸ್‌ಐ)ಗೆ ನಿರ್ದೇಶನ ನೀಡಿತ್ತು. ಆದರೆ, ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಮತ್ತು ಜ್ಞಾನವಾಪಿ ಮಸೀದಿಯನ್ನು ನಡೆಸುತ್ತಿರುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಹಿಂದೂ ಪರರ ಅರ್ಜಿ ಮತ್ತು ಮಸೀದಿಯ ಸಮೀಕ್ಷೆಗಾಗಿ ವಾರಣಾಸಿ ನ್ಯಾಯಾಲಯ ನೀಡಿರುವ ಆದೇಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಇದನ್ನೂ ಓದಿ : ಜ್ಞಾನವಾಪಿ ಮಸೀದಿ ವಿವಾದ: ವೈಜ್ಞಾನಿಕ ಸಮೀಕ್ಷೆ ವರದಿ ಕೋರ್ಟ್‌ಗೆ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...