Homeಮುಖಪುಟಪೂಜೆಗೆ ಅವಕಾಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ ಮೆಟ್ಟಿಲೇರಿದ ಜ್ಞಾನವಾಪಿ ಮಸೀದಿ ಸಮಿತಿ

ಪೂಜೆಗೆ ಅವಕಾಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ ಮೆಟ್ಟಿಲೇರಿದ ಜ್ಞಾನವಾಪಿ ಮಸೀದಿ ಸಮಿತಿ

- Advertisement -
- Advertisement -

ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ನೀಡಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಸೀದಿ ನಿರ್ವಹಣಾ ಸಮಿತಿ ಅಂಜುಮನ್ ಇಂತೇಝಾಮಿಯಾ ಮಸಾಜಿದ್ ಅಲಹಾಬಾದ್ ಹೈಕೋರ್ಟ್‌ನ ಮೆಟ್ಟಿಲೇರಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನೋಜ್ ಕುಮಾರ್ ಗುಪ್ತಾ ಅವರ ಮುಂದೆ ಹಿರಿಯ ವಕೀಲ ಎಸ್‌ಎಫ್‌ಎ ನಖ್ವಿ ವಿಷಯ ಪ್ರಸ್ತಾಪಿಸಿದ್ದಾರೆ. ಈ ವೇಳೆ ವಿಷಯವನ್ನು ತುರ್ತು ಪಟ್ಟಿಯಲ್ಲಿ ಸೇರಿಸಲು ರಿಜಿಸ್ಟ್ರಾರ್‌ ಬಳಿಗೆ ಹೋಗುವಂತೆ ನ್ಯಾಯಮೂರ್ತಿ ಸೂಚಿಸಿದ್ದಾರೆ. ಅದರಂತೆ, ವಕೀಲ ನಖ್ವಿ ಪ್ರಕರಣವನ್ನು ತುರ್ತು ಪಟ್ಟಿ ಮಾಡುವಂತೆ ರಿಜಿಸ್ಟ್ರಾರ್‌ಗೆ ಮನವಿ ಮಾಡಿದ್ದಾರೆ. ಸದ್ಯದಲ್ಲೇ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿರುವ ವ್ಯಾಸ್ ಜಿ ಕಾ ತೆಹ್ಖಾನಾದಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ನೀಡಿ ವಾರಣಾಸಿ ಜಿಲ್ಲಾ ನ್ಯಾಯಾಲಯ ನಿನ್ನೆ(ಜ.31) ಆದೇಶ ನೀಡಿತ್ತು. ಇದರ ವಿರುದ್ದ ಮಸೀದಿ ಸಮಿತಿ ಸುಪ್ರೀಂ ಕೋರ್ಟ್‌ ಕೊರೆ ಹೋಗಿತ್ತು. ಮನವಿಯನ್ನು ತುರ್ತಾಗಿ ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿ ಹಿನ್ನೆಲೆ ಮಸೀದಿ ಸಮಿತಿ ಹೈಕೋರ್ಟ್‌ ಮೊರೆ ಹೋಗಿದೆ. ಈ ನಡುವೆ ಪೊಲೀಸ್‌ ಬಿಗಿ ಭದ್ರತೆಯೊಂದಿಗೆ ಜ್ಞಾನವಾಪಿ ಮಸೀದಿಯ ನೆಲ ಮಾಳಿಗೆಯಲ್ಲಿ ಪೂಜೆ ಪ್ರಾರಂಭಗೊಂಡಿದೆ.

ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗೆ ಮುಚ್ಚಿದ ನೆಲಮಾಳಿಗೆ ತೆಹ್ಖಾನಾ (ವ್ಯಾಸ್ ಜಿ ಕಾ ತೆಹ್ಖಾನಾ) ದೊಳಗೆ ಹಿಂದೂಗಳು ಪೂಜಾ ವಿಧಿಗಳನ್ನು ನಡೆಸಲು 7 ದಿನಗಳಲ್ಲಿ ಸೂಕ್ತ ವ್ಯವಸ್ಥೆ ಮಾಡುವಂತೆ ವಾರಣಾಸಿ ಜಿಲ್ಲಾ ನ್ಯಾಯಾಧೀಶರು ನಿನ್ನೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದರು.

ಈ ಪ್ರಕರಣವು ಜ್ಞಾನವಾಪಿ ಮಸೀದಿ ಆವರಣದಲ್ಲಿರುವ ‘ಸೋಮನಾಥ ವ್ಯಾಸ್’ ತೆಹ್ಖಾನಾಗೆ ಸಂಬಂಧಿಸಿದೆ. 1993 ರವರೆಗೆ, ವ್ಯಾಸ ಕುಟುಂಬವು ನೆಲಮಾಳಿಗೆಯಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸುತ್ತಿತ್ತು. ಆದರೆ, ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಅದನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗ್ತಿದೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಆದೇಶದ ನಂತರ ಜಿಲ್ಲಾ ಮ್ಯಾಜಿಸ್ಟ್ರೇಟ್ ಎಂ.ಎಸ್ ರಾಜಲಿಂಗಂ ಅವರು ಇತರ ಸರ್ಕಾರಿ ಅಧಿಕಾರಿಗಳೊಂದಿಗೆ ಕಾಶಿ ಕಾರಿಡಾರ್‌ನ ಗೇಟ್ ಸಂಖ್ಯೆ 4ರ ಮೂಲಕ ಮಸೀದಿ ಸಂಕೀರ್ಣವನ್ನು ಪ್ರವೇಶಿಸಿದ್ದಾರೆ. ಅಧಿಕಾರಿಗಳು ಮಸೀದಿ ಸಂಕೀರ್ಣದೊಳಗೆ ಸುಮಾರು ಎರಡು ಗಂಟೆಗಳ ಕಾಲ ಇದ್ದರು. ಹೊರ ಬರುವಾಗ ನ್ಯಾಯಾಲಯದ ಆದೇಶವನ್ನು ಪಾಲಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಗೆ ಹಾಜರಿದ್ದ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಏಳು ದಿನಗಳಲ್ಲಿ ಹಿಂದೂಗಳಿಗೆ ಪೂಜೆಗೆ ವ್ಯವಸ್ಥೆ ಮಾಡುವಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ. ಆದರೆ, ಜಿಲ್ಲಾಡಳಿತ ತರಾತುರಿಯಲ್ಲಿ ಪೂಜೆಗೆ ವ್ಯವಸ್ಥೆ ಮಾಡಿದೆ. ಮಧ್ಯರಾತ್ರಿ ನಡೆದ ಈ ಬೆಳವಣಿಗೆ ಮಸೀದಿ ಸಮಿತಿ ವಾರಣಾಸಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸುವ ಕಾನೂನಾತ್ಮ ಅವಕಾಶವನ್ನು ತಡೆಯುವ ಉದ್ದೇಶ ಹೊಂದಿದೆ ಎಂದು ಹೈಕೋರ್ಟ್‌ಗೆ ಸಲ್ಲಿಸಿದ ಆರ್ಜಿಯಲ್ಲಿ ಮಸೀದಿ ಸಮಿತಿ ಹೇಳಿದೆ.

ಇದನ್ನೂ ಓದಿ: ಚಂಡೀಗಢ ಮೇಯರ್ ಚುನಾವಣೆ: ತೀರ್ಪಿಗೆ ತಡೆ ನಿರಾಕರಿಸಿದ ಹೈಕೋರ್ಟ್, ಸುಪ್ರೀಂ ಕದ ತಟ್ಟಿದ ಎಎಪಿ ಕೌನ್ಸಿಲರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...