Homeಮುಖಪುಟಪೂಜೆಗೆ ಅವಕಾಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ ಮೆಟ್ಟಿಲೇರಿದ ಜ್ಞಾನವಾಪಿ ಮಸೀದಿ ಸಮಿತಿ

ಪೂಜೆಗೆ ಅವಕಾಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ ಮೆಟ್ಟಿಲೇರಿದ ಜ್ಞಾನವಾಪಿ ಮಸೀದಿ ಸಮಿತಿ

- Advertisement -
- Advertisement -

ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ನೀಡಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಸೀದಿ ನಿರ್ವಹಣಾ ಸಮಿತಿ ಅಂಜುಮನ್ ಇಂತೇಝಾಮಿಯಾ ಮಸಾಜಿದ್ ಅಲಹಾಬಾದ್ ಹೈಕೋರ್ಟ್‌ನ ಮೆಟ್ಟಿಲೇರಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನೋಜ್ ಕುಮಾರ್ ಗುಪ್ತಾ ಅವರ ಮುಂದೆ ಹಿರಿಯ ವಕೀಲ ಎಸ್‌ಎಫ್‌ಎ ನಖ್ವಿ ವಿಷಯ ಪ್ರಸ್ತಾಪಿಸಿದ್ದಾರೆ. ಈ ವೇಳೆ ವಿಷಯವನ್ನು ತುರ್ತು ಪಟ್ಟಿಯಲ್ಲಿ ಸೇರಿಸಲು ರಿಜಿಸ್ಟ್ರಾರ್‌ ಬಳಿಗೆ ಹೋಗುವಂತೆ ನ್ಯಾಯಮೂರ್ತಿ ಸೂಚಿಸಿದ್ದಾರೆ. ಅದರಂತೆ, ವಕೀಲ ನಖ್ವಿ ಪ್ರಕರಣವನ್ನು ತುರ್ತು ಪಟ್ಟಿ ಮಾಡುವಂತೆ ರಿಜಿಸ್ಟ್ರಾರ್‌ಗೆ ಮನವಿ ಮಾಡಿದ್ದಾರೆ. ಸದ್ಯದಲ್ಲೇ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿರುವ ವ್ಯಾಸ್ ಜಿ ಕಾ ತೆಹ್ಖಾನಾದಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ನೀಡಿ ವಾರಣಾಸಿ ಜಿಲ್ಲಾ ನ್ಯಾಯಾಲಯ ನಿನ್ನೆ(ಜ.31) ಆದೇಶ ನೀಡಿತ್ತು. ಇದರ ವಿರುದ್ದ ಮಸೀದಿ ಸಮಿತಿ ಸುಪ್ರೀಂ ಕೋರ್ಟ್‌ ಕೊರೆ ಹೋಗಿತ್ತು. ಮನವಿಯನ್ನು ತುರ್ತಾಗಿ ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿ ಹಿನ್ನೆಲೆ ಮಸೀದಿ ಸಮಿತಿ ಹೈಕೋರ್ಟ್‌ ಮೊರೆ ಹೋಗಿದೆ. ಈ ನಡುವೆ ಪೊಲೀಸ್‌ ಬಿಗಿ ಭದ್ರತೆಯೊಂದಿಗೆ ಜ್ಞಾನವಾಪಿ ಮಸೀದಿಯ ನೆಲ ಮಾಳಿಗೆಯಲ್ಲಿ ಪೂಜೆ ಪ್ರಾರಂಭಗೊಂಡಿದೆ.

ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗೆ ಮುಚ್ಚಿದ ನೆಲಮಾಳಿಗೆ ತೆಹ್ಖಾನಾ (ವ್ಯಾಸ್ ಜಿ ಕಾ ತೆಹ್ಖಾನಾ) ದೊಳಗೆ ಹಿಂದೂಗಳು ಪೂಜಾ ವಿಧಿಗಳನ್ನು ನಡೆಸಲು 7 ದಿನಗಳಲ್ಲಿ ಸೂಕ್ತ ವ್ಯವಸ್ಥೆ ಮಾಡುವಂತೆ ವಾರಣಾಸಿ ಜಿಲ್ಲಾ ನ್ಯಾಯಾಧೀಶರು ನಿನ್ನೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದರು.

ಈ ಪ್ರಕರಣವು ಜ್ಞಾನವಾಪಿ ಮಸೀದಿ ಆವರಣದಲ್ಲಿರುವ ‘ಸೋಮನಾಥ ವ್ಯಾಸ್’ ತೆಹ್ಖಾನಾಗೆ ಸಂಬಂಧಿಸಿದೆ. 1993 ರವರೆಗೆ, ವ್ಯಾಸ ಕುಟುಂಬವು ನೆಲಮಾಳಿಗೆಯಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸುತ್ತಿತ್ತು. ಆದರೆ, ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಅದನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗ್ತಿದೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಆದೇಶದ ನಂತರ ಜಿಲ್ಲಾ ಮ್ಯಾಜಿಸ್ಟ್ರೇಟ್ ಎಂ.ಎಸ್ ರಾಜಲಿಂಗಂ ಅವರು ಇತರ ಸರ್ಕಾರಿ ಅಧಿಕಾರಿಗಳೊಂದಿಗೆ ಕಾಶಿ ಕಾರಿಡಾರ್‌ನ ಗೇಟ್ ಸಂಖ್ಯೆ 4ರ ಮೂಲಕ ಮಸೀದಿ ಸಂಕೀರ್ಣವನ್ನು ಪ್ರವೇಶಿಸಿದ್ದಾರೆ. ಅಧಿಕಾರಿಗಳು ಮಸೀದಿ ಸಂಕೀರ್ಣದೊಳಗೆ ಸುಮಾರು ಎರಡು ಗಂಟೆಗಳ ಕಾಲ ಇದ್ದರು. ಹೊರ ಬರುವಾಗ ನ್ಯಾಯಾಲಯದ ಆದೇಶವನ್ನು ಪಾಲಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಗೆ ಹಾಜರಿದ್ದ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಏಳು ದಿನಗಳಲ್ಲಿ ಹಿಂದೂಗಳಿಗೆ ಪೂಜೆಗೆ ವ್ಯವಸ್ಥೆ ಮಾಡುವಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ. ಆದರೆ, ಜಿಲ್ಲಾಡಳಿತ ತರಾತುರಿಯಲ್ಲಿ ಪೂಜೆಗೆ ವ್ಯವಸ್ಥೆ ಮಾಡಿದೆ. ಮಧ್ಯರಾತ್ರಿ ನಡೆದ ಈ ಬೆಳವಣಿಗೆ ಮಸೀದಿ ಸಮಿತಿ ವಾರಣಾಸಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸುವ ಕಾನೂನಾತ್ಮ ಅವಕಾಶವನ್ನು ತಡೆಯುವ ಉದ್ದೇಶ ಹೊಂದಿದೆ ಎಂದು ಹೈಕೋರ್ಟ್‌ಗೆ ಸಲ್ಲಿಸಿದ ಆರ್ಜಿಯಲ್ಲಿ ಮಸೀದಿ ಸಮಿತಿ ಹೇಳಿದೆ.

ಇದನ್ನೂ ಓದಿ: ಚಂಡೀಗಢ ಮೇಯರ್ ಚುನಾವಣೆ: ತೀರ್ಪಿಗೆ ತಡೆ ನಿರಾಕರಿಸಿದ ಹೈಕೋರ್ಟ್, ಸುಪ್ರೀಂ ಕದ ತಟ್ಟಿದ ಎಎಪಿ ಕೌನ್ಸಿಲರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...