Homeಮುಖಪುಟಪೂಜೆಗೆ ಅವಕಾಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ ಮೆಟ್ಟಿಲೇರಿದ ಜ್ಞಾನವಾಪಿ ಮಸೀದಿ ಸಮಿತಿ

ಪೂಜೆಗೆ ಅವಕಾಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ ಮೆಟ್ಟಿಲೇರಿದ ಜ್ಞಾನವಾಪಿ ಮಸೀದಿ ಸಮಿತಿ

- Advertisement -
- Advertisement -

ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ನೀಡಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಸೀದಿ ನಿರ್ವಹಣಾ ಸಮಿತಿ ಅಂಜುಮನ್ ಇಂತೇಝಾಮಿಯಾ ಮಸಾಜಿದ್ ಅಲಹಾಬಾದ್ ಹೈಕೋರ್ಟ್‌ನ ಮೆಟ್ಟಿಲೇರಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನೋಜ್ ಕುಮಾರ್ ಗುಪ್ತಾ ಅವರ ಮುಂದೆ ಹಿರಿಯ ವಕೀಲ ಎಸ್‌ಎಫ್‌ಎ ನಖ್ವಿ ವಿಷಯ ಪ್ರಸ್ತಾಪಿಸಿದ್ದಾರೆ. ಈ ವೇಳೆ ವಿಷಯವನ್ನು ತುರ್ತು ಪಟ್ಟಿಯಲ್ಲಿ ಸೇರಿಸಲು ರಿಜಿಸ್ಟ್ರಾರ್‌ ಬಳಿಗೆ ಹೋಗುವಂತೆ ನ್ಯಾಯಮೂರ್ತಿ ಸೂಚಿಸಿದ್ದಾರೆ. ಅದರಂತೆ, ವಕೀಲ ನಖ್ವಿ ಪ್ರಕರಣವನ್ನು ತುರ್ತು ಪಟ್ಟಿ ಮಾಡುವಂತೆ ರಿಜಿಸ್ಟ್ರಾರ್‌ಗೆ ಮನವಿ ಮಾಡಿದ್ದಾರೆ. ಸದ್ಯದಲ್ಲೇ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿರುವ ವ್ಯಾಸ್ ಜಿ ಕಾ ತೆಹ್ಖಾನಾದಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ನೀಡಿ ವಾರಣಾಸಿ ಜಿಲ್ಲಾ ನ್ಯಾಯಾಲಯ ನಿನ್ನೆ(ಜ.31) ಆದೇಶ ನೀಡಿತ್ತು. ಇದರ ವಿರುದ್ದ ಮಸೀದಿ ಸಮಿತಿ ಸುಪ್ರೀಂ ಕೋರ್ಟ್‌ ಕೊರೆ ಹೋಗಿತ್ತು. ಮನವಿಯನ್ನು ತುರ್ತಾಗಿ ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿ ಹಿನ್ನೆಲೆ ಮಸೀದಿ ಸಮಿತಿ ಹೈಕೋರ್ಟ್‌ ಮೊರೆ ಹೋಗಿದೆ. ಈ ನಡುವೆ ಪೊಲೀಸ್‌ ಬಿಗಿ ಭದ್ರತೆಯೊಂದಿಗೆ ಜ್ಞಾನವಾಪಿ ಮಸೀದಿಯ ನೆಲ ಮಾಳಿಗೆಯಲ್ಲಿ ಪೂಜೆ ಪ್ರಾರಂಭಗೊಂಡಿದೆ.

ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗೆ ಮುಚ್ಚಿದ ನೆಲಮಾಳಿಗೆ ತೆಹ್ಖಾನಾ (ವ್ಯಾಸ್ ಜಿ ಕಾ ತೆಹ್ಖಾನಾ) ದೊಳಗೆ ಹಿಂದೂಗಳು ಪೂಜಾ ವಿಧಿಗಳನ್ನು ನಡೆಸಲು 7 ದಿನಗಳಲ್ಲಿ ಸೂಕ್ತ ವ್ಯವಸ್ಥೆ ಮಾಡುವಂತೆ ವಾರಣಾಸಿ ಜಿಲ್ಲಾ ನ್ಯಾಯಾಧೀಶರು ನಿನ್ನೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದರು.

ಈ ಪ್ರಕರಣವು ಜ್ಞಾನವಾಪಿ ಮಸೀದಿ ಆವರಣದಲ್ಲಿರುವ ‘ಸೋಮನಾಥ ವ್ಯಾಸ್’ ತೆಹ್ಖಾನಾಗೆ ಸಂಬಂಧಿಸಿದೆ. 1993 ರವರೆಗೆ, ವ್ಯಾಸ ಕುಟುಂಬವು ನೆಲಮಾಳಿಗೆಯಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸುತ್ತಿತ್ತು. ಆದರೆ, ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಅದನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗ್ತಿದೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಆದೇಶದ ನಂತರ ಜಿಲ್ಲಾ ಮ್ಯಾಜಿಸ್ಟ್ರೇಟ್ ಎಂ.ಎಸ್ ರಾಜಲಿಂಗಂ ಅವರು ಇತರ ಸರ್ಕಾರಿ ಅಧಿಕಾರಿಗಳೊಂದಿಗೆ ಕಾಶಿ ಕಾರಿಡಾರ್‌ನ ಗೇಟ್ ಸಂಖ್ಯೆ 4ರ ಮೂಲಕ ಮಸೀದಿ ಸಂಕೀರ್ಣವನ್ನು ಪ್ರವೇಶಿಸಿದ್ದಾರೆ. ಅಧಿಕಾರಿಗಳು ಮಸೀದಿ ಸಂಕೀರ್ಣದೊಳಗೆ ಸುಮಾರು ಎರಡು ಗಂಟೆಗಳ ಕಾಲ ಇದ್ದರು. ಹೊರ ಬರುವಾಗ ನ್ಯಾಯಾಲಯದ ಆದೇಶವನ್ನು ಪಾಲಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಗೆ ಹಾಜರಿದ್ದ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಏಳು ದಿನಗಳಲ್ಲಿ ಹಿಂದೂಗಳಿಗೆ ಪೂಜೆಗೆ ವ್ಯವಸ್ಥೆ ಮಾಡುವಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ. ಆದರೆ, ಜಿಲ್ಲಾಡಳಿತ ತರಾತುರಿಯಲ್ಲಿ ಪೂಜೆಗೆ ವ್ಯವಸ್ಥೆ ಮಾಡಿದೆ. ಮಧ್ಯರಾತ್ರಿ ನಡೆದ ಈ ಬೆಳವಣಿಗೆ ಮಸೀದಿ ಸಮಿತಿ ವಾರಣಾಸಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸುವ ಕಾನೂನಾತ್ಮ ಅವಕಾಶವನ್ನು ತಡೆಯುವ ಉದ್ದೇಶ ಹೊಂದಿದೆ ಎಂದು ಹೈಕೋರ್ಟ್‌ಗೆ ಸಲ್ಲಿಸಿದ ಆರ್ಜಿಯಲ್ಲಿ ಮಸೀದಿ ಸಮಿತಿ ಹೇಳಿದೆ.

ಇದನ್ನೂ ಓದಿ: ಚಂಡೀಗಢ ಮೇಯರ್ ಚುನಾವಣೆ: ತೀರ್ಪಿಗೆ ತಡೆ ನಿರಾಕರಿಸಿದ ಹೈಕೋರ್ಟ್, ಸುಪ್ರೀಂ ಕದ ತಟ್ಟಿದ ಎಎಪಿ ಕೌನ್ಸಿಲರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...