Homeಮುಖಪುಟಜ್ಞಾನವಾಪಿ ಮಸೀದಿ ವಿವಾದ: ವೈಜ್ಞಾನಿಕ ಸಮೀಕ್ಷೆ ವರದಿ ಕೋರ್ಟ್‌ಗೆ ಸಲ್ಲಿಕೆ

ಜ್ಞಾನವಾಪಿ ಮಸೀದಿ ವಿವಾದ: ವೈಜ್ಞಾನಿಕ ಸಮೀಕ್ಷೆ ವರದಿ ಕೋರ್ಟ್‌ಗೆ ಸಲ್ಲಿಕೆ

- Advertisement -
- Advertisement -

ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆ ನಡೆದಿದ್ದು, ಭಾರತೀಯ ಪುರಾತತ್ವ ಇಲಾಖೆಯು ಉತ್ತರಪ್ರದೇಶದ ವಾರಣಾಸಿಯ ಜಿಲ್ಲಾ ನ್ಯಾಯಾಲಯಕ್ಕೆ ಜ್ಞಾನವಾಪಿ ಮಸೀದಿ ಕುರಿತ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಸಲ್ಲಿಸಿದೆ.

ಇಂದು ಮಧ್ಯಾಹ್ನ ವೈಜ್ಞಾನಿಕ ಸಮೀಕ್ಷೆ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ  ಸಲ್ಲಿಸಲಾಗಿದೆ. ವರದಿಯನ್ನು ಬಹಿರಂಗಗೊಳಿಸಲಾಗುತ್ತದೆಯೇ? ಸರ್ವೆ ಮಾಹಿತಿಯನ್ನು ಹಿಂದೂ ಪರ  ಮತ್ತು ಮುಸ್ಲಿಂ ಪರ ಅರ್ಜಿದಾರರ ಜೊತೆ ಹಂಚಿಕೊಳ್ಳಲಾಗುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಮುಂದಿನ ವಿಚಾರಣೆಯನ್ನು ಗುರುವಾರಕ್ಕೆ ನಿಗದಿಪಡಿಸಲಾಗಿದೆ.

ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸರ್ವೆ ಕಾರ್ಯ ಪೂರ್ಣಗೊಳಿಸಿರುವ ಭಾರತೀಯ ಪುರಾತತ್ವ ಇಲಾಖೆಯು, ತನ್ನ ವರದಿಯನ್ನು ವಿಚಾರಣೆ ನಡೆಯುತ್ತಿರುವ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದೆ. ಈ ಪ್ರಕರಣ ಮುಂದಿನ ವಿಚಾರಣೆ ಡಿ. 21ರಂದು ನಡೆಯಲಿದೆ.

ಹಿಂದೂ ಅರ್ಜಿದಾರರ ಪರ ವಕೀಲ ಮದನ್ ಮೋಹನ್ ಯಾದವ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಎಎಸ್‌ಐ ಸ್ಥಾಯಿ ಸಮಿತಿಯ ಅಮಿತ್ ಶ್ರೀವಾಸ್ತವ ಅವರು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ತಮ್ಮ ವರದಿಯನ್ನು ಸಲ್ಲಿಸಿದ್ದಾರೆ. ವರದಿ ಸಲ್ಲಿಸಿದ ಸಂದರ್ಭದಲ್ಲಿ ಎಎಸ್‌ಐನ ನಾಲ್ವರು ಹಿರಿಯ ಅಧಿಕಾರಿಗಳು ಇದ್ದರು. ಡಿ.21ರಂದು ನಡೆಯಲಿರುವ ವಿಚಾರಣೆ ಸಂದರ್ಭದಲ್ಲಿ ಲಕೋಟೆಯನ್ನು ತೆರೆದು ಎರಡೂ ಕಡೆಯವರಿಗೆ ಅದರ ಪ್ರತಿಯನ್ನು ನ್ಯಾಯಾಲಯ ನೀಡಲಿದೆ ಎಂದು ಯಾದವ್ ತಿಳಿಸಿದರು.

ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿ ದೇವಾಲಯದ ಮೂಲ ತಳಪಾಯದ ಮೇಲೆ 17ನೇ ಶತಮಾನದಲ್ಲಿ ಜ್ಞಾನವಾಪಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಹಿಂದೂ ಪರ ಅರ್ಜಿದಾರರು ವಾದವನ್ನು ಮಂಡಿಸಿದ್ದರು.

ಏನಿದು ವಿವಾದ?

ಜ್ಞಾನವಾಪಿ ಮಸೀದಿಯನ್ನು 1669ರಲ್ಲಿ ಮೊಘಲ್ ದೊರೆ ಔರಂಗಜೇಬನು ಪ್ರಾಚೀನ ವಿಶ್ವೇಶ್ವರ ದೇವಾಲಯವನ್ನು ಕೆಡವಿ ನಿರ್ಮಿಸಿದನು ಎಂಬುವುದು ಹಿಂದೂಪರರ ವಾದ. ಜ್ಞಾನವಾಪಿ ಮಸೀದಿಯ ಪ್ರಕರಣವು 1991ರಿಂದ ನ್ಯಾಯಾಲಯದಲ್ಲಿದೆ. ಕಾಶಿ ವಿಶ್ವನಾಥ ದೇವಾಲಯದ ಅರ್ಚಕರ ವಂಶಸ್ಥರಾದ ಪಂಡಿತ್ ಸೋಮನಾಥ ವ್ಯಾಸ್ ಸೇರಿದಂತೆ ಮೂವರು ವಾರಣಾಸಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಔರಂಗಜೇಬನು ದೇವಾಲಯ ಧ್ವಂಸಗೊಳಿಸಿದ್ದಾನೆ ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಇದಲ್ಲದೆ ವಿಶ್ವನಾಥ ದೇವರ ಜ್ಯೋತಿರ್ಲಿಂಗವು ಜ್ಞಾನವಾಪಿ ಮಸೀದಿಯ ಆವರಣದಲ್ಲಿದೆ ಎಂದು ಹೇಳುವ ಇನ್ನೊಂದು ಅರ್ಜಿಯೂ ನ್ಯಾಯಾಲಯದಲ್ಲಿದೆ.

2021ರ ಆ.18ರಂದು ವಾರಣಾಸಿಯ ಅದೇ ನ್ಯಾಯಾಲಯದಲ್ಲಿ, ಶೃಂಗಾರ ಗೌರಿ, ಹನುಮಾನ್ ಮತ್ತು ಗಣೇಶ ಚಿತ್ರಗಳು ಇವೆಯೆಂದು ಮತ್ತು ಪೂಜೆಗೆ ಅನುಮತಿ ಕೋರಿ ಐವರು ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದರು, ಇದರ ಬೆನ್ನಲ್ಲಿ ಪ್ರಸ್ತುತ ಸ್ಥಿತಿಯನ್ನು ತಿಳಿಯಲು ಆಯೋಗವನ್ನು ರಚಿಸಲಾಗಿತ್ತು.

ಏ.2021ರಲ್ಲಿ ವಾರಣಾಸಿ ನ್ಯಾಯಾಲಯವು ಸಮೀಕ್ಷೆಯನ್ನು ನಡೆಸಿ ಅದರ ವರದಿಯನ್ನು ಸಲ್ಲಿಸಲು ASIಗೆ ನಿರ್ದೇಶನ ನೀಡಿತ್ತು. ಆದರೆ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಮತ್ತು ಜ್ಞಾನವಾಪಿ ಮಸೀದಿಯನ್ನು ನಡೆಸುತ್ತಿರುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು  ಅರ್ಜಿಯನ್ನು  ವಿರೋಧಿಸಿತು ಮತ್ತು ಮಸೀದಿಯ ಸಮೀಕ್ಷೆಗಾಗಿ ವಾರಣಾಸಿ ನ್ಯಾಯಾಲಯದ ಆದೇಶವನ್ನು ವಿರೋಧಿಸಿತ್ತು.  ಪ್ರಕರಣವು ನಂತರ ಅಲಹಾಬಾದ್ ಹೈಕೋರ್ಟ್‌ಗೆ ತಲುಪಿತ್ತು.

ಇದನ್ನು ಓದಿ: ಶಾಹಿ ಈದ್ಗಾ ಮಸೀದಿ ಸರ್ವೆ: ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...