HomeUncategorizedಗ್ಯಾರಂಟಿಗೆ ಕೇಂದ್ರ ಸರ್ಕಾರದ ನಯಾಪೈಸೆಯೂ ಬೇಕಾಗಿಲ್ಲ: ನಿರ್ಮಲಾ ಸೀತಾರಾಮನ್‌ಗೆ ದಾಖಲೆ ಸಹಿತ ಪ್ರತಿಕ್ರಿಯಿಸಿದ ಸಚಿವ ಕೃಷ್ಣ...

ಗ್ಯಾರಂಟಿಗೆ ಕೇಂದ್ರ ಸರ್ಕಾರದ ನಯಾಪೈಸೆಯೂ ಬೇಕಾಗಿಲ್ಲ: ನಿರ್ಮಲಾ ಸೀತಾರಾಮನ್‌ಗೆ ದಾಖಲೆ ಸಹಿತ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಗ್ಯಾರಂಟಿಗೆ ಕೇಂದ್ರ ಸರ್ಕಾರದ ನಯಾಪೈಸೆಯೂ ಬೇಕಾಗಿಲ್ಲ. ನಮ್ಮ ಗ್ಯಾರಂಟಿಗೆ ಬೇಕಾದ ಹಣವನ್ನು ನಾವೇ ಹೊಂದಿಸುತ್ತಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ರಾಜ್ಯಕ್ಕೆ ಜಿಎಸ್‌ಟಿ ತೆರಿಗೆ ಹಂಚಿಕೆ ಬಾಕಿ ಬಗ್ಗೆ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಸಚಿವೆ ನಿರ್ಮಲಾ ಸೀತಾರಾಮನ್,  ಕರ್ನಾಟಕಕ್ಕೆ ನೀಡಬೇಕಿರುವ ತೆರಿಗೆ ಪಾಲಿನಲ್ಲಿ ಯಾವುದೇ ಹಣ ಬಾಕಿ ಇಲ್ಲ ಎಂದು ಹೇಳಿದ್ದರು. ಇದರ ಬೆನ್ನಿಗೆ ಸೋಮವಾರ ವಿಕಾಸಸೌಧದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ದಾಖಲೆ ಸಮೇತ ಬಿಚ್ಚಿಟ್ಟಿದ್ದಾರೆ.

ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆಯಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದಲೇ ರಾಜ್ಯಕ್ಕೆ ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯವಾಗುತ್ತಿದೆ. ಮಾರ್ಚ್‌ 31ಕ್ಕೆ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಈ ಬಗ್ಗೆ ಬಹಿರಂಗ ಚರ್ಚೆಗೆ ಅವರು ಸಿದ್ದರಿದ್ದಾರ? ಯಾವುದೇ ರಾಜ್ಯಕ್ಕೆ 2019- 20ರಲ್ಲಿ ಕೊಟ್ಟಿದ್ದಕ್ಕಿಂತ ಕಡಿಮೆ ಅನುದಾನವನ್ನು ಕೊಡುವಂತಿಲ್ಲ ಎಂದು ಹಣಕಾಸು ಆಯೋಗ ಹೇಳುತ್ತದೆ. ಹಣಕಾಸು ಆಯೋಗದವರು 2019-20ರಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಬಂದ ತೆರಿಗೆ ಪಾಲಿಗಿಂತ 2020-21ರಲ್ಲಿ ರೂ. 5495 ಕೋಟಿ ಹಣ ಕಡಿಮೆಯಾಗಿತ್ತು. ಈ ಹಣವನ್ನು ರಾಜ್ಯಕ್ಕೆ ತುಂಬಿಕೊಡಬೇಕು ಎಂದು ಸ್ವತಃ ಹಣಕಾಸು ಆಯೋಗ ಶಿಫಾರಸ್ಸು ಮಾಡಿದರೂ ಸಚಿವೆ ನಿರ್ಮಲಾ ಸೀತಾರಾಮನ್ ಇದನ್ನು ತಡೆಹಿಡಿದದ್ದು ಏಕೆ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶ್ನಿಸಿದರು.

ರಾಜ್ಯದ ಪಾಲಿನ ನ್ಯಾಯಯುತ ತೆರಿಗೆ ಹಂಚಿಕೆ ನಷ್ಟ ಪರಿಹಾರ ಕೇಳಿದರೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2021 ನೇ ವರ್ಷದ ಅಂತಿಮ ವರದಿಯಲ್ಲಿ ಹಣಕಾಸು ಆಯೋಗ ಶಿಫಾರಸ್ಸು ಮಾಡಿಲ್ಲ ಎನ್ನುತ್ತಿದ್ದಾರೆ. ಆದರೆ, ಹಣಕಾಸು ಆಯೋಗದ ಅಂತಿಮ ವರದಿಯ 36ನೇ ಪುಟದಲ್ಲಿ ಕರ್ನಾಟಕಕ್ಕೆ ನಷ್ಟ ತುಂಬಿಕೊಡಬೇಕು ಎಂದು ಬರೆಯಲಾಗಿದೆಯಲ್ಲ ಇದೇನು? ಎಂದು ಅವರು ಕುಟುಕಿದರು.

2019-20ರಲ್ಲಿ ರಾಜ್ಯಕ್ಕೆ ಕೇಂದ್ರದಿಂದ ರೂ. 36675 ಕೋಟಿ ತೆರಿಗೆ ಪಾಲು ಬಂದಿತ್ತು. 2020-21ಕ್ಕೆ ಕೇವಲ ರೂ.31180 ಕೋಟಿಗೆ ಕುಸಿದಿತ್ತು. ಹೀಗಾಗಿ ರಾಜ್ಯಕ್ಕೆ ಆಗಿರುವ ನಷ್ಟ ರೂ. 5495 ಕೋಟಿ ಹಣವನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಹಣಕಾಸು ಆಯೋಗ ಶಿಫಾರಸು ಮಾಡಿದೆ. ಆದರೆ, ಈ ಹಣ ಈವರೆಗೆ ರಾಜ್ಯಕ್ಕೆ ಬಂದಿಲ್ಲ. 2021-26ನೇ ಸಾಲಿನಲ್ಲಿ ರೂ.6,000 ಕೋಟಿ ಶಿಫಾರಸು ಮಾಡಲಾಗಿದೆ. ಒಟ್ಟಾರೆ, ರೂ.11495 ಕೋಟಿ ಹಣ ರಾಜ್ಯಕ್ಕೆ ಬರಬೇಕಿದೆ.

ಈ ಬಗ್ಗೆ ಪ್ರಶ್ನೆ ಮಾಡಿದರೆ ನಿರ್ಮಲಾ ಸೀತಾರಾಮನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳುತ್ತಿರುವುದು ಸುಳ್ಳು ಎನ್ನುತ್ತಿದ್ದಾರೆ. ಅಸಲಿಗೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಸೆಪ್ಟೆಂಬರ್ 17 2020ರಲ್ಲಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಕೋರಿದ್ದರು. ಬಸವರಾಜು ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಸೀತಾರಾಮನ್ ಅವರಿಗೆ ಪತ್ರ ಬೆರೆದಿದ್ದರು. ಈ ಎಲ್ಲಾ ವಿಚಾರಗಳೂ ದಿನಪತ್ರಿಕೆಗಳಲ್ಲೂ ಸಹ ವರದಿಯಾಗಿತ್ತು. ಹಾಗಾದರೆ ಯಡಿಯೂರಪ್ಪ ಹಾಗೂ ಬೊಮ್ಮಾಯಿಯವರೂ ಸಹ ಸುಳ್ಳು ಹೇಳಿದ್ದರಾ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾತಿನಲ್ಲೇ ತಿವಿದರು.

ಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಂದೆಡೆ ಹಣಕಾಸು ಆಯೋಗದ ಒಂದೇ ಒಂದು ಶಿಫಾರಸ್ಸನ್ನು ಸಹ ನಾವು ತಿದ್ದಲು ಹೋಗುವುದಿಲ್ಲ ಎನ್ನುತ್ತಾರೆ. ಮತ್ತೊಂದೆಡೆ ರಾಜ್ಯಗಳಿಗೆ ನೀಡುವ ವಿಶೇಷ ಅನುದಾನವನ್ನು ಹಿಂಪಡೆಯುವಂತೆ ಹಣಕಾಸು ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದು ಲೋಕಸಭೆಯಲ್ಲೇ ಉತ್ತರ ನೀಡುತ್ತಾರೆ. ಹಾಗಾದ್ರೆ ರಾಜ್ಯದ ಪಾಲಿನ ಹಣವನ್ನು ತಡೆಹಿಡಿಯಲು ಮಾತ್ರ ಇವರ ಕಾನೂನುಗಳು ಇರುವುದಾ? ಎಂದು ವಿಷಾದಿಸಿದರು.

ಹಣಕಾಸು ಆಯೋಗದ ಶಿಫಾರಸು ಮಾಡಿದ ನಮ್ಮ ಅನುದಾನವನ್ನು ನಾವು ಸಂವಿಧಾನಾತ್ಮಕವಾಗಿಯೇ ಕೇಳುತ್ತಿದ್ದೇವೆಯೇ ವಿನಃ ನಾವೇನು ಭಿಕ್ಷೆ ಕೇಳುತ್ತಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಆಕ್ರೋಶ ಹೊರಹಾಕಿದರು.

ನಮ್ಮ ರಾಜ್ಯದ ಹಕ್ಕನ್ನು ಕೇಳಿದರೆ ಕೇಂದ್ರ ಸರ್ಕಾರ ನಾವು ಸುಳ್ಳು ಹೇಳುತ್ತಿದ್ದೇವೆ ಎಂದು ಆರೋಪ ಹೊರಿಸಿ ಕರ್ನಾಟಕದ ಜನರಿಗೆ ಅನ್ಯಾಯ ಮಾಡುತ್ತಿದೆ. ಸ್ವತಃ ಕರ್ನಾಟಕದಿಂದ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಅವರು ಹೀಗೆ ರಾಜ್ಯದ ಹಿತದ ವಿಚಾರದಲ್ಲಿ ಸುಳ್ಳು ಹೇಳಿ ಜನರನ್ನು ಗೊಂದಲಕ್ಕೀಡು ಮಾಡುತ್ತಿರುವುದು ಸರಿಯಲ್ಲ. ತೆರಿಗೆ ಪಾಲು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮೈಸೂರಿನಲ್ಲಿ ಬಹಿರಂಗ ಚರ್ಚೆಯಾಗಲಿ. ಈ ಚರ್ಚೆಗೆ ನಾವು ಸಿದ್ದ ಮಾನ್ಯ ನಿರ್ಮಲಾ ಸೀತಾರಾಮನ್ ಅವರು ಸಿದ್ದವಿದ್ದಾರ? ಎಂದು ಅವರು ಇದೇ ಸಂದರ್ಭದಲ್ಲಿ ಸವಾಲು ಹಾಕಿದರು.

ಅಲ್ಲದೆ, ಈ ವಿಚಾರದಲ್ಲಿ ಕೆಸರೆರಚಾಟ, ರಾಜಕೀಯ ತೆವಲಾಟ ಆಗಬಾರದು. ಕರ್ನಾಟಕದಂತಹ ಪ್ರಗತಿಪರ ರಾಜ್ಯಗಳಿಗೆ ಮಲತಾಯಿ ಧೋರಣೆ ಅನ್ಯಾಯ ಮಾಡಬಾರದು ಎಂದು ಅವರು ಕೇಂದ್ರ ಸರ್ಕಾರವನ್ನು ವಿನಂತಿಸಿದರು.ಗ್ಯಾರಂಟಿ ಜೊತೆಗೆ ನಿವೃತ್ತಿ ವೇತನ ರೂ.11,200 ಕೋಟಿ ಹಣವನ್ನೂ ಸಹ ರಾಜ್ಯ ಸರ್ಕಾರವೇ ನೀಡುತ್ತಿದೆ. ಈ ಹಣದ ಪೈಕಿ ಕೇಂದ್ರ ಸರ್ಕಾರದ ಪಾಲು ರೂ. 550 ಕೋಟಿ ಮಾತ್ರ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ನಮ್ಮ ಗ್ಯಾರಂಟಿ ಯೋಜನೆಗಳಿಗೆ ಇವರಿಂದ ನಯಾಪೈಸೆಯೂ ಬೇಕಾಗಿಲ್ಲ. ನಮ್ಮ ತೆರಿಗೆಯಿಂದ ನಮ್ಮ ನ್ಯಾಯಯುತ ಪಾಲನ್ನು ಕೊಟ್ಟರೆ ಸಾಕು. ನಮ್ಮ ರಾಜ್ಯಕ್ಕೆ ಬರಬೇಕಾದ ಬರಪರಿಹಾರವನ್ನು ಕೊಡಲಿ. ನಿಮ್ಮ ಉದಾರತನವೇನು ಬೇಕಾಗಿಲ್ಲ. ಕರ್ನಾಟಕದ ಜನ ಇರುವುದು ಕೇವಲ ಓಟು ಒತ್ತೋಕಷ್ಟೇ ಎಂಬ ಭಾವನೆಯಿಂದ ಕೇಂದ್ರ ಸರ್ಕಾರ ಹೊರಬರಲಿ. ನಮ್ಮನ್ನು ದ್ವಿತೀಯ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳುವುದನ್ನು ಬಿಡಲಿ. ನಮ್ಮ ಹಕ್ಕನ್ನು ನಮಗೆ ಕೊಡಲಿ ಎಂದು ಅವರು ಒತ್ತಾಯಿಸಿದರು.

ಇದನ್ನು ಓದಿ:ಡಾರ್ಜಿಲಿಂಗ್: ಸ್ವಪಕ್ಷದ ಅಭ್ಯರ್ಥಿ ವಿರುದ್ಧ ಬಿಜೆಪಿ ಶಾಸಕ ಸ್ಪರ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...