HomeUncategorizedಗ್ಯಾರಂಟಿಗೆ ಕೇಂದ್ರ ಸರ್ಕಾರದ ನಯಾಪೈಸೆಯೂ ಬೇಕಾಗಿಲ್ಲ: ನಿರ್ಮಲಾ ಸೀತಾರಾಮನ್‌ಗೆ ದಾಖಲೆ ಸಹಿತ ಪ್ರತಿಕ್ರಿಯಿಸಿದ ಸಚಿವ ಕೃಷ್ಣ...

ಗ್ಯಾರಂಟಿಗೆ ಕೇಂದ್ರ ಸರ್ಕಾರದ ನಯಾಪೈಸೆಯೂ ಬೇಕಾಗಿಲ್ಲ: ನಿರ್ಮಲಾ ಸೀತಾರಾಮನ್‌ಗೆ ದಾಖಲೆ ಸಹಿತ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಗ್ಯಾರಂಟಿಗೆ ಕೇಂದ್ರ ಸರ್ಕಾರದ ನಯಾಪೈಸೆಯೂ ಬೇಕಾಗಿಲ್ಲ. ನಮ್ಮ ಗ್ಯಾರಂಟಿಗೆ ಬೇಕಾದ ಹಣವನ್ನು ನಾವೇ ಹೊಂದಿಸುತ್ತಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ರಾಜ್ಯಕ್ಕೆ ಜಿಎಸ್‌ಟಿ ತೆರಿಗೆ ಹಂಚಿಕೆ ಬಾಕಿ ಬಗ್ಗೆ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಸಚಿವೆ ನಿರ್ಮಲಾ ಸೀತಾರಾಮನ್,  ಕರ್ನಾಟಕಕ್ಕೆ ನೀಡಬೇಕಿರುವ ತೆರಿಗೆ ಪಾಲಿನಲ್ಲಿ ಯಾವುದೇ ಹಣ ಬಾಕಿ ಇಲ್ಲ ಎಂದು ಹೇಳಿದ್ದರು. ಇದರ ಬೆನ್ನಿಗೆ ಸೋಮವಾರ ವಿಕಾಸಸೌಧದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ದಾಖಲೆ ಸಮೇತ ಬಿಚ್ಚಿಟ್ಟಿದ್ದಾರೆ.

ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆಯಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದಲೇ ರಾಜ್ಯಕ್ಕೆ ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯವಾಗುತ್ತಿದೆ. ಮಾರ್ಚ್‌ 31ಕ್ಕೆ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಈ ಬಗ್ಗೆ ಬಹಿರಂಗ ಚರ್ಚೆಗೆ ಅವರು ಸಿದ್ದರಿದ್ದಾರ? ಯಾವುದೇ ರಾಜ್ಯಕ್ಕೆ 2019- 20ರಲ್ಲಿ ಕೊಟ್ಟಿದ್ದಕ್ಕಿಂತ ಕಡಿಮೆ ಅನುದಾನವನ್ನು ಕೊಡುವಂತಿಲ್ಲ ಎಂದು ಹಣಕಾಸು ಆಯೋಗ ಹೇಳುತ್ತದೆ. ಹಣಕಾಸು ಆಯೋಗದವರು 2019-20ರಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಬಂದ ತೆರಿಗೆ ಪಾಲಿಗಿಂತ 2020-21ರಲ್ಲಿ ರೂ. 5495 ಕೋಟಿ ಹಣ ಕಡಿಮೆಯಾಗಿತ್ತು. ಈ ಹಣವನ್ನು ರಾಜ್ಯಕ್ಕೆ ತುಂಬಿಕೊಡಬೇಕು ಎಂದು ಸ್ವತಃ ಹಣಕಾಸು ಆಯೋಗ ಶಿಫಾರಸ್ಸು ಮಾಡಿದರೂ ಸಚಿವೆ ನಿರ್ಮಲಾ ಸೀತಾರಾಮನ್ ಇದನ್ನು ತಡೆಹಿಡಿದದ್ದು ಏಕೆ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶ್ನಿಸಿದರು.

ರಾಜ್ಯದ ಪಾಲಿನ ನ್ಯಾಯಯುತ ತೆರಿಗೆ ಹಂಚಿಕೆ ನಷ್ಟ ಪರಿಹಾರ ಕೇಳಿದರೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2021 ನೇ ವರ್ಷದ ಅಂತಿಮ ವರದಿಯಲ್ಲಿ ಹಣಕಾಸು ಆಯೋಗ ಶಿಫಾರಸ್ಸು ಮಾಡಿಲ್ಲ ಎನ್ನುತ್ತಿದ್ದಾರೆ. ಆದರೆ, ಹಣಕಾಸು ಆಯೋಗದ ಅಂತಿಮ ವರದಿಯ 36ನೇ ಪುಟದಲ್ಲಿ ಕರ್ನಾಟಕಕ್ಕೆ ನಷ್ಟ ತುಂಬಿಕೊಡಬೇಕು ಎಂದು ಬರೆಯಲಾಗಿದೆಯಲ್ಲ ಇದೇನು? ಎಂದು ಅವರು ಕುಟುಕಿದರು.

2019-20ರಲ್ಲಿ ರಾಜ್ಯಕ್ಕೆ ಕೇಂದ್ರದಿಂದ ರೂ. 36675 ಕೋಟಿ ತೆರಿಗೆ ಪಾಲು ಬಂದಿತ್ತು. 2020-21ಕ್ಕೆ ಕೇವಲ ರೂ.31180 ಕೋಟಿಗೆ ಕುಸಿದಿತ್ತು. ಹೀಗಾಗಿ ರಾಜ್ಯಕ್ಕೆ ಆಗಿರುವ ನಷ್ಟ ರೂ. 5495 ಕೋಟಿ ಹಣವನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಹಣಕಾಸು ಆಯೋಗ ಶಿಫಾರಸು ಮಾಡಿದೆ. ಆದರೆ, ಈ ಹಣ ಈವರೆಗೆ ರಾಜ್ಯಕ್ಕೆ ಬಂದಿಲ್ಲ. 2021-26ನೇ ಸಾಲಿನಲ್ಲಿ ರೂ.6,000 ಕೋಟಿ ಶಿಫಾರಸು ಮಾಡಲಾಗಿದೆ. ಒಟ್ಟಾರೆ, ರೂ.11495 ಕೋಟಿ ಹಣ ರಾಜ್ಯಕ್ಕೆ ಬರಬೇಕಿದೆ.

ಈ ಬಗ್ಗೆ ಪ್ರಶ್ನೆ ಮಾಡಿದರೆ ನಿರ್ಮಲಾ ಸೀತಾರಾಮನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳುತ್ತಿರುವುದು ಸುಳ್ಳು ಎನ್ನುತ್ತಿದ್ದಾರೆ. ಅಸಲಿಗೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಸೆಪ್ಟೆಂಬರ್ 17 2020ರಲ್ಲಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಕೋರಿದ್ದರು. ಬಸವರಾಜು ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಸೀತಾರಾಮನ್ ಅವರಿಗೆ ಪತ್ರ ಬೆರೆದಿದ್ದರು. ಈ ಎಲ್ಲಾ ವಿಚಾರಗಳೂ ದಿನಪತ್ರಿಕೆಗಳಲ್ಲೂ ಸಹ ವರದಿಯಾಗಿತ್ತು. ಹಾಗಾದರೆ ಯಡಿಯೂರಪ್ಪ ಹಾಗೂ ಬೊಮ್ಮಾಯಿಯವರೂ ಸಹ ಸುಳ್ಳು ಹೇಳಿದ್ದರಾ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾತಿನಲ್ಲೇ ತಿವಿದರು.

ಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಂದೆಡೆ ಹಣಕಾಸು ಆಯೋಗದ ಒಂದೇ ಒಂದು ಶಿಫಾರಸ್ಸನ್ನು ಸಹ ನಾವು ತಿದ್ದಲು ಹೋಗುವುದಿಲ್ಲ ಎನ್ನುತ್ತಾರೆ. ಮತ್ತೊಂದೆಡೆ ರಾಜ್ಯಗಳಿಗೆ ನೀಡುವ ವಿಶೇಷ ಅನುದಾನವನ್ನು ಹಿಂಪಡೆಯುವಂತೆ ಹಣಕಾಸು ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದು ಲೋಕಸಭೆಯಲ್ಲೇ ಉತ್ತರ ನೀಡುತ್ತಾರೆ. ಹಾಗಾದ್ರೆ ರಾಜ್ಯದ ಪಾಲಿನ ಹಣವನ್ನು ತಡೆಹಿಡಿಯಲು ಮಾತ್ರ ಇವರ ಕಾನೂನುಗಳು ಇರುವುದಾ? ಎಂದು ವಿಷಾದಿಸಿದರು.

ಹಣಕಾಸು ಆಯೋಗದ ಶಿಫಾರಸು ಮಾಡಿದ ನಮ್ಮ ಅನುದಾನವನ್ನು ನಾವು ಸಂವಿಧಾನಾತ್ಮಕವಾಗಿಯೇ ಕೇಳುತ್ತಿದ್ದೇವೆಯೇ ವಿನಃ ನಾವೇನು ಭಿಕ್ಷೆ ಕೇಳುತ್ತಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಆಕ್ರೋಶ ಹೊರಹಾಕಿದರು.

ನಮ್ಮ ರಾಜ್ಯದ ಹಕ್ಕನ್ನು ಕೇಳಿದರೆ ಕೇಂದ್ರ ಸರ್ಕಾರ ನಾವು ಸುಳ್ಳು ಹೇಳುತ್ತಿದ್ದೇವೆ ಎಂದು ಆರೋಪ ಹೊರಿಸಿ ಕರ್ನಾಟಕದ ಜನರಿಗೆ ಅನ್ಯಾಯ ಮಾಡುತ್ತಿದೆ. ಸ್ವತಃ ಕರ್ನಾಟಕದಿಂದ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಅವರು ಹೀಗೆ ರಾಜ್ಯದ ಹಿತದ ವಿಚಾರದಲ್ಲಿ ಸುಳ್ಳು ಹೇಳಿ ಜನರನ್ನು ಗೊಂದಲಕ್ಕೀಡು ಮಾಡುತ್ತಿರುವುದು ಸರಿಯಲ್ಲ. ತೆರಿಗೆ ಪಾಲು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮೈಸೂರಿನಲ್ಲಿ ಬಹಿರಂಗ ಚರ್ಚೆಯಾಗಲಿ. ಈ ಚರ್ಚೆಗೆ ನಾವು ಸಿದ್ದ ಮಾನ್ಯ ನಿರ್ಮಲಾ ಸೀತಾರಾಮನ್ ಅವರು ಸಿದ್ದವಿದ್ದಾರ? ಎಂದು ಅವರು ಇದೇ ಸಂದರ್ಭದಲ್ಲಿ ಸವಾಲು ಹಾಕಿದರು.

ಅಲ್ಲದೆ, ಈ ವಿಚಾರದಲ್ಲಿ ಕೆಸರೆರಚಾಟ, ರಾಜಕೀಯ ತೆವಲಾಟ ಆಗಬಾರದು. ಕರ್ನಾಟಕದಂತಹ ಪ್ರಗತಿಪರ ರಾಜ್ಯಗಳಿಗೆ ಮಲತಾಯಿ ಧೋರಣೆ ಅನ್ಯಾಯ ಮಾಡಬಾರದು ಎಂದು ಅವರು ಕೇಂದ್ರ ಸರ್ಕಾರವನ್ನು ವಿನಂತಿಸಿದರು.ಗ್ಯಾರಂಟಿ ಜೊತೆಗೆ ನಿವೃತ್ತಿ ವೇತನ ರೂ.11,200 ಕೋಟಿ ಹಣವನ್ನೂ ಸಹ ರಾಜ್ಯ ಸರ್ಕಾರವೇ ನೀಡುತ್ತಿದೆ. ಈ ಹಣದ ಪೈಕಿ ಕೇಂದ್ರ ಸರ್ಕಾರದ ಪಾಲು ರೂ. 550 ಕೋಟಿ ಮಾತ್ರ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ನಮ್ಮ ಗ್ಯಾರಂಟಿ ಯೋಜನೆಗಳಿಗೆ ಇವರಿಂದ ನಯಾಪೈಸೆಯೂ ಬೇಕಾಗಿಲ್ಲ. ನಮ್ಮ ತೆರಿಗೆಯಿಂದ ನಮ್ಮ ನ್ಯಾಯಯುತ ಪಾಲನ್ನು ಕೊಟ್ಟರೆ ಸಾಕು. ನಮ್ಮ ರಾಜ್ಯಕ್ಕೆ ಬರಬೇಕಾದ ಬರಪರಿಹಾರವನ್ನು ಕೊಡಲಿ. ನಿಮ್ಮ ಉದಾರತನವೇನು ಬೇಕಾಗಿಲ್ಲ. ಕರ್ನಾಟಕದ ಜನ ಇರುವುದು ಕೇವಲ ಓಟು ಒತ್ತೋಕಷ್ಟೇ ಎಂಬ ಭಾವನೆಯಿಂದ ಕೇಂದ್ರ ಸರ್ಕಾರ ಹೊರಬರಲಿ. ನಮ್ಮನ್ನು ದ್ವಿತೀಯ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳುವುದನ್ನು ಬಿಡಲಿ. ನಮ್ಮ ಹಕ್ಕನ್ನು ನಮಗೆ ಕೊಡಲಿ ಎಂದು ಅವರು ಒತ್ತಾಯಿಸಿದರು.

ಇದನ್ನು ಓದಿ:ಡಾರ್ಜಿಲಿಂಗ್: ಸ್ವಪಕ್ಷದ ಅಭ್ಯರ್ಥಿ ವಿರುದ್ಧ ಬಿಜೆಪಿ ಶಾಸಕ ಸ್ಪರ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...