Homeಅಂತರಾಷ್ಟ್ರೀಯH-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

H-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020 ರ ಅಂತ್ಯದವರೆಗೆ ಭಾರತೀಯ ಐಟಿ ವೃತ್ತಿಪರರಿಂದ ಹೆಚ್ಚು ಬೇಡಿಕೆಯಿರುವ H-1B ವೀಸಾ ಸೇರಿದಂತೆ ಹಲವಾರು ವರ್ಗದ ವಿದೇಶಿ ಕೆಲಸದ ವೀಸಾಗಳನ್ನು ಅಮಾನತುಗೊಳಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರ ವಿರುದ್ದ ಪ್ರತಿಭಟನೆಗಳು ನಡೆದಿತ್ತು.

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಬುಧವಾರ ಎಚ್-1ಬಿ (H-1B) ಕೆಲಸದ ವೀಸಾ ನಿಯಮಗಳಲ್ಲಿ ಕೆಲವನ್ನು ಸಡಿಲಗೊಳಿಸಿದೆ. ನಿಷೇಧಕ್ಕೆ ಮುಂಚಿತವಾಗಿ ಅವರು ಅದೇ ಉದ್ಯೋಗಗಳಿಗೆ ಮರಳುತ್ತಿದ್ದರೆ ವೀಸಾ ಹೊಂದಿರುವವರು ದೇಶಕ್ಕೆ ಪ್ರವೇಶಿಸಲು ಅವಕಾಶ ನೀಡುತ್ತದೆ ಎಂದು ಹೇಳಿದೆ. ಅಮೆರಿಕಾ ಸ್ಟೇಟ್ ಡಿಪಾರ್ಟ್ಮೆಂಟ್‌‌ನ ನೋಟಿಸ್ ಈ ಕ್ರಮವನ್ನು “ಈ ಪರಿಸ್ಥಿತಿಯಲ್ಲಿ ಉದ್ಯೋಗಿಗಳನ್ನು ಬದಲಿಸಲು ಉದ್ಯೋಗದಾತರಿಗೆ ಒತ್ತಾಯಿಸುವುದು ಆರ್ಥಿಕ ತೊಂದರೆಗಳಿಗೆ ಕಾರಣವಾಗಬಹುದು” ಎಂದು ಹೇಳಿ ಸಮರ್ಥಿಸಿಕೊಂಡಿದೆ.

ಅಮೆರಿಕಾದ ತ್ವರಿತ ಮತ್ತು ಮುಂದುವರಿದ ಆರ್ಥಿಕ ಚೇತರಿಕೆಗೆ ಅನುಕೂಲವಾಗುವಂತೆ ತಾಂತ್ರಿಕ ತಜ್ಞರು, ಹಿರಿಯ ಮಟ್ಟದ ವ್ಯವಸ್ಥಾಪಕರು ಮತ್ತು ಇತರ ಕಾರ್ಮಿಕರಿಗೆ ಪ್ರವೇಶವನ್ನು ಆಡಳಿತವು ಅನುಮತಿಸಿದೆ.

“ನಿರ್ಣಾಯಕ ಮೂಲಸೌಕರ್ಯ ಕ್ಷೇತ್ರಗಳಲ್ಲಿ” ಉದ್ಯೋಗದಲ್ಲಿರುವ ವೀಸಾ ಹೊಂದಿರುವವರ ಪ್ರಯಾಣಕ್ಕೂ ಇದು ಅವಕಾಶ ಮಾಡಿಕೊಟ್ಟಿದೆ. ಇದು ರಕ್ಷಣಾ ಆರೋಗ್ಯ ಮತ್ತು ಸಾರ್ವಜನಿಕ ಆರೋಗ್ಯ ಮತ್ತು ಮಾಹಿತಿಯನ್ನು ಒಳಗೊಂಡಿದೆ.


ಓದಿ: ವೀಸಾಗಳ ಸ್ಥಗಿತ : ಟ್ರಂಪ್ ನಿರಾಶೆಯನ್ನುಂಟು ಮಾಡಿದ್ದಾರೆ- ಸುಂದರ್‌ ಪಿಚೈ


ಆದರೆ, ನಿರ್ಣಾಯಕ ಮೂಲಸೌಕರ್ಯ ವಲಯದಲ್ಲಿ ಮಾತ್ರ ಉದ್ಯೋಗವು ಸಾಕಾಗುವುದಿಲ್ಲ ಎಂದು ನೋಟಿಸ್ ತಿಳಿಸಿದೆ. ಅರ್ಜಿದಾರರು ಎರಡು ಷರತ್ತುಗಳನ್ನು ಪೂರೈಸಬೇಕು ಎಂದು ಅದು ಹೇಳಿದ್ದು: ಅರ್ಜಿದಾರರು ಸಂಸ್ಥೆಯಲ್ಲಿ ಉನ್ನತ ಸ್ಥಾನವನ್ನು ಹೊಂದಿರಬೇಕು ಅಥವಾ ಅನನ್ಯ ಮತ್ತು ನಿರ್ವಹಣೆಯ ಪ್ರಮುಖವಾದ ಕಾರ್ಯಗಳನ್ನು ಪ್ರತಿಬಿಂಬಿಸುವ ಉದ್ಯೋಗ ಕರ್ತವ್ಯಗಳನ್ನು ಹೊಂದಿರಬೇಕು. ಎರಡನೆಯದಾಗಿ, ಅರ್ಜಿದಾರರ ಉದ್ದೇಶಿತ ಉದ್ಯೋಗ ಕರ್ತವ್ಯಗಳು ಮತ್ತು ವಿಶೇಷ ಅರ್ಹತೆಗಳು ಕಂಪನಿಗೆ ವ್ಯಕ್ತಿಯು ಮಹತ್ವದ ಮತ್ತು ವಿಶಿಷ್ಟ ಕೊಡುಗೆಗಳನ್ನು ಒದಗಿಸುತ್ತಾರೆ ಎಂದಿರಬೇಕು ಎಂದಿದೆ.

ಹೆಚ್ಚುವರಿಯಾಗಿ ಸಾರ್ವಜನಿಕ ಆರೋಗ್ಯ, ಆರೋಗ್ಯ ವೃತ್ತಿಪರರಾಗಿ ಕೆಲಸ ಮಾಡುವವರು, ಕೊರೊನಾ ವೈರಸ್ ಸಾಂಕ್ರಾಮಿಕದ ವೈದ್ಯಕೀಯ ಸಂಶೋಧನೆಗಳಲ್ಲಿ ಕರ್ತವ್ಯ ನಿರ್ವಹಿಸುವವರು, ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ವೈದ್ಯಕೀಯ ಸಂಶೋಧನೆಗಳನ್ನು ನಡೆಸುವ ವೀಸಾ ಹೊಂದಿರುವವರ ಅಮೆರಿಕಾ ಪ್ರಯಾಣಕ್ಕೆ ಆಡಳಿತವು ಅವಕಾಶ ಮಾಡಿಕೊಟ್ಟಿದೆ.

ಜೂನ್ 23 ರಂದು, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020 ರ ಅಂತ್ಯದವರೆಗೆ ಭಾರತೀಯ ಐಟಿ ವೃತ್ತಿಪರರಿಂದ ಹೆಚ್ಚು ಬೇಡಿಕೆಯಿರುವ H-1B ವೀಸಾ ಸೇರಿದಂತೆ ಹಲವಾರು ವರ್ಗದ ವಿದೇಶಿ ಕೆಲಸದ ವೀಸಾಗಳನ್ನು ಅಮಾನತುಗೊಳಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರು. ಟ್ರಂಪ್ ಅವರ ಈ ನಿರ್ಧಾರದಿಂದ ಕೊರೊನಾ ವೈರಸ್ ಸಾಂಕ್ರಾಮಿಕ ಮಧ್ಯೆ ಅಮೆರಿಕಾದಲ್ಲಿ ನಿರುದ್ಯೋಗ ದರದಲ್ಲಿ ತೀವ್ರ ಏರಿಕೆ ಆಗಿದೆ.

ಕಳೆದ ಐದು ವರ್ಷಗಳಲ್ಲಿ 70% ರಷ್ಟು H-1B ವೀಸಾಗಳನ್ನು ಪಡೆದಿರುವ ಭಾರತೀಯರು ಈ ಕ್ರಮದ ವಿರುದ್ದ ಪ್ರತಿಭಟನೆ ಮಾಡಿದ್ದರು. ಜುಲೈನಲ್ಲಿ, ವಲಸೆ ಕಾನೂನು ಸುಧಾರಣೆಗೆ ಒತ್ತಾಯಿಸಿ H-1B ವೀಸಾದ ಭಾರತೀಯರ ಗುಂಪು ವಾಷಿಂಗ್ಟನ್ ಡಿಸಿಯಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿತ್ತು. ಇದಕ್ಕೂ ಮುನ್ನ ಏಳು ಅಪ್ರಾಪ್ತ ವಯಸ್ಕರು ಸೇರಿದಂತೆ 174 ಭಾರತೀಯರ ಗುಂಪು ಟ್ರಂಪ್ ನಿರ್ಧಾರದ ವಿರುದ್ಧ ಮೊಕದ್ದಮೆ ಹೂಡಿತ್ತು. ಅಲ್ಲದೆ ಈ ಕ್ರಮವನ್ನು ವಿರೋಧಿಸಿ ಅಮೆರಿಕದ ವ್ಯಾಪಾರಿ ಮುಖಂಡರು ಹೇಳಿಕೆ ನೀಡಿದ್ದರು.


ಓದಿ: ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...