Homeಅಂತರಾಷ್ಟ್ರೀಯH-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

H-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020 ರ ಅಂತ್ಯದವರೆಗೆ ಭಾರತೀಯ ಐಟಿ ವೃತ್ತಿಪರರಿಂದ ಹೆಚ್ಚು ಬೇಡಿಕೆಯಿರುವ H-1B ವೀಸಾ ಸೇರಿದಂತೆ ಹಲವಾರು ವರ್ಗದ ವಿದೇಶಿ ಕೆಲಸದ ವೀಸಾಗಳನ್ನು ಅಮಾನತುಗೊಳಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರ ವಿರುದ್ದ ಪ್ರತಿಭಟನೆಗಳು ನಡೆದಿತ್ತು.

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಬುಧವಾರ ಎಚ್-1ಬಿ (H-1B) ಕೆಲಸದ ವೀಸಾ ನಿಯಮಗಳಲ್ಲಿ ಕೆಲವನ್ನು ಸಡಿಲಗೊಳಿಸಿದೆ. ನಿಷೇಧಕ್ಕೆ ಮುಂಚಿತವಾಗಿ ಅವರು ಅದೇ ಉದ್ಯೋಗಗಳಿಗೆ ಮರಳುತ್ತಿದ್ದರೆ ವೀಸಾ ಹೊಂದಿರುವವರು ದೇಶಕ್ಕೆ ಪ್ರವೇಶಿಸಲು ಅವಕಾಶ ನೀಡುತ್ತದೆ ಎಂದು ಹೇಳಿದೆ. ಅಮೆರಿಕಾ ಸ್ಟೇಟ್ ಡಿಪಾರ್ಟ್ಮೆಂಟ್‌‌ನ ನೋಟಿಸ್ ಈ ಕ್ರಮವನ್ನು “ಈ ಪರಿಸ್ಥಿತಿಯಲ್ಲಿ ಉದ್ಯೋಗಿಗಳನ್ನು ಬದಲಿಸಲು ಉದ್ಯೋಗದಾತರಿಗೆ ಒತ್ತಾಯಿಸುವುದು ಆರ್ಥಿಕ ತೊಂದರೆಗಳಿಗೆ ಕಾರಣವಾಗಬಹುದು” ಎಂದು ಹೇಳಿ ಸಮರ್ಥಿಸಿಕೊಂಡಿದೆ.

ಅಮೆರಿಕಾದ ತ್ವರಿತ ಮತ್ತು ಮುಂದುವರಿದ ಆರ್ಥಿಕ ಚೇತರಿಕೆಗೆ ಅನುಕೂಲವಾಗುವಂತೆ ತಾಂತ್ರಿಕ ತಜ್ಞರು, ಹಿರಿಯ ಮಟ್ಟದ ವ್ಯವಸ್ಥಾಪಕರು ಮತ್ತು ಇತರ ಕಾರ್ಮಿಕರಿಗೆ ಪ್ರವೇಶವನ್ನು ಆಡಳಿತವು ಅನುಮತಿಸಿದೆ.

“ನಿರ್ಣಾಯಕ ಮೂಲಸೌಕರ್ಯ ಕ್ಷೇತ್ರಗಳಲ್ಲಿ” ಉದ್ಯೋಗದಲ್ಲಿರುವ ವೀಸಾ ಹೊಂದಿರುವವರ ಪ್ರಯಾಣಕ್ಕೂ ಇದು ಅವಕಾಶ ಮಾಡಿಕೊಟ್ಟಿದೆ. ಇದು ರಕ್ಷಣಾ ಆರೋಗ್ಯ ಮತ್ತು ಸಾರ್ವಜನಿಕ ಆರೋಗ್ಯ ಮತ್ತು ಮಾಹಿತಿಯನ್ನು ಒಳಗೊಂಡಿದೆ.


ಓದಿ: ವೀಸಾಗಳ ಸ್ಥಗಿತ : ಟ್ರಂಪ್ ನಿರಾಶೆಯನ್ನುಂಟು ಮಾಡಿದ್ದಾರೆ- ಸುಂದರ್‌ ಪಿಚೈ


ಆದರೆ, ನಿರ್ಣಾಯಕ ಮೂಲಸೌಕರ್ಯ ವಲಯದಲ್ಲಿ ಮಾತ್ರ ಉದ್ಯೋಗವು ಸಾಕಾಗುವುದಿಲ್ಲ ಎಂದು ನೋಟಿಸ್ ತಿಳಿಸಿದೆ. ಅರ್ಜಿದಾರರು ಎರಡು ಷರತ್ತುಗಳನ್ನು ಪೂರೈಸಬೇಕು ಎಂದು ಅದು ಹೇಳಿದ್ದು: ಅರ್ಜಿದಾರರು ಸಂಸ್ಥೆಯಲ್ಲಿ ಉನ್ನತ ಸ್ಥಾನವನ್ನು ಹೊಂದಿರಬೇಕು ಅಥವಾ ಅನನ್ಯ ಮತ್ತು ನಿರ್ವಹಣೆಯ ಪ್ರಮುಖವಾದ ಕಾರ್ಯಗಳನ್ನು ಪ್ರತಿಬಿಂಬಿಸುವ ಉದ್ಯೋಗ ಕರ್ತವ್ಯಗಳನ್ನು ಹೊಂದಿರಬೇಕು. ಎರಡನೆಯದಾಗಿ, ಅರ್ಜಿದಾರರ ಉದ್ದೇಶಿತ ಉದ್ಯೋಗ ಕರ್ತವ್ಯಗಳು ಮತ್ತು ವಿಶೇಷ ಅರ್ಹತೆಗಳು ಕಂಪನಿಗೆ ವ್ಯಕ್ತಿಯು ಮಹತ್ವದ ಮತ್ತು ವಿಶಿಷ್ಟ ಕೊಡುಗೆಗಳನ್ನು ಒದಗಿಸುತ್ತಾರೆ ಎಂದಿರಬೇಕು ಎಂದಿದೆ.

ಹೆಚ್ಚುವರಿಯಾಗಿ ಸಾರ್ವಜನಿಕ ಆರೋಗ್ಯ, ಆರೋಗ್ಯ ವೃತ್ತಿಪರರಾಗಿ ಕೆಲಸ ಮಾಡುವವರು, ಕೊರೊನಾ ವೈರಸ್ ಸಾಂಕ್ರಾಮಿಕದ ವೈದ್ಯಕೀಯ ಸಂಶೋಧನೆಗಳಲ್ಲಿ ಕರ್ತವ್ಯ ನಿರ್ವಹಿಸುವವರು, ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ವೈದ್ಯಕೀಯ ಸಂಶೋಧನೆಗಳನ್ನು ನಡೆಸುವ ವೀಸಾ ಹೊಂದಿರುವವರ ಅಮೆರಿಕಾ ಪ್ರಯಾಣಕ್ಕೆ ಆಡಳಿತವು ಅವಕಾಶ ಮಾಡಿಕೊಟ್ಟಿದೆ.

ಜೂನ್ 23 ರಂದು, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020 ರ ಅಂತ್ಯದವರೆಗೆ ಭಾರತೀಯ ಐಟಿ ವೃತ್ತಿಪರರಿಂದ ಹೆಚ್ಚು ಬೇಡಿಕೆಯಿರುವ H-1B ವೀಸಾ ಸೇರಿದಂತೆ ಹಲವಾರು ವರ್ಗದ ವಿದೇಶಿ ಕೆಲಸದ ವೀಸಾಗಳನ್ನು ಅಮಾನತುಗೊಳಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರು. ಟ್ರಂಪ್ ಅವರ ಈ ನಿರ್ಧಾರದಿಂದ ಕೊರೊನಾ ವೈರಸ್ ಸಾಂಕ್ರಾಮಿಕ ಮಧ್ಯೆ ಅಮೆರಿಕಾದಲ್ಲಿ ನಿರುದ್ಯೋಗ ದರದಲ್ಲಿ ತೀವ್ರ ಏರಿಕೆ ಆಗಿದೆ.

ಕಳೆದ ಐದು ವರ್ಷಗಳಲ್ಲಿ 70% ರಷ್ಟು H-1B ವೀಸಾಗಳನ್ನು ಪಡೆದಿರುವ ಭಾರತೀಯರು ಈ ಕ್ರಮದ ವಿರುದ್ದ ಪ್ರತಿಭಟನೆ ಮಾಡಿದ್ದರು. ಜುಲೈನಲ್ಲಿ, ವಲಸೆ ಕಾನೂನು ಸುಧಾರಣೆಗೆ ಒತ್ತಾಯಿಸಿ H-1B ವೀಸಾದ ಭಾರತೀಯರ ಗುಂಪು ವಾಷಿಂಗ್ಟನ್ ಡಿಸಿಯಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿತ್ತು. ಇದಕ್ಕೂ ಮುನ್ನ ಏಳು ಅಪ್ರಾಪ್ತ ವಯಸ್ಕರು ಸೇರಿದಂತೆ 174 ಭಾರತೀಯರ ಗುಂಪು ಟ್ರಂಪ್ ನಿರ್ಧಾರದ ವಿರುದ್ಧ ಮೊಕದ್ದಮೆ ಹೂಡಿತ್ತು. ಅಲ್ಲದೆ ಈ ಕ್ರಮವನ್ನು ವಿರೋಧಿಸಿ ಅಮೆರಿಕದ ವ್ಯಾಪಾರಿ ಮುಖಂಡರು ಹೇಳಿಕೆ ನೀಡಿದ್ದರು.


ಓದಿ: ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...