Homeಅಂತರಾಷ್ಟ್ರೀಯH-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

H-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020 ರ ಅಂತ್ಯದವರೆಗೆ ಭಾರತೀಯ ಐಟಿ ವೃತ್ತಿಪರರಿಂದ ಹೆಚ್ಚು ಬೇಡಿಕೆಯಿರುವ H-1B ವೀಸಾ ಸೇರಿದಂತೆ ಹಲವಾರು ವರ್ಗದ ವಿದೇಶಿ ಕೆಲಸದ ವೀಸಾಗಳನ್ನು ಅಮಾನತುಗೊಳಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರ ವಿರುದ್ದ ಪ್ರತಿಭಟನೆಗಳು ನಡೆದಿತ್ತು.

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಬುಧವಾರ ಎಚ್-1ಬಿ (H-1B) ಕೆಲಸದ ವೀಸಾ ನಿಯಮಗಳಲ್ಲಿ ಕೆಲವನ್ನು ಸಡಿಲಗೊಳಿಸಿದೆ. ನಿಷೇಧಕ್ಕೆ ಮುಂಚಿತವಾಗಿ ಅವರು ಅದೇ ಉದ್ಯೋಗಗಳಿಗೆ ಮರಳುತ್ತಿದ್ದರೆ ವೀಸಾ ಹೊಂದಿರುವವರು ದೇಶಕ್ಕೆ ಪ್ರವೇಶಿಸಲು ಅವಕಾಶ ನೀಡುತ್ತದೆ ಎಂದು ಹೇಳಿದೆ. ಅಮೆರಿಕಾ ಸ್ಟೇಟ್ ಡಿಪಾರ್ಟ್ಮೆಂಟ್‌‌ನ ನೋಟಿಸ್ ಈ ಕ್ರಮವನ್ನು “ಈ ಪರಿಸ್ಥಿತಿಯಲ್ಲಿ ಉದ್ಯೋಗಿಗಳನ್ನು ಬದಲಿಸಲು ಉದ್ಯೋಗದಾತರಿಗೆ ಒತ್ತಾಯಿಸುವುದು ಆರ್ಥಿಕ ತೊಂದರೆಗಳಿಗೆ ಕಾರಣವಾಗಬಹುದು” ಎಂದು ಹೇಳಿ ಸಮರ್ಥಿಸಿಕೊಂಡಿದೆ.

ಅಮೆರಿಕಾದ ತ್ವರಿತ ಮತ್ತು ಮುಂದುವರಿದ ಆರ್ಥಿಕ ಚೇತರಿಕೆಗೆ ಅನುಕೂಲವಾಗುವಂತೆ ತಾಂತ್ರಿಕ ತಜ್ಞರು, ಹಿರಿಯ ಮಟ್ಟದ ವ್ಯವಸ್ಥಾಪಕರು ಮತ್ತು ಇತರ ಕಾರ್ಮಿಕರಿಗೆ ಪ್ರವೇಶವನ್ನು ಆಡಳಿತವು ಅನುಮತಿಸಿದೆ.

“ನಿರ್ಣಾಯಕ ಮೂಲಸೌಕರ್ಯ ಕ್ಷೇತ್ರಗಳಲ್ಲಿ” ಉದ್ಯೋಗದಲ್ಲಿರುವ ವೀಸಾ ಹೊಂದಿರುವವರ ಪ್ರಯಾಣಕ್ಕೂ ಇದು ಅವಕಾಶ ಮಾಡಿಕೊಟ್ಟಿದೆ. ಇದು ರಕ್ಷಣಾ ಆರೋಗ್ಯ ಮತ್ತು ಸಾರ್ವಜನಿಕ ಆರೋಗ್ಯ ಮತ್ತು ಮಾಹಿತಿಯನ್ನು ಒಳಗೊಂಡಿದೆ.


ಓದಿ: ವೀಸಾಗಳ ಸ್ಥಗಿತ : ಟ್ರಂಪ್ ನಿರಾಶೆಯನ್ನುಂಟು ಮಾಡಿದ್ದಾರೆ- ಸುಂದರ್‌ ಪಿಚೈ


ಆದರೆ, ನಿರ್ಣಾಯಕ ಮೂಲಸೌಕರ್ಯ ವಲಯದಲ್ಲಿ ಮಾತ್ರ ಉದ್ಯೋಗವು ಸಾಕಾಗುವುದಿಲ್ಲ ಎಂದು ನೋಟಿಸ್ ತಿಳಿಸಿದೆ. ಅರ್ಜಿದಾರರು ಎರಡು ಷರತ್ತುಗಳನ್ನು ಪೂರೈಸಬೇಕು ಎಂದು ಅದು ಹೇಳಿದ್ದು: ಅರ್ಜಿದಾರರು ಸಂಸ್ಥೆಯಲ್ಲಿ ಉನ್ನತ ಸ್ಥಾನವನ್ನು ಹೊಂದಿರಬೇಕು ಅಥವಾ ಅನನ್ಯ ಮತ್ತು ನಿರ್ವಹಣೆಯ ಪ್ರಮುಖವಾದ ಕಾರ್ಯಗಳನ್ನು ಪ್ರತಿಬಿಂಬಿಸುವ ಉದ್ಯೋಗ ಕರ್ತವ್ಯಗಳನ್ನು ಹೊಂದಿರಬೇಕು. ಎರಡನೆಯದಾಗಿ, ಅರ್ಜಿದಾರರ ಉದ್ದೇಶಿತ ಉದ್ಯೋಗ ಕರ್ತವ್ಯಗಳು ಮತ್ತು ವಿಶೇಷ ಅರ್ಹತೆಗಳು ಕಂಪನಿಗೆ ವ್ಯಕ್ತಿಯು ಮಹತ್ವದ ಮತ್ತು ವಿಶಿಷ್ಟ ಕೊಡುಗೆಗಳನ್ನು ಒದಗಿಸುತ್ತಾರೆ ಎಂದಿರಬೇಕು ಎಂದಿದೆ.

ಹೆಚ್ಚುವರಿಯಾಗಿ ಸಾರ್ವಜನಿಕ ಆರೋಗ್ಯ, ಆರೋಗ್ಯ ವೃತ್ತಿಪರರಾಗಿ ಕೆಲಸ ಮಾಡುವವರು, ಕೊರೊನಾ ವೈರಸ್ ಸಾಂಕ್ರಾಮಿಕದ ವೈದ್ಯಕೀಯ ಸಂಶೋಧನೆಗಳಲ್ಲಿ ಕರ್ತವ್ಯ ನಿರ್ವಹಿಸುವವರು, ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ವೈದ್ಯಕೀಯ ಸಂಶೋಧನೆಗಳನ್ನು ನಡೆಸುವ ವೀಸಾ ಹೊಂದಿರುವವರ ಅಮೆರಿಕಾ ಪ್ರಯಾಣಕ್ಕೆ ಆಡಳಿತವು ಅವಕಾಶ ಮಾಡಿಕೊಟ್ಟಿದೆ.

ಜೂನ್ 23 ರಂದು, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020 ರ ಅಂತ್ಯದವರೆಗೆ ಭಾರತೀಯ ಐಟಿ ವೃತ್ತಿಪರರಿಂದ ಹೆಚ್ಚು ಬೇಡಿಕೆಯಿರುವ H-1B ವೀಸಾ ಸೇರಿದಂತೆ ಹಲವಾರು ವರ್ಗದ ವಿದೇಶಿ ಕೆಲಸದ ವೀಸಾಗಳನ್ನು ಅಮಾನತುಗೊಳಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರು. ಟ್ರಂಪ್ ಅವರ ಈ ನಿರ್ಧಾರದಿಂದ ಕೊರೊನಾ ವೈರಸ್ ಸಾಂಕ್ರಾಮಿಕ ಮಧ್ಯೆ ಅಮೆರಿಕಾದಲ್ಲಿ ನಿರುದ್ಯೋಗ ದರದಲ್ಲಿ ತೀವ್ರ ಏರಿಕೆ ಆಗಿದೆ.

ಕಳೆದ ಐದು ವರ್ಷಗಳಲ್ಲಿ 70% ರಷ್ಟು H-1B ವೀಸಾಗಳನ್ನು ಪಡೆದಿರುವ ಭಾರತೀಯರು ಈ ಕ್ರಮದ ವಿರುದ್ದ ಪ್ರತಿಭಟನೆ ಮಾಡಿದ್ದರು. ಜುಲೈನಲ್ಲಿ, ವಲಸೆ ಕಾನೂನು ಸುಧಾರಣೆಗೆ ಒತ್ತಾಯಿಸಿ H-1B ವೀಸಾದ ಭಾರತೀಯರ ಗುಂಪು ವಾಷಿಂಗ್ಟನ್ ಡಿಸಿಯಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿತ್ತು. ಇದಕ್ಕೂ ಮುನ್ನ ಏಳು ಅಪ್ರಾಪ್ತ ವಯಸ್ಕರು ಸೇರಿದಂತೆ 174 ಭಾರತೀಯರ ಗುಂಪು ಟ್ರಂಪ್ ನಿರ್ಧಾರದ ವಿರುದ್ಧ ಮೊಕದ್ದಮೆ ಹೂಡಿತ್ತು. ಅಲ್ಲದೆ ಈ ಕ್ರಮವನ್ನು ವಿರೋಧಿಸಿ ಅಮೆರಿಕದ ವ್ಯಾಪಾರಿ ಮುಖಂಡರು ಹೇಳಿಕೆ ನೀಡಿದ್ದರು.


ಓದಿ: ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...