Homeಅಂತರಾಷ್ಟ್ರೀಯH-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

H-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020 ರ ಅಂತ್ಯದವರೆಗೆ ಭಾರತೀಯ ಐಟಿ ವೃತ್ತಿಪರರಿಂದ ಹೆಚ್ಚು ಬೇಡಿಕೆಯಿರುವ H-1B ವೀಸಾ ಸೇರಿದಂತೆ ಹಲವಾರು ವರ್ಗದ ವಿದೇಶಿ ಕೆಲಸದ ವೀಸಾಗಳನ್ನು ಅಮಾನತುಗೊಳಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರ ವಿರುದ್ದ ಪ್ರತಿಭಟನೆಗಳು ನಡೆದಿತ್ತು.

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಬುಧವಾರ ಎಚ್-1ಬಿ (H-1B) ಕೆಲಸದ ವೀಸಾ ನಿಯಮಗಳಲ್ಲಿ ಕೆಲವನ್ನು ಸಡಿಲಗೊಳಿಸಿದೆ. ನಿಷೇಧಕ್ಕೆ ಮುಂಚಿತವಾಗಿ ಅವರು ಅದೇ ಉದ್ಯೋಗಗಳಿಗೆ ಮರಳುತ್ತಿದ್ದರೆ ವೀಸಾ ಹೊಂದಿರುವವರು ದೇಶಕ್ಕೆ ಪ್ರವೇಶಿಸಲು ಅವಕಾಶ ನೀಡುತ್ತದೆ ಎಂದು ಹೇಳಿದೆ. ಅಮೆರಿಕಾ ಸ್ಟೇಟ್ ಡಿಪಾರ್ಟ್ಮೆಂಟ್‌‌ನ ನೋಟಿಸ್ ಈ ಕ್ರಮವನ್ನು “ಈ ಪರಿಸ್ಥಿತಿಯಲ್ಲಿ ಉದ್ಯೋಗಿಗಳನ್ನು ಬದಲಿಸಲು ಉದ್ಯೋಗದಾತರಿಗೆ ಒತ್ತಾಯಿಸುವುದು ಆರ್ಥಿಕ ತೊಂದರೆಗಳಿಗೆ ಕಾರಣವಾಗಬಹುದು” ಎಂದು ಹೇಳಿ ಸಮರ್ಥಿಸಿಕೊಂಡಿದೆ.

ಅಮೆರಿಕಾದ ತ್ವರಿತ ಮತ್ತು ಮುಂದುವರಿದ ಆರ್ಥಿಕ ಚೇತರಿಕೆಗೆ ಅನುಕೂಲವಾಗುವಂತೆ ತಾಂತ್ರಿಕ ತಜ್ಞರು, ಹಿರಿಯ ಮಟ್ಟದ ವ್ಯವಸ್ಥಾಪಕರು ಮತ್ತು ಇತರ ಕಾರ್ಮಿಕರಿಗೆ ಪ್ರವೇಶವನ್ನು ಆಡಳಿತವು ಅನುಮತಿಸಿದೆ.

“ನಿರ್ಣಾಯಕ ಮೂಲಸೌಕರ್ಯ ಕ್ಷೇತ್ರಗಳಲ್ಲಿ” ಉದ್ಯೋಗದಲ್ಲಿರುವ ವೀಸಾ ಹೊಂದಿರುವವರ ಪ್ರಯಾಣಕ್ಕೂ ಇದು ಅವಕಾಶ ಮಾಡಿಕೊಟ್ಟಿದೆ. ಇದು ರಕ್ಷಣಾ ಆರೋಗ್ಯ ಮತ್ತು ಸಾರ್ವಜನಿಕ ಆರೋಗ್ಯ ಮತ್ತು ಮಾಹಿತಿಯನ್ನು ಒಳಗೊಂಡಿದೆ.


ಓದಿ: ವೀಸಾಗಳ ಸ್ಥಗಿತ : ಟ್ರಂಪ್ ನಿರಾಶೆಯನ್ನುಂಟು ಮಾಡಿದ್ದಾರೆ- ಸುಂದರ್‌ ಪಿಚೈ


ಆದರೆ, ನಿರ್ಣಾಯಕ ಮೂಲಸೌಕರ್ಯ ವಲಯದಲ್ಲಿ ಮಾತ್ರ ಉದ್ಯೋಗವು ಸಾಕಾಗುವುದಿಲ್ಲ ಎಂದು ನೋಟಿಸ್ ತಿಳಿಸಿದೆ. ಅರ್ಜಿದಾರರು ಎರಡು ಷರತ್ತುಗಳನ್ನು ಪೂರೈಸಬೇಕು ಎಂದು ಅದು ಹೇಳಿದ್ದು: ಅರ್ಜಿದಾರರು ಸಂಸ್ಥೆಯಲ್ಲಿ ಉನ್ನತ ಸ್ಥಾನವನ್ನು ಹೊಂದಿರಬೇಕು ಅಥವಾ ಅನನ್ಯ ಮತ್ತು ನಿರ್ವಹಣೆಯ ಪ್ರಮುಖವಾದ ಕಾರ್ಯಗಳನ್ನು ಪ್ರತಿಬಿಂಬಿಸುವ ಉದ್ಯೋಗ ಕರ್ತವ್ಯಗಳನ್ನು ಹೊಂದಿರಬೇಕು. ಎರಡನೆಯದಾಗಿ, ಅರ್ಜಿದಾರರ ಉದ್ದೇಶಿತ ಉದ್ಯೋಗ ಕರ್ತವ್ಯಗಳು ಮತ್ತು ವಿಶೇಷ ಅರ್ಹತೆಗಳು ಕಂಪನಿಗೆ ವ್ಯಕ್ತಿಯು ಮಹತ್ವದ ಮತ್ತು ವಿಶಿಷ್ಟ ಕೊಡುಗೆಗಳನ್ನು ಒದಗಿಸುತ್ತಾರೆ ಎಂದಿರಬೇಕು ಎಂದಿದೆ.

ಹೆಚ್ಚುವರಿಯಾಗಿ ಸಾರ್ವಜನಿಕ ಆರೋಗ್ಯ, ಆರೋಗ್ಯ ವೃತ್ತಿಪರರಾಗಿ ಕೆಲಸ ಮಾಡುವವರು, ಕೊರೊನಾ ವೈರಸ್ ಸಾಂಕ್ರಾಮಿಕದ ವೈದ್ಯಕೀಯ ಸಂಶೋಧನೆಗಳಲ್ಲಿ ಕರ್ತವ್ಯ ನಿರ್ವಹಿಸುವವರು, ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ವೈದ್ಯಕೀಯ ಸಂಶೋಧನೆಗಳನ್ನು ನಡೆಸುವ ವೀಸಾ ಹೊಂದಿರುವವರ ಅಮೆರಿಕಾ ಪ್ರಯಾಣಕ್ಕೆ ಆಡಳಿತವು ಅವಕಾಶ ಮಾಡಿಕೊಟ್ಟಿದೆ.

ಜೂನ್ 23 ರಂದು, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020 ರ ಅಂತ್ಯದವರೆಗೆ ಭಾರತೀಯ ಐಟಿ ವೃತ್ತಿಪರರಿಂದ ಹೆಚ್ಚು ಬೇಡಿಕೆಯಿರುವ H-1B ವೀಸಾ ಸೇರಿದಂತೆ ಹಲವಾರು ವರ್ಗದ ವಿದೇಶಿ ಕೆಲಸದ ವೀಸಾಗಳನ್ನು ಅಮಾನತುಗೊಳಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರು. ಟ್ರಂಪ್ ಅವರ ಈ ನಿರ್ಧಾರದಿಂದ ಕೊರೊನಾ ವೈರಸ್ ಸಾಂಕ್ರಾಮಿಕ ಮಧ್ಯೆ ಅಮೆರಿಕಾದಲ್ಲಿ ನಿರುದ್ಯೋಗ ದರದಲ್ಲಿ ತೀವ್ರ ಏರಿಕೆ ಆಗಿದೆ.

ಕಳೆದ ಐದು ವರ್ಷಗಳಲ್ಲಿ 70% ರಷ್ಟು H-1B ವೀಸಾಗಳನ್ನು ಪಡೆದಿರುವ ಭಾರತೀಯರು ಈ ಕ್ರಮದ ವಿರುದ್ದ ಪ್ರತಿಭಟನೆ ಮಾಡಿದ್ದರು. ಜುಲೈನಲ್ಲಿ, ವಲಸೆ ಕಾನೂನು ಸುಧಾರಣೆಗೆ ಒತ್ತಾಯಿಸಿ H-1B ವೀಸಾದ ಭಾರತೀಯರ ಗುಂಪು ವಾಷಿಂಗ್ಟನ್ ಡಿಸಿಯಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿತ್ತು. ಇದಕ್ಕೂ ಮುನ್ನ ಏಳು ಅಪ್ರಾಪ್ತ ವಯಸ್ಕರು ಸೇರಿದಂತೆ 174 ಭಾರತೀಯರ ಗುಂಪು ಟ್ರಂಪ್ ನಿರ್ಧಾರದ ವಿರುದ್ಧ ಮೊಕದ್ದಮೆ ಹೂಡಿತ್ತು. ಅಲ್ಲದೆ ಈ ಕ್ರಮವನ್ನು ವಿರೋಧಿಸಿ ಅಮೆರಿಕದ ವ್ಯಾಪಾರಿ ಮುಖಂಡರು ಹೇಳಿಕೆ ನೀಡಿದ್ದರು.


ಓದಿ: ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....