Homeಅಂತರಾಷ್ಟ್ರೀಯH-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

H-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020 ರ ಅಂತ್ಯದವರೆಗೆ ಭಾರತೀಯ ಐಟಿ ವೃತ್ತಿಪರರಿಂದ ಹೆಚ್ಚು ಬೇಡಿಕೆಯಿರುವ H-1B ವೀಸಾ ಸೇರಿದಂತೆ ಹಲವಾರು ವರ್ಗದ ವಿದೇಶಿ ಕೆಲಸದ ವೀಸಾಗಳನ್ನು ಅಮಾನತುಗೊಳಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರ ವಿರುದ್ದ ಪ್ರತಿಭಟನೆಗಳು ನಡೆದಿತ್ತು.

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಬುಧವಾರ ಎಚ್-1ಬಿ (H-1B) ಕೆಲಸದ ವೀಸಾ ನಿಯಮಗಳಲ್ಲಿ ಕೆಲವನ್ನು ಸಡಿಲಗೊಳಿಸಿದೆ. ನಿಷೇಧಕ್ಕೆ ಮುಂಚಿತವಾಗಿ ಅವರು ಅದೇ ಉದ್ಯೋಗಗಳಿಗೆ ಮರಳುತ್ತಿದ್ದರೆ ವೀಸಾ ಹೊಂದಿರುವವರು ದೇಶಕ್ಕೆ ಪ್ರವೇಶಿಸಲು ಅವಕಾಶ ನೀಡುತ್ತದೆ ಎಂದು ಹೇಳಿದೆ. ಅಮೆರಿಕಾ ಸ್ಟೇಟ್ ಡಿಪಾರ್ಟ್ಮೆಂಟ್‌‌ನ ನೋಟಿಸ್ ಈ ಕ್ರಮವನ್ನು “ಈ ಪರಿಸ್ಥಿತಿಯಲ್ಲಿ ಉದ್ಯೋಗಿಗಳನ್ನು ಬದಲಿಸಲು ಉದ್ಯೋಗದಾತರಿಗೆ ಒತ್ತಾಯಿಸುವುದು ಆರ್ಥಿಕ ತೊಂದರೆಗಳಿಗೆ ಕಾರಣವಾಗಬಹುದು” ಎಂದು ಹೇಳಿ ಸಮರ್ಥಿಸಿಕೊಂಡಿದೆ.

ಅಮೆರಿಕಾದ ತ್ವರಿತ ಮತ್ತು ಮುಂದುವರಿದ ಆರ್ಥಿಕ ಚೇತರಿಕೆಗೆ ಅನುಕೂಲವಾಗುವಂತೆ ತಾಂತ್ರಿಕ ತಜ್ಞರು, ಹಿರಿಯ ಮಟ್ಟದ ವ್ಯವಸ್ಥಾಪಕರು ಮತ್ತು ಇತರ ಕಾರ್ಮಿಕರಿಗೆ ಪ್ರವೇಶವನ್ನು ಆಡಳಿತವು ಅನುಮತಿಸಿದೆ.

“ನಿರ್ಣಾಯಕ ಮೂಲಸೌಕರ್ಯ ಕ್ಷೇತ್ರಗಳಲ್ಲಿ” ಉದ್ಯೋಗದಲ್ಲಿರುವ ವೀಸಾ ಹೊಂದಿರುವವರ ಪ್ರಯಾಣಕ್ಕೂ ಇದು ಅವಕಾಶ ಮಾಡಿಕೊಟ್ಟಿದೆ. ಇದು ರಕ್ಷಣಾ ಆರೋಗ್ಯ ಮತ್ತು ಸಾರ್ವಜನಿಕ ಆರೋಗ್ಯ ಮತ್ತು ಮಾಹಿತಿಯನ್ನು ಒಳಗೊಂಡಿದೆ.


ಓದಿ: ವೀಸಾಗಳ ಸ್ಥಗಿತ : ಟ್ರಂಪ್ ನಿರಾಶೆಯನ್ನುಂಟು ಮಾಡಿದ್ದಾರೆ- ಸುಂದರ್‌ ಪಿಚೈ


ಆದರೆ, ನಿರ್ಣಾಯಕ ಮೂಲಸೌಕರ್ಯ ವಲಯದಲ್ಲಿ ಮಾತ್ರ ಉದ್ಯೋಗವು ಸಾಕಾಗುವುದಿಲ್ಲ ಎಂದು ನೋಟಿಸ್ ತಿಳಿಸಿದೆ. ಅರ್ಜಿದಾರರು ಎರಡು ಷರತ್ತುಗಳನ್ನು ಪೂರೈಸಬೇಕು ಎಂದು ಅದು ಹೇಳಿದ್ದು: ಅರ್ಜಿದಾರರು ಸಂಸ್ಥೆಯಲ್ಲಿ ಉನ್ನತ ಸ್ಥಾನವನ್ನು ಹೊಂದಿರಬೇಕು ಅಥವಾ ಅನನ್ಯ ಮತ್ತು ನಿರ್ವಹಣೆಯ ಪ್ರಮುಖವಾದ ಕಾರ್ಯಗಳನ್ನು ಪ್ರತಿಬಿಂಬಿಸುವ ಉದ್ಯೋಗ ಕರ್ತವ್ಯಗಳನ್ನು ಹೊಂದಿರಬೇಕು. ಎರಡನೆಯದಾಗಿ, ಅರ್ಜಿದಾರರ ಉದ್ದೇಶಿತ ಉದ್ಯೋಗ ಕರ್ತವ್ಯಗಳು ಮತ್ತು ವಿಶೇಷ ಅರ್ಹತೆಗಳು ಕಂಪನಿಗೆ ವ್ಯಕ್ತಿಯು ಮಹತ್ವದ ಮತ್ತು ವಿಶಿಷ್ಟ ಕೊಡುಗೆಗಳನ್ನು ಒದಗಿಸುತ್ತಾರೆ ಎಂದಿರಬೇಕು ಎಂದಿದೆ.

ಹೆಚ್ಚುವರಿಯಾಗಿ ಸಾರ್ವಜನಿಕ ಆರೋಗ್ಯ, ಆರೋಗ್ಯ ವೃತ್ತಿಪರರಾಗಿ ಕೆಲಸ ಮಾಡುವವರು, ಕೊರೊನಾ ವೈರಸ್ ಸಾಂಕ್ರಾಮಿಕದ ವೈದ್ಯಕೀಯ ಸಂಶೋಧನೆಗಳಲ್ಲಿ ಕರ್ತವ್ಯ ನಿರ್ವಹಿಸುವವರು, ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ವೈದ್ಯಕೀಯ ಸಂಶೋಧನೆಗಳನ್ನು ನಡೆಸುವ ವೀಸಾ ಹೊಂದಿರುವವರ ಅಮೆರಿಕಾ ಪ್ರಯಾಣಕ್ಕೆ ಆಡಳಿತವು ಅವಕಾಶ ಮಾಡಿಕೊಟ್ಟಿದೆ.

ಜೂನ್ 23 ರಂದು, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020 ರ ಅಂತ್ಯದವರೆಗೆ ಭಾರತೀಯ ಐಟಿ ವೃತ್ತಿಪರರಿಂದ ಹೆಚ್ಚು ಬೇಡಿಕೆಯಿರುವ H-1B ವೀಸಾ ಸೇರಿದಂತೆ ಹಲವಾರು ವರ್ಗದ ವಿದೇಶಿ ಕೆಲಸದ ವೀಸಾಗಳನ್ನು ಅಮಾನತುಗೊಳಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರು. ಟ್ರಂಪ್ ಅವರ ಈ ನಿರ್ಧಾರದಿಂದ ಕೊರೊನಾ ವೈರಸ್ ಸಾಂಕ್ರಾಮಿಕ ಮಧ್ಯೆ ಅಮೆರಿಕಾದಲ್ಲಿ ನಿರುದ್ಯೋಗ ದರದಲ್ಲಿ ತೀವ್ರ ಏರಿಕೆ ಆಗಿದೆ.

ಕಳೆದ ಐದು ವರ್ಷಗಳಲ್ಲಿ 70% ರಷ್ಟು H-1B ವೀಸಾಗಳನ್ನು ಪಡೆದಿರುವ ಭಾರತೀಯರು ಈ ಕ್ರಮದ ವಿರುದ್ದ ಪ್ರತಿಭಟನೆ ಮಾಡಿದ್ದರು. ಜುಲೈನಲ್ಲಿ, ವಲಸೆ ಕಾನೂನು ಸುಧಾರಣೆಗೆ ಒತ್ತಾಯಿಸಿ H-1B ವೀಸಾದ ಭಾರತೀಯರ ಗುಂಪು ವಾಷಿಂಗ್ಟನ್ ಡಿಸಿಯಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿತ್ತು. ಇದಕ್ಕೂ ಮುನ್ನ ಏಳು ಅಪ್ರಾಪ್ತ ವಯಸ್ಕರು ಸೇರಿದಂತೆ 174 ಭಾರತೀಯರ ಗುಂಪು ಟ್ರಂಪ್ ನಿರ್ಧಾರದ ವಿರುದ್ಧ ಮೊಕದ್ದಮೆ ಹೂಡಿತ್ತು. ಅಲ್ಲದೆ ಈ ಕ್ರಮವನ್ನು ವಿರೋಧಿಸಿ ಅಮೆರಿಕದ ವ್ಯಾಪಾರಿ ಮುಖಂಡರು ಹೇಳಿಕೆ ನೀಡಿದ್ದರು.


ಓದಿ: ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...