Homeಅಂತರಾಷ್ಟ್ರೀಯH-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

H-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020 ರ ಅಂತ್ಯದವರೆಗೆ ಭಾರತೀಯ ಐಟಿ ವೃತ್ತಿಪರರಿಂದ ಹೆಚ್ಚು ಬೇಡಿಕೆಯಿರುವ H-1B ವೀಸಾ ಸೇರಿದಂತೆ ಹಲವಾರು ವರ್ಗದ ವಿದೇಶಿ ಕೆಲಸದ ವೀಸಾಗಳನ್ನು ಅಮಾನತುಗೊಳಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರ ವಿರುದ್ದ ಪ್ರತಿಭಟನೆಗಳು ನಡೆದಿತ್ತು.

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಬುಧವಾರ ಎಚ್-1ಬಿ (H-1B) ಕೆಲಸದ ವೀಸಾ ನಿಯಮಗಳಲ್ಲಿ ಕೆಲವನ್ನು ಸಡಿಲಗೊಳಿಸಿದೆ. ನಿಷೇಧಕ್ಕೆ ಮುಂಚಿತವಾಗಿ ಅವರು ಅದೇ ಉದ್ಯೋಗಗಳಿಗೆ ಮರಳುತ್ತಿದ್ದರೆ ವೀಸಾ ಹೊಂದಿರುವವರು ದೇಶಕ್ಕೆ ಪ್ರವೇಶಿಸಲು ಅವಕಾಶ ನೀಡುತ್ತದೆ ಎಂದು ಹೇಳಿದೆ. ಅಮೆರಿಕಾ ಸ್ಟೇಟ್ ಡಿಪಾರ್ಟ್ಮೆಂಟ್‌‌ನ ನೋಟಿಸ್ ಈ ಕ್ರಮವನ್ನು “ಈ ಪರಿಸ್ಥಿತಿಯಲ್ಲಿ ಉದ್ಯೋಗಿಗಳನ್ನು ಬದಲಿಸಲು ಉದ್ಯೋಗದಾತರಿಗೆ ಒತ್ತಾಯಿಸುವುದು ಆರ್ಥಿಕ ತೊಂದರೆಗಳಿಗೆ ಕಾರಣವಾಗಬಹುದು” ಎಂದು ಹೇಳಿ ಸಮರ್ಥಿಸಿಕೊಂಡಿದೆ.

ಅಮೆರಿಕಾದ ತ್ವರಿತ ಮತ್ತು ಮುಂದುವರಿದ ಆರ್ಥಿಕ ಚೇತರಿಕೆಗೆ ಅನುಕೂಲವಾಗುವಂತೆ ತಾಂತ್ರಿಕ ತಜ್ಞರು, ಹಿರಿಯ ಮಟ್ಟದ ವ್ಯವಸ್ಥಾಪಕರು ಮತ್ತು ಇತರ ಕಾರ್ಮಿಕರಿಗೆ ಪ್ರವೇಶವನ್ನು ಆಡಳಿತವು ಅನುಮತಿಸಿದೆ.

“ನಿರ್ಣಾಯಕ ಮೂಲಸೌಕರ್ಯ ಕ್ಷೇತ್ರಗಳಲ್ಲಿ” ಉದ್ಯೋಗದಲ್ಲಿರುವ ವೀಸಾ ಹೊಂದಿರುವವರ ಪ್ರಯಾಣಕ್ಕೂ ಇದು ಅವಕಾಶ ಮಾಡಿಕೊಟ್ಟಿದೆ. ಇದು ರಕ್ಷಣಾ ಆರೋಗ್ಯ ಮತ್ತು ಸಾರ್ವಜನಿಕ ಆರೋಗ್ಯ ಮತ್ತು ಮಾಹಿತಿಯನ್ನು ಒಳಗೊಂಡಿದೆ.


ಓದಿ: ವೀಸಾಗಳ ಸ್ಥಗಿತ : ಟ್ರಂಪ್ ನಿರಾಶೆಯನ್ನುಂಟು ಮಾಡಿದ್ದಾರೆ- ಸುಂದರ್‌ ಪಿಚೈ


ಆದರೆ, ನಿರ್ಣಾಯಕ ಮೂಲಸೌಕರ್ಯ ವಲಯದಲ್ಲಿ ಮಾತ್ರ ಉದ್ಯೋಗವು ಸಾಕಾಗುವುದಿಲ್ಲ ಎಂದು ನೋಟಿಸ್ ತಿಳಿಸಿದೆ. ಅರ್ಜಿದಾರರು ಎರಡು ಷರತ್ತುಗಳನ್ನು ಪೂರೈಸಬೇಕು ಎಂದು ಅದು ಹೇಳಿದ್ದು: ಅರ್ಜಿದಾರರು ಸಂಸ್ಥೆಯಲ್ಲಿ ಉನ್ನತ ಸ್ಥಾನವನ್ನು ಹೊಂದಿರಬೇಕು ಅಥವಾ ಅನನ್ಯ ಮತ್ತು ನಿರ್ವಹಣೆಯ ಪ್ರಮುಖವಾದ ಕಾರ್ಯಗಳನ್ನು ಪ್ರತಿಬಿಂಬಿಸುವ ಉದ್ಯೋಗ ಕರ್ತವ್ಯಗಳನ್ನು ಹೊಂದಿರಬೇಕು. ಎರಡನೆಯದಾಗಿ, ಅರ್ಜಿದಾರರ ಉದ್ದೇಶಿತ ಉದ್ಯೋಗ ಕರ್ತವ್ಯಗಳು ಮತ್ತು ವಿಶೇಷ ಅರ್ಹತೆಗಳು ಕಂಪನಿಗೆ ವ್ಯಕ್ತಿಯು ಮಹತ್ವದ ಮತ್ತು ವಿಶಿಷ್ಟ ಕೊಡುಗೆಗಳನ್ನು ಒದಗಿಸುತ್ತಾರೆ ಎಂದಿರಬೇಕು ಎಂದಿದೆ.

ಹೆಚ್ಚುವರಿಯಾಗಿ ಸಾರ್ವಜನಿಕ ಆರೋಗ್ಯ, ಆರೋಗ್ಯ ವೃತ್ತಿಪರರಾಗಿ ಕೆಲಸ ಮಾಡುವವರು, ಕೊರೊನಾ ವೈರಸ್ ಸಾಂಕ್ರಾಮಿಕದ ವೈದ್ಯಕೀಯ ಸಂಶೋಧನೆಗಳಲ್ಲಿ ಕರ್ತವ್ಯ ನಿರ್ವಹಿಸುವವರು, ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ವೈದ್ಯಕೀಯ ಸಂಶೋಧನೆಗಳನ್ನು ನಡೆಸುವ ವೀಸಾ ಹೊಂದಿರುವವರ ಅಮೆರಿಕಾ ಪ್ರಯಾಣಕ್ಕೆ ಆಡಳಿತವು ಅವಕಾಶ ಮಾಡಿಕೊಟ್ಟಿದೆ.

ಜೂನ್ 23 ರಂದು, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020 ರ ಅಂತ್ಯದವರೆಗೆ ಭಾರತೀಯ ಐಟಿ ವೃತ್ತಿಪರರಿಂದ ಹೆಚ್ಚು ಬೇಡಿಕೆಯಿರುವ H-1B ವೀಸಾ ಸೇರಿದಂತೆ ಹಲವಾರು ವರ್ಗದ ವಿದೇಶಿ ಕೆಲಸದ ವೀಸಾಗಳನ್ನು ಅಮಾನತುಗೊಳಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರು. ಟ್ರಂಪ್ ಅವರ ಈ ನಿರ್ಧಾರದಿಂದ ಕೊರೊನಾ ವೈರಸ್ ಸಾಂಕ್ರಾಮಿಕ ಮಧ್ಯೆ ಅಮೆರಿಕಾದಲ್ಲಿ ನಿರುದ್ಯೋಗ ದರದಲ್ಲಿ ತೀವ್ರ ಏರಿಕೆ ಆಗಿದೆ.

ಕಳೆದ ಐದು ವರ್ಷಗಳಲ್ಲಿ 70% ರಷ್ಟು H-1B ವೀಸಾಗಳನ್ನು ಪಡೆದಿರುವ ಭಾರತೀಯರು ಈ ಕ್ರಮದ ವಿರುದ್ದ ಪ್ರತಿಭಟನೆ ಮಾಡಿದ್ದರು. ಜುಲೈನಲ್ಲಿ, ವಲಸೆ ಕಾನೂನು ಸುಧಾರಣೆಗೆ ಒತ್ತಾಯಿಸಿ H-1B ವೀಸಾದ ಭಾರತೀಯರ ಗುಂಪು ವಾಷಿಂಗ್ಟನ್ ಡಿಸಿಯಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿತ್ತು. ಇದಕ್ಕೂ ಮುನ್ನ ಏಳು ಅಪ್ರಾಪ್ತ ವಯಸ್ಕರು ಸೇರಿದಂತೆ 174 ಭಾರತೀಯರ ಗುಂಪು ಟ್ರಂಪ್ ನಿರ್ಧಾರದ ವಿರುದ್ಧ ಮೊಕದ್ದಮೆ ಹೂಡಿತ್ತು. ಅಲ್ಲದೆ ಈ ಕ್ರಮವನ್ನು ವಿರೋಧಿಸಿ ಅಮೆರಿಕದ ವ್ಯಾಪಾರಿ ಮುಖಂಡರು ಹೇಳಿಕೆ ನೀಡಿದ್ದರು.


ಓದಿ: ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...