Homeಅಂತರಾಷ್ಟ್ರೀಯಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ

ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ

- Advertisement -
- Advertisement -

ಕೊರೋನಾ ಮತ್ತು ಆ ಕಾರಣದಿಂದ ಉಂಟಾದ ಲಾಕ್‌ಡೌನ್‌ಗೆ ಇಡೀ ವಿಶ್ವದ ಆರ್ಥಿಕತೆ ತತ್ತರಿಸಿ ಹೋಗಿದೆ. ಪರಿಣಾಮ ವಿಶ್ವದ ದೊಡ್ಡಣ್ಣ ಎಂದು ಕರೆಯಲಾಗುವ ಅಮೆರಿಕದಲ್ಲೂ ನಿರುದ್ಯೋಗದ ಸಮಸ್ಯೆ ತಲೆದೋರಿದೆ ಎಂದರೆ ಆರ್ಥಿಕತೆಯ ಮೇಲೆ ಕೊರೋನಾ ಉಂಟು ಮಾಡಿರುವ ಆಘಾತವನ್ನು ಊಹಿಸಬಹುದು. ಹೀಗಾಗಿ ಅಮೆರಿಕದ ಉದ್ಯೋಗವನ್ನು ಅಮೆರಿಕದ ಯುವಕರಿಗೆ ನೀಡುವ ಸಲುವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಸಹಿಹಾಕಿದ್ದಾರೆ.‌

ಸಾಮಾನ್ಯವಾಗಿ ಅಮೆರಿಕದಂತಹ ದೇಶಗಳಿಗೆ ಫೆಡರಲ್ ಏಜೆನ್ಸಿಗಳು ಗುತ್ತಿಗೆ ಆಧಾರದಲ್ಲಿ ಕಾರ್ಮಿಕರನ್ನು ನೇಮಿಸುತ್ತದೆ. ಬಹುತೇಕ ಸಾಫ್ಟ್‌ವೇರ್‌ ಕಂಪೆನಿಗಳಿಗೆ ಈ ಮಾದರಿಯಲ್ಲೇ ಉದ್ಯೋಗಿಗಳನ್ನು ನೇಮ ಮಾಡಲಾಗಿರುತ್ತದೆ. ಇದಕ್ಕೆ ಹೆಚ್‌1ಬಿ ವೀಸಾವನ್ನು ಬಳಸಲಾಗಿರುತ್ತದೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ವಿದೇಶಿ ಕಾರ್ಮಿಕರನ್ನು ಫೆಡರಲ್ ಏಜೆನ್ಸಿಗಳಿಗೆ ನೇಮಿಸಿಕೊಳ್ಳುವುದನ್ನು ತಡೆದಿದ್ದಾರೆ. ಈ ಆದೇಶಕ್ಕೆ ಸೋಮವಾರ ಸಹಿ ಹಾಕಿದ್ದಾರೆ.

ಟ್ರಂಪ್‌ ಆಡಳಿತ ಕಳೆದ ಜೂನ್ 23 ರಂದೇ ಎಚ್ -1 ಬಿ ವೀಸಾಗಳನ್ನು ರದ್ದು ಮಾಡಿ ಆದೇಶಿಸಿದ್ದರು. ಈ ಮೂಲಕ ಲಕ್ಷಾಂತರ ಭಾರತೀಯ ಟೆಕ್ಕಿಗಳು ಕೆಲಸ ಕಳೆದುಕೊಳ್ಳುವ ಬೀತಿಯನ್ನು ಈಗಲೂ ಎದುರಿಸುತ್ತಿದ್ದಾರೆ. ಕೊರೋನಾ ಕಾರಣಕ್ಕೆ ಭಾರತಕ್ಕೆ ವಾಪಾಸ್‌ ಆಗಿದ್ದವರು ಹೆಚ್‌1ಬಿ ವೀಸಾ ರದ್ದಾದ ಕಾರಣ ಅನಿವಾರ್ಯವಾಗಿ ಭಾರತದಲ್ಲೇ ಉಳಿಯುವಂತಾಗಿದೆ. ಇಂತಹ ಸಂದರ್ಭದಲ್ಲಿ ಡೊನಾಲ್ಡ್‌ ಟ್ರಂಪ್ ಫೆಡರಲ್ ಏಜೆನ್ಸಿಗಳ ವೀಸಾವನ್ನು ರದ್ದು ಮಾಡಿರುವುದು, ಇದೀಗ ಮತ್ತಷ್ಟು ಭಾರತೀಯ ಉದ್ಯೋಗಿಗಳು ಅತಂತ್ರಕ್ಕೆ ಸಿಲುಕುವಂತೆ ಮಾಡಿದೆ.

ಕಳೆದ ವರ್ಷ ಹೆಚ್‌1ಬಿ ವೀಸಾ ಪಡೆದಿದ್ದ ಶೇ70 ರಷ್ಟು ಭಾರತೀಯರ ಕೆಲಸ ಇದೀಗ ಅತಂತ್ರವಾಗಿದೆ. ಆದರೆ, ಈ ಕುರಿತು ಪ್ರಕಟಣೆ ಹೊರಡಿಸಿರುವ ಅಮೆರಿಕ ಶ್ವೇತ ಭವನ‌, “ಫೆಡರಲ್‌ ಉದ್ಯೋಗದಾತರು ಅರ್ಹ ಅಮೆರಿಕನ್ನರನ್ನು ಬಿಟ್ಟು ವಿದೇಶಿ ಉದ್ಯೋಗಿಗಳಿಗೆ ಅವಕಾಶ ಮಾಡಿಕೊಡುವ ಮೂಲಕ ದೇಶಕ್ಕೆ ಅನ್ಯಾಯ ಮಾಡುತ್ತಿವೆ. ಅಲ್ಲದೆ, ವಿದೇಶಿ ನಾಗರೀಕರು ಸಹ ಹೆಚ್‌1ಬಿ ವೀಸಾವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಕಂಡು ಬಂದಿದೆ.

ಆದರೆ, ಕಡಿಮೆ-ವೆಚ್ಚದ ವಿದೇಶಿ ಕಾರ್ಮಿಕರ ಬದಲಿಗೆ ಅರ್ಹ ಅಮೆರಿಕನ್ ಕಾರ್ಮಿಕರನ್ನು ಬದಲಿಸುವ ಉದ್ದೇಶವನ್ನು ಈ ಆದೇಶ ಹೊಂದಿಲ್ಲ. ಬದಲಿಗೆ ಉನ್ನತ-ನುರಿತ ಜನರನ್ನು ಅಮೆರಿಕಕ್ಕೆ ಕರೆತರುವ ಮತ್ತು ಅಮೆರಿಕನ್ನರಿಗೆ ಅವಕಾಶಗಳನ್ನು ಸೃಷ್ಟಿಸುವ ಮೆರಿಟ್ ಆಧಾರಿತ ವಲಸೆ ವ್ಯವಸ್ಥೆಯನ್ನು ಡೊನಾಲ್ಡ್‌ ಟ್ರಂಪ್ ಬೆಂಬಲಿಸಿದ್ದಾರೆ” ಎಂದು ತಿಳಿಸಿದೆ.

ಫೆಡರಲ್ ಒಡೆತನದ ಟೆನ್ನೆಸ್ಸೀ ವ್ಯಾಲಿ ಪ್ರಾಧಿಕಾರವು ತನ್ನ ತಂತ್ರಜ್ಞಾನದ ಶೇ.20ರಷ್ಟು ಉದ್ಯೋಗಗಳನ್ನು ವಿದೇಶಗಳಲ್ಲಿರುವ ಕಂಪನಿಗಳಿಗೆ ಹೊರಗುತ್ತಿಗೆ ನೀಡಲಿದೆ ಎಂಬ ಘೋಷಣೆಯಿಂದಾಗಿ ಅಮೆರಿಕ ಆಡಳಿತ ಇಂತಹ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ಟ್ರಂಪ್ ‌ಟವರ್‌ ಮುಂದೆ ’ಬ್ಲ್ಯಾಕ್ ಲೈವ್ಸ್ ಮ್ಯಾಟರ್‌’ ಎಂದು ಬರೆದ ಚಳವಳಿಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...