Homeಅಂತರಾಷ್ಟ್ರೀಯಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ

ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ

- Advertisement -
- Advertisement -

ಕೊರೋನಾ ಮತ್ತು ಆ ಕಾರಣದಿಂದ ಉಂಟಾದ ಲಾಕ್‌ಡೌನ್‌ಗೆ ಇಡೀ ವಿಶ್ವದ ಆರ್ಥಿಕತೆ ತತ್ತರಿಸಿ ಹೋಗಿದೆ. ಪರಿಣಾಮ ವಿಶ್ವದ ದೊಡ್ಡಣ್ಣ ಎಂದು ಕರೆಯಲಾಗುವ ಅಮೆರಿಕದಲ್ಲೂ ನಿರುದ್ಯೋಗದ ಸಮಸ್ಯೆ ತಲೆದೋರಿದೆ ಎಂದರೆ ಆರ್ಥಿಕತೆಯ ಮೇಲೆ ಕೊರೋನಾ ಉಂಟು ಮಾಡಿರುವ ಆಘಾತವನ್ನು ಊಹಿಸಬಹುದು. ಹೀಗಾಗಿ ಅಮೆರಿಕದ ಉದ್ಯೋಗವನ್ನು ಅಮೆರಿಕದ ಯುವಕರಿಗೆ ನೀಡುವ ಸಲುವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಸಹಿಹಾಕಿದ್ದಾರೆ.‌

ಸಾಮಾನ್ಯವಾಗಿ ಅಮೆರಿಕದಂತಹ ದೇಶಗಳಿಗೆ ಫೆಡರಲ್ ಏಜೆನ್ಸಿಗಳು ಗುತ್ತಿಗೆ ಆಧಾರದಲ್ಲಿ ಕಾರ್ಮಿಕರನ್ನು ನೇಮಿಸುತ್ತದೆ. ಬಹುತೇಕ ಸಾಫ್ಟ್‌ವೇರ್‌ ಕಂಪೆನಿಗಳಿಗೆ ಈ ಮಾದರಿಯಲ್ಲೇ ಉದ್ಯೋಗಿಗಳನ್ನು ನೇಮ ಮಾಡಲಾಗಿರುತ್ತದೆ. ಇದಕ್ಕೆ ಹೆಚ್‌1ಬಿ ವೀಸಾವನ್ನು ಬಳಸಲಾಗಿರುತ್ತದೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ವಿದೇಶಿ ಕಾರ್ಮಿಕರನ್ನು ಫೆಡರಲ್ ಏಜೆನ್ಸಿಗಳಿಗೆ ನೇಮಿಸಿಕೊಳ್ಳುವುದನ್ನು ತಡೆದಿದ್ದಾರೆ. ಈ ಆದೇಶಕ್ಕೆ ಸೋಮವಾರ ಸಹಿ ಹಾಕಿದ್ದಾರೆ.

ಟ್ರಂಪ್‌ ಆಡಳಿತ ಕಳೆದ ಜೂನ್ 23 ರಂದೇ ಎಚ್ -1 ಬಿ ವೀಸಾಗಳನ್ನು ರದ್ದು ಮಾಡಿ ಆದೇಶಿಸಿದ್ದರು. ಈ ಮೂಲಕ ಲಕ್ಷಾಂತರ ಭಾರತೀಯ ಟೆಕ್ಕಿಗಳು ಕೆಲಸ ಕಳೆದುಕೊಳ್ಳುವ ಬೀತಿಯನ್ನು ಈಗಲೂ ಎದುರಿಸುತ್ತಿದ್ದಾರೆ. ಕೊರೋನಾ ಕಾರಣಕ್ಕೆ ಭಾರತಕ್ಕೆ ವಾಪಾಸ್‌ ಆಗಿದ್ದವರು ಹೆಚ್‌1ಬಿ ವೀಸಾ ರದ್ದಾದ ಕಾರಣ ಅನಿವಾರ್ಯವಾಗಿ ಭಾರತದಲ್ಲೇ ಉಳಿಯುವಂತಾಗಿದೆ. ಇಂತಹ ಸಂದರ್ಭದಲ್ಲಿ ಡೊನಾಲ್ಡ್‌ ಟ್ರಂಪ್ ಫೆಡರಲ್ ಏಜೆನ್ಸಿಗಳ ವೀಸಾವನ್ನು ರದ್ದು ಮಾಡಿರುವುದು, ಇದೀಗ ಮತ್ತಷ್ಟು ಭಾರತೀಯ ಉದ್ಯೋಗಿಗಳು ಅತಂತ್ರಕ್ಕೆ ಸಿಲುಕುವಂತೆ ಮಾಡಿದೆ.

ಕಳೆದ ವರ್ಷ ಹೆಚ್‌1ಬಿ ವೀಸಾ ಪಡೆದಿದ್ದ ಶೇ70 ರಷ್ಟು ಭಾರತೀಯರ ಕೆಲಸ ಇದೀಗ ಅತಂತ್ರವಾಗಿದೆ. ಆದರೆ, ಈ ಕುರಿತು ಪ್ರಕಟಣೆ ಹೊರಡಿಸಿರುವ ಅಮೆರಿಕ ಶ್ವೇತ ಭವನ‌, “ಫೆಡರಲ್‌ ಉದ್ಯೋಗದಾತರು ಅರ್ಹ ಅಮೆರಿಕನ್ನರನ್ನು ಬಿಟ್ಟು ವಿದೇಶಿ ಉದ್ಯೋಗಿಗಳಿಗೆ ಅವಕಾಶ ಮಾಡಿಕೊಡುವ ಮೂಲಕ ದೇಶಕ್ಕೆ ಅನ್ಯಾಯ ಮಾಡುತ್ತಿವೆ. ಅಲ್ಲದೆ, ವಿದೇಶಿ ನಾಗರೀಕರು ಸಹ ಹೆಚ್‌1ಬಿ ವೀಸಾವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಕಂಡು ಬಂದಿದೆ.

ಆದರೆ, ಕಡಿಮೆ-ವೆಚ್ಚದ ವಿದೇಶಿ ಕಾರ್ಮಿಕರ ಬದಲಿಗೆ ಅರ್ಹ ಅಮೆರಿಕನ್ ಕಾರ್ಮಿಕರನ್ನು ಬದಲಿಸುವ ಉದ್ದೇಶವನ್ನು ಈ ಆದೇಶ ಹೊಂದಿಲ್ಲ. ಬದಲಿಗೆ ಉನ್ನತ-ನುರಿತ ಜನರನ್ನು ಅಮೆರಿಕಕ್ಕೆ ಕರೆತರುವ ಮತ್ತು ಅಮೆರಿಕನ್ನರಿಗೆ ಅವಕಾಶಗಳನ್ನು ಸೃಷ್ಟಿಸುವ ಮೆರಿಟ್ ಆಧಾರಿತ ವಲಸೆ ವ್ಯವಸ್ಥೆಯನ್ನು ಡೊನಾಲ್ಡ್‌ ಟ್ರಂಪ್ ಬೆಂಬಲಿಸಿದ್ದಾರೆ” ಎಂದು ತಿಳಿಸಿದೆ.

ಫೆಡರಲ್ ಒಡೆತನದ ಟೆನ್ನೆಸ್ಸೀ ವ್ಯಾಲಿ ಪ್ರಾಧಿಕಾರವು ತನ್ನ ತಂತ್ರಜ್ಞಾನದ ಶೇ.20ರಷ್ಟು ಉದ್ಯೋಗಗಳನ್ನು ವಿದೇಶಗಳಲ್ಲಿರುವ ಕಂಪನಿಗಳಿಗೆ ಹೊರಗುತ್ತಿಗೆ ನೀಡಲಿದೆ ಎಂಬ ಘೋಷಣೆಯಿಂದಾಗಿ ಅಮೆರಿಕ ಆಡಳಿತ ಇಂತಹ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ಟ್ರಂಪ್ ‌ಟವರ್‌ ಮುಂದೆ ’ಬ್ಲ್ಯಾಕ್ ಲೈವ್ಸ್ ಮ್ಯಾಟರ್‌’ ಎಂದು ಬರೆದ ಚಳವಳಿಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...