Homeಅಂತರಾಷ್ಟ್ರೀಯಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ

ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ

- Advertisement -
- Advertisement -

ಕೊರೋನಾ ಮತ್ತು ಆ ಕಾರಣದಿಂದ ಉಂಟಾದ ಲಾಕ್‌ಡೌನ್‌ಗೆ ಇಡೀ ವಿಶ್ವದ ಆರ್ಥಿಕತೆ ತತ್ತರಿಸಿ ಹೋಗಿದೆ. ಪರಿಣಾಮ ವಿಶ್ವದ ದೊಡ್ಡಣ್ಣ ಎಂದು ಕರೆಯಲಾಗುವ ಅಮೆರಿಕದಲ್ಲೂ ನಿರುದ್ಯೋಗದ ಸಮಸ್ಯೆ ತಲೆದೋರಿದೆ ಎಂದರೆ ಆರ್ಥಿಕತೆಯ ಮೇಲೆ ಕೊರೋನಾ ಉಂಟು ಮಾಡಿರುವ ಆಘಾತವನ್ನು ಊಹಿಸಬಹುದು. ಹೀಗಾಗಿ ಅಮೆರಿಕದ ಉದ್ಯೋಗವನ್ನು ಅಮೆರಿಕದ ಯುವಕರಿಗೆ ನೀಡುವ ಸಲುವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಸಹಿಹಾಕಿದ್ದಾರೆ.‌

ಸಾಮಾನ್ಯವಾಗಿ ಅಮೆರಿಕದಂತಹ ದೇಶಗಳಿಗೆ ಫೆಡರಲ್ ಏಜೆನ್ಸಿಗಳು ಗುತ್ತಿಗೆ ಆಧಾರದಲ್ಲಿ ಕಾರ್ಮಿಕರನ್ನು ನೇಮಿಸುತ್ತದೆ. ಬಹುತೇಕ ಸಾಫ್ಟ್‌ವೇರ್‌ ಕಂಪೆನಿಗಳಿಗೆ ಈ ಮಾದರಿಯಲ್ಲೇ ಉದ್ಯೋಗಿಗಳನ್ನು ನೇಮ ಮಾಡಲಾಗಿರುತ್ತದೆ. ಇದಕ್ಕೆ ಹೆಚ್‌1ಬಿ ವೀಸಾವನ್ನು ಬಳಸಲಾಗಿರುತ್ತದೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ವಿದೇಶಿ ಕಾರ್ಮಿಕರನ್ನು ಫೆಡರಲ್ ಏಜೆನ್ಸಿಗಳಿಗೆ ನೇಮಿಸಿಕೊಳ್ಳುವುದನ್ನು ತಡೆದಿದ್ದಾರೆ. ಈ ಆದೇಶಕ್ಕೆ ಸೋಮವಾರ ಸಹಿ ಹಾಕಿದ್ದಾರೆ.

ಟ್ರಂಪ್‌ ಆಡಳಿತ ಕಳೆದ ಜೂನ್ 23 ರಂದೇ ಎಚ್ -1 ಬಿ ವೀಸಾಗಳನ್ನು ರದ್ದು ಮಾಡಿ ಆದೇಶಿಸಿದ್ದರು. ಈ ಮೂಲಕ ಲಕ್ಷಾಂತರ ಭಾರತೀಯ ಟೆಕ್ಕಿಗಳು ಕೆಲಸ ಕಳೆದುಕೊಳ್ಳುವ ಬೀತಿಯನ್ನು ಈಗಲೂ ಎದುರಿಸುತ್ತಿದ್ದಾರೆ. ಕೊರೋನಾ ಕಾರಣಕ್ಕೆ ಭಾರತಕ್ಕೆ ವಾಪಾಸ್‌ ಆಗಿದ್ದವರು ಹೆಚ್‌1ಬಿ ವೀಸಾ ರದ್ದಾದ ಕಾರಣ ಅನಿವಾರ್ಯವಾಗಿ ಭಾರತದಲ್ಲೇ ಉಳಿಯುವಂತಾಗಿದೆ. ಇಂತಹ ಸಂದರ್ಭದಲ್ಲಿ ಡೊನಾಲ್ಡ್‌ ಟ್ರಂಪ್ ಫೆಡರಲ್ ಏಜೆನ್ಸಿಗಳ ವೀಸಾವನ್ನು ರದ್ದು ಮಾಡಿರುವುದು, ಇದೀಗ ಮತ್ತಷ್ಟು ಭಾರತೀಯ ಉದ್ಯೋಗಿಗಳು ಅತಂತ್ರಕ್ಕೆ ಸಿಲುಕುವಂತೆ ಮಾಡಿದೆ.

ಕಳೆದ ವರ್ಷ ಹೆಚ್‌1ಬಿ ವೀಸಾ ಪಡೆದಿದ್ದ ಶೇ70 ರಷ್ಟು ಭಾರತೀಯರ ಕೆಲಸ ಇದೀಗ ಅತಂತ್ರವಾಗಿದೆ. ಆದರೆ, ಈ ಕುರಿತು ಪ್ರಕಟಣೆ ಹೊರಡಿಸಿರುವ ಅಮೆರಿಕ ಶ್ವೇತ ಭವನ‌, “ಫೆಡರಲ್‌ ಉದ್ಯೋಗದಾತರು ಅರ್ಹ ಅಮೆರಿಕನ್ನರನ್ನು ಬಿಟ್ಟು ವಿದೇಶಿ ಉದ್ಯೋಗಿಗಳಿಗೆ ಅವಕಾಶ ಮಾಡಿಕೊಡುವ ಮೂಲಕ ದೇಶಕ್ಕೆ ಅನ್ಯಾಯ ಮಾಡುತ್ತಿವೆ. ಅಲ್ಲದೆ, ವಿದೇಶಿ ನಾಗರೀಕರು ಸಹ ಹೆಚ್‌1ಬಿ ವೀಸಾವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಕಂಡು ಬಂದಿದೆ.

ಆದರೆ, ಕಡಿಮೆ-ವೆಚ್ಚದ ವಿದೇಶಿ ಕಾರ್ಮಿಕರ ಬದಲಿಗೆ ಅರ್ಹ ಅಮೆರಿಕನ್ ಕಾರ್ಮಿಕರನ್ನು ಬದಲಿಸುವ ಉದ್ದೇಶವನ್ನು ಈ ಆದೇಶ ಹೊಂದಿಲ್ಲ. ಬದಲಿಗೆ ಉನ್ನತ-ನುರಿತ ಜನರನ್ನು ಅಮೆರಿಕಕ್ಕೆ ಕರೆತರುವ ಮತ್ತು ಅಮೆರಿಕನ್ನರಿಗೆ ಅವಕಾಶಗಳನ್ನು ಸೃಷ್ಟಿಸುವ ಮೆರಿಟ್ ಆಧಾರಿತ ವಲಸೆ ವ್ಯವಸ್ಥೆಯನ್ನು ಡೊನಾಲ್ಡ್‌ ಟ್ರಂಪ್ ಬೆಂಬಲಿಸಿದ್ದಾರೆ” ಎಂದು ತಿಳಿಸಿದೆ.

ಫೆಡರಲ್ ಒಡೆತನದ ಟೆನ್ನೆಸ್ಸೀ ವ್ಯಾಲಿ ಪ್ರಾಧಿಕಾರವು ತನ್ನ ತಂತ್ರಜ್ಞಾನದ ಶೇ.20ರಷ್ಟು ಉದ್ಯೋಗಗಳನ್ನು ವಿದೇಶಗಳಲ್ಲಿರುವ ಕಂಪನಿಗಳಿಗೆ ಹೊರಗುತ್ತಿಗೆ ನೀಡಲಿದೆ ಎಂಬ ಘೋಷಣೆಯಿಂದಾಗಿ ಅಮೆರಿಕ ಆಡಳಿತ ಇಂತಹ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ಟ್ರಂಪ್ ‌ಟವರ್‌ ಮುಂದೆ ’ಬ್ಲ್ಯಾಕ್ ಲೈವ್ಸ್ ಮ್ಯಾಟರ್‌’ ಎಂದು ಬರೆದ ಚಳವಳಿಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...